Homeಮುಖಪುಟಭೂತಬಂಗಲೆಯಾದ ದೇಶದ 12 ವಿಮಾನ ನಿಲ್ದಾಣಗಳು; ರನ್‌ವೇಯಲ್ಲಿ ಬೀದಿನಾಯಿಗಳು: ವರದಿ

ಭೂತಬಂಗಲೆಯಾದ ದೇಶದ 12 ವಿಮಾನ ನಿಲ್ದಾಣಗಳು; ರನ್‌ವೇಯಲ್ಲಿ ಬೀದಿನಾಯಿಗಳು: ವರದಿ

- Advertisement -
- Advertisement -

ಭಾರತದ 140 ವಿಮಾನ ನಿಲ್ದಾಣಗಳಲ್ಲಿ, 12 ವಿಮಾನ ನಿಲ್ದಾಣಗಳಿಂದ ಕಳೆದ ಡಿಸೆಂಬರ್ ಮತ್ತು ಮಾರ್ಚ್ ನಡುವೆ ಒಬ್ಬ ಪ್ರಯಾಣಿಕ ಕೂಡಾ ಪ್ರಯಾಣ ಮಾಡಿಲ್ಲ ಎಂದು ಸರ್ಕಾರಿ ವಾಯುಯಾನ ಅಂಕಿ ಅಂಶಗಳನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್‌ ವರದಿ ಮಾಡಿದ್ದು, ಈ ವಿಮಾನ ನಿಲ್ದಾಣಗಳು ಭೂತಬಂಗಲೆಗಳಾಗಿ ಪರಿವರ್ತನೆಯಾಗಿದೆ ಎಂದು ವರದಿ ಉಲ್ಲೇಖಿಸಿದೆ. ಭೂತಬಂಗಲೆಯಾದ

ಈ ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನವು ಕಳೆದ ವರ್ಷದ ಬಹುತೇಕ ಸಮಯದಲ್ಲಿ ದಿನಕ್ಕೆ ಐದಕ್ಕಿಂತ ಕಡಿಮೆ ವಿಮಾನಗಳನ್ನು ಸರಾಸರಿಯಾಗಿ ನಿರ್ವಹಿಸಿದ್ದು, ಕೆಲವು ದಿನಗಳಲ್ಲಿ ಶೂನ್ಯ ವಿಮಾನಗಳನ್ನು ದಾಖಲಿಸಿವೆ ಎಂದು ವರದಿ ಹೇಳಿದೆ.

ಹರಿಯಾಣದ ಹಿಸಾರ್ ಎಂಬ ಸಣ್ಣ ನಗರದಲ್ಲಿ ಹೊಸ ವಿಮಾನ ನಿಲ್ದಾಣವನ್ನು ಇತ್ತಿಚೆಗೆ ಉದ್ಘಾಟಿಸಲಾಗಿತ್ತು. ಸುಮಾರು 10ರಿಂದ 20 ಲಕ್ಷ ಪ್ರಯಾಣಿಕ ಸಾಮರ್ಥ್ಯದೊಂದಿಗೆ ಪ್ರಾರಂಭವಾದ ಈ ವಿಮಾನ ನಿಲ್ದಾಣವನ್ನು ನವದೆಹಲಿಯ ಹೆಚ್ಚು ಜನನಿಬಿಡ ನಿಲ್ದಾಣಗಳಿಗೆ ಪರ್ಯಾಯವಾಗಿ ನಿರ್ಮಿಸಲಾಗಿತ್ತು ಎನ್ನಲಾಗಿದೆ. ಅದಾಗ್ಯೂ, ಉದ್ಘಾಟನೆಯಾಗಿ ಹಲವಾರು ವರ್ಷಗಳಾದರೂ ಹಿಸಾರ್‌ನ ವಿಮಾನ ನಿಲ್ದಾಣವು ಇನ್ನೂ ಕಾರ್ಯನಿರ್ವಹಿಸುತ್ತಿಲ್ಲ ಎಂದು ವರದಿ ಉಲ್ಲೇಖಿಸಿದೆ.

