Homeಕರ್ನಾಟಕವರ್ಷಾಂತ್ಯದೊಳಗೆ 2 ಲಕ್ಷ ಜನರಿಗೆ ಹಕ್ಕುಪತ್ರ: ರಾಜ್ಯ ಸರ್ಕಾರ ಭರವಸೆ

ವರ್ಷಾಂತ್ಯದೊಳಗೆ 2 ಲಕ್ಷ ಜನರಿಗೆ ಹಕ್ಕುಪತ್ರ: ರಾಜ್ಯ ಸರ್ಕಾರ ಭರವಸೆ

- Advertisement -
- Advertisement -

ಜೂನ್ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ 3614 ಕಂದಾಯ ಗ್ರಾಮಗಳಿಗೂ ಅಂತಿಮ ಅಧಿಸೂಚನೆ ಹೊರಡಿಸಿ, ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಹಕ್ಕುಪತ್ರ ನೀಡುವ ಮೂಲಕ ಬಡವರ ಕೆಲಸವನ್ನು ಈ ವರ್ಷದೊಳಗೆ ಮುಗಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಶನಿವಾರ ಗಡುವು ನಿಗದಿಗೊಳಿಸಿದ್ದಾರೆ. ಮೇ 20ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ 1 ಲಕ್ಷ ಜನರಿಗೆ ಹಕ್ಕುಪತ್ರ ಸರ್ಕಾರ ವಿತರಿಸಲಿದ್ದು, ವರ್ಷಾಂತ್ಯದೊಳಗೆ 2 ಲಕ್ಷ ಜನರಿಗೆ ಹಕ್ಕುಪತ್ರ ವಿತರಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಶನಿವಾರ ವಿಕಾಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿದ ಅವರು, “ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಕಡು ಬಡವರಿಗೆ ಕಂದಾಯ ಗ್ರಾಮಗಳನ್ನು ರಚಿಸಿ ಶಾಶ್ವತ ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ 2017 ರಲ್ಲಿ ಕಾನೂನಿಗೆ ತಿದ್ದುಪಡಿ ತರಲಾಗಿತ್ತು. ಆದರೆ ಅನುಷ್ಠಾನ ಈವರೆಗೆ ಪೂರ್ಣಗೊಳ್ಳದಿರುವುದು ದುರಾದೃಷ್ಟ. ಈ ಹಿಂದೆ ಹಲವರಿಗೆ ಹಕ್ಕುಪತ್ರ ನೀಡಿದ್ದರೂ, ಇನ್ನೂ ಆಗಬೇಕಾದ ಕೆಲಸ ಸಾಕಷ್ಟು ಬಾಕಿ ಇದೆ” ಎಂದು ವಿಷಾದಿಸಿದ್ದಾರೆ.

“ಪ್ರಸ್ತುತ ಅಂಕಿ ಅಂಶಗಳ ಪ್ರಕಾರ ರಾಜ್ಯಾದ್ಯಂತ 3,614 ಕಂದಾಯ ಗ್ರಾಮಗಳಿದ್ದು, ಈವರೆಗೆ 2600 ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕಳೆದ ಸರ್ಕಾರದ ಅವಧಿಯಲ್ಲಿ 1400 ಗ್ರಾಮಗಳ ರಚನೆ ಆಗಿದ್ದರೆ, ಕಳೆದ ಎರಡು ವರ್ಷದ ಅವಧಿಯಲ್ಲಿ 1,200 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಆದರೆ, ವಾಸ್ತವದಲ್ಲಿ ಇನ್ನೂ 1014 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಬಾಕಿ ಇದೆ” ಎಂದು ಹೇಳಿದ್ದಾರೆ.

