Homeಮುಖಪುಟಹರಿಯಾಣಕ್ಕೆ ಒಂದು ಹನಿ ನೀರನ್ನು ಸಹ ನೀಡಲ್ಲ: ಪಂಜಾಬ್ ಸರ್ಕಾರ ತೀರ್ಮಾನ

ಹರಿಯಾಣಕ್ಕೆ ಒಂದು ಹನಿ ನೀರನ್ನು ಸಹ ನೀಡಲ್ಲ: ಪಂಜಾಬ್ ಸರ್ಕಾರ ತೀರ್ಮಾನ

- Advertisement -
- Advertisement -

ಪಂಜಾಬ್‌ನ ಆಮ್ ಆದ್ಮಿ ಪಕ್ಷದ ಸರ್ಕಾರ ಸೋಮವಾರ ವಿಧಾನಸಭೆಯಲ್ಲಿ ನೆರೆಯ ಹರಿಯಾಣಕ್ಕೆ ತನ್ನ ಕಡೆಯಿಂದ “ಒಂದು ಹನಿ ನೀರನ್ನು ಸಹ” ಬಿಡುವುದಿಲ್ಲ ಎಂದು ನಿರ್ಣಯ ಕೈಗೊಂಡಿದೆ ಎಂದು ದಿ ಹಿಂದೂ ವರದಿ ಮಾಡಿದೆ. ನೀರು ಹಂಚಿಕೆಗೆ ಸಂಬಂಧಿಸಿದಂತೆ ಎರಡು ರಾಜ್ಯಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಇದು ಪಂಜಾಬ್ ಈ ತೀರ್ಮಾನ ಮಾಡಿದೆ. ಹರಿಯಾಣಕ್ಕೆ ಒಂದು ಹನಿ

ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಮತ್ತು ಭಾಕ್ರಾ ಬಿಯಾಸ್ ನಿರ್ವಹಣಾ ಮಂಡಳಿಯ ಮೂಲಕ ಬಿಜೆಪಿ ಪಕ್ಷವೂ ಪಂಜಾಬ್‌ನ ಹಕ್ಕುಗಳನ್ನು “ಕಿತ್ತುಕೊಳ್ಳಲು” ಪ್ರಯತ್ನಿಸುತ್ತಿದೆ ಎಂದು ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ರಾಜ್ಯ ಜಲಸಂಪನ್ಮೂಲ ಸಚಿವ ಬರಿಂದರ್ ಕುಮಾರ್ ಗೋಯಲ್ ಮಂಡಿಸಿದ ನಿರ್ಣಯದ ವೇಳೆ ಆರೋಪಿಸಿದ್ದಾರೆ. ಹರಿಯಾಣದಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿದೆ.

ಭಾಕ್ರಾ ನಂಗಲ್ ಮತ್ತು ಭಾಕ್ರಾ ಬಿಯಾಸ್ ಯೋಜನೆಗಳ ಆಡಳಿತ ಮತ್ತು ನಿರ್ವಹಣೆಯನ್ನು ಅದರ ಮಂಡಳಿಯು ಮಾಡುತ್ತದೆ. ಇದು ಪಂಜಾಬ್, ಹರಿಯಾಣ, ರಾಜಸ್ಥಾನ, ಹಿಮಾಚಲ ಪ್ರದೇಶ, ದೆಹಲಿ ಮತ್ತು ಚಂಡೀಗಢಕ್ಕೆ ನೀರು ಮತ್ತು ವಿದ್ಯುತ್ ಸರಬರಾಜನ್ನು ನಿಯಂತ್ರಿಸುತ್ತದೆ.

ಭಾಕ್ರಾ ನಂಗಲ್ ಯೋಜನೆಯು ಸತ್ಲೆಜ್ ನದಿಯ ಮೇಲೆ ಎರಡು ಅಣೆಕಟ್ಟುಗಳನ್ನು ಒಳಗೊಂಡಿದೆ. ಹಿಮಾಚಲ ಪ್ರದೇಶದ ಭಾಕ್ರಾ ಅಣೆಕಟ್ಟು ಮತ್ತು ಪಂಜಾಬ್‌ನ ನಂಗಲ್ ಅಣೆಕಟ್ಟು ಇದರಲ್ಲಿ ಸೇರಿವೆ. ಬಿಯಾಸ್ ಯೋಜನೆಯು ಬಿಯಾಸ್-ಸತ್ಲೆಜ್ ಲಿಂಕ್ ಕಾಲುವೆ ಮತ್ತು ಬಿಯಾಸ್ ಅಣೆಕಟ್ಟುಗಳನ್ನು ಒಳಗೊಂಡಿರುವ ಬಹುಪಯೋಗಿ ನದಿ ಕಣಿವೆ ಯೋಜನೆಯಾಗಿದೆ.

