Homeಅಂತರಾಷ್ಟ್ರೀಯಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ

ಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ

- Advertisement -
- Advertisement -

ಪ್ಯಾಲೆಸ್ತೀನಿನ ಅಕ್ರಮ ವಸಾಹತುಗಾರ ಇಸ್ರೇಲ್‌ನ ಮುಖ್ಯ ವಿಮಾನ ನಿಲ್ದಾಣದ ಪ್ರದೇಶದಲ್ಲಿ ಯಮನ್‌ ದೇಶದ ಹೂತಿ ಬಂಡುಕೋರರು ನಡೆಸಿದ ದಾಳಿಯಲ್ಲಿ ಆರು ಜನರು ಗಾಯಗೊಂಡಿದ್ದಾರೆ. ದಾಳಿಯ ಪರಿಣಾಮ ಹಲವಾರು ಪ್ರಮುಖ ವಿಮಾನಯಾನ ಸಂಸ್ಥೆಗಳು ವಿಮಾನಗಳನ್ನು ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ. ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಹೂತಿಗಳು ಮತ್ತು ಅವರ ಇರಾನ್‌ನ ಬೆಂಬಲಿಗರಿಗೆ ತಕ್ಕ ಪ್ರತಿಕ್ರಿಯೆ ನೀಡುವುದಾಗಿ ಬಾನುವಾರ ಪ್ರತಿಜ್ಞೆ ಮಾಡಿದ್ದಾರೆ. ಇಸ್ರೇಲ್‌ ವಿಮಾನ ನಿಲ್ದಾಣದ

ಪ್ಯಾಲೆಸ್ತೀನಿ ಪ್ರತಿರೋಧ ಪಡೆಗಳಾದ ಹಮಾಸ್ ವಿರುದ್ಧ ಗಾಜಾದಲ್ಲಿ 19 ತಿಂಗಳ ಯುದ್ಧವನ್ನು ವಿಸ್ತರಿಸಲು “ಹತ್ತಾರು ಸಾವಿರ” ಮೀಸಲು ಪಡೆಗಳ ಕರೆಯನ್ನು ಇಸ್ರೇಲ್ ಸೈನ್ಯವು ದೃಢಪಡಿಸುವ ಕೆಲವೇ ಗಂಟೆಗಳ ಮೊದಲು ಈ ದಾಳಿ ನಡೆದಿದೆ. ಅಕ್ರಮ ವಸಾಹತುಗಾರ ಇಸ್ರೇಲ್‌ನ ರಾಜಧಾನಿ ಟೆಲ್ ಅವಿವ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಈ ದಾಳಿಯನ್ನು ಹೂತಿಗಳು ನಡೆಸಿದ್ದಾರೆ. ಕ್ಷಿಪಣಿಯನ್ನು ಪ್ರತಿಬಂಧಿಸಲು ಹಲವಾರು ಪ್ರಯತ್ನಗಳು ನಡೆಸಿದ ಹೊರತಾಗಿಯೂ ದಾಳಿ ನಡೆದಿದೆ ಎಂದು ಇಸ್ರೇಲ್ ಸೇನೆ ಹೇಳಿದೆ.

ಇಸ್ರೇಲ್ ಈ ಹಿಂದೆ ಕೂಡಾ ಇರಾನ್ ಬೆಂಬಲಿತ ಹೂತಿ ಬಂಡುಕೋರರ ವಿರುದ್ಧ “ಕ್ರಮ ಕೈಗೊಂಡಿದೆ” ಮತ್ತು “ಭವಿಷ್ಯದಲ್ಲಿ ಕೂಡಾ ಅವರ ವಿರುದ್ಧ ಕಾರ್ಯನಿರ್ವಹಿಸುತ್ತದೆ” ಎಂದು ಟೆಲಿಗ್ರಾಮ್‌ನಲ್ಲಿ ಪ್ರಸಾರ ಮಾಡಲಾದ ವೀಡಿಯೊದಲ್ಲಿ ನೆತನ್ಯಾಹು ಹೇಳಿದ್ದಾರೆ. “ಇದು ಒಂದೇ ಸ್ಫೋಟದಲ್ಲಿ ನಿಲ್ಲುವುದಿಲ್ಲ, ಬದಲಾಗಿ ಅನೇಕ ಸ್ಫೋಟಗಳು ಇರುತ್ತವೆ” ಎಂದು ಅವರು ಹೆಚ್ಚಿನ ವಿವರಗಳನ್ನು ನೀಡದೆ ಹೇಳಿದ್ದಾರೆ.

