Homeಮುಖಪುಟನ್ಯಾಯಾಧೀಶರ ಆಸ್ತಿ ವಿವರ ಬಹಿರಂಗಪಡಿಸಿದ ಸುಪ್ರೀಂ ಕೋರ್ಟ್‌; ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯಾಯಾಧೀಶರ ಆಸ್ತಿ ವಿವರ ಬಹಿರಂಗಪಡಿಸಿದ ಸುಪ್ರೀಂ ಕೋರ್ಟ್‌; ಇಲ್ಲಿದೆ ಸಂಪೂರ್ಣ ಮಾಹಿತಿ

- Advertisement -
- Advertisement -

ಸುಪ್ರೀಂ ಕೋರ್ಟ್‌ನ 33 ಹಾಲಿ ನ್ಯಾಯಾಧೀಶರಲ್ಲಿ 21 ನ್ಯಾಯಾಧೀಶರು ಸೋಮವಾರ (ಮೇ.5) ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ನ್ಯಾಯಾಧೀಶರ ಆಸ್ತಿ ವಿವರಗಳನ್ನು ಪ್ರಕಟಿಸಲಾಗಿದೆ.

ನ್ಯಾಯಾಂಗದೊಳಗಿನ ಇತ್ತೀಚಿನ ಭ್ರಷ್ಟಾಚಾರದ ಆರೋಪಗಳು, ವಿಶೇಷವಾಗಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿವಾದದ ನಂತರ, ಏಪ್ರಿಲ್ 1ರಂದು ಸುಪ್ರೀಂ ಕೋರ್ಟ್‌ನ ಪೂರ್ಣ ನ್ಯಾಯಾಲಯವು ನ್ಯಾಯಾಧೀಶರ ಆಸ್ತಿ ವಿವರಗಳನ್ನು ಉನ್ನತ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಸಾರ್ವಜನಿಕಗೊಳಿಸಲು ನಿರ್ಧರಿಸಿತ್ತು.

ಅದರಂತೆ ನಿನ್ನೆ ವಿವರಗಳನ್ನು ಪ್ರಕಟಿಸಲಾಗಿದೆ. ಆದಾಗ್ಯೂ, 12 ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಇನ್ನೂ ಸಾರ್ವಜನಿಕಗೊಳಿಸಿಲ್ಲ.

ಈಗಾಗಲೇ ಸ್ವೀಕರಿಸಲಾದ ನ್ಯಾಯಾಧೀಶರ ಆಸ್ತಿ ವಿವರಗಳನ್ನು ಅಪ್ಲೋಡ್ ಮಾಡಲಾಗಿದೆ. ಇತರ ನ್ಯಾಯಾಧೀಶರ ಆಸ್ತಿ ವಿವರಗಳನ್ನು ಮುಂದೆ ಅಪ್ಲೋಡ್ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್ ವೆಬ್‌ಸೈಟ್‌ ಹೇಳಿದೆ.

