Homeಮುಖಪುಟಸಿಪಿಐ(ಎಂ) ಶಾಸಕ ಎ. ರಾಜಾ ಅನರ್ಹ ಪ್ರಕರಣ: ಕೇರಳ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸಿಪಿಐ(ಎಂ) ಶಾಸಕ ಎ. ರಾಜಾ ಅನರ್ಹ ಪ್ರಕರಣ: ಕೇರಳ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಇಡುಕ್ಕಿ ಜಿಲ್ಲೆಯ ದೇವಿಕುಲಂ ವಿಧಾನಸಭಾ ಕ್ಷೇತ್ರದ ಸಿಪಿಐ(ಎಂ) ಶಾಸಕ ಎ. ರಾಜಾ ಅವರ ಆಯ್ಕೆಯನ್ನು ರದ್ದುಗೊಳಿಸಿದ್ದ ಕೇರಳ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಬದಿಗೆ ಸರಿಸಿದೆ.

ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠವು ಮಾರ್ಚ್ 23, 2023ರ ಕೇರಳ ಹೈಕೋರ್ಟ್ ಆದೇಶದ ವಿರುದ್ಧ ರಾಜಾ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದೆ.

ಹೈಕೋರ್ಟ್ ತೀರ್ಪು ಮಾತ್ರವಲ್ಲದೆ ಚುನಾವಣಾ ತಕರಾರು ಅರ್ಜಿಯನ್ನೂ ರದ್ದುಗೊಳಿಸಲಾಗಿದೆ. ಮೇಲ್ಮನವಿದಾರ (ಎ.ರಾಜಾ) ಪೂರ್ಣ ಅವಧಿಗೆ ಶಾಸನ ಸಭೆಯ ಸದಸ್ಯರಾಗಿ ಇರಲಿದ್ದು, ಅರ್ಹ ಸೌಲಭ್ಯಗಳನ್ನೆಲ್ಲ ಪಡೆಯಲಿದ್ದಾರೆ” ಎಂಬುವುದಾಗಿ ಸುಪ್ರೀಂ ಕೋರ್ಟ್ ಪೀಠ ಹೇಳಿದೆ ಎಂದು ವರದಿಯಾಗಿದೆ.

ಕಳೆದ ವರ್ಷದ ಸೆಪ್ಟೆಂಬರ್ 26 ರಂದು ಸುಪ್ರೀಂ ಕೋರ್ಟ್ ರಾಜಾ ಅವರ ಅರ್ಜಿಯ ತೀರ್ಪನ್ನು ಕಾಯ್ದಿರಿಸಿತ್ತು.

2021ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ರಾಜಾ ವಿರುದ್ದ ಸ್ಪರ್ಧಿಸಿದ್ದ ಕಾಂಗ್ರೆಸ್ ನಾಯಕ ಡಿ.ಕುಮಾರ್ ಅವರು ಚುನಾವಣಾ ತಕರಾರರು ಅರ್ಜಿ ಸಲ್ಲಿಸಿದ್ದರು. ರಾಜಾ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಮೀಸಲಾಗಿರುವ ದೇವಿಕುಲಂ ಕ್ಷೇತ್ರದಿಂದ ಸ್ಪರ್ಧಿಸಲು ಅರ್ಹರಲ್ಲ ಎಂದು ವಾದಿಸಿದ್ದರು.

ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು, ರಾಜಾ ಮತ್ತು ಡಿ. ಕುಮಾರ್ ಪರ ಕ್ರಮವಾಗಿ ಹಿರಿಯ ವಕೀಲರಾದ ವಿ ಗಿರಿ ಮತ್ತು ನರೇಂದರ್ ಹೂಡಾ ಅವರ ವಾದಗಳನ್ನು ಆಲಿಸಿದೆ.

ಕೇರಳ ಹೈಕೋರ್ಟ್‌ನ ಮಾರ್ಚ್ 20,2023ರ ಆದೇಶದ ವಿರುದ್ಧ ರಾಜಾ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ.

