Homeಮುಖಪುಟಪಹಲ್ಗಾಮ್‌ ದಾಳಿ: ಮೃತ ಲೆಫ್ಟಿನೆಂಟ್ ವಿನಯ್‌ ನರ್ವಾಲ್‌ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್ ಗಾಂಧಿ

ಪಹಲ್ಗಾಮ್‌ ದಾಳಿ: ಮೃತ ಲೆಫ್ಟಿನೆಂಟ್ ವಿನಯ್‌ ನರ್ವಾಲ್‌ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್ ಗಾಂಧಿ

- Advertisement -
- Advertisement -

ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾದ 26 ಜನರಲ್ಲಿ ಒಬ್ಬರಾದ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಮನೆಗೆ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಂಗಳವಾರ (ಮೇ.6) ಭೇಟಿ ನೀಡಿದರು.

ಹರಿಯಾಣದ ಕರ್ನಾಲ್‌ನಲ್ಲಿರುವ ವಿನಯ್ ನರ್ವಾಲ್ ಮನೆಗೆ ಮಧ್ಯಾಹ್ನ 12.30ರ ಸುಮಾರಿಗೆ ತೆರಳಿದ ರಾಹುಲ್ ಗಾಂಧಿ ಕುಟುಂಬ ಸದಸ್ಯರನ್ನು ಭೇಟಿಯಾಗಿ ಅಪರಾಹ್ನ 2.15 ಸುಮಾರಿಗೆ ಅಲ್ಲಿಂದ ಹೊರಟರು. ಲೆಫ್ಟಿನೆಂಟ್ ನರ್ವಾಲ್ ಅವರ ಪತ್ನಿ ಹಿಮಾಂಶಿ, ತಂದೆ ರಾಜೇಶ್ ಕುಮಾರ್, ತಾಯಿ ಆಶಾ ದೇವಿ, ಸಹೋದರಿ ಸೃಷ್ಟಿ ಮತ್ತು ಅಜ್ಜ ಹವಾ ಸಿಂಗ್ ಅವರಿಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದಾರೆ.

ರಾಹುಲ್ ಗಾಂಧಿ ಭೇಟಿ ನೀಡಿದ ವೇಳೆ ಲೆಫ್ಟಿನೆಂಟ್ ನರ್ವಾಲ್ ಅವರ ಮನೆಯಲ್ಲಿ ಕಾಂಗ್ರೆಸ್‌ನ ರೋಹ್ತಕ್ ಸಂಸದ ದೀಪೇಂದರ್ ಹೂಡಾ ಮತ್ತು ಹರಿಯಾಣ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಉದಯ್ ಭನ್ ಹಾಜರಿದ್ದರು. ಮನೆಯ ಹೊರಗೆ ಹೆಚ್ಚಿನ ಸಂಖ್ಯೆಯ ಜನರು ಮತ್ತು ವರದಿಗಾರರು ಜಮಾಯಿಸಿದ್ದರು, ಆದರೆ ರಾಹುಲ್ ಗಾಂಧಿ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿಯಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಹೂಡಾ, “ರಾಹುಲ್ ಜಿ ನಮ್ಮ ಪ್ರೀತಿಯ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿದರು. ದುಃಖಿತ ಕುಟುಂಬಕ್ಕೆ ಸಾಂತ್ವನ ಹೇಳಿದರು. ಅವರು ಏನು ಹೇಳಿದರು ಎಂಬುದನ್ನು ಮಾಧ್ಯಮಗಳಿಗೆ ಬಹಿರಂಗಪಡಿಸುವುದಿಲ್ಲ. ನಾವು ಒಬ್ಬ ಮಗನನ್ನು, ನಮ್ಮ ರಾಷ್ಟ್ರದ ವೀರ ಸೈನಿಕನನ್ನು ಕಳೆದುಕೊಂಡಿದ್ದೇವೆ. ಸರ್ಕಾರ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಹೇಳಿದ್ದಾರೆ.

