Homeಮುಖಪುಟಚುನಾವಣೆಯಲ್ಲಿ ಮಹಿಳೆಯರಿಗೆ ಭರವಸೆ ನೀಡಿದ್ದಷ್ಟೆ ಹಣ ಪಾವತಿ ಅಸಾಧ್ಯ: ಒಪ್ಪಿಕೊಂಡ ಮಹಾರಾಷ್ಟ್ರ ಸರ್ಕಾರ

ಚುನಾವಣೆಯಲ್ಲಿ ಮಹಿಳೆಯರಿಗೆ ಭರವಸೆ ನೀಡಿದ್ದಷ್ಟೆ ಹಣ ಪಾವತಿ ಅಸಾಧ್ಯ: ಒಪ್ಪಿಕೊಂಡ ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಆಡಳಿತರೂಢ ಮೈತ್ರಿಕೂಟವು ಕಳೆದ ವರ್ಷದ ವಿಧಾನಸಭಾ ಚುನಾವಣೆಗೆ ಮುನ್ನ ಭರವಸೆ ನೀಡಿದಂತೆ, ಲಡ್ಕಿ ಬಹಿನ್ ಯೋಜನೆಯಡಿ ಮಹಿಳೆಯರಿಗೆ ಮಾಸಿಕ ಆರ್ಥಿಕ ಸಹಾಯವನ್ನು 2,100 ರೂ.ಗಳಿಗೆ ಹೆಚ್ಚಿಸಲು ಸಾಧ್ಯವಿಲ್ಲ ಎಂದು ರಾಜ್ಯದ ಸಚಿವ ಸಂಜಯ್ ಶಿರ್ಸಾತ್ ಸೋಮವಾರ, ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಚುನಾವಣೆಯಲ್ಲಿ ಮಹಿಳೆಯರಿಗೆ

ಆದಾಗ್ಯೂ, ಪ್ರಸ್ತುತ ತಿಂಗಳಿಗೆ 1,500 ರೂ.ಗಳ ಮೊತ್ತವನ್ನು ವಿತರಿಸಲಾಗುವುದು ಎಂದು ಅವರು ಹೇಳಿದ್ದಾರೆ. ಯೋಜನೆಗೆ ಸಂಬಂಧಿಸಿದ ಚುನಾವಣಾ ಭರವಸೆಯನ್ನು ಸರ್ಕಾರವು ಈಡೇರಿಸಲು ಸಾಧ್ಯವಾಗುವುದಿಲ್ಲ ಎಂದು ಸಚಿವರು ಸಾರ್ವಜನಿಕವಾಗಿ ಒಪ್ಪಿಕೊಂಡಿರುವುದು ಇದೇ ಮೊದಲು.

“ಮಾಸಿಕ 1,500 ರೂ.ಗಳನ್ನು 2,100 ರೂ.ಗಳಿಗೆ ಹೆಚ್ಚಿಸಲಾಗುವುದಿಲ್ಲ ಎಂಬುದು ವಾಸ್ತವ” ಎಂದು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಗುಂಪಿನ ಸದಸ್ಯ ಶಿರ್ಸಾತ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. “ಈ ಯೋಜನೆಯನ್ನು ನಿಲ್ಲಿಸಲಾಗುತ್ತದೆ ಅಥವಾ ಮೊತ್ತವನ್ನು ಕಡಿತಗೊಳಿಸಲಾಗುತ್ತದೆ ಎಂದು ಹೇಳುತ್ತಾ ಸಮಸ್ಯೆ ಸೃಷ್ಟಿಸಲಾಗುತ್ತದೆ. ಅದರೆ, ಲಡ್ಕಿ ಬಹಿನ್ ಯೋಜನೆಯಡಿಯಲ್ಲಿನ ಬದ್ಧತೆಯನ್ನು ಈಡೇರಿಸಲಾಗುತ್ತದೆ.” ಎಂದು ಅವರು ಹೇಳಿದ್ದಾರೆ.

ತಮ್ಮ ಸಚಿವಾಲಯವು ಸುಮಾರು 3,000 ಕೋಟಿ ರೂಪಾಯಿಗಳ ಬಾಕಿ ಉಳಿಸಿಕೊಂಡಿದೆ ಎಂದು ಸಚಿವ ಶಿರ್ಸತ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನನ್ನ ಇಲಾಖೆಯ ಅಗತ್ಯಗಳನ್ನು ಸಹಾನುಭೂತಿಯಿಂದ ಪರಿಗಣಿಸಲು ಮತ್ತು ನಿಯಮಗಳ ಪ್ರಕಾರ ಸರಿಯಾದ ಹಣವನ್ನು ಬಿಡುಗಡೆ ಮಾಡುವುದನ್ನು ಖಚಿತಪಡಿಸಿಕೊಳ್ಳಲು ನಾನು ಸುಮಾರು ಒಂದು ತಿಂಗಳ ಹಿಂದೆ ಮುಖ್ಯಮಂತ್ರಿ [ದೇವೇಂದ್ರ ಫಡ್ನವಿಸ್] ಅವರನ್ನು ವಿನಂತಿಸಿದ್ದೆ” ಎಂದು ಅವರು ಹೇಳಿರುವುದಾಗಿ ವರದಿಯಾಗಿದೆ.

