Homeಮುಖಪುಟನೀಟ್‌ ಯುಜಿ ಪರೀಕ್ಷೆಯಲ್ಲಿ ವಂಚನೆ | ಬಿಹಾರದಲ್ಲಿ ವೈದ್ಯ ಸೇರಿ ಇಬ್ಬರ ಬಂಧನ

ನೀಟ್‌ ಯುಜಿ ಪರೀಕ್ಷೆಯಲ್ಲಿ ವಂಚನೆ | ಬಿಹಾರದಲ್ಲಿ ವೈದ್ಯ ಸೇರಿ ಇಬ್ಬರ ಬಂಧನ

- Advertisement -
- Advertisement -

ಭಾನುವಾರ ನಡೆದ ನೀಟ್‌ ಯುಜಿ ಪರೀಕ್ಷೆಯ ಸಂದರ್ಭದಲ್ಲಿ ಅಭ್ಯರ್ಥಿಯಂತೆ ನಟಿಸಿ ಪರೀಕ್ಷೆ ಬರೆಯಲು ಬಂದಿದ್ದ ಎಂಬಿಬಿಎಸ್ ವೈದ್ಯ ಸೇರಿದಂತೆ ವಂಚನೆ ಆರೋಪದ ಮೇಲೆ ಬಿಹಾರದ ಸಮಸ್ತಿಪುರ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳ ಬಳಿಯಿಂದ ಮೂರು ಮೊಬೈಲ್ ಫೋನ್‌ಗಳು, ಒಂದು ಕಾರು ಮತ್ತು 50,000 ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ಬಂಧಿತರು ನೀಟ್-ಯುಜಿ 2024 ಪರೀಕ್ಷಾ ಪತ್ರಿಕೆ ಸೋರಿಕೆಯ ಕಿಂಗ್‌ಪಿನ್ ಸಂಜೀವ್ ಮುಖಿಯಾ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆಯೇ ಎಂದು ತನಿಖಾ ಅಧಿಕಾರಿಗಳು ಖಚಿತಪಡಿಸಿಕೊಳ್ಳುತ್ತಿದ್ದಾರೆ, ಪ್ರಸ್ತುತ ಪಾಟ್ನಾ ಬಳಿಯ ಬೇವೂರ್ ಕೇಂದ್ರ ಜೈಲಿನಲ್ಲಿ ಅವರು ಇರಿಸಲಾಗಿದೆ. ಸುಳಿವು ನೀಡಿದರೆ 3 ಲಕ್ಷ ರೂ. ಬಹುಮಾನ ಹೊಂದಿದ್ದ ಮುಖಿಯಾ ಅವರನ್ನು ಕಳೆದ ತಿಂಗಳು ಪಾಟ್ನಾದಿಂದ ಬಂಧಿಸಲಾಯಿತು.

ಮೋಹನ್‌ಪುರದ ಪರೀಕ್ಷಾ ಕೇಂದ್ರದ ಹೊರಗೆ ನಿಲ್ಲಿಸಿದ್ದ ಕಾರಿನಲ್ಲಿ ಕುಳಿತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸ್ ತಂಡ ಬಂಧಿಸಿದೆ ಎಂದು ಸಮಸ್ತಿಪುರದ ಎಎಸ್ಪಿ ಸಂಜಯ್ ಕುಮಾರ್ ಪಾಂಡೆ ತಿಳಿಸಿದ್ದಾರೆ. ಅವರ ಮೊಬೈಲ್ ಫೋನ್‌ಗಳಲ್ಲಿ ವಿವಿಧ ಅಭ್ಯರ್ಥಿಗಳ ಪ್ರವೇಶ ಪತ್ರಗಳು ಇರುವುದನ್ನು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಸಮಸ್ತಿಪುರ ಮತ್ತು ಇತರ ಸ್ಥಳಗಳಲ್ಲಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ದುರ್ಬಲ ಅಭ್ಯರ್ಥಿಗಳ ಬದಲಿಗೆ ತಾವು ಪರೀಕ್ಷೆ ಬರೆಯಲು ಬಂದಿರುವುದಾಗಿ ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಈ ಆರೋಪಿಗಳು ಅಭ್ಯರ್ಥಿಗಳಿಗೆ 2.5 ಲಕ್ಷದಿಂದ 5 ಲಕ್ಷ ರೂ.ಗಳವರೆಗೆ ಶುಲ್ಕ ವಿಧಿಸುತ್ತಿದ್ದರು ಎಂದು ವರದಿಯಾಗಿದೆ.

