Homeಕರ್ನಾಟಕಮಂಗಳೂರು| ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ : ಸಿಪಿಎಂ

ಮಂಗಳೂರು| ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ : ಸಿಪಿಎಂ

- Advertisement -
ಮಂಗಳೂರು: ಕೋಮು ಹಿಂಸಾಚಾರದ ಘಟನೆಗಳ ಹಿನ್ನಲೆಯಲ್ಲಿ ಜಿಲ್ಲೆಗೆ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ತರುವಾಯ ಉಸ್ತುವಾರಿ ಸಚಿವರ ಸಮ್ಮುಖ ಗೃಹ ಸಚಿವ ಜಿ ಪರಮೇಶ್ವರ್ ಕರಾವಳಿ ಜಿಲ್ಲೆಯಲ್ಲಿ ಕೋಮುಶಕ್ತಿಗಳ ನಿಗ್ರಹಕ್ಕೆ ಸರಕಾರ ಕೈಗೊಳ್ಳುವ ಕ್ರಮಗಳ ಕುರಿತು ನೀಡಿರುವ ಹೇಳಿಕೆ ವಿಶ್ವಾಸಾರ್ಹತೆಯ ಕೊರತೆಯನ್ನು ಹೊಂದಿದೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ಹೇಳಿದೆ.
ನಕ್ಸಲ್ ನಿಗ್ರಹ ದಳದ ಮಾದರಿಯಲ್ಲಿ ‘ಕೋಮುವಾದಿ ವಿರೋಧಿ ಕಾರ್ಯ ಪಡೆ’ ಸ್ಥಾಪಿಸುವ ಕುರಿತು ಜಿ ಪರಮೇಶ್ವರ್ ಹೇಳಿಕೆ ಪ್ರಾಯೋಗಿಕವಾಗಿ ಸಾಧ್ಯಗೊಳ್ಳುವುದು ಕಷ್ಟ ಸಾಧ್ಯ. ಇದು ನಕಾರಾತ್ಮಕ ಫಲಿತಾಂಶಕ್ಕೂ ಕಾರಣವಾಗುವ ಸಾಧ್ಯತೆ ಇದೆ. ಕೋಮುವಾದ, ಕೋಮು ಶಕ್ತಿಗಳನ್ನು ನಿಗ್ರಹಿಸುವುದು ಪೊಲೀಸರಿಂದ ಮಾತ್ರ ಸಾಧ್ಯ ಆಗುವ ಸಂಗತಿ ಅಲ್ಲ. ಅದು ಬಹಳ ದೀರ್ಘಕಾಲದಿಂದ ಸಂಘಟನಾತ್ಮಕವಾಗಿ ಕಟ್ಟಿ ಬೆಳೆಸಿದ ಒಂದು ಸೈದ್ದಾಂತಿಕ ವ್ಯವಸ್ಥೆ‌. ಇದರ ವಿರುದ್ಧದ ಹೋರಾಟ ಅಂದರೆ, ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಕ್ಷೇತ್ರಗಳಲ್ಲಿ ಪರ್ಯಾಯ ಕಾರ್ಯಕ್ರಮಗಳನ್ನು ಇಟ್ಟು ಕೊಂಡು ದುಡಿಯುವುದು. ಕೋಮುವಾದಿ ಶಕ್ತಿಗಳ ಎದುರು ಸಣ್ಣ ಪುಟ್ಟ ಪ್ರತಿರೋಧಗಳಿಗೂ ಸಿದ್ದರಿಲ್ಲದ ಕಾಂಗ್ರೆಸ್ ಸರಕಾರ ಕೋಮುವಾದಿ ನಿಗ್ರಹ ಕಾರ್ಯಪಡೆ ಹೇಳಿಕೆಯನ್ನು ಕಾರ್ಯರೂಪಕ್ಕೆ ತರುವುದು ನಂಬಲು ಕಷ್ಟವಾಗುವ ಸಂಗತಿ. ಇದೇ ಗೃಹ ಸಚಿವರು ವರ್ಷದ ಹಿಂದೆ ರಚಿಸಿದ ಯಾಂಟಿ ಮೋರಲ್ ಪೊಲೀಸ್ ವಿಂಗ್ ಕಾರ್ಯಾಚರಣೆಗೆ ಇಳಿಯುವ ಮುನ್ನವೆ ಅಸ್ಥಿತ್ವ ಕಳೆದು ಕೊಂಡಿರುವ ಅನುಭವ ಇರುವಾಗ ಸಚಿವರ ಮಾತು ಜನತೆಯಲ್ಲಿ ವಿಶ್ವಾಸ ಮೂಡಿಸುತ್ತಿಲ್ಲ, ಕ್ರಿಮಿನಲ್ ಹಿನ್ನಲೆಯ ದ್ವೇಷ ಭಾಷಣಕಾರರು, ರೌಡಿಗಳ ಮೇಲೆ ಕ್ರಮ ಕೈಗೊಳ್ಳಲು ಸತತವಾಗಿ ಹಿಂಜರಿದ ಸರಕಾರ ಈಗ ಏಕಾಏಕಿ ದ್ವೇಷ ಭಾಷಣ ಮಾಡುವವರನ್ನು ಮುಲಾಜಿಲ್ಲದೆ ಹೆಡೆಮುರಿ ಕಟ್ಟುತ್ತೇವೆ ಎಂಬ ಮಾತು ಉತ್ತರ ಕುಮಾರನ ಪೌರುಷ ರೀತಿ ಕಾಣಿಸುತ್ತದೆ ಎಂದು ಸಿಪಿಐಎಂ ಹೇಳಿದೆ.