ಆಗಮನ ಮತ್ತು ನಿರ್ಗಮನ ಸಭಾಂಗಣಗಳು ಹೆಚ್ಚಾಗಿ ಖಾಲಿಯಾಗಿದ್ದು, ಬೀದಿ ನಾಯಿಗಳು ರನ್‌ವೇಯಲ್ಲಿ ವಿಶ್ರಾಂತಿ ಪಡೆಯುತ್ತಿವೆ ಎಂದ ವರದಿ ಹೇಳಿದೆ. ವಿಮಾನ ನಿಲ್ದಾಣವು ಮಿಲಿಟರಿ ಜೆಟ್‌ಗಳು ಮತ್ತು ರಾಜಕಾರಣಿಗಳನ್ನು ಕರೆದೊಯ್ಯುವ ವಿರಳ ವಿಮಾನಗಳನ್ನು ಹೊಂದಿದ್ದರೂ, 2021 ರಿಂದ ಹಿಸಾರ್‌ನಿಂದ ಕೆಲವೇ ಕೆಲವು ಸಬ್ಸಿಡಿ ವಾಣಿಜ್ಯ ವಿಮಾನಗಳು ಹಾರಾಟ ನಡೆಸಿವೆ ಎಂದು ಅದು ಹೇಳಿದೆ.

ವಿಮಾನಯಾನದ ಸರಾಸರಿ ಟಿಕೆಟ್ ಬೆಲೆಗಳು ದೇಶದ ಹೆಚ್ಚಿನ ಜನರಿಗೆ ಇನ್ನೂ ತುಂಬಾ ದುಬಾರಿಯಾಗಿದ್ದರೂ ಚುನಾಯಿತ ನಾಯಕರು ಮತದಾರರನ್ನು ಮೆಚ್ಚಿಸಲು ಆಕರ್ಷಕ ಯೋಜನೆಗಳಿಗೆ ಹಣಕಾಸು ಒದಗಿಸುವ ಒತ್ತಡದಲ್ಲಿದ್ದಾರೆ ಎಂದು ವರದಿ ಹೇಳಿದೆ. ದೇಶದ ಅತ್ಯಂತ ಬಡ ರಾಜ್ಯಗಳಲ್ಲಿ ಒಂದಾದ ಮಧ್ಯಪ್ರದೇಶದ ಮುಖ್ಯಮಂತ್ರಿ ಇತ್ತೀಚೆಗೆ ಪ್ರತಿ 200 ಕಿಲೋಮೀಟರ್ ಭೂಮಿಗೆ ಒಂದು ವಿಮಾನ ನಿಲ್ದಾಣವನ್ನು ನಿರ್ಮಿಸುವುದಾಗಿ ಭರವಸೆ ನೀಡಿರುವ ಬಗ್ಗೆ ವರದಿ ಉಲ್ಲೇಖಿಸಿದೆ.

“ಸ್ಪಷ್ಟವಾಗಿ, ಭಾರತವು ತನ್ನ ವಾಯುಯಾನ ಮೂಲಸೌಕರ್ಯವನ್ನು ಸಂಚಾರ ಮತ್ತು ಬೇಡಿಕೆಯ ತರ್ಕದ ಆಧಾರದ ಮೇಲೆ ಯೋಜಿಸುತ್ತಿಲ್ಲ, ಬದಲಿಗೆ ಚುನಾವಣೆ ಮತ್ತು ರಾಜಕೀಯ ಕಾರ್ಯಸೂಚಿಗಳ ಆಧಾರದ ಮೇಲೆ ಯೋಜಿಸುತ್ತಿದೆ” ಎಂದು ವಾಯುಯಾನ ಸಲಹಾ ಸಂಸ್ಥೆಯಾದ ಮಾರ್ಟಿನ್ ಕನ್ಸಲ್ಟಿಂಗ್‌ನ ಮುಖ್ಯ ಕಾರ್ಯನಿರ್ವಾಹಕ ಮಾರ್ಕ್ ಮಾರ್ಟಿನ್ ಹೇಳಿದರು.

