Homeಮುಖಪುಟಹರಿಯಾಣಕ್ಕೆ ಒಂದು ಹನಿ ನೀರನ್ನು ಸಹ ನೀಡಲ್ಲ: ಪಂಜಾಬ್ ಸರ್ಕಾರ ತೀರ್ಮಾನ

ಹರಿಯಾಣಕ್ಕೆ ಒಂದು ಹನಿ ನೀರನ್ನು ಸಹ ನೀಡಲ್ಲ: ಪಂಜಾಬ್ ಸರ್ಕಾರ ತೀರ್ಮಾನ

- Advertisement -
- Advertisement -

ಪಂಜಾಬ್‌ನ ಆಮ್ ಆದ್ಮಿ ಪಕ್ಷದ ಸರ್ಕಾರ ಸೋಮವಾರ ವಿಧಾನಸಭೆಯಲ್ಲಿ ನೆರೆಯ ಹರಿಯಾಣಕ್ಕೆ ತನ್ನ ಕಡೆಯಿಂದ “ಒಂದು ಹನಿ ನೀರನ್ನು ಸಹ” ಬಿಡುವುದಿಲ್ಲ ಎಂದು ನಿರ್ಣಯ ಕೈಗೊಂಡಿದೆ ಎಂದು ದಿ ಹಿಂದೂ ವರದಿ ಮಾಡಿದೆ. ನೀರು ಹಂಚಿಕೆಗೆ ಸಂಬಂಧಿಸಿದಂತೆ ಎರಡು ರಾಜ್ಯಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಇದು ಪಂಜಾಬ್ ಈ ತೀರ್ಮಾನ ಮಾಡಿದೆ. ಹರಿಯಾಣಕ್ಕೆ ಒಂದು ಹನಿ

ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಮತ್ತು ಭಾಕ್ರಾ ಬಿಯಾಸ್ ನಿರ್ವಹಣಾ ಮಂಡಳಿಯ ಮೂಲಕ ಬಿಜೆಪಿ ಪಕ್ಷವೂ ಪಂಜಾಬ್‌ನ ಹಕ್ಕುಗಳನ್ನು “ಕಿತ್ತುಕೊಳ್ಳಲು” ಪ್ರಯತ್ನಿಸುತ್ತಿದೆ ಎಂದು ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ರಾಜ್ಯ ಜಲಸಂಪನ್ಮೂಲ ಸಚಿವ ಬರಿಂದರ್ ಕುಮಾರ್ ಗೋಯಲ್ ಮಂಡಿಸಿದ ನಿರ್ಣಯದ ವೇಳೆ ಆರೋಪಿಸಿದ್ದಾರೆ. ಹರಿಯಾಣದಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿದೆ.

ಭಾಕ್ರಾ ನಂಗಲ್ ಮತ್ತು ಭಾಕ್ರಾ ಬಿಯಾಸ್ ಯೋಜನೆಗಳ ಆಡಳಿತ ಮತ್ತು ನಿರ್ವಹಣೆಯನ್ನು ಅದರ ಮಂಡಳಿಯು ಮಾಡುತ್ತದೆ. ಇದು ಪಂಜಾಬ್, ಹರಿಯಾಣ, ರಾಜಸ್ಥಾನ, ಹಿಮಾಚಲ ಪ್ರದೇಶ, ದೆಹಲಿ ಮತ್ತು ಚಂಡೀಗಢಕ್ಕೆ ನೀರು ಮತ್ತು ವಿದ್ಯುತ್ ಸರಬರಾಜನ್ನು ನಿಯಂತ್ರಿಸುತ್ತದೆ.

ಭಾಕ್ರಾ ನಂಗಲ್ ಯೋಜನೆಯು ಸತ್ಲೆಜ್ ನದಿಯ ಮೇಲೆ ಎರಡು ಅಣೆಕಟ್ಟುಗಳನ್ನು ಒಳಗೊಂಡಿದೆ. ಹಿಮಾಚಲ ಪ್ರದೇಶದ ಭಾಕ್ರಾ ಅಣೆಕಟ್ಟು ಮತ್ತು ಪಂಜಾಬ್‌ನ ನಂಗಲ್ ಅಣೆಕಟ್ಟು ಇದರಲ್ಲಿ ಸೇರಿವೆ. ಬಿಯಾಸ್ ಯೋಜನೆಯು ಬಿಯಾಸ್-ಸತ್ಲೆಜ್ ಲಿಂಕ್ ಕಾಲುವೆ ಮತ್ತು ಬಿಯಾಸ್ ಅಣೆಕಟ್ಟುಗಳನ್ನು ಒಳಗೊಂಡಿರುವ ಬಹುಪಯೋಗಿ ನದಿ ಕಣಿವೆ ಯೋಜನೆಯಾಗಿದೆ.

