Homeಅಂತರಾಷ್ಟ್ರೀಯಆಸ್ಟ್ರೇಲಿಯಾ ಚುನಾವಣೆ: ಪ್ರಧಾನಿ ಅಲ್ಬನೀಸ್ ನೇತೃತ್ವದ ಎಡಪಕ್ಷಕ್ಕೆ ಮತ್ತೆ ಗೆಲುವು

ಆಸ್ಟ್ರೇಲಿಯಾ ಚುನಾವಣೆ: ಪ್ರಧಾನಿ ಅಲ್ಬನೀಸ್ ನೇತೃತ್ವದ ಎಡಪಕ್ಷಕ್ಕೆ ಮತ್ತೆ ಗೆಲುವು

- Advertisement -
- Advertisement -

ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ಎಡಪಂಥೀಯ ಲೇಬರ್ ಪಕ್ಷವು ಶನಿವಾರ (ಮೇ 3, 2025) ಸಾರ್ವತ್ರಿಕ ಚುನಾವಣೆಯಲ್ಲಿ ಜಯಗಳಿಸಿದೆ ಎಂದು ವರದಿಯಾಗಿದೆ.

ಈ ಮೂಲಕ , ಆಂಥೋನಿ ಅಲ್ಬನೀಸ್ ಅವರು 21 ವರ್ಷಗಳ ಬಳಿಕ ಮೂರು ವರ್ಷಗಳ ಅಧಿಕಾರವದಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಎರಡನೇ ಬಾರಿಗೆ ಆಯ್ಕೆಯಾದ ಮೊದಲ ಆಸ್ಟ್ರೇಲಿಯಾದ ಪ್ರಧಾನಿ ಎನಿಸಿಕೊಂಡಿದ್ದಾರೆ.

“ಪ್ರಚಾರದ ಸಮಯದಲ್ಲಿ ನಾವು ಸಾಕಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಿಲ್ಲ. ಫಲಿತಾಂಶ ಬಂದಾಗ ಅದು ಸ್ಪಷ್ಟವಾಗಿದೆ. ಈ ಸೋಲಿನ ಸಂಪೂರ್ಣ ಹೊಣೆಯನ್ನು ನಾನು ಹೊರುತ್ತೇನೆ” ಎಂದು ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಚುನಾವಣೆಯ ಸೋಲಿನ ಬಳಿಕ ಹೇಳಿದ್ದಾರೆ.

“ಚುನಾವಣೆಯಲ್ಲಿ ಗೆದ್ದಿರುವ ಪ್ರಧಾನಿ ಅಲ್ಬನೀಸ್ ಅವರಿಗೆ ಕರೆ ಮಾಡಿ ಅಭಿನಂದನೆ ಹೇಳಿದ್ದೇನೆ.
ಇದು ಲೇಬರ್ ಪಕ್ಷಕ್ಕೆ ಒಂದು ಐತಿಹಾಸಿಕ ಸಂದರ್ಭವಾಗಿದೆ. ನಾವು ಅದನ್ನು ಗುರುತಿಸುತ್ತೇವೆ” ಎಂದು ಡಟ್ಟನ್ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಚುನಾವಣಾ ಆಯೋಗದ ಮಾಹಿತಿ ಪ್ರಕಾರ, 150 ಸ್ಥಾನಗಳನ್ನು ಹೊಂದಿರುವ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಪ್ರಧಾನಿ ಅಲ್ಬನೀಸ್ ನೇತೃತ್ವದ ಆಡಳಿತಾರೂಢ ಸೆಂಟರ್-ಲೆಫ್ಟ್‌ ಲೇಬರ್ ಪಾರ್ಟಿ 70 ಸ್ಥಾನಗಳು ಮತ್ತು ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಅವರ ಕನ್ಸರ್ವೇಟಿವ್ ಲಿಬರಲ್ ಪಾರ್ಟಿ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟ 24 ಸ್ಥಾನಗಳನ್ನು ಗೆದ್ದಿವೆ. ಅಲಿಪ್ತ ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು 13 ಸ್ಥಾನಗಳನ್ನು ಗೆದ್ದಿದ್ದಾರೆ ಎಂದು ವರದಿಯಾಗಿದೆ.

ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್‌ನ ಚುನಾವಣಾ ವಿಶ್ಲೇಷಕ ಆಂಥೋನಿ ಗ್ರೀನ್, ಲೇಬರ್ ಪಾರ್ಟಿ 76 ಸ್ಥಾನ, ಕನ್ಸರ್ವೇಟಿವ್ ಒಕ್ಕೂಟ 36 ಸ್ಥಾನ ಮತ್ತು ಅಲಿಪ್ತ ಪಕ್ಷಗಳು 13 ಸ್ಥಾನಗಳನ್ನು ಅಂತಿಮವಾಗಿ ಗೆಲ್ಲಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಲೇಬರ್ ಪಾರ್ಟಿ ಬಹುಮತದ ಅಥವಾ ಅಲ್ಪಮತದ ಸರ್ಕಾರ ರಚಿಸಬಹುದು. ಕನ್ಸರ್ವೇಟಿವ್ ಅಲ್ಪಮತದ ಸರ್ಕಾರ ರಚಿಸುವ ಯಾವುದೇ ಭರವಸೆ ಇಲ್ಲ ಎಂದು ಗ್ರೀನ್ ಹೇಳಿದ್ದಾರೆ.