ದೇಶದ ದೊಡ್ಡ ನಗರಗಳಲ್ಲಿ, ಅನೇಕ ಮಹಾನಗರಗಳು ಕೂಡಾ ವಿಮಾನಯಾನ ಉದ್ದಿಮೆಯಲ್ಲಿ ಹೆಣಗಾಡುತ್ತಿವೆ ಎಂದು ವರದಿ ಉಲ್ಲೇಖಿಸಿದೆ. ಮುಂಬೈನ ಪ್ರಯಾಣಿಕರ ಸಂಖ್ಯೆ ಅದರ ಮೂಲ ಗುರಿಯ ಸುಮಾರು 30% ರಷ್ಟಿದ್ದು, ಬೆಂಗಳೂರಿನದು 6% ರಷ್ಟಿದೆ. ನವದೆಹಲಿ ಮತ್ತು ಕೋಲ್ಕತ್ತಾ ಹೊರತುಪಡಿಸಿ, ಭಾರತದಾದ್ಯಂತದ ಮಹಾನಗರಗಳಲ್ಲಿ ನಿಜವಾದ ಪ್ರಯಾಣಿಕರ ಸಂಖ್ಯೆ ಅಪೇಕ್ಷಿತ ಮಟ್ಟಕ್ಕಿಂತ 20% ಕ್ಕಿಂತ ಕಡಿಮೆಯಿದೆ ಎಂದು ವರದಿ ಉಲ್ಲೇಖಿಸಿದೆ.

ಸರ್ಕಾರದ ಅಧಿಕೃತ ಲೆಕ್ಕಪರಿಶೋಧಕರು(ಸಿಎಜಿ) ಹಿಂದೆ ಕೆಲವು ಯೋಜನೆಗಳನ್ನು ಅವುಗಳ ಅಗತ್ಯಕ್ಕಿಂತ ವರ್ಷಗಳ ಅಥವಾ ದಶಕಗಳ ಮೊದಲೇ ನಿರ್ಮಿಸಲಾಗಿದೆ ಎಂದು ಹೇಳಿದ್ದನ್ನು ವರದಿಯು ಉಲ್ಲೇಖಿಸಿದೆ.

“ಸ್ಪಷ್ಟವಾಗಿ, ಭಾರತವು ತನ್ನ ವಾಯುಯಾನ ಮೂಲಸೌಕರ್ಯವನ್ನು ಸಂಚಾರ ಮತ್ತು ಬೇಡಿಕೆಯ ತರ್ಕದ ಆಧಾರದ ಮೇಲೆ ಯೋಜಿಸುತ್ತಿಲ್ಲ. ಬದಲಿಗೆ ಚುನಾವಣೆ ಮತ್ತು ರಾಜಕೀಯ ಕಾರ್ಯಸೂಚಿಗಳ ಆಧಾರದ ಮೇಲೆ ಯೋಜಿಸುತ್ತಿದೆ” ಎಂದು ವಾಯುಯಾನ ಸಲಹಾ ಸಂಸ್ಥೆಯಾದ ಮಾರ್ಟಿನ್ ಕನ್ಸಲ್ಟಿಂಗ್‌ನ ಮುಖ್ಯ ಕಾರ್ಯನಿರ್ವಾಹಕ ಮಾರ್ಕ್ ಮಾರ್ಟಿನ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಭಾರತದ ಖಾಲಿ ವಿಮಾನ ನಿಲ್ದಾಣಗಳು ಬಹುಶಃ ದೇಶದ ನಿರ್ಮಾಣ ಸಮಸ್ಯೆಗಳ ಸಂಕೇತವಾಗಿದೆ ಎಂದು ವರದಿ ಹೇಳಿದ್ದು, ಭಾರತದಲ್ಲಿ ವಾಯು ಸಂಚಾರ ಸಂಖ್ಯೆಗಳು ಎಂದಿಗೂ ಹೆಚ್ಚಿಲ್ಲವಾದರೂ, ಪ್ರಯಾಣಿಕರ ಅಡಚಣೆಗಳು ಹೆಚ್ಚು ಸ್ಪಷ್ಟವಾಗಿರುವಂತಹ ಸ್ಥಳಗಳಲ್ಲಿ, ಸಾಮಾನ್ಯವಾಗಿ ಹೆಚ್ಚಿನ ದಟ್ಟಣೆಯ ಮಹಾನಗರಗಳಲ್ಲಿ, ತೆರಿಗೆ ಹಣಗಳನ್ನು ಪರಿಣಾಮಕಾರಿಯಾಗಿ ಖರ್ಚು ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗಳನ್ನು ವರದಿ ಎತ್ತಿದೆ.

