Homeಮುಖಪುಟಮುರ್ಷಿದಾಬಾದ್ ಹಿಂಸಾಚಾರದ ಕುರಿತ ರಾಜ್ಯಪಾಲರ ವರದಿ ನಿರ್ಲಕ್ಷಿಸಿದ ಮಮತಾ ಬ್ಯಾನರ್ಜಿ

ಮುರ್ಷಿದಾಬಾದ್ ಹಿಂಸಾಚಾರದ ಕುರಿತ ರಾಜ್ಯಪಾಲರ ವರದಿ ನಿರ್ಲಕ್ಷಿಸಿದ ಮಮತಾ ಬ್ಯಾನರ್ಜಿ

- Advertisement -
- Advertisement -

ರಾಜ್ಯದ ಹಿಂಸಾಚಾರ ಪೀಡಿತ ಮುರ್ಷಿದಾಬಾದ್‌ನಲ್ಲಿ ಪರಿಸ್ಥಿತಿ ಸ್ಥಿರವಾಗಿದೆ ಎಂದು ಹೇಳಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಗಲಭೆಗಳ ಕುರಿತು ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಗೃಹ ಸಚಿವಾಲಯಕ್ಕೆ (MHA) ನೀಡಿರುವ ವರದಿಯ ಬಗ್ಗೆ ಅಥವಾ ರಾಜ್ಯದಲ್ಲಿ 356ನೇ ವಿಧಿಯ ಅನುಷ್ಠಾನದ ಬಗ್ಗೆ ಅವರು ನೀಡಿರುವ ಉಲ್ಲೇಖದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸೋಮವಾರ ಹೇಳಿದ್ದಾರೆ. ಮುರ್ಷಿದಾಬಾದ್ ಹಿಂಸಾಚಾರದ

ಸೋಮವಾರ ಮಧ್ಯಾಹ್ನ ಮುರ್ಷಿದಾಬಾದ್‌ಗೆ ಎರಡು ದಿನಗಳ ಭೇಟಿಗೆ ತೆರಳಿದ್ದ ಮಮತಾ ಬ್ಯಾನರ್ಜಿ, ತಾನು ಮೊದಲೇ ಭೇಟಿ ನೀಡಬಹುದಿತ್ತು, ಆದರೆ ಪರಿಸ್ಥಿತಿ ಸಾಮಾನ್ಯವಾಗುವವರೆಗೆ ಕಾಯಲು ನಿರ್ಧರಿಸಿದದಾಗಿ ಹೇಳಿದ್ದಾರೆ.

“ಬೋಸ್ ಅವರು ಗೃಹ ಸಚಿವಾಲಯಕ್ಕೆ ನೀಡಿರುವ ವರದಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ರಾಜ್ಯಪಾಲರ ಆರೋಗ್ಯ ಸರಿಯಿಲ್ಲ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ” ಎಂದು ಮುರ್ಷಿದಾಬಾದ್‌ಗೆ ಹೆಲಿಕಾಪ್ಟರ್ ಹತ್ತುವ ಮೊದಲು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ನಾನು ಮೊದಲೇ ಮುರ್ಷಿದಾಬಾದ್‌ಗೆ ಹೋಗಬಹುದಿತ್ತು. ಆದರೆ ಅಲ್ಲಿ ಶಾಂತಿ ಮತ್ತು ಸ್ಥಿರತೆ ಇಲ್ಲದಿದ್ದರೆ, ನಾವು ಹೋಗಿ ತೊಂದರೆ ನೀಡಬಾರದು. ಈ ಹಿಂದೆಯೇ ಮುರ್ಷಿದಾಬಾದ್‌ ಸಹಜತೆಗೆ ಮರಳಿದೆ. ಇಂದು, ನಾನು ಅಲ್ಲಿಗೆ ಹೋಗುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಅವರು ಆ ದಿನದ ನಂತರ ಬೆರ್ಹಾಂಪೋರ್‌ನಲ್ಲಿ ಜಿಲ್ಲಾ ಪರಿಶೀಲನಾ ಸಭೆ ನಡೆಸುವುದಾಗಿ ಹೇಳಿದ್ದಾರೆ. “ನಾಳೆ, ನಾನು ಹಿಂಸಾಚಾರ ಪೀಡಿತ ಧುಲಿಯನ್‌ಗೆ ಭೇಟಿ ನೀಡುತ್ತೇನೆ ಮತ್ತು ಮನೆಗಳು ಮತ್ತು ಅಂಗಡಿಗಳಿಗೆ ಹಾನಿಗೊಳಗಾದ ಜನರಿಗೆ ಪರಿಹಾರ ನೀಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಮುರ್ಷಿದಾಬಾದ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಗಲಭೆಗಳ ಕುರಿತು ಬೋಸ್ ಗೃಹ ಸಚಿವಾಲಯಕ್ಕೆ ವರದಿಯನ್ನು ಕಳುಹಿಸಿದ್ದಾರೆ, “ಮೂಲಭೂತವಾದಿಕರಣ ಮತ್ತು ಉಗ್ರಗಾಮಿತ್ವದ ಅವಳಿ ಭೂತ” ರಾಜ್ಯಕ್ಕೆ ಗಂಭೀರ ಸವಾಲನ್ನು ಒಡ್ಡುತ್ತದೆ ಎಂದು ಉಲ್ಲೇಖಿಸಿದ್ದಾರೆ.