ಡಿ.ಕುಮಾರ್ ಅವರ ಅರ್ಜಿಗೆ ವಿರೋಧ ವ್ಯಕ್ತಪಡಿಸಿದ್ದ ರಾಜಾ ಅವರು, ತಾನು ಹಿಂದೂ ಧರ್ಮದ ಪಾರಾಯಣ ಸಮುದಾಯಕ್ಕೆ ಸೇರಿದವನು ಎಂದು ವಾದಿಸಿದ್ದರು. ಅದಕ್ಕೆ ದಾಖಲೆಯಾಗಿ ದೇವಿಕುಲಂ ತಹಶೀಲ್ದಾರ್ ನೀಡಿದ ಜಾತಿ ಪ್ರಮಾಣಪತ್ರವನ್ನು ಸಲ್ಲಿಸಿದ್ದರು.

ತಾನು ಸಲ್ಲಿಸಿದ್ದ ನಾಮಪತ್ರಕ್ಕೆ ಕುಮಾರ್ ಸಲ್ಲಿಸಿದ ಆಕ್ಷೇಪಣೆಯನ್ನು ಚುನಾವಣಾಧಿಕಾರಿ ಕ್ರಮ ಬದ್ದವಾಗಿಯೇ ತಿರಸ್ಕರಿಸಿದ್ದಾರೆ ಎಂದಿದ್ದರು.

ತಾನು, ತನ್ನ ಹೆತ್ತವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿಲ್ಲ. ತಾನು ದೀಕ್ಷಾ ಸ್ನಾನವನ್ನೂ ಪಡೆದಿಲ್ಲ. ತನ್ನ ಪತ್ನಿಯೂ ಹಿಂದೂವಾಗಿದ್ದು, ನಮ್ಮ ವಿವಾಹವು ಸಾಂಪ್ರದಾಯಿಕ ದೀಪ ಬೆಳಗುವುದು ಮತ್ತು ಪತ್ನಿಯ ಕತ್ತಿಗೆ ತಾಳಿ ಕಟ್ಟುವುದು ಸೇರಿದಂತೆ ಹಿಂದೂ ವಿಧಿವಿಧಾನಗಳ ಪ್ರಕಾರ ನಡೆದಿದೆ ಎಂದು ರಾಜಾ ಹೇಳಿದ್ದರು.

ರಾಜಾ ಒಬ್ಬ ಕ್ರಿಶ್ಚಿಯನ್. ಇಡುಕ್ಕಿ ಜಿಲ್ಲೆಯ ಸಿಎಸ್ಐ ಚರ್ಚ್‌ನಲ್ಲಿ ಅವರು ದೀಕ್ಷಾಸ್ನಾನ ಪಡೆದಿದ್ದಾರೆ. ಅವರು ಎಸ್‌ಸಿ ಸಮುದಾಯಕ್ಕೆ ಸೇರಿದವರು ಎಂದು ಸಾಬೀತುಪಡಿಸಲು ನಕಲಿ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ ಎಂದು ಕುಮಾರ್ ತನ್ನ ಅರ್ಜಿಯಲ್ಲಿ ಆರೋಪಿಸಿದ್ದರು.ಪಿ

2021ರ ಚುನಾವಣೆಯಲ್ಲಿ 7,848 ಮತಗಳ ಅಂತರದಿಂದ ರಾಜಾ ವಿರುದ್ದ ಸೋತಿದ್ದ ಕುಮಾರ್, ರಾಜಾ ಅವರ ಪತ್ನಿ ಕೂಡ ಕ್ರಿಶ್ಚಿಯನ್. ಅವರು ಕ್ರಿಶ್ಚಿಯನ್ ಧಾರ್ಮಿಕ ವಿಧಿಗಳಿಗೆ ಅನುಗುಣವಾಗಿ ಮದುವೆಯಾಗಿದ್ದಾರೆ ಎಂದು ಹೇಳಿಕೊಂಡಿದ್ದರು.

ಕುಮಾರ್ ಅವರ ಆರೋಪವನ್ನು ಪುರಸ್ಕರಿಸಿದ್ದ ಕೇರಳ ಹೈಕೋರ್ಟ್, ರಾಜಾ ಅವರು ತನ್ನ ಮದುವೆಯ ಕುರಿತ ಮಾಹಿತಿಯನ್ನು ಮುಚ್ಚಿಡಲು ಉದ್ದೇಶಪೂರ್ವಕ ಪ್ರಯತ್ನ ಮಾಡಿರುವುದು ಸ್ಪಷ್ಟವಾಗಿದೆ ಎಂದು ಹೇಳಿತ್ತು.

