Homeಮುಖಪುಟಭಾರತದಿಂದ ನಿರ್ಗಮಿಸಲು ಸಮಯಾವಕಾಶ ಕೋರಿದ ಪಾಕ್ ಅಪ್ರಾಪ್ತರು; ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ

ಭಾರತದಿಂದ ನಿರ್ಗಮಿಸಲು ಸಮಯಾವಕಾಶ ಕೋರಿದ ಪಾಕ್ ಅಪ್ರಾಪ್ತರು; ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ

- Advertisement -
- Advertisement -

ಅಟ್ಟಾರಿ ಗಡಿಯ ಮೂಲಕ ಭಾರತದಿಂದ ನಿರ್ಗಮಿಸಲು ಮಾಡಿದ ಪ್ರಯತ್ನ ವಿಫಲವಾದ ನಂತರ ದೇಶ ತೊರೆಯಲು ಹೆಚ್ಚಿನ ಸಮಯ ಕೋರಿ ಪಾಕಿಸ್ತಾನದ ಮೂವರು ಅಪ್ರಾಪ್ತ ವಯಸ್ಕರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮಕ್ಕಳಾದ ಬೀಬಿ ಯಮೀನಾ, ಮುಹಮ್ಮದ್ ಮುದಾಸೀರ್ ಮತ್ತು ಮುಹಮ್ಮದ್ ಯೂಸುಫ್, ಪಾಕಿಸ್ತಾನಿ ಪ್ರಜೆ ಮುಹಮ್ಮದ್ ಫಾರೂಕ್ ಮತ್ತು ಮೈಸೂರಿನ ಮಹಿಳೆ ರಂಶಾ ಜಹಾನ್ ದಂಪತಿಗೆ ಜನಿಸಿದ ಪಾಕಿಸ್ತಾನಿ ನಾಗರಿಕರು. ಅವರ ತಾಯಿ ಮೇ 15 ರವರೆಗೆ ಸಮಯ ವಿಸ್ತರಣೆಯನ್ನು ಕೋರಿ ಮಕ್ಕಳ ಪರವಾಗಿ ಅರ್ಜಿ ಸಲ್ಲಿಸಿದರು.

ಕುಟುಂಬವು ಜನವರಿ 4, 2025 ರಂದು ಮಾನ್ಯ ವೀಸಾಗಳ ಮೇಲೆ ಭಾರತಕ್ಕೆ ಬಂದಿತು. ರಂಶಾ 2015 ರಲ್ಲಿ ಪಾಕಿಸ್ತಾನದ ಪಿಶಿನ್‌ನಲ್ಲಿ ಷರಿಯಾ ಕಾನೂನಿನಡಿಯಲ್ಲಿ ಫಾರೂಕ್ ಅವರನ್ನು ವಿವಾಹವಾದರೂ, ಅವರು ಪಾಕಿಸ್ತಾನಿ ಪೌರತ್ವವನ್ನು ಪಡೆದಿಲ್ಲ. ಆದರೆ, ಅವರ ಮಕ್ಕಳು ಪಾಕಿಸ್ತಾನಿ ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ.

ಆರಂಭದಲ್ಲಿ ಅವರಿಗೆ ಜೂನ್ 18 ರವರೆಗೆ ಮಾನ್ಯವಾಗಿರುವಂತೆ ವೀಸಾ ನೀಡಲಾಗಿತ್ತು. ಆದರೆ, ಪಹಲ್ಗಾಮ್ ದಾಳಿ ಬಳಿಕ ಭಾರತ ಸರ್ಕಾರ ವೀಸಾಗಳನ್ನು ರದ್ದುಗೊಳಿಸಿದ ನಂತರ ಏಪ್ರಿಲ್ 30 ರೊಳಗೆ ದೇಶ ತೊರೆಯುವಂತೆ ಹೇಳಲಾಯಿತು. ಅವರು ಪಾಕಿಸ್ತಾನಕ್ಕೆ ಮರಳಲು ಅಟ್ಟಾರಿ ಗಡಿಯನ್ನು ತಲುಪಿದಾಗ, ಅವರ ತಂದೆ ಬರಲಿಲ್ಲ. ಆದ್ದರಿಂದ, ಅವರು ಅನಿವಾರ್ಯವಾಗಿ ಮೈಸೂರಿಗೆ ಹಿಂತಿರುಗಬೇಕಾಯಿತು.

ಬಲವಂತದ ಗಡೀಪಾರು ಮತ್ತು ತಮ್ಮ ತಂದೆಗೆ ಸುರಕ್ಷಿತ ಹಸ್ತಾಂತರದ ಕೊರತೆಯ ಭಯವನ್ನು ಉಲ್ಲೇಖಿಸಿ, ಅರ್ಜಿದಾರರು ಪರಿಹಾರ ಕೋರಿ ಹೈಕೋರ್ಟ್ ಅನ್ನು ಸಂಪರ್ಕಿಸಿದರು. ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ, ಪ್ರಕರಣವನ್ನು ಮೇ 8 ರಂದು ವಿಚಾರಣೆಗೆ ನಿಗದಿಪಡಿಸಿದೆ.

ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಅಲ್ಪಾವಧಿ ಮತ್ತು ಸಾರ್ಕ್ ವೀಸಾಗಳನ್ನು ಹೊಂದಿರುವ ಪಾಕಿಸ್ತಾನಿ ಪ್ರಜೆಗಳು ಏಪ್ರಿಲ್ 27 ರೊಳಗೆ ಹೊರಹೋಗುವಂತೆ ಸೂಚಿಸಲಾಯಿತು, ವೈದ್ಯಕೀಯ ವೀಸಾ ಹೊಂದಿರುವವರಿಗೆ ಏಪ್ರಿಲ್ 29 ರ ಗಡುವು ವಿಧಿಸಲಾಗಿತ್ತು.

ಕಳೆದ ವಾರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕರೆ ಮಾಡಿ, ನಿಗದಿತ ಗಡುವನ್ನು ಮೀರಿ ಯಾವುದೇ ಪಾಕಿಸ್ತಾನಿ ಭಾರತದಲ್ಲಿ ಉಳಿಯದಂತೆ ನೋಡಿಕೊಳ್ಳುವಂತೆ ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.

ತೆಲಂಗಾಣ| ಅನುತ್ತೀರ್ಣದ ಭೀತಿಯಿಂದ ಆತ್ಮಹತ್ಯೆಗೆ ಶರಣಾದ ಇಬ್ಬರು ನೀಟ್ ಅಭ್ಯರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...