ನಂತರ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ನೆತನ್ಯಾಹು, ಇಸ್ರೇಲ್ ನಾವು ಆಯ್ಕೆ ಮಾಡಿದ ಸಮಯ ಮತ್ತು ಸ್ಥಳದಲ್ಲಿ ಇರಾನ್‌ಗೆ ಪ್ರತಿಕ್ರಿಯಿಸುತ್ತದೆ ಎಂದು ಹೇಳಿದ್ದಾರೆ.

ದಾಳಿಯಿಂದಾಗಿ ವಿಮಾನ ನಿಲ್ದಾಣದ ಪ್ರದೇಶದಲ್ಲಿ ದೊಡ್ಡದಾದ ಆಳವಾದ ಹೊಂಡ ಸೃಷ್ಟಿಯಾಗಿದ್ದು ವಿಡಿಯೊದಲ್ಲಿ ದಾಖಲಾಗಿದೆ. ಇದು ನಿಲ್ದಾಣದ ನಿಯಂತ್ರಣ ಗೋಪುರದ ಬಳಿಯೆ ಇದ್ದರೂ, ಅದರ ಮೂಲಸೌಕರ್ಯಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ವರದಿಯಾಗಿದೆ. ಇಸ್ರೇಲ್‌ನ ಮುಖ್ಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ “ಕ್ಷಿಪಣಿ ದಾಳಿ” ಸಂಭವಿಸಿದೆ ಎಂದು ಪೊಲೀಸರು ವರದಿ ಮಾಡಿದ್ದಾರೆ.

ವಿಮಾನ ನಿಲ್ದಾಣದ ಅತಿದೊಡ್ಡ ಟರ್ಮಿನಲ್ 3 ರ ಪಾರ್ಕಿಂಗ್ ಸ್ಥಳಗಳ ಬಳಿ ಕ್ಷಿಪಣಿ ಬಡಿದಿದೆ ಎಂದು AFP ಛಾಯಾಗ್ರಾಹಕರೊಬ್ಬರು ಹೇಳಿದ್ದಾರೆ.

“ನಮ್ಮ ಹಿಂದೆ ಇರುವ ಪ್ರದೇಶವನ್ನು ನೀವು ನೋಡಬಹುದು: ಇಲ್ಲಿ ಒಂದು ಹೊಂಡ ರೂಪುಗೊಂಡಿದ್ದು, ಇದು ಹಲವಾರು ಡಜನ್ ಮೀಟರ್ ಅಗಲ ಮತ್ತು ಹಲವಾರು ಡಜನ್ ಮೀಟರ್ ಆಳವಿದೆ” ಎಂದು ಮಧ್ಯ ಇಸ್ರೇಲ್‌ನ ಪೊಲೀಸ್ ಮುಖ್ಯಸ್ಥ ಯೈರ್ ಹೆಜ್ರೋನಿ ವೀಡಿಯೊದಲ್ಲಿ ತಿಳಿಸಿದ್ದಾರೆ. ವಿಮಾನ ನಿಲ್ದಾಣದ ವ್ಯಾಪ್ತಿಯೊಳಗೆ ಕ್ಷಿಪಣಿ ನೇರವಾಗಿ ಬಿದ್ದಿರುವುದು “ಇದು ಮೊದಲ ಬಾರಿಗೆ” ಎಂದು ಇಸ್ರೇಲಿ ಮಿಲಿಟರಿ ವಕ್ತಾರರು AFP ಗೆ ತಿಳಿಸಿದ್ದಾರೆ.

ಇದಕ್ಕೂ ಮೊದಲು ದಾಳಿಯ ಜವಾಬ್ದಾರಿಯನ್ನು ಹೂತಿ ಬಂಡುಕೋರರು ವಹಿಸಿಕೊಂಡಿದ್ದಾರೆ. ಅವರು ಯುದ್ಧದಿಂದ ಹಾನಿಗೊಳಗಾದ ಗಾಜಾದಲ್ಲಿ ಪ್ಯಾಲೆಸ್ತೀನಿಯನ್ನರನ್ನು ಬೆಂಬಲಿಸಲು ಕಾರ್ಯನಿರ್ವಹಿಸುವುದಾಗಿ ನಿರಂತರವಾಗಿ ಹೇಳುತ್ತಲೆ ಬಂದಿದ್ದಾರೆ. “ಹೈಪರ್ಸಾನಿಕ್ ಬ್ಯಾಲಿಸ್ಟಿಕ್ ಕ್ಷಿಪಣಿ”ಯೊಂದಿಗೆ ತಮ್ಮ ಪಡೆಗಳು “ಬೆನ್ ಗುರಿಯನ್ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು” ಮಿಲಿಟರಿ ಕಾರ್ಯಾಚರಣೆ ನಡೆಸಿವೆ ಎಂದು ಬಂಡುಕೋರರು ಹೇಳಿದ್ದಾರೆ. ಪ್ಯಾಲೆಸ್ತೀನಿ ಪ್ರತಿರೋಧ ಸೇನೆ ಹಮಾಸ್ ಮತ್ತು ಇತರ ಬಂಡುಕೋರ ಗುಂಪುಗಳು ವಿಮಾನ ನಿಲ್ದಾಣದ ಮೇಲಿನ ದಾಳಿಯನ್ನು ಶ್ಲಾಘಿಸಿದ್ದಾರೆ.