ಮುಂದುವರೆದು ”ಕೇಂದ್ರ ಸರ್ಕಾರ ದೇಶದಾದ್ಯಂತ ಜನಗಣತಿ ಆರಂಭಿಸುವುದಾಗಿ ಘೋಷಿಸಿದೆ. ಜನಗಣತಿ ಆರಂಭವಾದರೆ ಜುಲೈ ತಿಂಗಳಿನಿಂದ ಕೇಂದ್ರ ಸರ್ಕಾರ ಯಾವುದೇ ಅಧಿಸೂಚನೆ ಹೊರಡಿಸಲು ಅವಕಾಶ ನೀಡುವುದಿಲ್ಲ. ಪರಿಣಾಮ ಬಡವರ ಅತಿಮುಖ್ಯ ಕೆಲಸಕ್ಕೆ ತೊಡಕುಂಟಾಗುವ ಸಾಧ್ಯತೆ ಇದೆ. ಹೀಗಾಗಿ ಬಾಕಿ ಇರುವ 1014 ಗ್ರಾಮಗಳಿಗೂ ಇದೇ ವರ್ಷದ ಜೂನ್ ಅಂತ್ಯದೊಳಗೆ ಅಂತಿಮ ಅಧಿಸೂಚನೆ ಹೊರಡಿಸಿ ಜುಲೈ ನಂತರ ಹಕ್ಕುಪತ್ರ ವಿತರಿಸಿ. ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ ಮಾತಿನಂತೆ ಈ ಕೆಲಸವನ್ನು ಈ ವರ್ಷಾಂತ್ಯದೊಳಗೆ ಮುಗಿಸಿ” ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸಮಯದ ಗಡುವು ನಿಗದಿಪಡಿಸಿದ್ದಾರೆ.

ಬಡವರ ಕೆಲಸವೇ ಸರ್ಕಾರದ ಧ್ಯೇಯ!

ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದೆ. ಎಲ್ಲಾ ಕಾಲದಲ್ಲೂ ಸಮಾಜದ ಅತ್ಯಂತ ಹಿಂದುಳಿದವರು ಹಾಗೂ ಕಡು ಬಡವರ ಪರ ಕೆಲಸ ಮಾಡುವುದೇ ಸರ್ಕಾರದ ಧ್ಯೇಯ. ಆ ನಿಟ್ಟಿನಲ್ಲಿ ಆಡಳಿತ ವರ್ಗವೂ ಸಹಕರಿಸಬೇಕು ಎಂದು ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಕಿವಿಮಾತು ಹೇಳಿದ್ದಾರೆ.

ಈ ತಿಂಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸುತ್ತಿದೆ. ನಾಗರೀಕ ಸಮಾಜದಲ್ಲಿ ಮೂಲಭೂತ ಸೌಲಭ್ಯಗಳಿಂದ ವಂಚಿತರಾದ ಹಾಗೂ ಹಿಂದುಳಿದ ಜನ ಸಮೂಹಕ್ಕೆ ಸಹಾಯವಾಗುವ ಕೆಲಸ ಮಾಡಿ ಆ ಮೂಲಕ ಎರಡು ವರ್ಷ ಪೂರೈಸಿದ ಹರ್ಷಾಚರಣೆ ನಡೆಸಿದರೆ ಮಾತ್ರ ಆ ಕಾರ್ಯಕ್ರಮ ಅರ್ಥಪೂರ್ಣ. ಆ ನಿಟ್ಟಿನಲ್ಲಿ ಮೇ. 20ಕ್ಕೆ ಹೊಸಪೇಟೆಯಲ್ಲಿ ಕಂದಾಯ ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಮೂಲಕ ದಶಕಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ ಎಂದು ಅವರು ತಿಳಿಸಿದ್ದಾರೆ.