ಭಾಕ್ರಾ ನಂಗಲ್‌ನಿಂದ ನೀರು ಬಿಡುಗಡೆ ಮಾಡುವಂತೆ ಹರಿಯಾಣ ಸಲ್ಲಿಸಿದ ಮನವಿಯ ಮೇಲೆ ಪ್ರಸ್ತುತ ಗದ್ದಲ ಭುಗಿಲೆದ್ದಿದ್ದು, ಇದನ್ನು ಪಂಜಾಬ್ ವಿರೋಧಿಸಿದೆ. ಭಾಕ್ರಾ ಬಿಯಾಸ್ ನಿರ್ವಹಣಾ ಮಂಡಳಿಯು ನೀರಿನ ವಿತರಣೆಯ ಕುರಿತು ತೆಗೆದುಕೊಂಡ ನಿರ್ಧಾರಗಳನ್ನು ಪಂಜಾಬ್ ಸರ್ಕಾರ ಇನ್ನು ಮುಂದೆ ಸ್ವೀಕರಿಸುವುದಿಲ್ಲ ಎಂದು ನಿರ್ಣಯದಲ್ಲಿ ಹೇಳಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಪಂಜಾಬ್‌ನ ನೀರನ್ನು ಮಂಡಳಿಯು ವರ್ಷಗಳಿಂದ ಇತರ ರಾಜ್ಯಗಳಿಗೆ ತಿರುಗಿಸುತ್ತಿತ್ತು ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ವಿಧಾನಸಭೆಯಲ್ಲಿ ಹೇಳಿಕೊಂಡಿದ್ದಾರೆ. “ಈಗ ಬಿಜೆಪಿ ಸರ್ಕಾರವು ತನ್ನ ರಾಜಕೀಯ ಹಿತಾಸಕ್ತಿಗಳಿಗಾಗಿ ಈ ಮಂಡಳಿಯನ್ನು ಬಳಸಲು ಪ್ರಾರಂಭಿಸಿದೆ” ಎಂದು ಅವರು ಹೇಳಿದ್ದಾರೆ.

“ಪಂಜಾಬ್‌ನೊಂದಿಗೆ ಸಮಾಲೋಚಿಸದೆ, ಮಧ್ಯರಾತ್ರಿಯಲ್ಲಿ ಸಭೆಗಳನ್ನು ಕರೆಯಲಾಗುತ್ತಿದೆ ಮತ್ತು ಇತರ ರಾಜ್ಯಗಳ ಒತ್ತಡದ ಮೇರೆಗೆ ಪಂಜಾಬ್‌ನ ನ್ಯಾಯಯುತ ಪಾಲನ್ನು ಕಸಿದುಕೊಳ್ಳಲಾಗುತ್ತಿದೆ.” ಎಂದು ಅವರು ಹೇಳಿದ್ದಾರೆ.

ಈ ನಡೆಯನ್ನು “ಅಸಂವಿಧಾನಿಕ” ಮತ್ತು “ಕಾನೂನುಬಾಹಿರ” ಎಂದು ಕರೆದ ಮುಖ್ಯಮಂತ್ರಿ, ಪಂಜಾಬ್‌ನ ನೀರನ್ನು ಹರಿಯಾಣಕ್ಕೆ ಬಲವಂತವಾಗಿ ತಿರುಗಿಸಲು ಭಾಕ್ರಾ ಬಿಯಾಸ್ ನಿರ್ವಹಣಾ ಮಂಡಳಿ ಸಭೆಗಳನ್ನು ಕರೆಯಲಾಗುತ್ತಿದೆ ಎಂದು ಹೇಳಿದ್ದಾರೆ. ಮಾರ್ಚ್ 31 ರ ವೇಳೆಗೆ ಹರಿಯಾಣ ತನ್ನ ವಾರ್ಷಿಕ ಹಂಚಿಕೆಯ ನೀರನ್ನು ಈಗಾಗಲೇ ಬಳಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.