“ನಾನು ಇದನ್ನು ಲಿಖಿತವಾಗಿ ತಿಳಿಸಿದ್ದೇನೆ ಮತ್ತು [ರಾಜ್ಯ ಹಣಕಾಸು ಸಚಿವ ಅಜಿತ್ ಪವಾರ್] ಅವರೊಂದಿಗೆ ಮಾತನಾಡಿದ್ದೇನೆ” ಎಂದು ಅವರು ಹೇಳಿದ್ದಾರೆ.

ಮೇ 3 ರಂದು, ಅಜಿತ್ ಪವಾರ್ ನೇತೃತ್ವದ ಹಣಕಾಸು ಇಲಾಖೆಯು ಅವರಿಗೆ ತಿಳಿಸದೆ ತಮ್ಮ ಸಚಿವಾಲಯದಿಂದ ಹಣವನ್ನು ಅಕ್ರಮವಾಗಿ ತಿರುಗಿಸಿದೆ ಎಂದು ಶಿರ್ಸತ್ ಆರೋಪಿಸಿದ್ದರು. “ಅವರು [ಬಜೆಟ್ ಸಮಯದಲ್ಲಿ] ನನನಗೆ ತಿಳಿಸದೆ ನನ್ನ ಇಲಾಖೆಯಿಂದ 7,000 ಕೋಟಿ ರೂಪಾಯಿಗಳನ್ನು ತಿರುಗಿಸಿದ್ದಾರೆ” ಎಂದು ಅವರು ಹೇಳಿದ್ದರು.

“ಸರ್ಕಾರವು ಸಾಮಾಜಿಕ ನ್ಯಾಯ ಇಲಾಖೆ ಕಾರ್ಯನಿರ್ವಹಿಸಲು ಬಯಸದಿದ್ದರೆ ಅಥವಾ ಅವರು ಹಣವನ್ನು ಖರ್ಚು ಮಾಡಲು ಬಯಸದಿದ್ದರೆ, ಅವರು ಈ ಇಲಾಖೆಯನ್ನು ಮುಚ್ಚಬೇಕು.” ಎಂದು ಅವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗೆ ಹಣವನ್ನು ತಿರುಗಿಸುವುದು ಮುಂದುವರಿದರೆ, ಹಲವಾರು ಯೋಜನೆಗಳು ಸ್ಥಗಿತಗೊಳ್ಳಬಹುದು ಎಂದು ಶಿರ್ಸತ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಲಡ್ಕಿ ಬಹಿನ್ ಯೋಜನೆಯನ್ನು ತಾನು ವಿರೋಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಚುನಾವಣೆಯಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಇದು ಸಹಾಯ ಮಾಡಿದೆ ಎಂದು ಹೇಳಿದ್ದಾರೆ.

ಲಡ್ಕಿ ಬಹಿನ್ ಯೋಜನೆಯಡಿಯಲ್ಲಿ, ವಾರ್ಷಿಕ ಕುಟುಂಬ ಆದಾಯ 2.5 ಲಕ್ಷ ರೂ.ಗಿಂತ ಕಡಿಮೆ ಇರುವ 21 ರಿಂದ 65 ವರ್ಷದೊಳಗಿನ ಮಹಿಳೆಯರು ನೇರ ಬ್ಯಾಂಕ್ ವರ್ಗಾವಣೆಯ ರೂಪದಲ್ಲಿ ತಿಂಗಳಿಗೆ 1,500 ರೂ.ಗಳನ್ನು ಪಡೆಯುತ್ತಾರೆ.

ನವೆಂಬರ್‌ನಲ್ಲಿ ನಡೆದ 288 ಸದಸ್ಯರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಮಹಾಯುತಿ ಮೈತ್ರಿಕೂಟ 230 ಸ್ಥಾನಗಳನ್ನು ಗೆಲ್ಲುವಲ್ಲಿ ಈ ನಗದು ವರ್ಗಾವಣೆ ಯೋಜನೆ ನಿರ್ಣಾಯಕ ಪಾತ್ರ ವಹಿಸಿದೆ ಎಂದು ಹೇಳಲಾಗುತ್ತದೆ. ಮೈತ್ರಿಯಲ್ಲಿ ಬಿಜೆಪಿ, ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಬಣ ಇವೆ. ಚುನಾವಣೆಯಲ್ಲಿ ಮಹಿಳೆಯರಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕ್ ನಟನ ‘ಅಬೀರ್ ಗುಲಾಲ್’ ಚಿತ್ರ ನಿಷೇಧ: ‘ದಿ ಕಾಶ್ಮೀರ್ ಫೈಲ್ಸ್’ ತೊಂದರೆಯಿಲ್ಲದೆ ಬಿಡುಗಡೆಯಾಗುತ್ತೆ ಎಂದ ಪ್ರಕಾಶ್ ರಾಜ್

ಪಾಕ್ ನಟನ ‘ಅಬೀರ್ ಗುಲಾಲ್’ ಚಿತ್ರ ನಿಷೇಧ: ‘ದಿ ಕಾಶ್ಮೀರ್ ಫೈಲ್ಸ್’ ತೊಂದರೆಯಿಲ್ಲದೆ ಬಿಡುಗಡೆಯಾಗುತ್ತೆ ಎಂದ ಪ್ರಕಾಶ್ ರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...