“ಈ ವಿಮಾನ ನಿಲ್ದಾಣಗಳು ಬೇಡಿಕೆಯ ಸವಾಲುಗಳನ್ನು ಎದುರಿಸುತ್ತಿವೆ ಮತ್ತು ಇದು ಶೀಘ್ರದಲ್ಲೇ ಮುಂದುವರಿಯುತ್ತದೆ” ಎಂದು ವಾಯುಯಾನ ಸಲಹಾ ಸಂಸ್ಥೆಯಾದ CAPA ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಮತ್ತು ನಿರ್ದೇಶಕ ಕಪಿಲ್ ಕೌಲ್ ಹೇಳಿದ್ದಾರೆ ಎಂದು ವರದಿ ಹೇಳಿದೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಸ್ತುತ ಅಧಿಕಾರಿಗಳು ನಷ್ಟ ಅನುಭವಿಸುತ್ತಿರುವ ವಿಮಾನ ನಿಲ್ದಾಣಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಖಾಸಗಿಯಾಗಿ ಹೇಳಿಕೊಂಡಿದ್ದಾರೆ ಎಂದು ವರದಿ ಹೇಳಿದೆ. ಸರ್ಕಾರವು ಇನ್ನೂ 10 ರಿಂದ 15 ವರ್ಷಗಳ ಕಾಲ ಸಂಕಷ್ಟದಲ್ಲಿರುವ ವಿಮಾನ ನಿಲ್ದಾಣಗಳಿಗೆ “ಕಾರ್ಯಸಾಧ್ಯತೆಯ ಅಂತರ ನಿಧಿ”ಯನ್ನು ನೀಡಬೇಕಾಗಬಹುದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹೇಳಿದೆ ಎಂದು ವರದಿ ಉಲ್ಲೇಖಿಸಿದೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವರದಿಯಲ್ಲಿನ ಅಂದಾಜಿನ ಪ್ರಕಾರ, ಸಣ್ಣ ವಿಮಾನ ನಿಲ್ದಾಣಗಳು ತಮ್ಮ ನಿರ್ವಹಣಾ ವೆಚ್ಚವನ್ನು ಮರುಪಡೆಯಲು ದಿನಕ್ಕೆ ಕನಿಷ್ಠ 8 ರಿಂದ 10 ವಾಣಿಜ್ಯ ವಿಮಾನಗಳ ಅಗತ್ಯವಿರುತ್ತದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ 140 ವಿಮಾನ ನಿಲ್ದಾಣಗಳಲ್ಲಿ ಅರ್ಧದಷ್ಟು ವಿಮಾನಗಳು ದಿನಕ್ಕೆ 10 ಕ್ಕಿಂತ ಕಡಿಮೆ ವಿಮಾನಗಳನ್ನು ನಿರ್ವಹಿಸುತ್ತದೆ ಎಂದು ಬ್ಲೂಮ್‌ಬರ್ಗ್ ನ್ಯೂಸ್ ಅಂಕಿ ಅಂಶಗಳನ್ನು ಉಲ್ಲೇಖಿಸಿ ಹೇಳಿದೆ. ಭೂತಬಂಗಲೆಯಾದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಪರೇಷನ್ ಕಾಗರ್ ತಕ್ಷಣ ನಿಲ್ಲಿಸಿ, ನಕ್ಸಲರೊಂದಿಗೆ ಮಾತುಕತೆ ನಡೆಸಿ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ.ರಾಘುವುಲು

ಅಪರೇಷನ್ ಕಾಗರ್ ತಕ್ಷಣ ನಿಲ್ಲಿಸಿ, ನಕ್ಸಲರೊಂದಿಗೆ ಮಾತುಕತೆ ನಡೆಸಿ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ.ರಾಘುವುಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...