ಸಟ್ಲೆಜ್ ಮತ್ತು ಬಿಯಾಸ್ ನದಿಗಳ ನೀರು ಸಂಪೂರ್ಣವಾಗಿ ಪಂಜಾಬ್‌ಗೆ ಸೇರಿತ್ತು ಎಂದು ಸಿಎಂ ಹೇಳಿದ್ದು, “ಈಗ ನಾವು ಈ ನೀರನ್ನು ಸಂಪೂರ್ಣವಾಗಿ ನಮಗಾಗಿ ಬಳಸುತ್ತೇವೆ” ಎಂದು ಅವರು ಹೇಳಿದ್ದಾರೆ. ಅಣೆಕಟ್ಟು ಸುರಕ್ಷತಾ ಕಾಯ್ದೆಯನ್ನು ಪಂಜಾಬ್ ಮತ್ತು ಅದರ ಹಕ್ಕುಗಳ ಮೇಲಿನ “ಗಂಭೀರ ದಾಳಿ” ಎಂದು ಇದೇ ವೇಳೆ ಸಿಎಂ ಕರೆದಿದ್ದಾರೆ.

ಈ ಕಾಯ್ದೆಯು ಅಣೆಕಟ್ಟುಗಳ ಕಣ್ಗಾವಲು, ಪರಿಶೀಲನೆ, ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಒಂದು ಚೌಕಟ್ಟನ್ನು ಒದಗಿಸುತ್ತದೆ. “ಈ ಸದನವು 2021 ರ ಅಣೆಕಟ್ಟು ಸುರಕ್ಷತಾ ಕಾಯ್ದೆಯನ್ನು ಪಂಜಾಬ್‌ನ ಹಕ್ಕುಗಳ ಮೇಲಿನ ದಾಳಿ ಎಂದು ಪರಿಗಣಿಸುತ್ತದೆ” ಎಂದು ನಿರ್ಣಯವು ಹೇಳಿದೆ ಎಂದು ದಿ ಹಿಂದೂ ವರದಿ ಮಾಡಿದೆ.

“ಅಣೆಕಟ್ಟು ಸಂಪೂರ್ಣವಾಗಿ ರಾಜ್ಯದ ಗಡಿಯೊಳಗೆ ಇದ್ದರೂ ಸಹ, ರಾಜ್ಯಗಳ ನದಿಗಳು ಮತ್ತು ಅಣೆಕಟ್ಟುಗಳನ್ನು ನೇರವಾಗಿ ನಿಯಂತ್ರಿಸಲು ಕೇಂದ್ರ ಸರ್ಕಾರಕ್ಕೆ ಈ ಕಾನೂನು ಸಂಪೂರ್ಣ ಅಧಿಕಾರ ನೀಡುತ್ತದೆ. ಈ ಕಾಯ್ದೆಯು ದೇಶದ ಫೆಡರಲ್ ರಚನೆಗೆ ವಿರುದ್ಧವಾಗಿದ್ದು, ಪಂಜಾಬ್‌ನಂತಹ ರಾಜ್ಯಗಳ ನೀರಿನ ಮೇಲಿನ ಸಾರ್ವಭೌಮ ಹಕ್ಕನ್ನು ದುರ್ಬಲಗೊಳಿಸಿದೆ” ಎಂದು ನಿರ್ಣಯ ಹೇಳಿದೆ.

“ಆದ್ದರಿಂದ, ಈ ಸದನವು ಕೇಂದ್ರ ಸರ್ಕಾರದಿಂದ ಅಣೆಕಟ್ಟು ಸುರಕ್ಷತಾ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತದೆ. ಪಂಜಾಬ್ ಸರ್ಕಾರವು ಈ ಕಾಯ್ದೆಯನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತದೆ” ಎಂದು ನಿರ್ಣಯವು ಹೇಳಿದೆ.

ಪಂಜಾಬ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪರ್ತಾಪ್ ಸಿಂಗ್ ಬಾಜ್ವಾ ಕೂಡ ಈ ನಿರ್ಣಯವನ್ನು ಬೆಂಬಲಿಸಿದ್ದಾರೆ. “ಒಂದು ಹನಿ ನೀರು ಕೂಡ ಬಿಡಲು ಇಲ್ಲ” ಎಂದು ಕಾಂಗ್ರೆಸ್ ನಾಯಕಿ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ. ಹರಿಯಾಣಕ್ಕೆ ಒಂದು ಹನಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಮಿಳುನಾಡು| ಎರಡು ಸಮುದಾಯಗಳ ನಡುವೆ ಘರ್ಷಣೆ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ

ತಮಿಳುನಾಡು| ಎರಡು ಸಮುದಾಯಗಳ ನಡುವೆ ಘರ್ಷಣೆ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...