ಭಾಕ್ರಾ ನಂಗಲ್‌ನಿಂದ ನೀರು ಬಿಡುಗಡೆ ಮಾಡುವಂತೆ ಹರಿಯಾಣ ಸಲ್ಲಿಸಿದ ಮನವಿಯ ಮೇಲೆ ಪ್ರಸ್ತುತ ಗದ್ದಲ ಭುಗಿಲೆದ್ದಿದ್ದು, ಇದನ್ನು ಪಂಜಾಬ್ ವಿರೋಧಿಸಿದೆ. ಭಾಕ್ರಾ ಬಿಯಾಸ್ ನಿರ್ವಹಣಾ ಮಂಡಳಿಯು ನೀರಿನ ವಿತರಣೆಯ ಕುರಿತು ತೆಗೆದುಕೊಂಡ ನಿರ್ಧಾರಗಳನ್ನು ಪಂಜಾಬ್ ಸರ್ಕಾರ ಇನ್ನು ಮುಂದೆ ಸ್ವೀಕರಿಸುವುದಿಲ್ಲ ಎಂದು ನಿರ್ಣಯದಲ್ಲಿ ಹೇಳಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಪಂಜಾಬ್‌ನ ನೀರನ್ನು ಮಂಡಳಿಯು ವರ್ಷಗಳಿಂದ ಇತರ ರಾಜ್ಯಗಳಿಗೆ ತಿರುಗಿಸುತ್ತಿತ್ತು ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ವಿಧಾನಸಭೆಯಲ್ಲಿ ಹೇಳಿಕೊಂಡಿದ್ದಾರೆ. “ಈಗ ಬಿಜೆಪಿ ಸರ್ಕಾರವು ತನ್ನ ರಾಜಕೀಯ ಹಿತಾಸಕ್ತಿಗಳಿಗಾಗಿ ಈ ಮಂಡಳಿಯನ್ನು ಬಳಸಲು ಪ್ರಾರಂಭಿಸಿದೆ” ಎಂದು ಅವರು ಹೇಳಿದ್ದಾರೆ.

“ಪಂಜಾಬ್‌ನೊಂದಿಗೆ ಸಮಾಲೋಚಿಸದೆ, ಮಧ್ಯರಾತ್ರಿಯಲ್ಲಿ ಸಭೆಗಳನ್ನು ಕರೆಯಲಾಗುತ್ತಿದೆ ಮತ್ತು ಇತರ ರಾಜ್ಯಗಳ ಒತ್ತಡದ ಮೇರೆಗೆ ಪಂಜಾಬ್‌ನ ನ್ಯಾಯಯುತ ಪಾಲನ್ನು ಕಸಿದುಕೊಳ್ಳಲಾಗುತ್ತಿದೆ.” ಎಂದು ಅವರು ಹೇಳಿದ್ದಾರೆ.

ಈ ನಡೆಯನ್ನು “ಅಸಂವಿಧಾನಿಕ” ಮತ್ತು “ಕಾನೂನುಬಾಹಿರ” ಎಂದು ಕರೆದ ಮುಖ್ಯಮಂತ್ರಿ, ಪಂಜಾಬ್‌ನ ನೀರನ್ನು ಹರಿಯಾಣಕ್ಕೆ ಬಲವಂತವಾಗಿ ತಿರುಗಿಸಲು ಭಾಕ್ರಾ ಬಿಯಾಸ್ ನಿರ್ವಹಣಾ ಮಂಡಳಿ ಸಭೆಗಳನ್ನು ಕರೆಯಲಾಗುತ್ತಿದೆ ಎಂದು ಹೇಳಿದ್ದಾರೆ. ಮಾರ್ಚ್ 31 ರ ವೇಳೆಗೆ ಹರಿಯಾಣ ತನ್ನ ವಾರ್ಷಿಕ ಹಂಚಿಕೆಯ ನೀರನ್ನು ಈಗಾಗಲೇ ಬಳಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.

