Homeಕರ್ನಾಟಕಪರಿಶಿಷ್ಟ ಜಾತಿ ಒಳ ಮೀಸಲಾತಿ| ಇಂದಿನಿಂದ ವೈಜ್ಞಾನಿಕ ದತ್ತಾಂಶ ಸಂಗ್ರಹ: ಮೂರೂ ಹಂತಗಳಲ್ಲಿ ಸಮೀಕ್ಷೆ

ಪರಿಶಿಷ್ಟ ಜಾತಿ ಒಳ ಮೀಸಲಾತಿ| ಇಂದಿನಿಂದ ವೈಜ್ಞಾನಿಕ ದತ್ತಾಂಶ ಸಂಗ್ರಹ: ಮೂರೂ ಹಂತಗಳಲ್ಲಿ ಸಮೀಕ್ಷೆ

- Advertisement -
- Advertisement -

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಇಂದಿನಿಂದ (ಮೇ.5) ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ಶುರುವಾಗಲಿದೆ. ಮೂರೂ ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025’ ಕುರಿತಂತೆ ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, “ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ” ಎಂದರು.

“ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್‌.ಎನ್‌ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಆಯೋಗ ವರದಿ ನೀಡಿದೆ.”

“ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡುವ ಸಲುವಾಗಿ ದತ್ತಾಂಶ ಸಂಗ್ರಹಿಸಲು ಹೊಸ ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ”

“2011ರ ಜನಗಣತಿ ಆಧಾರದಲ್ಲಿ ಸದಾಶಿವ ಆಯೋಗ ಪರಿಶಿಷ್ಟ ಜಾತಿ ಸಮುದಾಯಗಳ ಜನಸಂಖ್ಯೆಯನ್ನು ಗುರುತಿಸಿತ್ತು. 1-8-2024ರಲ್ಲಿ ಸುಪ್ರೀಂಕೋರ್ಟ್ ಒಳ ಮೀಸಲಾತಿ ಪರವಾಗಿ ನೀಡಿರುವ ಆದೇಶದಂತೆ ನಾವು ಮುಂದುವರೆದೆ” ಎಂದು ಸಿಎಂ ವಿವರಿಸಿದರು.

ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರ ಸಮುದಾಯಗಳಲ್ಲಿ ಯಾರು ಎಷ್ಟು ಮಂದಿ ಇದ್ದಾರೆ ಎನ್ನುವುದು ಖಚಿತವಾಗಿ ಗೊತ್ತಾಗಬೇಕಿದೆ. ಎಡಗೈ ಸಮುದಾಯ, ಬಲಗೈ ಸಮುದಾಯ ಎಷ್ಟಿದೆ ಎನ್ನುವುದು ವೈಜ್ಞಾನಿಕವಾಗಿ ತಿಳಿಯಬೇಕಿದೆ. 101 ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕೊಡುವಾಗ ನಿರ್ದಿಷ್ಟ ಅಂಕಿ ಅಂಶಗಳು ಬೇಕಾಗುತ್ತವೆ ಎಂದು ಹೇಳಿದರು.

“ಮೊದಲ ಹಂತದಲ್ಲಿ, ಇವತ್ತಿನಿಂದ (5 ಮೇ 2025 ರಿಂದ 17 ಮೇ 2025) ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗುತ್ತದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರುತ್ತಾರೆ.”

“ಎರಡನೇ ಹಂತದಲ್ಲಿ, (19 ಮೇ 2025 ರಿಂದ 21 ಮೇ 2025) ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಇಲ್ಲಿ ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು.”

“ಮೂರನೇ ಹಂತದಲ್ಲಿ, (19 ಮೇ 2025 ರಿಂದ 22 ಮೇ 2025) ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು. ನಿಖರ ದತ್ತಾಂಶ ಸಂಗ್ರಹಿಸಿದ ಮೇಲೆ ನಮಗೆ ಶಿಫಾರಸ್ಸು ಮಾಡುತ್ತಾರೆ. ಒಟ್ಟು 60 ದಿನ ಸಮಯಾವಕಾಶ ನೀಡಲಾಗಿದೆ.
ಎಂದು ಸಿಎಂ ಮಾಹಿತಿ ನೀಡಿದರು.

ಮೊಬೈಲ್ ಆ್ಯಪ್‌ 

ಮೊಬೈಲ್ ಆ್ಯಪ್‌ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30 ರಿಂದ ಸಂಜೆ 6:30ರವರೆಗೆ ಮೊಬೈಲ್ ಆ್ಯಪ್‌ ಎನಾಬಲ್ ಮಾಡಲಾಗಿರುತ್ತದೆ. ಇದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಯಾರೂ ತಪ್ಪಿಸಬಾರದು ಎಂದು ಸಿಎಂ ಹೇಳಿದರು.

ಸಹಾಯವಾಣಿ ಸಂಖ್ಯೆ


ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ನಾವು ಒಳ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು. ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ಕೊಡಿ. ಎಲ್ಲಾ ಸಂಘಟನೆಗಳೂ ಇದಕ್ಕೆ ಸಹಕರಿಸಿ ಎಂದೂ ಸಿಎಂ ಮನವಿ ಮಾಡಿದರು.

ಸಚಿವರಾದ ಹೆಚ್.ಸಿ ಮಹದೇವಪ್ಪ, ಕೆ.ಹೆಚ್ ಮುನಿಯಪ್ಪ, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕರಾದ ರೂಪಕಲಾ ಶಶಿಧರ್, ವಿಧಾನಪರಿಷತ್ ಸದಸ್ಯ ಸುದಾಮ ದಾಸ್, ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

NEET: ಮತ್ತೊಬ್ಬ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರ: ಬ್ರಾಹ್ಮಣ ಸಮುದಾಯದಿಂದ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...