Homeಮುಖಪುಟನ್ಯಾಯಾಧೀಶರ ಆಸ್ತಿ ವಿವರ ಬಹಿರಂಗಪಡಿಸಿದ ಸುಪ್ರೀಂ ಕೋರ್ಟ್‌; ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯಾಯಾಧೀಶರ ಆಸ್ತಿ ವಿವರ ಬಹಿರಂಗಪಡಿಸಿದ ಸುಪ್ರೀಂ ಕೋರ್ಟ್‌; ಇಲ್ಲಿದೆ ಸಂಪೂರ್ಣ ಮಾಹಿತಿ

- Advertisement -
- Advertisement -

ಸುಪ್ರೀಂ ಕೋರ್ಟ್‌ನ 33 ಹಾಲಿ ನ್ಯಾಯಾಧೀಶರಲ್ಲಿ 21 ನ್ಯಾಯಾಧೀಶರು ಸೋಮವಾರ (ಮೇ.5) ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ನ್ಯಾಯಾಧೀಶರ ಆಸ್ತಿ ವಿವರಗಳನ್ನು ಪ್ರಕಟಿಸಲಾಗಿದೆ.

ನ್ಯಾಯಾಂಗದೊಳಗಿನ ಇತ್ತೀಚಿನ ಭ್ರಷ್ಟಾಚಾರದ ಆರೋಪಗಳು, ವಿಶೇಷವಾಗಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿವಾದದ ನಂತರ, ಏಪ್ರಿಲ್ 1ರಂದು ಸುಪ್ರೀಂ ಕೋರ್ಟ್‌ನ ಪೂರ್ಣ ನ್ಯಾಯಾಲಯವು ನ್ಯಾಯಾಧೀಶರ ಆಸ್ತಿ ವಿವರಗಳನ್ನು ಉನ್ನತ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಸಾರ್ವಜನಿಕಗೊಳಿಸಲು ನಿರ್ಧರಿಸಿತ್ತು.

ಅದರಂತೆ ನಿನ್ನೆ ವಿವರಗಳನ್ನು ಪ್ರಕಟಿಸಲಾಗಿದೆ. ಆದಾಗ್ಯೂ, 12 ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಇನ್ನೂ ಸಾರ್ವಜನಿಕಗೊಳಿಸಿಲ್ಲ.

ಈಗಾಗಲೇ ಸ್ವೀಕರಿಸಲಾದ ನ್ಯಾಯಾಧೀಶರ ಆಸ್ತಿ ವಿವರಗಳನ್ನು ಅಪ್ಲೋಡ್ ಮಾಡಲಾಗಿದೆ. ಇತರ ನ್ಯಾಯಾಧೀಶರ ಆಸ್ತಿ ವಿವರಗಳನ್ನು ಮುಂದೆ ಅಪ್ಲೋಡ್ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್ ವೆಬ್‌ಸೈಟ್‌ ಹೇಳಿದೆ.

