Homeಮುಖಪುಟರಾಹುಲ್ ಗಾಂಧಿಯ ಪೌರತ್ವ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಅಲಹಾಬಾದ್ ಹೈಕೋರ್ಟ್‌

ರಾಹುಲ್ ಗಾಂಧಿಯ ಪೌರತ್ವ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಅಲಹಾಬಾದ್ ಹೈಕೋರ್ಟ್‌

- Advertisement -
- Advertisement -

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಭಾರತೀಯ ಪೌರತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ಸೋಮವಾರ (ಮೇ.5) ವಿಲೇವಾರಿ ಮಾಡಿದೆ.

ಕರ್ನಾಟಕ ಮೂಲದ ವಕೀಲ ಹಾಗೂ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಆರ್‌ ಮಸೂದಿ ಮತ್ತು ರಾಜೀವ್ ಸಿಂಗ್ ಅವರ ಪೀಠ, “ಈ ವಿಷಯವು ಎರಡು ದೇಶಗಳ ನಡುವಿನ ಸಂವಹನವಾಗಿದ್ದು, ಭಾರತ ಸರ್ಕಾರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು”ಎಂದು ನಿರ್ದೇಶಿಸಿದೆ.

ಅರ್ಜಿದಾರರ ದೂರನ್ನು ಪರಿಹರಿಸಲು ಕೇಂದ್ರ ಸರ್ಕಾರವು ಯಾವುದೇ ಕಾಲಮಿತಿಯನ್ನು ನೀಡಲು ಸಾಧ್ಯವಾಗದ ಕಾರಣ, ಅರ್ಜಿಯನ್ನು ಬಾಕಿ ಇಡಲು ಆಗುವುದಿಲ್ಲ. ಸರ್ಕಾರ ಕ್ರಮ ಕೈಗೊಳ್ಳಲು ವಿಫಲವಾದರೆ ಅರ್ಜಿದಾರರು ಮತ್ತೆ ನ್ಯಾಯಾಲಯವನ್ನು ಸಂಪರ್ಕಿಸಬಹುದು. ರಾಹುಲ್ ಗಾಂಧಿಯ ಭಾರತೀಯ ಪೌರತ್ವವವನ್ನು ನಿರ್ಧರಿಸುವ ಹೊಣೆಗಾರಿಗೆ ಭಾರತ ಸರ್ಕಾರದ ಮೇಲಿದೆ. ಯಾವುದೇ ನಿರ್ಧಾರ ತೆಗೆದುಕೊಳ್ಳದಿದ್ದರೆ ನ್ಯಾಯಾಂಗ ನಿಂದನೆಗೆ ಒಳಪಡುತ್ತದೆ ಎಂದು ಪೀಠ ಹೇಳಿದೆ.

ರಾಹುಲ್ ಗಾಂಧಿ ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್‌ನ (ಯುಕೆ) ದ್ವಿಪೌರತ್ವವನ್ನು ಹೊಂದಿದ್ದು, ಸಂವಿಧಾನದ 84 (ಎ) ವಿಧಿಯ ಅಡಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ಅನರ್ಹರು ಎಂದು ಅರ್ಜಿದಾರ ವಿಘ್ನೇಶ್ ಶಿಶಿರ್ ಹೇಳಿದ್ದರು.

ಏಪ್ರಿಲ್ 21ರಂದು ನಡೆದ ಅರ್ಜಿ ವಿಚಾರಣೆ ವೇಳೆ, ರಾಹುಲ್ ಗಾಂಧಿ ಅವರು ಬ್ರಿಟಿಷ್ ಪೌರತ್ವ ಹೊಂದಿದ್ದಾರೆ ಎಂಬ ಆರೋಪದ ಬಗ್ಗೆ ವಿವರಗಳನ್ನು ಕೋರಿ ಯುಕೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ನ್ಯಾಯಾಲಯಕ್ಕೆ ಕೇಂದ್ರ ಸರ್ಕಾರ ತಿಳಿಸಿತ್ತು. ಅಲ್ಲಿನ ಸರ್ಕಾರದಿಂದ ಮಾಹಿತಿ ಪಡೆಯಲು ಕೇಂದ್ರ ಸರ್ಕಾರ ಹೆಚ್ಚುವರಿ ಸಮಯ ಕೋರಿದ ಹಿನ್ನೆಲೆ, ನ್ಯಾಯಾಲಯವ ಗೃಹ ಸಚಿವಾಲಯಕ್ಕೆ ಮೇ 5ರವರೆಗೆ ಕಾಲಾವಕಾಶ ನೀಡಿತ್ತು.

ರಾಹುಲ್ ಗಾಂಧಿಯವರ ದ್ವಿಪೌರತ್ವದ ಬಗ್ಗೆ ಸಕ್ಷಮ ಪ್ರಾಧಿಕಾರಕ್ಕೆ ಎರಡು ಬಾರಿ ದೂರುಗಳನ್ನು ನೀಡಿದ್ದರೂ, ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿದ್ದರು.

