Homeಮುಖಪುಟ'ಪಹಲ್ಗಾಮ್‌ ದಾಳಿಗೆ 3 ದಿನ ಮೊದಲೇ ಮೋದಿಗೆ ಮಾಹಿತಿ ಇತ್ತು, ಹಾಗಾಗಿ ಕಾಶ್ಮೀರ ಭೇಟಿ ರದ್ದುಗೊಳಿಸಿದ್ದರು':...

‘ಪಹಲ್ಗಾಮ್‌ ದಾಳಿಗೆ 3 ದಿನ ಮೊದಲೇ ಮೋದಿಗೆ ಮಾಹಿತಿ ಇತ್ತು, ಹಾಗಾಗಿ ಕಾಶ್ಮೀರ ಭೇಟಿ ರದ್ದುಗೊಳಿಸಿದ್ದರು’: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

“ಪಹಲ್ಗಾಮ್ ದಾಳಿ ನಡೆಯುವ ಮೂರು ದಿನಗಳ ಮೊದಲೇ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆಯಬಹುದು ಎಂದು ಗುಪ್ತಚರ ಇಲಾಖೆ ಪ್ರಧಾನಿ ಮೋದಿಯವರಿಗೆ ವರದಿ ಕೊಟ್ಟಿತ್ತು. ಈ ಕಾರಣಕ್ಕೆ ಅವರು ಅಲ್ಲಿಯ ಪ್ರವಾಸವನ್ನು ರದ್ದುಗೊಳಿಸಿದ್ದರು” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ (ಮೇ.6) ಆರೋಪಿಸಿದ್ದಾರೆ.

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆದ ‘ಸಂವಿಧಾನ್ ಬಚಾವೋ’ ಸಮಾವೇಶದಲ್ಲಿ ಮಾತನಾಡಿದ ಅವರು, “ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ‘ಗುಪ್ತಚರ ವೈಫಲ್ಯ’ ಕಾರಣ ಎಂಬುವುದನ್ನು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡಿದೆ. ಹಾಗಾಗಿ, ಜನರನ್ನು ರಕ್ಷಿಸಲು ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಬಲಪಡಿಸದಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂದು ಹೇಳಿದ್ದಾರೆ.

“ಪಹಲ್ಗಾಮ್ ದಾಳಿಯ ಮೂರು ದಿನ ಮುನ್ನ ಭಯೋತ್ಪಾದಕ ದಾಳಿಯ ಸಾಧ್ಯತೆಯ ಬಗ್ಗೆ ಮೋದಿಯವರಿಗೆ ಗುಪ್ತಚರ ಇಲಾಖೆ ವರದಿ ನೀಡಿದೆ. ಈ ಕಾರಣಕ್ಕೆ ಅವರು ಅಲ್ಲಿಯ ಭೇಟಿಯನ್ನು ರದ್ದುಗೊಳಿಸಿದ್ದರು ಎಂದು ನನಗೆ ಮಾಹಿತಿ ದೊರೆತಿದೆ. ಕೆಲವು ಪತ್ರಿಕೆಗಳು ಈ ಬಗ್ಗೆ ವರದಿ ಮಾಡಿವೆ” ಎಂದಿರುವ ಖರ್ಗೆ, “ನಿಮ್ಮ ಭದ್ರತೆಗಾಗಿ ಅಲ್ಲಿಗೆ ಭೇಟಿ ನೀಡುವುದು ಸೂಕ್ತವಲ್ಲ ಎಂದು ಗುಪ್ತಚರ ವರದಿ ಹೇಳಿದಾಗ, ಜನರನ್ನು ರಕ್ಷಿಸಲು ನೀವು ನಿಮ್ಮ ಭದ್ರತೆ, ಗುಪ್ತಚರ, ಸ್ಥಳೀಯ ಪೊಲೀಸರು ಮತ್ತು ಗಡಿ ಪಡೆಗೆ ಏಕೆ ತಿಳಿಸಲಿಲ್ಲ? ನಿಮಗೆ ಮಾಹಿತಿ ಬಂದಾಗ, ನೀವು ನಿಮ್ಮ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದೀರಿ. ಆದರೆ, ಅಲ್ಲಿಯ ಪ್ರವಾಸಿಗರನ್ನು ರಕ್ಷಿಸಲು ಹೆಚ್ಚಿನ ಪಡೆಗಳನ್ನು ಏಕೆ ಕಳುಹಿಸಲಿಲ್ಲ?” ಎಂದು ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

ಗುಪ್ತಚರ ವೈಫಲ್ಯವನ್ನು ಒಪ್ಪಿಕೊಂಡಿರುವ ಕೇಂದ್ರ ಸರ್ಕಾರ, ಪಹಲ್ಗಾಮ್ ದಾಳಿಯ ಜೀವಹಾನಿಗೆ ಹೊಣೆಗಾರನಾಗಬೇಕಲ್ಲವೇ? ಎಂದು ಖರ್ಗೆ ಕೇಳಿದ್ದಾರೆ.

ಅವರು (ಕೇಂದ್ರ ಸರ್ಕಾರ) ವ್ಯವಸ್ಥೆಯನ್ನು ಸುಧಾರಿಸುತ್ತೇವೆ ಎನ್ನುತ್ತಿದ್ದಾರೆ. ನಿಮಗೆ ದಾಳಿಯ ಬಗ್ಗೆ ಮೊದಲೇ ಮಾಹಿತಿಯಿದ್ದರೂ ಪ್ರವಾಸಿಗರ ಭದ್ರತೆಯ ನಿಟ್ಟಿನಲ್ಲಿ ಸರಿಯಾದ ವ್ಯವಸ್ಥೆ ಏಕೆ ಮಾಡಿಲ್ಲ? ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಪಹಲ್ಗಾಮ್ ದಾಳಿಯ ಹಿನ್ನೆಲೆ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾದರೂ ಕಾಂಗ್ರೆಸ್ ಅದರ ಬೆಂಬಲಕ್ಕೆ ನಿಲ್ಲುತ್ತದೆ. ಏಕೆಂದರೆ ದೇಶವು ಪಕ್ಷ, ಧರ್ಮ ಮತ್ತು ಜಾತಿಯನ್ನು ಮೀರಿದ್ದು” ಎಂದು ಮಲ್ಲಿಕಾರ್ಜುನ ಖರ್ಗೆ ಇದೇ ವೇಳೆ ಹೇಳಿದ್ದಾರೆ.

ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಇಪ್ಪತ್ತೈದು ಪ್ರವಾಸಿಗರು ಮತ್ತು ಸ್ಥಳೀಯ ಕಾಶ್ಮೀರಿ ವ್ಯಕ್ತಿ ಸಾವಿಗೀಡಾಗಿದ್ದಾರೆ.

ಹೈದರಾಬಾದ್: ವಿಶ್ವ ಸುಂದರಿ ಸ್ಪರ್ಧೆಗೆ ಬಜರಂಗದಳದಿಂದ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...