ಹರಿಯಾಣದ ಬಿಜೆಪಿ ಸರ್ಕಾರ ಮೃತ ವಿನಯ್ ನರ್ವಾಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಆರ್ಥಿಕ ನೆರವು ಮತ್ತು ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಘೋಷಿಸಿದೆ. ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಅವರ ಸಂಪುಟ ಸಹೋದ್ಯೋಗಿಗಳು ಮತ್ತು ಹಲವಾರು ಹಿರಿಯ ಬಿಜೆಪಿ ನಾಯಕರು ನರ್ವಾಲ್ ಅವರ ಹುಟ್ಟೂರು ಕರ್ನಾಲ್‌ನಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಕೇವಲ ಏಳು ದಿನಗಳ ಮೊದಲು ಲೆಫ್ಟಿನೆಂಟ್ ನರ್ವಾಲ್ ಮತ್ತು ಹಿಮಾಂಶಿ ಅವರು ಮದುವೆಯಾಗಿದ್ದರು. ಏಪ್ರಿಲ್ 21ರಂದು ಹನಿಮೂನ್‌ಗಾಗಿ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಏಪ್ರಿಲ್ 22ರಂದು ನಡೆದ ದಾಳಿಯ ನಂತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆದ ಮೊದಲ ಕ್ಲಿಪ್ ಹಿಮಾಂಶಿ ಅವರದ್ದಾಗಿತ್ತು. ಅದರಲ್ಲಿ ಅವರು “ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡು ಹಾರಿಸುವ ಮೊದಲು ಅವರ ಧರ್ಮದ ಬಗ್ಗೆ ಕೇಳಿದ್ದಾರೆ” ಎಂದು ಹೇಳಿದ್ದರು.

ಅವರ ಈ ಹೇಳಿಕೆಯನ್ನು ಮುಂದಿಟ್ಟಕೊಂಡು ಹಲವು ಮಾಧ್ಯಮಗಳು ದೇಶದ ಮುಸ್ಲಿಮರು, ವಿಶೇಷವಾಗಿ ಕಾಶ್ಮೀರಿ ಮುಸ್ಲಿಮರ ವಿರುದ್ಧ ದ್ವೇಷ ಹರಡುವ, ಮುಸ್ಲಿಮರನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸುವ ಪ್ರಯತ್ನ ಮಾಡಿತು.

ಆದರೆ, ಮೇ 1ರಂದು ಮೃತ ವಿನಯ್ ನರ್ವಾಲ್ ಅವರ 27ನೇ ವರ್ಷದ ಜನ್ಮ ದಿನಾಚರಣೆಯ ಪ್ರಯುಕ್ತ ಹರಿಯಾಣದ ಕರ್ನಾಲ್‌ನಲ್ಲಿ ಅಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದ್ದ ಪತ್ನಿ ಹಿಮಾಂಶಿ, “ಜನರು ಮುಸ್ಲಿಮರು ಮತ್ತು ಕಾಶ್ಮೀರದ ಜನತೆಯ ವಿರುದ್ಧ ಇರಬೇಕೆಂದು ನಾವು ಬಯಸುವುದಿಲ್ಲ, ನಮಗೆ ಶಾಂತಿ ಬೇಕು, ನಮಗೆ ನ್ಯಾಯ ಬೇಕು” ಎಂದಿದ್ದರು.

ಹಿಮಾಂಶಿ ಅವರು ದೇಶದ ಸಾಮರಸ್ಯದ ಪರ ನೀಡಿದ ಈ ಹೇಳಿಕೆ ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಹಿಮಾಂಶಿ ಅವರ ವೈಯುಕ್ತ ವಿಚಾರಗಳನ್ನು ಎಳೆದು ತಂದು ಅವರನ್ನು ತೇಜೋವಧೆ ಮಾಡಲಾಗುತ್ತಿದೆ.

ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರು ಸಾವಿಗೂ ಮುನ್ನ ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದರು. ಏಪ್ರಿಲ್ 19ರಂದು ಮಸ್ಸೂರಿಯಲ್ಲಿ ಅವರ ಮದುವೆ ನಡೆದಿತ್ತು ಈ ಹಿನ್ನೆಲೆ ಅವರು ಮಾರ್ಚ್ 28ರಿಂದ ರಜೆಯ ಮೇಲೆ ಮನೆಗೆ ತೆರಳಿದ್ದರು. ಏಪ್ರಿಲ್ 20ರಂದು, ಕರ್ನಾಲ್‌ನಲ್ಲಿ ಮದುವೆಯ ಆರತಕ್ಷತೆ ಬಳಿಕ, ನವ ದಂಪತಿ ಗುರುಗಾಂವ್‌ನ ಹಿಮಾಂಶಿ ಅವರ ಮನೆಗೆ ಹೋಗಿದ್ದರು. ಅಲ್ಲಿಂದ ಏಪ್ರಿಲ್ 21ರಂದು ಶ್ರೀನಗರಕ್ಕೆ ವಿಮಾನ ಹತ್ತಿದ್ದರು.

ಬಿಜೆಪಿ ಟ್ರೋಲ್‌ ಪಡೆಯ ದಾಳಿಗೆ ತುತ್ತಾದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಸೈನಿಕನ ಪತ್ನಿ; ಸೌಹಾರ್ದತೆಗೆ ಕರೆ ಕೊಟ್ಟಿದ್ದೇ ಅಪರಾಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...