Homeಅಂತರಾಷ್ಟ್ರೀಯಸಂಪೂರ್ಣ ಗಾಝಾ ವಶಕ್ಕೆ ಪಡೆಯುವ ಯೋಜನೆಗೆ ಇಸ್ರೇಲ್ ಸಂಪುಟ ಅನುಮೋದನೆ: ವರದಿ

ಸಂಪೂರ್ಣ ಗಾಝಾ ವಶಕ್ಕೆ ಪಡೆಯುವ ಯೋಜನೆಗೆ ಇಸ್ರೇಲ್ ಸಂಪುಟ ಅನುಮೋದನೆ: ವರದಿ

- Advertisement -
- Advertisement -

ಸಂಪೂರ್ಣ ಗಾಜಾ ಪಟ್ಟಿಯನ್ನು ವಶಪಡಿಸಿಕೊಳ್ಳುವ ಮತ್ತು ಅನಿರ್ದಿಷ್ಟ ಸಮಯದವರೆಗೆ ಆ ಪ್ರದೇಶದಲ್ಲಿ ಉಳಿಯುವ ಯೋಜನೆಗೆ ಇಸ್ರೇಲ್ ಸಚಿವ ಸಂಪುಟ ಸೋಮವಾರ (ಮೇ.5) ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

ಯೋಜನೆಯಂತೆ ಇಸ್ರೇಲ್ ಮುಂದುವರಿದರೆ ಗಾಝಾದ ಮೇಲಿನ ಆಕ್ರಮಣ ಇನ್ನಷ್ಟು ಹೆಚ್ಚಾಗಬಹುದು ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ತೀವ್ರ ವಿರೋಧವನ್ನು ಎದುರಿಸಬಹುದು ಎಂದು ವರದಿಗಳು ಹೇಳಿವೆ.

ಸಾವಿರಾರು ಸೈನಿಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಇಸ್ರೇಲಿ ಸೇನಾ ಮುಖ್ಯಸ್ಥರು ತಿಳಿಸಿದ ಬೆನ್ನಲ್ಲೇ, ಸೋಮವಾರ ಬೆಳಗ್ಗಿನ ಜಾವ ನಡೆದ ಮತದಾನದಲ್ಲಿ ಗಾಝಾವನ್ನು ವಶಕ್ಕೆ ಪಡೆಯುವ ಯೋಜನೆಗೆ ಅನುಮೋದನೆ ಪಡೆಯಲಾಗಿದೆ.

ಹಮಾಸ್ ಅನ್ನು ಸಂಪೂರ್ಣವಾಗಿ ಸೋಲಿಸಿ, ಅದರ ವಶದಲ್ಲಿರುವ ಒತ್ತೆಯಾಳುಗಳನ್ನು ಬಿಡುಗಡೆಗಗೊಳಿಸುವುದು ನಮ್ಮ ಗುರಿ ಎಂದು ಇಸ್ರೇಲ್ ಹೇಳಿಕೊಂಡರೂ, ಅದು ಗಾಝಾವನ್ನು ವಶಕ್ಕೆ ಪಡೆದರೆ ಲಕ್ಷಾಂತರ ಪ್ಯಾಲೆಸ್ತೀನಿಯರು ದಕ್ಷಿಣ ಗಾಝಾದಲ್ಲಿ ಜೀವನ ನಡೆಸಬೇಕಾಗದ ಪರಿಸ್ಥಿತಿ ಉಂಟಾಗಬಹುದು. ಅಲ್ಲಿ ಮಿತಿ ಮೀರಿದ ಜನರಿಂದ ವಿವಿಧ ರೀತಿಯ ಮಾನವೀಯ ಬಿಕ್ಕಟ್ಟುಗಳು ಉಲ್ಬಣಿಸಬಹುದು ಎಂದು ವರದಿಗಳು ಹೇಳಿವೆ.

