Homeಕರ್ನಾಟಕಮಂಗಳೂರು| ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ : ಸಿಪಿಎಂ

ಮಂಗಳೂರು| ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ : ಸಿಪಿಎಂ

- Advertisement -
ಮಂಗಳೂರು: ಕೋಮು ಹಿಂಸಾಚಾರದ ಘಟನೆಗಳ ಹಿನ್ನಲೆಯಲ್ಲಿ ಜಿಲ್ಲೆಗೆ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ತರುವಾಯ ಉಸ್ತುವಾರಿ ಸಚಿವರ ಸಮ್ಮುಖ ಗೃಹ ಸಚಿವ ಜಿ ಪರಮೇಶ್ವರ್ ಕರಾವಳಿ ಜಿಲ್ಲೆಯಲ್ಲಿ ಕೋಮುಶಕ್ತಿಗಳ ನಿಗ್ರಹಕ್ಕೆ ಸರಕಾರ ಕೈಗೊಳ್ಳುವ ಕ್ರಮಗಳ ಕುರಿತು ನೀಡಿರುವ ಹೇಳಿಕೆ ವಿಶ್ವಾಸಾರ್ಹತೆಯ ಕೊರತೆಯನ್ನು ಹೊಂದಿದೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ಹೇಳಿದೆ.
ನಕ್ಸಲ್ ನಿಗ್ರಹ ದಳದ ಮಾದರಿಯಲ್ಲಿ ‘ಕೋಮುವಾದಿ ವಿರೋಧಿ ಕಾರ್ಯ ಪಡೆ’ ಸ್ಥಾಪಿಸುವ ಕುರಿತು ಜಿ ಪರಮೇಶ್ವರ್ ಹೇಳಿಕೆ ಪ್ರಾಯೋಗಿಕವಾಗಿ ಸಾಧ್ಯಗೊಳ್ಳುವುದು ಕಷ್ಟ ಸಾಧ್ಯ. ಇದು ನಕಾರಾತ್ಮಕ ಫಲಿತಾಂಶಕ್ಕೂ ಕಾರಣವಾಗುವ ಸಾಧ್ಯತೆ ಇದೆ. ಕೋಮುವಾದ, ಕೋಮು ಶಕ್ತಿಗಳನ್ನು ನಿಗ್ರಹಿಸುವುದು ಪೊಲೀಸರಿಂದ ಮಾತ್ರ ಸಾಧ್ಯ ಆಗುವ ಸಂಗತಿ ಅಲ್ಲ. ಅದು ಬಹಳ ದೀರ್ಘಕಾಲದಿಂದ ಸಂಘಟನಾತ್ಮಕವಾಗಿ ಕಟ್ಟಿ ಬೆಳೆಸಿದ ಒಂದು ಸೈದ್ದಾಂತಿಕ ವ್ಯವಸ್ಥೆ‌. ಇದರ ವಿರುದ್ಧದ ಹೋರಾಟ ಅಂದರೆ, ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಕ್ಷೇತ್ರಗಳಲ್ಲಿ ಪರ್ಯಾಯ ಕಾರ್ಯಕ್ರಮಗಳನ್ನು ಇಟ್ಟು ಕೊಂಡು ದುಡಿಯುವುದು. ಕೋಮುವಾದಿ ಶಕ್ತಿಗಳ ಎದುರು ಸಣ್ಣ ಪುಟ್ಟ ಪ್ರತಿರೋಧಗಳಿಗೂ ಸಿದ್ದರಿಲ್ಲದ ಕಾಂಗ್ರೆಸ್ ಸರಕಾರ ಕೋಮುವಾದಿ ನಿಗ್ರಹ ಕಾರ್ಯಪಡೆ ಹೇಳಿಕೆಯನ್ನು ಕಾರ್ಯರೂಪಕ್ಕೆ ತರುವುದು ನಂಬಲು ಕಷ್ಟವಾಗುವ ಸಂಗತಿ. ಇದೇ ಗೃಹ ಸಚಿವರು ವರ್ಷದ ಹಿಂದೆ ರಚಿಸಿದ ಯಾಂಟಿ ಮೋರಲ್ ಪೊಲೀಸ್ ವಿಂಗ್ ಕಾರ್ಯಾಚರಣೆಗೆ ಇಳಿಯುವ ಮುನ್ನವೆ ಅಸ್ಥಿತ್ವ ಕಳೆದು ಕೊಂಡಿರುವ ಅನುಭವ ಇರುವಾಗ ಸಚಿವರ ಮಾತು ಜನತೆಯಲ್ಲಿ ವಿಶ್ವಾಸ ಮೂಡಿಸುತ್ತಿಲ್ಲ, ಕ್ರಿಮಿನಲ್ ಹಿನ್ನಲೆಯ ದ್ವೇಷ ಭಾಷಣಕಾರರು, ರೌಡಿಗಳ ಮೇಲೆ ಕ್ರಮ ಕೈಗೊಳ್ಳಲು ಸತತವಾಗಿ ಹಿಂಜರಿದ ಸರಕಾರ ಈಗ ಏಕಾಏಕಿ ದ್ವೇಷ ಭಾಷಣ ಮಾಡುವವರನ್ನು ಮುಲಾಜಿಲ್ಲದೆ ಹೆಡೆಮುರಿ ಕಟ್ಟುತ್ತೇವೆ ಎಂಬ ಮಾತು ಉತ್ತರ ಕುಮಾರನ ಪೌರುಷ ರೀತಿ ಕಾಣಿಸುತ್ತದೆ ಎಂದು ಸಿಪಿಐಎಂ ಹೇಳಿದೆ.