ಸಟ್ಲೆಜ್ ಮತ್ತು ಬಿಯಾಸ್ ನದಿಗಳ ನೀರು ಸಂಪೂರ್ಣವಾಗಿ ಪಂಜಾಬ್‌ಗೆ ಸೇರಿತ್ತು ಎಂದು ಸಿಎಂ ಹೇಳಿದ್ದು, “ಈಗ ನಾವು ಈ ನೀರನ್ನು ಸಂಪೂರ್ಣವಾಗಿ ನಮಗಾಗಿ ಬಳಸುತ್ತೇವೆ” ಎಂದು ಅವರು ಹೇಳಿದ್ದಾರೆ. ಅಣೆಕಟ್ಟು ಸುರಕ್ಷತಾ ಕಾಯ್ದೆಯನ್ನು ಪಂಜಾಬ್ ಮತ್ತು ಅದರ ಹಕ್ಕುಗಳ ಮೇಲಿನ “ಗಂಭೀರ ದಾಳಿ” ಎಂದು ಇದೇ ವೇಳೆ ಸಿಎಂ ಕರೆದಿದ್ದಾರೆ.

ಈ ಕಾಯ್ದೆಯು ಅಣೆಕಟ್ಟುಗಳ ಕಣ್ಗಾವಲು, ಪರಿಶೀಲನೆ, ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಒಂದು ಚೌಕಟ್ಟನ್ನು ಒದಗಿಸುತ್ತದೆ. “ಈ ಸದನವು 2021 ರ ಅಣೆಕಟ್ಟು ಸುರಕ್ಷತಾ ಕಾಯ್ದೆಯನ್ನು ಪಂಜಾಬ್‌ನ ಹಕ್ಕುಗಳ ಮೇಲಿನ ದಾಳಿ ಎಂದು ಪರಿಗಣಿಸುತ್ತದೆ” ಎಂದು ನಿರ್ಣಯವು ಹೇಳಿದೆ ಎಂದು ದಿ ಹಿಂದೂ ವರದಿ ಮಾಡಿದೆ.

“ಅಣೆಕಟ್ಟು ಸಂಪೂರ್ಣವಾಗಿ ರಾಜ್ಯದ ಗಡಿಯೊಳಗೆ ಇದ್ದರೂ ಸಹ, ರಾಜ್ಯಗಳ ನದಿಗಳು ಮತ್ತು ಅಣೆಕಟ್ಟುಗಳನ್ನು ನೇರವಾಗಿ ನಿಯಂತ್ರಿಸಲು ಕೇಂದ್ರ ಸರ್ಕಾರಕ್ಕೆ ಈ ಕಾನೂನು ಸಂಪೂರ್ಣ ಅಧಿಕಾರ ನೀಡುತ್ತದೆ. ಈ ಕಾಯ್ದೆಯು ದೇಶದ ಫೆಡರಲ್ ರಚನೆಗೆ ವಿರುದ್ಧವಾಗಿದ್ದು, ಪಂಜಾಬ್‌ನಂತಹ ರಾಜ್ಯಗಳ ನೀರಿನ ಮೇಲಿನ ಸಾರ್ವಭೌಮ ಹಕ್ಕನ್ನು ದುರ್ಬಲಗೊಳಿಸಿದೆ” ಎಂದು ನಿರ್ಣಯ ಹೇಳಿದೆ.

“ಆದ್ದರಿಂದ, ಈ ಸದನವು ಕೇಂದ್ರ ಸರ್ಕಾರದಿಂದ ಅಣೆಕಟ್ಟು ಸುರಕ್ಷತಾ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತದೆ. ಪಂಜಾಬ್ ಸರ್ಕಾರವು ಈ ಕಾಯ್ದೆಯನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತದೆ” ಎಂದು ನಿರ್ಣಯವು ಹೇಳಿದೆ.

ಪಂಜಾಬ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪರ್ತಾಪ್ ಸಿಂಗ್ ಬಾಜ್ವಾ ಕೂಡ ಈ ನಿರ್ಣಯವನ್ನು ಬೆಂಬಲಿಸಿದ್ದಾರೆ. “ಒಂದು ಹನಿ ನೀರು ಕೂಡ ಬಿಡಲು ಇಲ್ಲ” ಎಂದು ಕಾಂಗ್ರೆಸ್ ನಾಯಕಿ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ. ಹರಿಯಾಣಕ್ಕೆ ಒಂದು ಹನಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಮಿಳುನಾಡು| ಎರಡು ಸಮುದಾಯಗಳ ನಡುವೆ ಘರ್ಷಣೆ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ

ತಮಿಳುನಾಡು| ಎರಡು ಸಮುದಾಯಗಳ ನಡುವೆ ಘರ್ಷಣೆ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...