ಇಸ್ರೇಲ್ ಪ್ರಸ್ತುತ ಶೇಕಡ 50ರಷ್ಟು ಗಾಝಾ ಪ್ರದೇಶವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡಿದೆ. ಸಂಪೂರ್ಣ ಗಾಝಾಗೆ ಆಹಾರ, ಇಂಧನ, ನೀರು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಸರಬರಾಜು ಸ್ಥಗಿತಗೊಳಿಸಿದೆ. ಇದರಿಂದ ಅಲ್ಲಿನ ಜನತೆ ಆಹಾರ, ನೀರು ಸೇರಿದಂತೆ ದಿನಬಳಕೆಯ ವಸ್ತುಗಳು ಸಿಗದೆ ಪರದಾಡುತ್ತಿದ್ದಾರೆ. ಕಳೆದ 19 ತಿಂಗಳ ಇಸ್ರೇಲ್ ಆಕ್ರಮಣದಲ್ಲಿ, ಈಗ ಗಾಝಾ ಜನತೆ ದೊಡ್ಡ ಮಟ್ಟದ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಇದು ಹೀಗೆಯೇ ಮುಂದುವರಿದರೆ ಗಾಝಾದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಳ್ಳಬಹುದು ಎಂದು ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ಗಾಝಾ ಜನತೆಯನ್ನು ಅವರ ಜನ್ಮ ನಾಡಿನಿಂದ ಹೊರ ಹಾಕಿ ಅದನ್ನು ಇಸ್ರೇಲ್ ಮತ್ತು ಅಮೆರಿಕದ ನಿಯಂತ್ರಣಕ್ಕೆ ಪಡೆಯುವುದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜನೆಯಾಗಿದೆ. ಇದನ್ನು ಇಸ್ರೇಲ್ ಸಂಪೂರ್ಣವಾಗಿ ಬೆಂಬಲಿಸಿದೆ. ಗಾಝಾ ಜನತೆಯನ್ನು ಸುತ್ತಮುತ್ತಲಿನ ರಾಷ್ಟ್ರಗಳಿಗೆ ಬಲವಂತವಾಗಿ ಓಡಿಸುವ ಈ ಯೋಜನೆಯನ್ನು ಇಸ್ರೇಲ್ ‘ಸ್ವಯಂ ಪ್ರೇರಿತ ವಲಸೆ’ ಎಂದಿದೆ. ಆದರೆ, ಯುರೋಪ್ ಮತ್ತು ಅರಬ್ ರಾಷ್ಟ್ರಗಳು ಈ ಯೋಜನೆಯನ್ನು ಬಲವಾಗಿ ವಿರೋಧಿಸಿದೆ.

ಗಾಝಾದ ಭೂಮಿ ಪ್ಯಾಲೆಸ್ತೀನಿಯರಿಗೆ ಸೇರಿದ್ದು, ಅದನ್ನು ಮರು ನಿರ್ಮಾಣ ಮಾಡಿ ಅಲ್ಲಿನ ಜನರಿಗೆ ಅವರದ್ದೇ ನಾಡಿನಲ್ಲಿ ಸ್ವತಂತ್ರವಾಗಿ ಜೀವಿಸಲು ಅನುವು ಮಾಡಿಕೊಡಬೇಕೆಂದು ಅರಬ್ ರಾಷ್ಟ್ರಗಳು ಆಗ್ರಹಿಸಿವೆ. ಈ ನಿಟ್ಟಿನಲ್ಲಿ ಸೌದಿ ಅರೇಬಿಯಾದ ನೇತೃತ್ವದಲ್ಲಿ ಎರಡ್ಮೂರು ಸಭೆಗಳನ್ನೂ ನಡೆಸಿವೆ. ಸಂಪೂರ್ಣ ಗಾಝಾ ವಶಪಡಿಸಿಕೊಳ್ಳುವ ಇಸ್ರೇಲ್‌ನ ಯೋಜನೆಗೆ ಅದು ಹೇಗೆ ಪ್ರತಿಕ್ರಿಯಿಸಲಿದೆ ಎಂದು ಕಾದು ನೋಡಬೇಕಿದೆ.

ಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...