ಬಂಧಿತರಲ್ಲಿ ಒಬ್ಬ ಬೇಗುಸರಾಯ್ ವಿಭಾಗೀಯ ಜೈಲಿನಲ್ಲಿ ನಿಯೋಜಿತರಾಗಿರುವ ಸರ್ಕಾರಿ ವೈದ್ಯ ಡಾ. ರಂಜೀತ್ ಕುಮಾರ್ ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಅವರ ಸಹಚರ ದರ್ಭಂಗಾ ಮೂಲದ ರಾಂಬಾಬು ಮಲಿಕ್ ಎಂದು ಗುರುತಿಸಲಾಗಿದೆ.

“ನೀಟ್-ಯುಜಿ 2025 ಪತ್ರಿಕೆ ಸೋರಿಕೆಯ ಕಿಂಗ್‌ಪಿನ್ ಸಂಜೀವ್ ಮುಖಿಯಾ ಅವರೊಂದಿಗಿನ ಅವರ ಸಂಪರ್ಕವನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ” ಎಂದು ಎಎಸ್ಪಿ ಪಾಂಡೆ ಹೇಳಿದ್ದಾರೆ. ಬಿಹಾರ ಪೊಲೀಸರ ಆರ್ಥಿಕ ಅಪರಾಧಗಳ ಘಟಕವು ಎಲ್ಲಾ ಡಿಎಂಗಳು ಮತ್ತು ಎಸ್‌ಪಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಜಾಗರೂಕರಾಗಿರಲು ಎಚ್ಚರಿಕೆ ನೀಡಿದೆ.

2024 ರ ನೀಟ್ ಹಗರಣದ ಪ್ರಮುಖ ವ್ಯಕ್ತಿ ಎಂದು ಪೊಲೀಸರು ಗುರುತಿಸಿರುವ ಸಂಜೀವ್ ಮುಖಿಯಾ ಅವರನ್ನು ಆರ್ಥಿಕ ಅಪರಾಧ ಘಟಕ (ಇಒಯು) ತಂಡವು ಏಪ್ರಿಲ್ 25, 2025 ರಂದು ಪಾಟ್ನಾದಲ್ಲಿ ಬಂಧಿಸಿತು. ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಿಂದ (ಪಿಎಂಸಿಎಚ್) ಎಂಬಿಬಿಎಸ್ ಪದವೀಧರರಾಗಿರುವ ಅವರ ಮಗ ಡಾ. ಶಿವಕುಮಾರ್ ಅವರನ್ನು ಇದೇ ಪ್ರಕರಣದಲ್ಲಿ ಮೊದಲೇ ಬಂಧಿಸಲಾಗಿತ್ತು. ಅವರು ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ.

ಭಾರತದಾದ್ಯಂತ ವೈದ್ಯಕೀಯ ಸಂಸ್ಥೆಗಳಲ್ಲಿ ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾದ ಪ್ರತಿಷ್ಠಿತ ಪರೀಕ್ಷೆಯಾದ ನೀಟ್‌ ಯುಜಿ 2025 ಸೋಮವಾರ ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ನಡೆಯಿತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕ್ ನಟನ ‘ಅಬೀರ್ ಗುಲಾಲ್’ ಚಿತ್ರ ನಿಷೇಧ: ‘ದಿ ಕಾಶ್ಮೀರ್ ಫೈಲ್ಸ್’ ತೊಂದರೆಯಿಲ್ಲದೆ ಬಿಡುಗಡೆಯಾಗುತ್ತೆ ಎಂದ ಪ್ರಕಾಶ್ ರಾಜ್

ಪಾಕ್ ನಟನ ‘ಅಬೀರ್ ಗುಲಾಲ್’ ಚಿತ್ರ ನಿಷೇಧ: ‘ದಿ ಕಾಶ್ಮೀರ್ ಫೈಲ್ಸ್’ ತೊಂದರೆಯಿಲ್ಲದೆ ಬಿಡುಗಡೆಯಾಗುತ್ತೆ ಎಂದ ಪ್ರಕಾಶ್ ರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...