ದಾಳಿಯ ನಂತರ ವಿಮಾನ ನಿಲ್ದಾಣವನ್ನು ಸಂಕ್ಷಿಪ್ತವಾಗಿ ಸ್ಥಗಿತಗೊಳಿಸಲಾಗಿದ್ದು, ನಂತರ ವಿಮಾನಗಳು ಪುನರಾರಂಭಗೊಂಡವು ಎಂದು ವರದಿಯಾಗಿದೆ. ವಾಯುಯಾನ ಪ್ರಾಧಿಕಾರವು ಬೆನ್ ಗುರಿಯನ್ ಈಗ “ಮುಕ್ತವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಹೇಳಿದೆ.

ಇಸ್ರೇಲ್‌ನ ಭದ್ರತಾ ಸಚಿವ ಸಂಪುಟ ಭಾನುವಾರ ಸಭೆ ಸೇರಲಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಯಾಲ್ ಜಮೀರ್ ಅವರು ಗಾಜಾ ಯುದ್ಧದ ಯೋಜಿತ ವಿಸ್ತರಣೆ ಮಾಧ್ಯಮ ವರದಿಗಳನ್ನು ದೃಢಪಡಿಸಿದ್ದಾರೆ.

“ಈ ವಾರ ನಾವು ನಮ್ಮ ಮೀಸಲು ಪಡೆಗಳಿಗೆ ಗಾಜಾದಲ್ಲಿ ನಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಮತ್ತು ವಿಸ್ತರಿಸಲು ಹತ್ತಾರು ಸಾವಿರ ಆದೇಶಗಳನ್ನು ನೀಡುತ್ತಿದ್ದೇವೆ. ಸೈನ್ಯವು ಹಮಾಸ್‌ನ ಭೂ ಮತ್ತು ಭೂಗತವಾಗಿರುವ ಎಲ್ಲಾ ಮೂಲಸೌಕರ್ಯಗಳನ್ನು ನಾಶಪಡಿಸುತ್ತದೆ” ಎಂದು ಜಮೀರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿಸ್ತೃತ ದಾಳಿಯ ಕುರಿತು ಚರ್ಚಿಸಲು ಭದ್ರತಾ ಸಚಿವ ಸಂಪುಟ ಸಭೆ ಸೇರಲಿದೆ ಎಂದು ಇಸ್ರೇಲ್‌ನ ಸಾರ್ವಜನಿಕ ಪ್ರಸಾರಕರು ಈ ಹಿಂದೆಯೆ ಹೇಳಿದ್ದರು.

ಯೆಮೆನ್‌ನ ಗಡಿಗಳನ್ನು ನಿಯಂತ್ರಿಸುತ್ತಿರುವ ಹೂತಿ ಬಂಡುಕೋರರು, ಗಾಜಾ ಯುದ್ಧದ ವೇಳೆ ಇಸ್ರೇಲ್ ಮತ್ತು ಕೆಂಪು ಸಮುದ್ರದ ಹಡಗು ಸಾಗಣೆಯನ್ನು ಗುರಿಯಾಗಿಸಿಕೊಂಡು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಹಾರಿಸಿದ್ದಾರೆ. ಈ ನಡುವೆ ಎರಡು ತಿಂಗಳ ಕದನ ವಿರಾಮದ ಕುರಿತ ಬಿಕ್ಕಟ್ಟಿನ ನಡುವೆ ಮಾರ್ಚ್ 18 ರಂದು ಅಕ್ರಮ ವಸಾಹತುಗಾರ ಇಸ್ರೇಲ್ ಗಾಜಾದಾದ್ಯಂತ ದಾಳಿಯನ್ನು ಪುನರಾರಂಭಿಸಿದೆ. ಇಸ್ರೇಲ್‌ ವಿಮಾನ ನಿಲ್ದಾಣದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  NEET: ಮತ್ತೊಬ್ಬ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರ: ಬ್ರಾಹ್ಮಣ ಸಮುದಾಯದಿಂದ ಭಾರೀ ಪ್ರತಿಭಟನೆ

NEET: ಮತ್ತೊಬ್ಬ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರ: ಬ್ರಾಹ್ಮಣ ಸಮುದಾಯದಿಂದ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...