ಕೋಮುವಾದ ಅಳವಾಗಿ ಬೇರೂರಿರುವ ಕರಾವಳಿ ಜಿಲ್ಲೆಗಳ ಕುರಿತು ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ತಕ್ಷಣವೆ ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕಿತ್ತು. ಪೊಲೀಸ್ ಇಲಾಖೆ ಮಾತ್ರ ವಲ್ಲದೆ, ಶಿಕ್ಷಣ, ವಿವಿ, ಸೇರಿದಂತೆ ಎಲ್ಲಾ ಇಲಖೆಗಳಿಗೆ ಪ್ರಜ್ಞಾಪೂರ್ವಕ ನೇಮಕಾತಿ, ವಿಶೇಷ ಕಾರ್ಯಕ್ರಮಗಳನ್ನು ಯೋಜಿಸಬೇಕಿತ್ತು. ಆ ಕುರಿತು ಸಿಪಿಐಎಂ ಪಕ್ಷ ಹಾಗೂ ವಿವಿಧ ಜನ ಚಳವಳಿಗಳು ರಾಜ್ಯ ಸರಕಾರದ ಗಮನ ಸೆಳೆದಿತ್ತು. ಆದರೆ, ಈ ಕುರಿತು ಸಣ್ಣ ಕ್ರಮಗಳನ್ನೂ ಕೈಗೊಳ್ಳದೆ ಆನೆ ನಡೆದದ್ದೆ ದಾರಿ ಎಂಬಂತೆ ವರ್ತಿಸಿದ ಕಾಂಗ್ರೆಸ್ ಸರಕಾರ ಹಾಗೂ ಅದರ ನಾಯಕತ್ವ ಈಗ ಖೆಡ್ಡಾಕ್ಕೆ ಉರುಳಿದೆ ಎಂದು ಸಿಪಿಐಎಂ ತಿಳಿಸಿದೆ. ಇಂತಹ ಸಂದರ್ಭದಲ್ಲಿ ಉಸ್ತುವಾರಿ ಹಾಗೂ ಗೃಹ ಸಚಿವರ ವೀರಾವೇಶದ ಮಾತುಗಳು ಯಾರಲ್ಲೂ ವಿಶ್ವಾಸ ಮೂಡಿಸುತ್ತಿಲ್ಲ ಎಂದು ಸಿಪಿಐಂ ದ.ಕ. ಜಿಲ್ಲಾ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.
ಕುಡುಪು ಮಾಬ್ ಲಿಂಚಿಂಗ್ ಪ್ರಕರಣದ ಎಸ್ಐಟಿ ತನಿಖೆ, ತಪ್ಪಿತಸ್ಥ ಪೊಲೀಸ್ ಕಮೀಷನರ್ ಮೇಲಿನ ಕ್ರಮಗಳನ್ನು ಜರುಗಿಸುವ ಕುರಿತು ಗೃಹ ಸಚಿವರು ಏನನ್ನೂ ಹೇಳದೆ, ತಿಪ್ಪೆ ಸಾರಿಸುವ ಮಾತುಗಳನ್ನಷ್ಟೆ ಆಡಿದ್ದಾರೆ ಎಂದು ಸಿಪಿಐಎಂ ನಿರಾಶೆ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...