ತಮ್ಮ ವರದಿಯಲ್ಲಿ, ಬಾಂಗ್ಲಾದೇಶದ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ತನಿಖಾ ಆಯೋಗ ಮತ್ತು ಕೇಂದ್ರ ಪಡೆಗಳ ಹೊರಠಾಣೆಗಳನ್ನು ಸ್ಥಾಪಿಸುವುದು ಸೇರಿದಂತೆ ಹಲವಾರು ಕ್ರಮಗಳನ್ನು ಅವರು ಸೂಚಿಸಿದ್ದಾರೆ. ಜೊತೆಗೆ “ಹೆಚ್ಚುವರಿಯಾಗಿ ಹೇಳುವ ಅಗತ್ಯವಿಲ್ಲ, ಭಾರತೀಯ ಸಂವಿಧಾನದ 356ನೇ ವಿಧಿಯಡಿಯ ಷರತ್ತುಗಳು ಕೂಡ ಉಳಿದಿವೆ.” ಎಂದು ಅವರು ವರದಿಯಲ್ಲಿ ಬರೆದಿದ್ದಾರೆ. ಸಂವಿಧಾನದ 356 ನೇ ವಿಧಿಯ ಹೇರಿಕೆಯು ಒಂದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಸೂಚಿಸುತ್ತದೆ.

ಒಬ್ಬ ವ್ಯಕ್ತಿ ಮತ್ತು ಅವರ ಮಗ ಸೇರಿದಂತೆ ಕನಿಷ್ಠ ಮೂರು ಜನರ ಜೀವಗಳನ್ನು ಬಲಿತೆಗೆದುಕೊಂಡ ಮತ್ತು ಹಲವಾರು ಜನರು ಗಾಯಗೊಂಡ ಹಿಂಸಾಚಾರದ ನಂತರ ರಾಜ್ಯಪಾಲರು ಹಲವಾರು ಕ್ರಮಗಳನ್ನು ಸೂಚಿಸಿದ್ದಾರೆ. ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿ ಪ್ರತಿಭಟನೆಗಳ ನಡುವೆ ಈ ಗಲಭೆ ಸಂಭವಿಸಿತ್ತು. ವರದಿಯಲ್ಲಿ, ಗಲಭೆಗಳು “ಪೂರ್ವಯೋಜಿತ” ಎಂದು ತೋರುತ್ತಿದೆ ಮತ್ತು ರಾಜ್ಯ ಸರ್ಕಾರವು “ಮುರ್ಷಿದಾಬಾದ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂಬ ಬಗ್ಗೆ ತಿಳಿದಿತ್ತು” ಎಂದು ರಾಜ್ಯಪಾಲರು ಹೇಳಿದ್ದಾರೆ. ಮುರ್ಷಿದಾಬಾದ್ ಹಿಂಸಾಚಾರದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್

ಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...