Homeಅಂತರಾಷ್ಟ್ರೀಯಸಂಪೂರ್ಣ ಗಾಝಾ ವಶಕ್ಕೆ ಪಡೆಯುವ ಯೋಜನೆಗೆ ಇಸ್ರೇಲ್ ಸಂಪುಟ ಅನುಮೋದನೆ: ವರದಿ

ಸಂಪೂರ್ಣ ಗಾಝಾ ವಶಕ್ಕೆ ಪಡೆಯುವ ಯೋಜನೆಗೆ ಇಸ್ರೇಲ್ ಸಂಪುಟ ಅನುಮೋದನೆ: ವರದಿ

- Advertisement -
- Advertisement -

ಸಂಪೂರ್ಣ ಗಾಜಾ ಪಟ್ಟಿಯನ್ನು ವಶಪಡಿಸಿಕೊಳ್ಳುವ ಮತ್ತು ಅನಿರ್ದಿಷ್ಟ ಸಮಯದವರೆಗೆ ಆ ಪ್ರದೇಶದಲ್ಲಿ ಉಳಿಯುವ ಯೋಜನೆಗೆ ಇಸ್ರೇಲ್ ಸಚಿವ ಸಂಪುಟ ಸೋಮವಾರ (ಮೇ.5) ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

ಯೋಜನೆಯಂತೆ ಇಸ್ರೇಲ್ ಮುಂದುವರಿದರೆ ಗಾಝಾದ ಮೇಲಿನ ಆಕ್ರಮಣ ಇನ್ನಷ್ಟು ಹೆಚ್ಚಾಗಬಹುದು ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ತೀವ್ರ ವಿರೋಧವನ್ನು ಎದುರಿಸಬಹುದು ಎಂದು ವರದಿಗಳು ಹೇಳಿವೆ.

ಸಾವಿರಾರು ಸೈನಿಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಇಸ್ರೇಲಿ ಸೇನಾ ಮುಖ್ಯಸ್ಥರು ತಿಳಿಸಿದ ಬೆನ್ನಲ್ಲೇ, ಸೋಮವಾರ ಬೆಳಗ್ಗಿನ ಜಾವ ನಡೆದ ಮತದಾನದಲ್ಲಿ ಗಾಝಾವನ್ನು ವಶಕ್ಕೆ ಪಡೆಯುವ ಯೋಜನೆಗೆ ಅನುಮೋದನೆ ಪಡೆಯಲಾಗಿದೆ.

ಹಮಾಸ್ ಅನ್ನು ಸಂಪೂರ್ಣವಾಗಿ ಸೋಲಿಸಿ, ಅದರ ವಶದಲ್ಲಿರುವ ಒತ್ತೆಯಾಳುಗಳನ್ನು ಬಿಡುಗಡೆಗಗೊಳಿಸುವುದು ನಮ್ಮ ಗುರಿ ಎಂದು ಇಸ್ರೇಲ್ ಹೇಳಿಕೊಂಡರೂ, ಅದು ಗಾಝಾವನ್ನು ವಶಕ್ಕೆ ಪಡೆದರೆ ಲಕ್ಷಾಂತರ ಪ್ಯಾಲೆಸ್ತೀನಿಯರು ದಕ್ಷಿಣ ಗಾಝಾದಲ್ಲಿ ಜೀವನ ನಡೆಸಬೇಕಾಗದ ಪರಿಸ್ಥಿತಿ ಉಂಟಾಗಬಹುದು. ಅಲ್ಲಿ ಮಿತಿ ಮೀರಿದ ಜನರಿಂದ ವಿವಿಧ ರೀತಿಯ ಮಾನವೀಯ ಬಿಕ್ಕಟ್ಟುಗಳು ಉಲ್ಬಣಿಸಬಹುದು ಎಂದು ವರದಿಗಳು ಹೇಳಿವೆ.