ಸುಬ್ರಮಣಿಯನ್ ಸ್ವಾಮಿ ದೂರು

2019ರಲ್ಲಿ, ಆಗಿನ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರ ದೂರಿನ ಮೇರೆಗೆ ಗೃಹ ಸಚಿವಾಲಯ ರಾಹುಲ್ ಗಾಂಧಿ ಅವರ ಪೌರತ್ವಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಿತ್ತು.

2003ರಲ್ಲಿ ಯುನೈಟೆಡ್ ಕಿಂಗ್‌ಡಂನಲ್ಲಿ ಬ್ಯಾಕಾಪ್ಸ್ ಲಿಮಿಟೆಡ್ ಎಂಬ ಕಂಪನಿಯನ್ನು ನೋಂದಾಯಿಸಲಾಗಿದ್ದು, ರಾಹುಲ್ ಗಾಂಧಿಯನ್ನು ಆ ಕಂಪನಿಯ ನಿರ್ದೇಶಕರು ಮತ್ತು ಕಾರ್ಯದರ್ಶಿಗಳಲ್ಲಿ ಒಬ್ಬರಾಗಿ ಪಟ್ಟಿ ಮಾಡಲಾಗಿದೆ ಎಂದು ಸ್ವಾಮಿ ಆರೋಪಿಸಿದ್ದರು.

ಕಂಪನಿಯ ಅಧಿಕೃತ ದಾಖಲೆಗಳಲ್ಲಿ ರಾಹುಲ್ ಗಾಂಧಿ ತನ್ನ ರಾಷ್ಟ್ರೀಯತೆಯನ್ನು ಬ್ರಿಟಿಷ್ ಎಂದು ಘೋಷಿಸಿಕೊಂಡಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದರು.

ಗೃಹ ಸಚಿವಾಲಯದ ನೋಟಿಸ್‌ನಲ್ಲಿ, “ಅಕ್ಟೋಬರ್ 10, 2005ಮತ್ತು ಅಕ್ಟೋಬರ್ 31, 2006ರಂದು ಸಲ್ಲಿಸಲಾದ ಕಂಪನಿಯ ವಾರ್ಷಿಕ ರಿಟರ್ನ್ಸ್‌ನಲ್ಲಿ, ನಿಮ್ಮ ಜನ್ಮ ದಿನಾಂಕವನ್ನು ಜೂನ್ 19, 1970 ಮತ್ತು ರಾಷ್ಟ್ರೀಯತೆಯನ್ನು ಬ್ರಿಟಿಷ್ ಎಂದು ಘೋಷಿಸಿಕೊಂಡಿದ್ದೀರಿ. ಫೆಬ್ರವರಿ 17, 2009ರಂದು ಕಂಪನಿಯ ವಿಸರ್ಜನೆ ಅರ್ಜಿಯಲ್ಲಿಯೂ ರಾಷ್ಟ್ರೀಯತೆಯನ್ನು ಬ್ರಿಟಿಷ್ ಎಂದು ಉಲ್ಲೇಖಿಸಿದ್ದೀರಿ” ಎಂದಿತ್ತು. ಈ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಹುಲ್ ಗಾಂಧಿಯನ್ನು ಕೇಳಿತ್ತು.

ಕೋರ್ಟ್ ಮೆಟ್ಟಿಲೇರಿದ ಸುಬ್ರಮಣಿಯನ್ ಸ್ವಾಮಿ

ರಾಹುಲ್ ಗಾಂಧಿಯ ಭಾರತೀಯ ಪೌರತ್ವ ಪ್ರಶ್ನಿಸಿ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್‌ಗೆ ಅರ್ಜಿಯನ್ನೂ ಸಲ್ಲಿಸಿದ್ದಾರೆ. ಈ ಅರ್ಜಿ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ.

ಸಾಕ್ಷ್ಯಾಧಾರವಿಲ್ಲದೆ ಆರೋಪ: ಇಡಿಗೆ ಸುಪ್ರೀಂ ಕೋರ್ಟ್ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು 

"ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮೊಹಮ್ಮದ್ ಆಸಿಫ್ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ" ಎಂದು ಭಜನ್‌ಪುರ ಹತ್ಯೆಯ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 18 ವರ್ಷದ ಯುವಕನೊಬ್ಬನನ್ನು...

ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್

ಒಬ್ಬರು ವ್ಯಕ್ತಿಯು ಒಮ್ಮೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಅದನ್ನೇ ಸಕ್ರಿಯವಾಗಿ ಪ್ರತಿಪಾದಿಸಿ, ಆಚರಿಸಿದರೆ, ಅವರನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಸದಸ್ಯರು ಎಂಬುವುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು...

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ....

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...