ಇಂಧನ ನೀತಿ ಮತ್ತು ಹಣದುಬ್ಬರ ಚುನಾವಣಾ ಪ್ರಚಾರದ ಪ್ರಮುಖ ವಿಷಯಗಳಾಗಿತ್ತು. ದೇಶವು ಜನರ ಜೀವನ ವೆಚ್ಚದ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ.

ವಿರೋಧ ಪಕ್ಷದ ಡಟ್ಟನ್ ಅವರ ಕನ್ಸರ್ವೇಟಿವ್ ಲಿಬರಲ್ ಪಾರ್ಟಿ, ಹಣದುಬ್ಬರ ಮತ್ತು ಬಡ್ಡಿದರಗಳ ಹೆಚ್ಚಳಕ್ಕೆ ಸರ್ಕಾರಿ ದುಂದುವೆಚ್ಚ ಕಾರಣ ಎಂದು ಲೇಬರ್ ಪಾರ್ಟಿ ಸರ್ಕಾರವನ್ನು ದೂಷಿಸಿತ್ತು. ಸರ್ಕಾರಿ ವೆಚ್ಚವನ್ನು ಕಡಿಮೆ ಮಾಡಲು ಅಧಿಕಾರಕ್ಕೆ ಬಂದರೆ ಐದು ಸಾರ್ವಜನಿಕ ಸೇವಾ ಉದ್ಯೋಗಗಳಲ್ಲಿ ಒಂದಕ್ಕಿಂತ ಹೆಚ್ಚು ಉದ್ಯೋಗಗಳನ್ನು ಕಡಿತಗೊಳಿಸುವುದಾಗಿ ಪ್ರತಿಜ್ಞೆ ಮಾಡಿತ್ತು.

2050ರ ವೇಳೆಗೆ ದೇಶವು ಶೂನ್ಯ ಹಸಿರುಮನೆ ಅನಿಲ ಹೊರಸೂಸುವಿಕೆಯ ಗುರಿಯನ್ನು ತಲುಪಬೇಕು ಎಂದು ಎರಡೂ ಕಡೆಯವರು ಹೇಳುತ್ತಿದ್ದರು. ಸೌರ ಮತ್ತು ಪವನ ಟರ್ಬೈನ್‌ಗಳಂತಹ ನವೀಕರಿಸಬಹುದಾದ ಇಂಧನ ಮೂಲಗಳ ಬದಲಿಗೆ, ಹೆಚ್ಚಿನ ಪರಮಾಣು ಶಕ್ತಿಯನ್ನು ಅವಲಂಬಿಸುವುದರಿಂದ ಕಡಿಮೆ ವೆಚ್ಚದ ವಿದ್ಯುತ್ ದೊರೆಯುತ್ತದೆ ಎಂದು ಡಟ್ಟನ್ ವಾದಿಸಿದ್ದರು.

ಲೇಬರ್ ಪಾರ್ಟಿ ವಿರೋಧ ಪಕ್ಷದ ನಾಯಕನನ್ನು “ಡಾಗ್-ವೈ ಡಟ್ಟನ್” ಎಂದು ಕರೆದಿತ್ತು. ಅವರ ಪಕ್ಷವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಸರ್ಕಾರಿ ದಕ್ಷತೆಯ ಇಲಾಖೆಯನ್ನು ಅನುಕರಿಸುತ್ತಿದೆ ಎಂದು ಆರೋಪಿಸಿತ್ತು. ಡಟ್ಟನ್ ಅವರ ವಿರೋಧ ಪಕ್ಷಗಳ ಒಕ್ಕೂಟ ಅಧಿಕಾರಕ್ಕೆ ಬಂದರೆ ಪರಮಾಣು ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಸರ್ಕಾರಿ ಸೇವೆಗಳನ್ನು ಕಡಿತಗೊಳಿಸಲಿದೆ ಎಂದು ಲೇಬರ್ ಪಕ್ಷ ಹೇಳಿತ್ತು.

“ಆಸ್ಟ್ರೇಲಿಯನ್ನರನ್ನು ಪರಸ್ಪರ ಎತ್ತಿಕಟ್ಟುವ ಮೂಲಕ ಅಮೆರಿಕನ್ ಶೈಲಿಯ ರಾಜಕೀಯ ಮಾಡುವ ಪ್ರಯತ್ನವನ್ನು ಡಟ್ಟನ್ ಮಾಡುತ್ತಿದ್ದಾರೆ. ಇದು ಆಸ್ಟ್ರೇಲಿಯಾಕ್ಕೆ ಹೇಳಿದ್ದಲ್ಲ ಎಂದು” ಎಂದು ಅಲ್ಬನೀಸ್ ಚುನಾವಣೆ ಪ್ರಚಾರದ ವೇಳೆ ಕಿಡಿಕಾರಿದ್ದರು.

ಗಾಜಾದಾದ್ಯಂತ ಇಸ್ರೇಲ್ ನಡೆಸಿದ ಹೊಸ ವಾಯುದಾಳಿಗೆ 32 ಪ್ಯಾಲೆಸ್ತೀನಿಯನ್ನರು ಬಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...