ಇಸ್ರೇಲ್ ಪ್ರಸ್ತುತ ಶೇಕಡ 50ರಷ್ಟು ಗಾಝಾ ಪ್ರದೇಶವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡಿದೆ. ಸಂಪೂರ್ಣ ಗಾಝಾಗೆ ಆಹಾರ, ಇಂಧನ, ನೀರು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಸರಬರಾಜು ಸ್ಥಗಿತಗೊಳಿಸಿದೆ. ಇದರಿಂದ ಅಲ್ಲಿನ ಜನತೆ ಆಹಾರ, ನೀರು ಸೇರಿದಂತೆ ದಿನಬಳಕೆಯ ವಸ್ತುಗಳು ಸಿಗದೆ ಪರದಾಡುತ್ತಿದ್ದಾರೆ. ಕಳೆದ 19 ತಿಂಗಳ ಇಸ್ರೇಲ್ ಆಕ್ರಮಣದಲ್ಲಿ, ಈಗ ಗಾಝಾ ಜನತೆ ದೊಡ್ಡ ಮಟ್ಟದ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಇದು ಹೀಗೆಯೇ ಮುಂದುವರಿದರೆ ಗಾಝಾದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಳ್ಳಬಹುದು ಎಂದು ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ಗಾಝಾ ಜನತೆಯನ್ನು ಅವರ ಜನ್ಮ ನಾಡಿನಿಂದ ಹೊರ ಹಾಕಿ ಅದನ್ನು ಇಸ್ರೇಲ್ ಮತ್ತು ಅಮೆರಿಕದ ನಿಯಂತ್ರಣಕ್ಕೆ ಪಡೆಯುವುದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜನೆಯಾಗಿದೆ. ಇದನ್ನು ಇಸ್ರೇಲ್ ಸಂಪೂರ್ಣವಾಗಿ ಬೆಂಬಲಿಸಿದೆ. ಗಾಝಾ ಜನತೆಯನ್ನು ಸುತ್ತಮುತ್ತಲಿನ ರಾಷ್ಟ್ರಗಳಿಗೆ ಬಲವಂತವಾಗಿ ಓಡಿಸುವ ಈ ಯೋಜನೆಯನ್ನು ಇಸ್ರೇಲ್ ‘ಸ್ವಯಂ ಪ್ರೇರಿತ ವಲಸೆ’ ಎಂದಿದೆ. ಆದರೆ, ಯುರೋಪ್ ಮತ್ತು ಅರಬ್ ರಾಷ್ಟ್ರಗಳು ಈ ಯೋಜನೆಯನ್ನು ಬಲವಾಗಿ ವಿರೋಧಿಸಿದೆ.

ಗಾಝಾದ ಭೂಮಿ ಪ್ಯಾಲೆಸ್ತೀನಿಯರಿಗೆ ಸೇರಿದ್ದು, ಅದನ್ನು ಮರು ನಿರ್ಮಾಣ ಮಾಡಿ ಅಲ್ಲಿನ ಜನರಿಗೆ ಅವರದ್ದೇ ನಾಡಿನಲ್ಲಿ ಸ್ವತಂತ್ರವಾಗಿ ಜೀವಿಸಲು ಅನುವು ಮಾಡಿಕೊಡಬೇಕೆಂದು ಅರಬ್ ರಾಷ್ಟ್ರಗಳು ಆಗ್ರಹಿಸಿವೆ. ಈ ನಿಟ್ಟಿನಲ್ಲಿ ಸೌದಿ ಅರೇಬಿಯಾದ ನೇತೃತ್ವದಲ್ಲಿ ಎರಡ್ಮೂರು ಸಭೆಗಳನ್ನೂ ನಡೆಸಿವೆ. ಸಂಪೂರ್ಣ ಗಾಝಾ ವಶಪಡಿಸಿಕೊಳ್ಳುವ ಇಸ್ರೇಲ್‌ನ ಯೋಜನೆಗೆ ಅದು ಹೇಗೆ ಪ್ರತಿಕ್ರಿಯಿಸಲಿದೆ ಎಂದು ಕಾದು ನೋಡಬೇಕಿದೆ.

ಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...