Homeಕರ್ನಾಟಕವರ್ಷಾಂತ್ಯದೊಳಗೆ 2 ಲಕ್ಷ ಜನರಿಗೆ ಹಕ್ಕುಪತ್ರ: ರಾಜ್ಯ ಸರ್ಕಾರ ಭರವಸೆ

ವರ್ಷಾಂತ್ಯದೊಳಗೆ 2 ಲಕ್ಷ ಜನರಿಗೆ ಹಕ್ಕುಪತ್ರ: ರಾಜ್ಯ ಸರ್ಕಾರ ಭರವಸೆ

- Advertisement -
- Advertisement -

ಜೂನ್ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ 3614 ಕಂದಾಯ ಗ್ರಾಮಗಳಿಗೂ ಅಂತಿಮ ಅಧಿಸೂಚನೆ ಹೊರಡಿಸಿ, ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಹಕ್ಕುಪತ್ರ ನೀಡುವ ಮೂಲಕ ಬಡವರ ಕೆಲಸವನ್ನು ಈ ವರ್ಷದೊಳಗೆ ಮುಗಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಶನಿವಾರ ಗಡುವು ನಿಗದಿಗೊಳಿಸಿದ್ದಾರೆ. ಮೇ 20ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ 1 ಲಕ್ಷ ಜನರಿಗೆ ಹಕ್ಕುಪತ್ರ ಸರ್ಕಾರ ವಿತರಿಸಲಿದ್ದು, ವರ್ಷಾಂತ್ಯದೊಳಗೆ 2 ಲಕ್ಷ ಜನರಿಗೆ ಹಕ್ಕುಪತ್ರ ವಿತರಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಶನಿವಾರ ವಿಕಾಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿದ ಅವರು, “ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಕಡು ಬಡವರಿಗೆ ಕಂದಾಯ ಗ್ರಾಮಗಳನ್ನು ರಚಿಸಿ ಶಾಶ್ವತ ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ 2017 ರಲ್ಲಿ ಕಾನೂನಿಗೆ ತಿದ್ದುಪಡಿ ತರಲಾಗಿತ್ತು. ಆದರೆ ಅನುಷ್ಠಾನ ಈವರೆಗೆ ಪೂರ್ಣಗೊಳ್ಳದಿರುವುದು ದುರಾದೃಷ್ಟ. ಈ ಹಿಂದೆ ಹಲವರಿಗೆ ಹಕ್ಕುಪತ್ರ ನೀಡಿದ್ದರೂ, ಇನ್ನೂ ಆಗಬೇಕಾದ ಕೆಲಸ ಸಾಕಷ್ಟು ಬಾಕಿ ಇದೆ” ಎಂದು ವಿಷಾದಿಸಿದ್ದಾರೆ.

“ಪ್ರಸ್ತುತ ಅಂಕಿ ಅಂಶಗಳ ಪ್ರಕಾರ ರಾಜ್ಯಾದ್ಯಂತ 3,614 ಕಂದಾಯ ಗ್ರಾಮಗಳಿದ್ದು, ಈವರೆಗೆ 2600 ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕಳೆದ ಸರ್ಕಾರದ ಅವಧಿಯಲ್ಲಿ 1400 ಗ್ರಾಮಗಳ ರಚನೆ ಆಗಿದ್ದರೆ, ಕಳೆದ ಎರಡು ವರ್ಷದ ಅವಧಿಯಲ್ಲಿ 1,200 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಆದರೆ, ವಾಸ್ತವದಲ್ಲಿ ಇನ್ನೂ 1014 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಬಾಕಿ ಇದೆ” ಎಂದು ಹೇಳಿದ್ದಾರೆ.