ನ್ಯಾಯಾಧೀಶ ಆಸ್ತಿ ವಿವರಗಳನ್ನು ನೋಡಲು ಅವರ ಹೆಸರಿನ ಮುಂದಿನ ಲಿಂಕ್ ಕ್ಲಿಕ್ ಮಾಡಿ

  1. ನ್ಯಾಯಮೂರ್ತಿ ಸಂಜೀವ್ ಖನ್ನಾ, ಭಾರತದ ಮುಖ್ಯ ನ್ಯಾಯಮೂರ್ತಿ ಲಿಂಕ್
  2. ನ್ಯಾಯಮೂರ್ತಿ ಭೂಷಣ ರಾಮಕೃಷ್ಣ ಗವಾಯಿ ಲಿಂಕ್ 
  3. ನ್ಯಾಯಮೂರ್ತಿ ಸೂರ್ಯ ಕಾಂತ್ ಲಿಂಕ್
  4. ನ್ಯಾಯಮೂರ್ತಿ ಅಭಯ್ ಎಸ್. ಓಕಾ ಲಿಂಕ್ 
  5. ನ್ಯಾಯಮೂರ್ತಿ ವಿಕ್ರಮ್ ನಾಥ್ ಲಿಂಕ್  
  6. ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ಲಿಂಕ್
  7. ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಲಿಂಕ್
  8. ನ್ಯಾಯಮೂರ್ತಿ ಪಮಿದಿಘಂಟಂ ಶ್ರೀ ನರಸಿಂಹ ಲಿಂಕ್
  9. ನ್ಯಾಯಮೂರ್ತಿ ಸುಧಾಂಶು ಧುಲಿಯಾ ಲಿಂಕ್
  10. ನ್ಯಾಯಮೂರ್ತಿ ಜಮ್ಶೆಡ್ ಬುರ್ಜೋರ್ ಪರ್ದಿವಾಲಾ ಲಿಂಕ್
  11. ನ್ಯಾಯಮೂರ್ತಿ ಪಂಕಜ್ ಮಿಥಲ್ ಲಿಂಕ್
  12. ನ್ಯಾಯಮೂರ್ತಿ ಸಂಜಯ್ ಕರೋಲ್ ಲಿಂಕ್
  13. ನ್ಯಾಯಮೂರ್ತಿ ಸಂಜಯ್ ಕುಮಾರ್ ಲಿಂಕ್
  14. ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಲಿಂಕ್
  15. ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಲಿಂಕ್
  16. ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಲಿಂಕ್ 
  17. ನ್ಯಾಯಮೂರ್ತಿ ಎಸ್.ವೆಂಕಟನಾರಾಯಣ ಭಟ್ಟಿ ಲಿಂಕ್ 
  18. ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಾಸಿಹ್ ಲಿಂಕ್
  19. ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಲಿಂಕ್
  20. ನ್ಯಾಯಮೂರ್ತಿ ಮನಮೋಹನ್ ಲಿಂಕ್
  21. ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಲಿಂಕ್ 

ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ, ಬಿ.ವಿ. ನಾಗರತ್ನ, ದೀಪಂಕರ್ ದತ್ತ, ಅಹ್ಸಾನುದ್ದೀನ್ ಅಮಾನುಲ್ಲಾ, ಮನೋಜ್ ಮಿಶ್ರಾ, ಅರವಿಂದ್ ಕುಮಾರ್, ಪ್ರಶಾಂತ್ ಕುಮಾರ್ ಮಿಶ್ರಾ, ಸತೀಶ್ ಚಂದ್ರ ಶರ್ಮಾ, ಪ್ರಸನ್ನ ಭಾಲಚಂದ್ರ ವರಾಳೆ, ಎನ್. ಕೋಟಿಶ್ವರ್ ಸಿಂಗ್, ಆರ್. ಮಹಾದೇವನ್, ಜೋಯ್ಮಲ್ಯ ಬಾಗ್ಚಿ ತಮ್ಮ ಆಸ್ತಿ ವಿವರಗಳನ್ನು ಇನ್ನೂ ಬಹಿರಂಗಪಡಿಸಿಲ್ಲ.

ಈ ಹಿಂದೆ ಸುಪ್ರೀಂ ಕೋರ್ಟ್ ವೆಬ್‌ಸೈಟ್ ಸಿಜೆಐಗೆ ಆಸ್ತಿ ಘೋಷಣೆ ಮಾಡಿದ ನ್ಯಾಯಾಧೀಶರ ಹೆಸರುಗಳನ್ನು ಮಾತ್ರ ತೋರಿಸುತ್ತಿತ್ತು. 2009ರಲ್ಲಿ, ಸುಪ್ರೀಂ ಕೋರ್ಟ್‌ನ ಪೂರ್ಣ ನ್ಯಾಯಾಲಯವು ನ್ಯಾಯಾಧೀಶರು ಸಲ್ಲಿಸಿದ ಆಸ್ತಿ ವಿವರಗಳನ್ನು ಬಹಿರಂಗಪಡಿಸಲು ನಿರ್ಧರಿಸಿತ್ತು. ಆದಾಗ್ಯೂ, ಈ ಪ್ರಕ್ರಿಯೆಯು ಸ್ವಯಂಪ್ರೇರಿತ ಘೋಷಣೆಯನ್ನು ಒಳಗೊಂಡಿತ್ತು.

ಮಧ್ಯಪ್ರದೇಶ | ಬಿಜೆಪಿ ಪ್ರೇರಿತ ಕಟ್ಟುಕತೆ ‘ಲವ್ ಜಿಹಾದ್’ ತನಿಖೆಗೆ ಎಸ್‌ಐಟಿ ರಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...