Homeಕರ್ನಾಟಕಪರಿಶಿಷ್ಟ ಜಾತಿ ಒಳ ಮೀಸಲಾತಿ| ಇಂದಿನಿಂದ ವೈಜ್ಞಾನಿಕ ದತ್ತಾಂಶ ಸಂಗ್ರಹ: ಮೂರೂ ಹಂತಗಳಲ್ಲಿ ಸಮೀಕ್ಷೆ

ಪರಿಶಿಷ್ಟ ಜಾತಿ ಒಳ ಮೀಸಲಾತಿ| ಇಂದಿನಿಂದ ವೈಜ್ಞಾನಿಕ ದತ್ತಾಂಶ ಸಂಗ್ರಹ: ಮೂರೂ ಹಂತಗಳಲ್ಲಿ ಸಮೀಕ್ಷೆ

- Advertisement -
- Advertisement -

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಇಂದಿನಿಂದ (ಮೇ.5) ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ಶುರುವಾಗಲಿದೆ. ಮೂರೂ ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025’ ಕುರಿತಂತೆ ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, “ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ” ಎಂದರು.

“ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್‌.ಎನ್‌ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಆಯೋಗ ವರದಿ ನೀಡಿದೆ.”

“ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡುವ ಸಲುವಾಗಿ ದತ್ತಾಂಶ ಸಂಗ್ರಹಿಸಲು ಹೊಸ ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ”

“2011ರ ಜನಗಣತಿ ಆಧಾರದಲ್ಲಿ ಸದಾಶಿವ ಆಯೋಗ ಪರಿಶಿಷ್ಟ ಜಾತಿ ಸಮುದಾಯಗಳ ಜನಸಂಖ್ಯೆಯನ್ನು ಗುರುತಿಸಿತ್ತು. 1-8-2024ರಲ್ಲಿ ಸುಪ್ರೀಂಕೋರ್ಟ್ ಒಳ ಮೀಸಲಾತಿ ಪರವಾಗಿ ನೀಡಿರುವ ಆದೇಶದಂತೆ ನಾವು ಮುಂದುವರೆದೆ” ಎಂದು ಸಿಎಂ ವಿವರಿಸಿದರು.

ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರ ಸಮುದಾಯಗಳಲ್ಲಿ ಯಾರು ಎಷ್ಟು ಮಂದಿ ಇದ್ದಾರೆ ಎನ್ನುವುದು ಖಚಿತವಾಗಿ ಗೊತ್ತಾಗಬೇಕಿದೆ. ಎಡಗೈ ಸಮುದಾಯ, ಬಲಗೈ ಸಮುದಾಯ ಎಷ್ಟಿದೆ ಎನ್ನುವುದು ವೈಜ್ಞಾನಿಕವಾಗಿ ತಿಳಿಯಬೇಕಿದೆ. 101 ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕೊಡುವಾಗ ನಿರ್ದಿಷ್ಟ ಅಂಕಿ ಅಂಶಗಳು ಬೇಕಾಗುತ್ತವೆ ಎಂದು ಹೇಳಿದರು.

“ಮೊದಲ ಹಂತದಲ್ಲಿ, ಇವತ್ತಿನಿಂದ (5 ಮೇ 2025 ರಿಂದ 17 ಮೇ 2025) ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗುತ್ತದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರುತ್ತಾರೆ.”

“ಎರಡನೇ ಹಂತದಲ್ಲಿ, (19 ಮೇ 2025 ರಿಂದ 21 ಮೇ 2025) ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಇಲ್ಲಿ ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು.”

“ಮೂರನೇ ಹಂತದಲ್ಲಿ, (19 ಮೇ 2025 ರಿಂದ 22 ಮೇ 2025) ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು. ನಿಖರ ದತ್ತಾಂಶ ಸಂಗ್ರಹಿಸಿದ ಮೇಲೆ ನಮಗೆ ಶಿಫಾರಸ್ಸು ಮಾಡುತ್ತಾರೆ. ಒಟ್ಟು 60 ದಿನ ಸಮಯಾವಕಾಶ ನೀಡಲಾಗಿದೆ.
ಎಂದು ಸಿಎಂ ಮಾಹಿತಿ ನೀಡಿದರು.

ಮೊಬೈಲ್ ಆ್ಯಪ್‌ 

ಮೊಬೈಲ್ ಆ್ಯಪ್‌ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30 ರಿಂದ ಸಂಜೆ 6:30ರವರೆಗೆ ಮೊಬೈಲ್ ಆ್ಯಪ್‌ ಎನಾಬಲ್ ಮಾಡಲಾಗಿರುತ್ತದೆ. ಇದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಯಾರೂ ತಪ್ಪಿಸಬಾರದು ಎಂದು ಸಿಎಂ ಹೇಳಿದರು.

ಸಹಾಯವಾಣಿ ಸಂಖ್ಯೆ


ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ನಾವು ಒಳ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು. ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ಕೊಡಿ. ಎಲ್ಲಾ ಸಂಘಟನೆಗಳೂ ಇದಕ್ಕೆ ಸಹಕರಿಸಿ ಎಂದೂ ಸಿಎಂ ಮನವಿ ಮಾಡಿದರು.

ಸಚಿವರಾದ ಹೆಚ್.ಸಿ ಮಹದೇವಪ್ಪ, ಕೆ.ಹೆಚ್ ಮುನಿಯಪ್ಪ, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕರಾದ ರೂಪಕಲಾ ಶಶಿಧರ್, ವಿಧಾನಪರಿಷತ್ ಸದಸ್ಯ ಸುದಾಮ ದಾಸ್, ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

NEET: ಮತ್ತೊಬ್ಬ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರ: ಬ್ರಾಹ್ಮಣ ಸಮುದಾಯದಿಂದ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...