Homeಮುಖಪುಟಮಧ್ಯಪ್ರದೇಶ | ಬಿಜೆಪಿ ಪ್ರೇರಿತ ಕಟ್ಟುಕತೆ 'ಲವ್ ಜಿಹಾದ್' ತನಿಖೆಗೆ ಎಸ್‌ಐಟಿ ರಚನೆ!

ಮಧ್ಯಪ್ರದೇಶ | ಬಿಜೆಪಿ ಪ್ರೇರಿತ ಕಟ್ಟುಕತೆ ‘ಲವ್ ಜಿಹಾದ್’ ತನಿಖೆಗೆ ಎಸ್‌ಐಟಿ ರಚನೆ!

- Advertisement -
- Advertisement -

ಮಧ್ಯಪ್ರದೇಶದಲ್ಲಿ “ಲವ್ ಜಿಹಾದ್” ಪ್ರಕರಣಗಳ ತನಿಖೆಗಾಗಿ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. “ಅಂತಹ ಯಾವುದೇ ಪ್ರಕರಣವನ್ನು ಸಹಿಸಲಾಗುವುದಿಲ್ಲ ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ರಾಜ್ಯ ಸಚಿವ ವಿಶ್ವಾಸ್ ಸಾರಂಗ್ ಹೇಳಿದ್ದಾರೆ. ಮಧ್ಯಪ್ರದೇಶ

“ಲವ್ ಜಿಹಾದ್” ಎಂಬುದು ಬಿಜೆಪಿ ಮತ್ತು ಆರೆಸ್ಸೆಸ್‌ ಪ್ರೇರಿತ ಕಾಲ್ಪನಿಕ ಕಟ್ಟುಕತೆಯಾಗಿದೆ. ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಪ್ರೇಮಿಸಿ ಮೋಸಗೊಳಿಸಿ ಅಂತಿಮವಾಗಿ ಅವರನ್ನು ಇಸ್ಲಾಂಗೆ ಮತಾಂತರಿಸುವ ಸಂಘಟಿತ ಸಂಚು ಮಾಡುತ್ತಿದ್ದಾರೆ ಎಂದು ಇದರಲ್ಲಿ ಆರೋಪಿಸಲಾಗುತ್ತದೆ.

ಅದಾಗ್ಯೂ, ಇಂತಹ ಯಾವುದೇ ಪ್ರಕರಣ ಈ ವರೆಗೆ ದಾಖಲಾಗಿಲ್ಲ ಎಂದು ಕೇಂದ್ರ ಸರ್ಕಾರವೇ ಹೇಳಿದೆ. ಭಾರತೀಯ ಕಾನೂನಿನಲ್ಲಿ ಅಂತಹ ಪದವನ್ನು ವ್ಯಾಖ್ಯಾನಿಸಲು ಯಾವುದೇ ಅವಕಾಶವಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಸಂಸತ್ತಿಗೆ ತಿಳಿಸಿದೆ.

ಭೋಪಾಲ್‌ನಲ್ಲಿ ನಡೆದ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರು ಏಪ್ರಿಲ್‌ನಲ್ಲಿ ತಮ್ಮ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ವೀಡಿಯೊಗಳನ್ನು ತೋರಿಸಿ ಬ್ಲ್ಯಾಕ್‌ಮೇಲ್ ಮಾಡಲಾಗಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡವನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.