ಕೋಮುವಾದ ಅಳವಾಗಿ ಬೇರೂರಿರುವ ಕರಾವಳಿ ಜಿಲ್ಲೆಗಳ ಕುರಿತು ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ತಕ್ಷಣವೆ ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕಿತ್ತು. ಪೊಲೀಸ್ ಇಲಾಖೆ ಮಾತ್ರ ವಲ್ಲದೆ, ಶಿಕ್ಷಣ, ವಿವಿ, ಸೇರಿದಂತೆ ಎಲ್ಲಾ ಇಲಖೆಗಳಿಗೆ ಪ್ರಜ್ಞಾಪೂರ್ವಕ ನೇಮಕಾತಿ, ವಿಶೇಷ ಕಾರ್ಯಕ್ರಮಗಳನ್ನು ಯೋಜಿಸಬೇಕಿತ್ತು. ಆ ಕುರಿತು ಸಿಪಿಐಎಂ ಪಕ್ಷ ಹಾಗೂ ವಿವಿಧ ಜನ ಚಳವಳಿಗಳು ರಾಜ್ಯ ಸರಕಾರದ ಗಮನ ಸೆಳೆದಿತ್ತು. ಆದರೆ, ಈ ಕುರಿತು ಸಣ್ಣ ಕ್ರಮಗಳನ್ನೂ ಕೈಗೊಳ್ಳದೆ ಆನೆ ನಡೆದದ್ದೆ ದಾರಿ ಎಂಬಂತೆ ವರ್ತಿಸಿದ ಕಾಂಗ್ರೆಸ್ ಸರಕಾರ ಹಾಗೂ ಅದರ ನಾಯಕತ್ವ ಈಗ ಖೆಡ್ಡಾಕ್ಕೆ ಉರುಳಿದೆ ಎಂದು ಸಿಪಿಐಎಂ ತಿಳಿಸಿದೆ. ಇಂತಹ ಸಂದರ್ಭದಲ್ಲಿ ಉಸ್ತುವಾರಿ ಹಾಗೂ ಗೃಹ ಸಚಿವರ ವೀರಾವೇಶದ ಮಾತುಗಳು ಯಾರಲ್ಲೂ ವಿಶ್ವಾಸ ಮೂಡಿಸುತ್ತಿಲ್ಲ ಎಂದು ಸಿಪಿಐಂ ದ.ಕ. ಜಿಲ್ಲಾ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.
ಕುಡುಪು ಮಾಬ್ ಲಿಂಚಿಂಗ್ ಪ್ರಕರಣದ ಎಸ್ಐಟಿ ತನಿಖೆ, ತಪ್ಪಿತಸ್ಥ ಪೊಲೀಸ್ ಕಮೀಷನರ್ ಮೇಲಿನ ಕ್ರಮಗಳನ್ನು ಜರುಗಿಸುವ ಕುರಿತು ಗೃಹ ಸಚಿವರು ಏನನ್ನೂ ಹೇಳದೆ, ತಿಪ್ಪೆ ಸಾರಿಸುವ ಮಾತುಗಳನ್ನಷ್ಟೆ ಆಡಿದ್ದಾರೆ ಎಂದು ಸಿಪಿಐಎಂ ನಿರಾಶೆ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...