ರಾಜಾ ಮತ್ತು ಅವರ ಪತ್ನಿ ಮದುವೆಯ ವೇಳೆ ಧರಿಸಿದ್ದ ವಸ್ತ್ರ ಕ್ರಿಶ್ಚಿಯನ್ ವಿವಾಹದ ಸಂಕೇತವಾಗಿದೆ ಎಂದಿತ್ತು.

ರಾಜಾ ಅವರು ನಾಮಪತ್ರ ಸಲ್ಲಿಸುವ ಮೊದಲೇ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು. ನಾಮಪತ್ರ ಸಲ್ಲಿಕೆಗೆ ಬಹಳ ಹಿಂದೆಯೇ ಅವರು ಕ್ರಿಶ್ಚಿಯನ್ ಧರ್ಮವನ್ನು ಅನುಸರಿಸುತ್ತಿದ್ದರು ಎಂಬುದು ಅವರು ಸಲ್ಲಿಸಿರುವ ಕೆಲವು ದಾಖಲೆಗಳು ತೋರಿಸುತ್ತವೆ ಎಂದು ಹೈಕೋರ್ಟ್ ಹೇಳಿತ್ತು.

ಮತಾಂತರದ ನಂತರ, ಅವರು ಹಿಂದೂ ಧರ್ಮೀಯ ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ. ಆ ದೃಷ್ಟಿಯಿಂದಲೂ, ಚುನಾವಣಾಧಿಕಾರಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕಿತ್ತು ಎಂದಿತ್ತು.

ಕೇರಳದಲ್ಲಿ ಹಿಂದೂ ಪಾರಾಯಣರನ್ನು ಎಸ್‌ಸಿ ಸಮುದಾಯ ಎಂದು ಘೋಷಿಸಿ 1950 ರಲ್ಲಿ ರಾಷ್ಟ್ರಪತಿಗಳು ಆದೇಶ ಹೊರಡಿಸುವ ಮೊದಲು, ತನ್ನ ಪೂರ್ವಜರು (ಅಜ್ಜ-ಅಜ್ಜಿ) ಕೇರಳಕ್ಕೆ ವಲಸೆ ಹೋಗಿದ್ದರು ಎಂಬುವುದನ್ನು ಸಾಭೀತುಪಡಿಸುವಲ್ಲಿ ರಾಜಾ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಹೈಕೋರ್ಟ್‌ ತಿಳಿಸಿತ್ತು.

“ಸಂಕ್ಷಿಪ್ತವಾಗಿ ಹೇಳುವುದಾದರೆ, ಎರಡೂ ಆಧಾರದ ಮೇಲೆ, ರಾಜಾ ಅವರು ಕೇರಳ ರಾಜ್ಯದೊಳಗಿನ ‘ಹಿಂದೂ ಪಾರಾಯಣ’ದ ಸಮುದಾಯದ ಸದಸ್ಯರಲ್ಲ ಮತ್ತು ಪರಿಶಿಷ್ಟ ಜಾತಿಗೆ ಮೀಸಲಾಗಿರುವ ದೇವಿಕುಲಂ ಕ್ಷೇತ್ರದಿಂದ ಸ್ಪರ್ಧಿಸಲು ಅವರು ಅರ್ಹತೆ ಹೊಂದಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದು ಹೈಕೋರ್ಟ್ ಹೇಳಿತ್ತು.

ಆದ್ದರಿಂದ, 2021ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಜಾ ಅವರ ಆಯ್ಕೆಯು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 98 ರ ಅಡಿಯಲ್ಲಿ ಅನೂರ್ಜಿತವಾಗಿದೆ ಎಂದು ಹೈಕೋರ್ಟ್ ಘೋಷಿಸಿತ್ತು. ಅಲ್ಲದೆ, ಕುಮಾರ್ ಅವರನ್ನು ಶಾಸಕ ಎಂದು ಘೋಷಿಸಲು ಸಾಧ್ಯವಿಲ್ಲ ಎಂದಿತ್ತು.

ನ್ಯಾಯಾಧೀಶರ ಆಸ್ತಿ ವಿವರ ಬಹಿರಂಗಪಡಿಸಿದ ಸುಪ್ರೀಂ ಕೋರ್ಟ್‌; ಇಲ್ಲಿದೆ ಸಂಪೂರ್ಣ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...