Homeಮುಖಪುಟ'ಈಗ ಕ್ರಮ ಕೈಗೊಳ್ಳುತ್ತೀರಾ?': ಅದಾನಿ ಸೋದರಳಿಯನ ವಿರುದ್ಧದ 'ಇನ್‌ಸೈಡರ್ ಟ್ರೇಡಿಂಗ್' ಆರೋಪದ ಕುರಿತು ಸೆಬಿಗೆ ಕಾಂಗ್ರೆಸ್...

‘ಈಗ ಕ್ರಮ ಕೈಗೊಳ್ಳುತ್ತೀರಾ?’: ಅದಾನಿ ಸೋದರಳಿಯನ ವಿರುದ್ಧದ ‘ಇನ್‌ಸೈಡರ್ ಟ್ರೇಡಿಂಗ್’ ಆರೋಪದ ಕುರಿತು ಸೆಬಿಗೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಆಂತರಿಕ ದತ್ತಾಂಶ ಹಂಚಿಕೊಂಡ ಆರೋಪ ಹೊತ್ತಿರುವ ಗೌತಮ್ ಅದಾನಿ ಅವರ ಸೋದರಳಿಯ ಪ್ರಣವ್ ಅದಾನಿ ವಿರುದ್ಧ ಮಾರುಕಟ್ಟೆ ನಿಯಂತ್ರಕ ಸೆಬಿ (SEBI) ಮೊಕದ್ದಮೆ ಹೂಡುತ್ತದೆಯೇ? ಎಂದು ಕಾಂಗ್ರೆಸ್ ಶನಿವಾರ (ಮೇ.3) ಪ್ರಶ್ನಿಸಿದೆ.

ಅದಾನಿಯವರ 24 ಸೆಕ್ಯುರಿಟೀಸ್ ಕಾನೂನುಗಳ ಉಲ್ಲಂಘನೆಯ ತನಿಖೆಯನ್ನು ಸೆಬಿ ಪೂರ್ಣಗೊಳಿಸಲು ಭಾರತದ ಜನರು ಇನ್ನೂ ಕಾಯುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

“ಅದಾನಿ ಸಮೂಹದ ಹಲವು ಕಂಪನಿಗಳಿಗೆ ನಿರ್ದೇಶಕರಾಗಿರುವ ಗೌತಮ್ ಅದಾನಿಯವರ ಸೋದರಳಿಯ ಇನ್ನು ಪ್ರಕಟಗೊಳ್ಳದ ಗೌಪ್ಯ ಹಣಕಾಸಿನ ಮಾಹಿತಿಯನ್ನು ತಮ್ಮ ಭಾವನೊಂದಿಗೆ ಹಂಚಿಕೊಳ್ಳುವ ಮೂಲಕ ಇನ್‌ಸೈಡರ್‌ ಟ್ರೇಡಿಂಗ್ (ಆಂತರಿಕ ವ್ಯವಹಾರ) ಮಾಡಿದ್ದಾರೆ. ಇದರ ಪರಿಣಾಮವಾಗಿ 90 ಲಕ್ಷ ರೂಪಾಯಿಗಳಷ್ಟು ‘ಅಕ್ರಮ ಲಾಭ ಪಡೆದಿದ್ದಾರೆ” ಎಂದು ಜೈರಾಮ್ ರಮೇಶ್ ಅವರು ಎಕ್ಸ್‌ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

“ಸೆಬಿ ಮತ್ತೊಮ್ಮೆ ಪ್ರಧಾನಿಯವರ ನೆಚ್ಚಿನ ವ್ಯವಹಾರ ಸಮೂಹವನ್ನು ಸುಮ್ಮನೆ ಬಿಟ್ಟು ಬಿಡುತ್ತಾ? ಇಲ್ಲ ಕಾನೂನಿನ ಮೂಲಕ ಪೂರ್ಣ ಪ್ರಮಾಣದಲ್ಲಿ ಪ್ರಕರಣವನ್ನು ವಿಚಾರಣೆಗೆ ಒಳಪಡಿಸುತ್ತಾ?” ಎಂದು ಪ್ರಣವ್ ಆದಾನಿ ಆಂತರಿಕ ಡೇಟಾವನ್ನು ಹಂಚಿಕೊಂಡಿದ್ದಾರೆ ಎಂಬ ವರದಿಗಳನ್ನು ಹಂಚಿಕೊಳ್ಳುವಾಗ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಅದಾನಿಯವರ 24 ಸೆಕ್ಯುರಿಟೀಸ್ ಕಾನೂನುಗಳ ಉಲ್ಲಂಘನೆಯ ತನಿಖೆಯನ್ನು ಸೆಬಿ ಪೂರ್ಣಗೊಳಿಸಲು ಭಾರತದ ಜನರು ಇನ್ನೂ ಕಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

“ಹಿಂಡೆನ್‌ಬರ್ಗ್‌ ವರದಿ ಅಕ್ರಮದ ಬಗ್ಗೆ ಬಹಿರಂಗಪಡಿಸಿದ ನಂತರ ಸೆಬಿಗೆ ತನಿಖೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ನಿರ್ದೇಶಿಸಿ 26 ತಿಂಗಳುಗಳಾಗಿವೆ” ಎಂದಿದ್ದಾರೆ.

2020 ಮತ್ತು 2024ರ ನಡುವೆ ಗೌತಮ್ ಅದಾನಿ ಮತ್ತು ಅವರ ಏಳು ಮಂದಿ ಆಪ್ತರು ಸೌರಶಕ್ತಿ ಒಪ್ಪಂದಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ 2,000 ಕೋಟಿ ರೂಪಾಯಿ ಲಂಚ ನೀಡಿದ್ದಾರೆ ಎಂಬುದಕ್ಕೆ ಪುರಾವೆಗಳು ದೊರೆತ ನಂತರ, ಸೆಬಿಯ ಅಮೆರಿಕದ ಪ್ರತಿರೂಪವಾದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಕಮಿಷನ್ (ಎಸ್‌ಇಸಿ) ಹೆಚ್ಚು ಕಾರ್ಯಪ್ರವೃತ್ತವಾಗಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

2025ರ ಏಪ್ರಿಲ್ 25 ರ ಎಸ್‌ಇಸಿ ನೀಡಿದ ಅಪ್ಡೇಟ್ ಪ್ರಕಾರ, ಅದಾನಿ ವಿರುದ್ದ ಕಾನೂನು ಸಮನ್ಸ್ ಜಾರಿ ಮಾಡುವಲ್ಲಿ ಸಹಾಯ ಮಾಡುವಂತೆ ಎಸ್‌ಇಸಿ ಪದೇ ಪದೇ ವಿನಂತಿಸಿದರೂ, ಮೋದಿ ಸರ್ಕಾರ ನಿರಾಕರಿಸಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಶ್ರೀಲಂಕಾ ಕರಾವಳಿ ಕಾವಲು ಪಡೆ ಬಂಧಿಸಿದ್ದ ತಮಿಳುನಾಡಿನ 25 ಮೀನುಗಾರರ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...