“ಕಾರ್ಯಕ್ರಮದ ಭಾಗವಾಗಿ ಈಗಾಗಲೇ ಅಂತಿಮ ಅಧಿಸೂಚನೆ ಆಗಿರುವ 2600 ಕಂದಾಯ ಗ್ರಾಮಗಳ 1.41 ಲಕ್ಷ ಫಲಾನುಭವಿಗಳ ಪೈಕಿ 92,719 ಜನ ಹಕ್ಕುಪತ್ರ ಸಿದ್ದವಾಗಿದೆ. ಇನ್ನೂ 50 ಸಾವಿರ ಹಕ್ಕುಪತ್ರಗಳು ಬಾಕಿ ಇದ್ದು, ಬಾಕಿ ಹಕ್ಕುಪತ್ರಗಳನ್ನೂ ಶೀಘ್ರ ಸಿದ್ದಪಡಿಸಿ. ತುಮಕೂರು, ಚಿತ್ರದುರ್ಗ, ಬೆಳಗಾವಿ, ಹಾವೇರಿ, ರಾಯಚೂರು, ಬಾಗಲಕೋಟೆ, ವಿಜಯನಗರ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಬಾಕಿ ಇರುವ ಅಥವಾ ಬಿಟ್ಟುಹೋಗಿರುವ ಗ್ರಾಮಗಳನ್ನು ಗುರುತಿಸಿದರೆ ಇನ್ನೂ 30 ರಿಂದ 35 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ಸಿದ್ದಪಡಿಸಬೇಕಾಗಬಹುದು. ಆ ಕೆಲಸವನ್ನೂ ಸಹ ಶೀಘ್ರ ಪೂರ್ಣಗೊಳಿಸಿ” ಎಂದು ಅವರು ಹೇಳಿದ್ದಾರೆ.

“ಹಾಡಿ, ಹಟ್ಟಿ, ತಾಂಡಾಗಳಲ್ಲಿ ವಾಸಿಸುತ್ತಿರುವವರು ಸಾಮಾಜಿಕವಾಗಿ ಹಾಗೂ ಆರ್ಥಿವಾಗಿ ಸಾಕಷ್ಟು ಹಿಂದುಳಿದವರು. ಆದರೆ, ಈ ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸದ ಕಾರಣ ದಶಕಗಳಿಂದಲೂ ಇವರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇತ್ತೀಚೆಗೆ ಕಳೆದೊಂದು ದಶಕಗಳಿಂದ ರಾಜ್ಯ ಸರ್ಕಾರ ಗ್ರಾಮಠಾಣಾ ಗಡಿಗಳನ್ನೂ ಮೀರಿ ಹಾಡಿ, ಹಟ್ಟಿ, ತಾಂಡಾಗಳಿಗೆ ರಸ್ತೆ ಹಾಗೂ ನೀರಿನ ಸೌಲಭ್ಯ ನೀಡಿದ್ದೇವೆ. ಈ ಹಿಂದೆ ಶಾಲೆ, ನೀರು ಸರಬರಾಜು ಸಹ ನೀಡುತ್ತಿರಲಿಲ್ಲ ಎಂಬುದೇ ಕಟು ವಾಸ್ತವ. ಇಂತಹ ಜನರಿಗೆ ಶಾಶ್ವತ ಪರಿಹಾರ ನೀಡಿದರೆ ಮಾತ್ರ ಸರ್ಕಾರ ಎರಡು ವರ್ಷ ಪೂರೈಸಿದ್ದೂ ಅರ್ಥಪೂರ್ಣವಾಗುತ್ತದೆ. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳೂ ಬಡವರ ಕೆಲಸಗಳನ್ನು ಆದ್ಯತೆ ಮೇಲೆ ಮಾಡಬೇಕು” ಎಂದು ಸೂಚಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಯತ್ನಾಳ್ ಸವಾಲು ಸ್ವೀಕರಿಸಿ ನೀಡಿದ್ದ ಸಚಿವ ಶಿವಾನಂದ್ ರಾಜೀನಾಮೆ ತಿರಸ್ಕರಿಸಿದ ಸ್ಪೀಕರ್!

ಯತ್ನಾಳ್ ಸವಾಲು ಸ್ವೀಕರಿಸಿ ನೀಡಿದ್ದ ಸಚಿವ ಶಿವಾನಂದ್ ರಾಜೀನಾಮೆ ತಿರಸ್ಕರಿಸಿದ ಸ್ಪೀಕರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...