ಮುಂದುವರೆದು ”ಕೇಂದ್ರ ಸರ್ಕಾರ ದೇಶದಾದ್ಯಂತ ಜನಗಣತಿ ಆರಂಭಿಸುವುದಾಗಿ ಘೋಷಿಸಿದೆ. ಜನಗಣತಿ ಆರಂಭವಾದರೆ ಜುಲೈ ತಿಂಗಳಿನಿಂದ ಕೇಂದ್ರ ಸರ್ಕಾರ ಯಾವುದೇ ಅಧಿಸೂಚನೆ ಹೊರಡಿಸಲು ಅವಕಾಶ ನೀಡುವುದಿಲ್ಲ. ಪರಿಣಾಮ ಬಡವರ ಅತಿಮುಖ್ಯ ಕೆಲಸಕ್ಕೆ ತೊಡಕುಂಟಾಗುವ ಸಾಧ್ಯತೆ ಇದೆ. ಹೀಗಾಗಿ ಬಾಕಿ ಇರುವ 1014 ಗ್ರಾಮಗಳಿಗೂ ಇದೇ ವರ್ಷದ ಜೂನ್ ಅಂತ್ಯದೊಳಗೆ ಅಂತಿಮ ಅಧಿಸೂಚನೆ ಹೊರಡಿಸಿ ಜುಲೈ ನಂತರ ಹಕ್ಕುಪತ್ರ ವಿತರಿಸಿ. ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ ಮಾತಿನಂತೆ ಈ ಕೆಲಸವನ್ನು ಈ ವರ್ಷಾಂತ್ಯದೊಳಗೆ ಮುಗಿಸಿ” ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸಮಯದ ಗಡುವು ನಿಗದಿಪಡಿಸಿದ್ದಾರೆ.

ಬಡವರ ಕೆಲಸವೇ ಸರ್ಕಾರದ ಧ್ಯೇಯ!

ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದೆ. ಎಲ್ಲಾ ಕಾಲದಲ್ಲೂ ಸಮಾಜದ ಅತ್ಯಂತ ಹಿಂದುಳಿದವರು ಹಾಗೂ ಕಡು ಬಡವರ ಪರ ಕೆಲಸ ಮಾಡುವುದೇ ಸರ್ಕಾರದ ಧ್ಯೇಯ. ಆ ನಿಟ್ಟಿನಲ್ಲಿ ಆಡಳಿತ ವರ್ಗವೂ ಸಹಕರಿಸಬೇಕು ಎಂದು ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಕಿವಿಮಾತು ಹೇಳಿದ್ದಾರೆ.

ಈ ತಿಂಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸುತ್ತಿದೆ. ನಾಗರೀಕ ಸಮಾಜದಲ್ಲಿ ಮೂಲಭೂತ ಸೌಲಭ್ಯಗಳಿಂದ ವಂಚಿತರಾದ ಹಾಗೂ ಹಿಂದುಳಿದ ಜನ ಸಮೂಹಕ್ಕೆ ಸಹಾಯವಾಗುವ ಕೆಲಸ ಮಾಡಿ ಆ ಮೂಲಕ ಎರಡು ವರ್ಷ ಪೂರೈಸಿದ ಹರ್ಷಾಚರಣೆ ನಡೆಸಿದರೆ ಮಾತ್ರ ಆ ಕಾರ್ಯಕ್ರಮ ಅರ್ಥಪೂರ್ಣ. ಆ ನಿಟ್ಟಿನಲ್ಲಿ ಮೇ. 20ಕ್ಕೆ ಹೊಸಪೇಟೆಯಲ್ಲಿ ಕಂದಾಯ ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಮೂಲಕ ದಶಕಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ ಎಂದು ಅವರು ತಿಳಿಸಿದ್ದಾರೆ.