ಪೊಲೀಸರ ಪ್ರಕಾರ, ಈ ವಿಷಯದಲ್ಲಿ ಆರೋಪಿಗಳು ತಮ್ಮ ಧಾರ್ಮಿಕ ಗುರುತನ್ನು ಮರೆಮಾಡಿ ನಂತರ ತಮ್ಮ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ. ಈ ಪ್ರಕರಣದ ನಂತರ ಭೋಪಾಲ್‌ನಲ್ಲಿ ಬಿಜೆಪಿ ಪರ ದುಷ್ಕರ್ಮಿಗಳ ಗುಂಪು ಪ್ರತಿಭಟನೆಗೆ ನಡೆಸಿದ್ದು, ಅವರು ಈ ಅಪರಾಧವನ್ನು “ಲವ್ ಜಿಹಾದ್” ಎಂದು ಆರೋಪಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಪ್ರಕರಣದ ಸಂದರ್ಭದಲ್ಲಿ, ಮಧ್ಯಪ್ರದೇಶ ಪೊಲೀಸ್ ಪ್ರಧಾನ ಕಚೇರಿಯು, ಸಾಮಾಜಿಕವಾಗಿ ದುರ್ಬಲ ಹಿನ್ನೆಲೆಯ ಹುಡುಗಿಯರು ಮತ್ತು ಮಹಿಳೆಯರನ್ನು “ಪ್ರೀತಿಯ ಬಲೆಗೆ ಬೀಳಿಸುವುದು, ವಂಚನೆ, ಬೆದರಿಕೆಗಳು ಅಥವಾ ಇತರ ಪ್ರಚೋದನೆಗಳಂತಹ ತಂತ್ರಗಳ ಮೂಲಕ ವ್ಯವಸ್ಥಿತವಾಗಿ ಗುರಿಯಾಗಿಸಿಕೊಂಡಿದ್ದಾರೆ. ಇದು ಅವರ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಶೋಷಣೆಗೆ ಕಾರಣವಾಗುತ್ತದೆ” ಎಂದು ಗುಪ್ತಚರ ಮಾಹಿತಿಗಳನ್ನು ಹೊಂದಿದೆ ಎಂದು ಹೇಳಿದೆ.

ಸಂತ್ರಸ್ತ ಹುಡುಗಿಯರು ಮತ್ತು ಮಹಿಳೆಯರನ್ನು ಭಯ, ಒತ್ತಡ ಅಥವಾ ವಂಚನೆಯ ಮೂಲಕ ತಮ್ಮನ್ನು ಮತಾಂತರಿಸಲಾಗುತ್ತಿದೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ. “ಇಂತಹ ಘಟನೆಗಳು ಸಮಾಜದಲ್ಲಿ ಅಪರಾಧ ಮಾತ್ರವಲ್ಲ, ಮಹಿಳೆಯರ ಘನತೆ, ಸ್ವಾತಂತ್ರ್ಯ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಗಂಭೀರ ಸವಾಲನ್ನು ಒಡ್ಡುತ್ತವೆ” ಎಂದು ಪೊಲೀಸರು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಲವಂತದ ಮತಾಂತರದ ಆಪಾದಿತ ಘಟನೆಗಳನ್ನು ಗುರುತಿಸುವ ಮತ್ತು ತನಿಖೆ ಮಾಡುವ, ಭಾಗಿಯಾಗಿರಬಹುದಾದ ವ್ಯಕ್ತಿಗಳು ಮತ್ತು ಗುಂಪುಗಳನ್ನು ಪತ್ತೆಹಚ್ಚುವ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕಾರ್ಯವನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಲಾಗಿದೆ.

ಬಲವಂತದ ಧಾರ್ಮಿಕ ಮತಾಂತರದಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದ ಅಂತರರಾಜ್ಯ ಅಥವಾ ಅಂತರರಾಷ್ಟ್ರೀಯ ಜಾಲಗಳನ್ನು ಸಹ ತಂಡವು ತನಿಖೆ ಮಾಡುತ್ತದೆ ಮತ್ತು ತಡೆಗಟ್ಟುವ ಕ್ರಮಗಳನ್ನು ಶಿಫಾರಸು ಮಾಡುತ್ತದೆ.

ಭೋಪಾಲ್ (ಗ್ರಾಮೀಣ) ಪೊಲೀಸ್ ಮಹಾನಿರ್ದೇಶಕರು ವಿಶೇಷ ತನಿಖಾ ತಂಡದ ನೇತೃತ್ವ ವಹಿಸಲಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈ ತಂಡದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಪ್ರಧಾನ ಕಚೇರಿ), ಮಹಿಳಾ ಸುರಕ್ಷತಾ ಶಾಖೆಯ ಸಹಾಯಕ ಪೊಲೀಸ್ ಮಹಾನಿರ್ದೇಶಕರು ಮತ್ತು ರಾಜ್ಯ ಸೈಬರ್ ಸೆಲ್‌ನ ಪೊಲೀಸ್ ವರಿಷ್ಠಾಧಿಕಾರಿಗಳು ಸಹ ಇರುತ್ತಾರೆ. ಮಧ್ಯಪ್ರದೇಶ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಮಿಳುನಾಡು| ಎರಡು ಸಮುದಾಯಗಳ ನಡುವೆ ಘರ್ಷಣೆ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ

ತಮಿಳುನಾಡು| ಎರಡು ಸಮುದಾಯಗಳ ನಡುವೆ ಘರ್ಷಣೆ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...