Homeಮುಖಪುಟಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್

ಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್

- Advertisement -
- Advertisement -

ಕ್ರೈಸ್ತ ಧರ್ಮದಲ್ಲಿ ಜಾತಿ ವ್ಯವಸ್ಥೆ ಇಲ್ಲ. ಹಾಗಾಗಿ, ಪರಿಶಿಷ್ಟ ಸಮುದಾಯದ ವ್ಯಕ್ತಿ ಆ ಧರ್ಮಕ್ಕೆ ಮತಾಂತರಗೊಂಡ ಬಳಿಕ ಅವರಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ (ದೌರ್ಜನ್ಯ ತಡೆ) ಕಾಯ್ದೆಯಡಿ ರಕ್ಷಣೆ ಸಿಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್‌ ತೀರ್ಪು ನೀಡಿದೆ.

ಪಾದ್ರಿಯೊಬ್ಬರ ಮೇಲಿನ ಹಲ್ಲೆ ಮತ್ತು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್‌. ಹರಿನಾಥ್‌ ಅವರಿದ್ದ ಏಕಸದಸ್ಯ ಪೀಠ, ವ್ಯಕ್ತಿಯೊಬ್ಬರು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ನಂತರ, ಅವರು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯನಾಗಿ ಉಳಿಯುವುದಿಲ್ಲ. ಪರಿಶಿಷ್ಟ ಜಾತಿ ಪ್ರಮಾಣಪತ್ರ ಹೊಂದಿರುವ ವ್ಯಕ್ತಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರೆ, ಅವರಿಗೆ ಕಾಯ್ದೆಯಡಿ ರಕ್ಷಣೆ ಇರುವುದಿಲ್ಲ ಎಂದಿರುವುದಾಗಿ barandbench.com ವರದಿ ಮಾಡಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ವ್ಯಕ್ತಿಗೆ ಮಾತ್ರ ಕಾಯ್ದೆಯನ್ನು ಅನ್ವಯಿಸಬಹುದಾಗಿದೆ. ಪಾದ್ರಿ ಸ್ವಯಂಪ್ರೇರಣೆಯಿಂದ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದು, ಕಳೆದ 10 ವರ್ಷಗಳಿಂದ ಚರ್ಚ್‌ನಲ್ಲಿ ಪಾದ್ರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಹೀಗಾಗಿ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಅವರಿಗೆ ರಕ್ಷಣೆ ನೀಡಲು ಅನುಮತಿಸಲಾಗದು ಎಂದು ನ್ಯಾಯಾಲಯ ಹೇಳಿದೆ ಎಂದು ವರದಿ ವಿವರಿಸಿದೆ.

ಈ ಮೂಲಕ ಪಾದ್ರಿ ವಿರುದ್ಧ ಜಾತಿ ನಿಂದನೆ ಪದ ಬಳಸಿದ ಮತ್ತು ಹಲ್ಲೆ ನಡೆಸಿದ ಗುಂಪಿನ ವಿರುದ್ಧದ ಕ್ರಿಮಿನಲ್‌ ಮೊಕದ್ದಮೆಯನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಹಲ್ಲೆ ಮಾಡಿದವರ ವಿರುದ್ಧ ಪೊಲೀಸರು ಎಸ್‌ಸಿ. ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಐಪಿಸಿ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದರು. ಆದರೆ, ಪಾದ್ರಿ ಕ್ರೈಸ್ತ ಧರ್ಮೀಯರಾಗಿರುವುದರಿಂದ ಎಸ್‌ಸಿ ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸುವುದು ಕಾನೂನುಬಾಹಿರ ಎಂದು ಆರೋಪಿಗಳು ವಾದಿಸಿದ್ದರು.

ಈ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ, ಐಪಿಸಿಯಡಿಯ ಅಪರಾಧಗಳು ಕೂಡ ಸಾಬೀತಾಗಿಲ್ಲ. ಸುಳ್ಳು ದೂರು ದಾಖಲಿಸಲಾಗಿದ್ದು, ಪ್ರಕರಣದ ಅರ್ಜಿದಾರರನ್ನು ವಿಚಾರಣಾ ನ್ಯಾಯಾಲಯ ವಿಚಾರಣೆ ನಡೆಸುವಂತೆ ಹೇಳಿದರೆ ಯಾವುದೇ ಉದ್ದೇಶ ಈಡೇರುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ ಎಂದು barandbench.com ತಿಳಿಸಿದೆ.

ವಕ್ಫ್ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರ ಅಸ್ತಿತ್ವಕ್ಕೆ ಧಕ್ಕೆ: ಹಿಂದೂ ಸಂಘಟನೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....