“ಕಾರ್ಯಕ್ರಮದ ಭಾಗವಾಗಿ ಈಗಾಗಲೇ ಅಂತಿಮ ಅಧಿಸೂಚನೆ ಆಗಿರುವ 2600 ಕಂದಾಯ ಗ್ರಾಮಗಳ 1.41 ಲಕ್ಷ ಫಲಾನುಭವಿಗಳ ಪೈಕಿ 92,719 ಜನ ಹಕ್ಕುಪತ್ರ ಸಿದ್ದವಾಗಿದೆ. ಇನ್ನೂ 50 ಸಾವಿರ ಹಕ್ಕುಪತ್ರಗಳು ಬಾಕಿ ಇದ್ದು, ಬಾಕಿ ಹಕ್ಕುಪತ್ರಗಳನ್ನೂ ಶೀಘ್ರ ಸಿದ್ದಪಡಿಸಿ. ತುಮಕೂರು, ಚಿತ್ರದುರ್ಗ, ಬೆಳಗಾವಿ, ಹಾವೇರಿ, ರಾಯಚೂರು, ಬಾಗಲಕೋಟೆ, ವಿಜಯನಗರ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಬಾಕಿ ಇರುವ ಅಥವಾ ಬಿಟ್ಟುಹೋಗಿರುವ ಗ್ರಾಮಗಳನ್ನು ಗುರುತಿಸಿದರೆ ಇನ್ನೂ 30 ರಿಂದ 35 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ಸಿದ್ದಪಡಿಸಬೇಕಾಗಬಹುದು. ಆ ಕೆಲಸವನ್ನೂ ಸಹ ಶೀಘ್ರ ಪೂರ್ಣಗೊಳಿಸಿ” ಎಂದು ಅವರು ಹೇಳಿದ್ದಾರೆ.

“ಹಾಡಿ, ಹಟ್ಟಿ, ತಾಂಡಾಗಳಲ್ಲಿ ವಾಸಿಸುತ್ತಿರುವವರು ಸಾಮಾಜಿಕವಾಗಿ ಹಾಗೂ ಆರ್ಥಿವಾಗಿ ಸಾಕಷ್ಟು ಹಿಂದುಳಿದವರು. ಆದರೆ, ಈ ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸದ ಕಾರಣ ದಶಕಗಳಿಂದಲೂ ಇವರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇತ್ತೀಚೆಗೆ ಕಳೆದೊಂದು ದಶಕಗಳಿಂದ ರಾಜ್ಯ ಸರ್ಕಾರ ಗ್ರಾಮಠಾಣಾ ಗಡಿಗಳನ್ನೂ ಮೀರಿ ಹಾಡಿ, ಹಟ್ಟಿ, ತಾಂಡಾಗಳಿಗೆ ರಸ್ತೆ ಹಾಗೂ ನೀರಿನ ಸೌಲಭ್ಯ ನೀಡಿದ್ದೇವೆ. ಈ ಹಿಂದೆ ಶಾಲೆ, ನೀರು ಸರಬರಾಜು ಸಹ ನೀಡುತ್ತಿರಲಿಲ್ಲ ಎಂಬುದೇ ಕಟು ವಾಸ್ತವ. ಇಂತಹ ಜನರಿಗೆ ಶಾಶ್ವತ ಪರಿಹಾರ ನೀಡಿದರೆ ಮಾತ್ರ ಸರ್ಕಾರ ಎರಡು ವರ್ಷ ಪೂರೈಸಿದ್ದೂ ಅರ್ಥಪೂರ್ಣವಾಗುತ್ತದೆ. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳೂ ಬಡವರ ಕೆಲಸಗಳನ್ನು ಆದ್ಯತೆ ಮೇಲೆ ಮಾಡಬೇಕು” ಎಂದು ಸೂಚಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಯತ್ನಾಳ್ ಸವಾಲು ಸ್ವೀಕರಿಸಿ ನೀಡಿದ್ದ ಸಚಿವ ಶಿವಾನಂದ್ ರಾಜೀನಾಮೆ ತಿರಸ್ಕರಿಸಿದ ಸ್ಪೀಕರ್!

ಯತ್ನಾಳ್ ಸವಾಲು ಸ್ವೀಕರಿಸಿ ನೀಡಿದ್ದ ಸಚಿವ ಶಿವಾನಂದ್ ರಾಜೀನಾಮೆ ತಿರಸ್ಕರಿಸಿದ ಸ್ಪೀಕರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...