ನ್ಯಾಯಾಧೀಶ ಆಸ್ತಿ ವಿವರಗಳನ್ನು ನೋಡಲು ಅವರ ಹೆಸರಿನ ಮುಂದಿನ ಲಿಂಕ್ ಕ್ಲಿಕ್ ಮಾಡಿ

  1. ನ್ಯಾಯಮೂರ್ತಿ ಸಂಜೀವ್ ಖನ್ನಾ, ಭಾರತದ ಮುಖ್ಯ ನ್ಯಾಯಮೂರ್ತಿ ಲಿಂಕ್
  2. ನ್ಯಾಯಮೂರ್ತಿ ಭೂಷಣ ರಾಮಕೃಷ್ಣ ಗವಾಯಿ ಲಿಂಕ್ 
  3. ನ್ಯಾಯಮೂರ್ತಿ ಸೂರ್ಯ ಕಾಂತ್ ಲಿಂಕ್
  4. ನ್ಯಾಯಮೂರ್ತಿ ಅಭಯ್ ಎಸ್. ಓಕಾ ಲಿಂಕ್ 
  5. ನ್ಯಾಯಮೂರ್ತಿ ವಿಕ್ರಮ್ ನಾಥ್ ಲಿಂಕ್  
  6. ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ಲಿಂಕ್
  7. ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಲಿಂಕ್
  8. ನ್ಯಾಯಮೂರ್ತಿ ಪಮಿದಿಘಂಟಂ ಶ್ರೀ ನರಸಿಂಹ ಲಿಂಕ್
  9. ನ್ಯಾಯಮೂರ್ತಿ ಸುಧಾಂಶು ಧುಲಿಯಾ ಲಿಂಕ್
  10. ನ್ಯಾಯಮೂರ್ತಿ ಜಮ್ಶೆಡ್ ಬುರ್ಜೋರ್ ಪರ್ದಿವಾಲಾ ಲಿಂಕ್
  11. ನ್ಯಾಯಮೂರ್ತಿ ಪಂಕಜ್ ಮಿಥಲ್ ಲಿಂಕ್
  12. ನ್ಯಾಯಮೂರ್ತಿ ಸಂಜಯ್ ಕರೋಲ್ ಲಿಂಕ್
  13. ನ್ಯಾಯಮೂರ್ತಿ ಸಂಜಯ್ ಕುಮಾರ್ ಲಿಂಕ್
  14. ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಲಿಂಕ್
  15. ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಲಿಂಕ್
  16. ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಲಿಂಕ್ 
  17. ನ್ಯಾಯಮೂರ್ತಿ ಎಸ್.ವೆಂಕಟನಾರಾಯಣ ಭಟ್ಟಿ ಲಿಂಕ್ 
  18. ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಾಸಿಹ್ ಲಿಂಕ್
  19. ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಲಿಂಕ್
  20. ನ್ಯಾಯಮೂರ್ತಿ ಮನಮೋಹನ್ ಲಿಂಕ್
  21. ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಲಿಂಕ್ 

ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ, ಬಿ.ವಿ. ನಾಗರತ್ನ, ದೀಪಂಕರ್ ದತ್ತ, ಅಹ್ಸಾನುದ್ದೀನ್ ಅಮಾನುಲ್ಲಾ, ಮನೋಜ್ ಮಿಶ್ರಾ, ಅರವಿಂದ್ ಕುಮಾರ್, ಪ್ರಶಾಂತ್ ಕುಮಾರ್ ಮಿಶ್ರಾ, ಸತೀಶ್ ಚಂದ್ರ ಶರ್ಮಾ, ಪ್ರಸನ್ನ ಭಾಲಚಂದ್ರ ವರಾಳೆ, ಎನ್. ಕೋಟಿಶ್ವರ್ ಸಿಂಗ್, ಆರ್. ಮಹಾದೇವನ್, ಜೋಯ್ಮಲ್ಯ ಬಾಗ್ಚಿ ತಮ್ಮ ಆಸ್ತಿ ವಿವರಗಳನ್ನು ಇನ್ನೂ ಬಹಿರಂಗಪಡಿಸಿಲ್ಲ.

ಈ ಹಿಂದೆ ಸುಪ್ರೀಂ ಕೋರ್ಟ್ ವೆಬ್‌ಸೈಟ್ ಸಿಜೆಐಗೆ ಆಸ್ತಿ ಘೋಷಣೆ ಮಾಡಿದ ನ್ಯಾಯಾಧೀಶರ ಹೆಸರುಗಳನ್ನು ಮಾತ್ರ ತೋರಿಸುತ್ತಿತ್ತು. 2009ರಲ್ಲಿ, ಸುಪ್ರೀಂ ಕೋರ್ಟ್‌ನ ಪೂರ್ಣ ನ್ಯಾಯಾಲಯವು ನ್ಯಾಯಾಧೀಶರು ಸಲ್ಲಿಸಿದ ಆಸ್ತಿ ವಿವರಗಳನ್ನು ಬಹಿರಂಗಪಡಿಸಲು ನಿರ್ಧರಿಸಿತ್ತು. ಆದಾಗ್ಯೂ, ಈ ಪ್ರಕ್ರಿಯೆಯು ಸ್ವಯಂಪ್ರೇರಿತ ಘೋಷಣೆಯನ್ನು ಒಳಗೊಂಡಿತ್ತು.

ಮಧ್ಯಪ್ರದೇಶ | ಬಿಜೆಪಿ ಪ್ರೇರಿತ ಕಟ್ಟುಕತೆ ‘ಲವ್ ಜಿಹಾದ್’ ತನಿಖೆಗೆ ಎಸ್‌ಐಟಿ ರಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...