Homeಮುಖಪುಟಗೌರವ್ ಗೊಗೊಯ್ 15 ದಿನಗಳ ಕಾಲ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು: ಹಿಮಂತ ಬಿಸ್ವಾ ಶರ್ಮಾ ಆರೋಪ

ಗೌರವ್ ಗೊಗೊಯ್ 15 ದಿನಗಳ ಕಾಲ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು: ಹಿಮಂತ ಬಿಸ್ವಾ ಶರ್ಮಾ ಆರೋಪ

- Advertisement -
- Advertisement -

ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರ ಪತ್ನಿ ಎಲಿಜಬೆತ್ ಕೋಲ್ಬರ್ನ್ ಪಾಕಿಸ್ತಾನ ಸೇನೆಯೊಂದಿಗೆ ‘ಉತ್ತಮ ಸಂಬಂಧ’ ಹೊಂದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶರ್ಮಾ, ಕೋಲ್ಬರ್ನ್ ಭಾರತ ಮತ್ತು ಪಾಕಿಸ್ತಾನದ ನಡುವೆ 19 ಬಾರಿ ಪ್ರಯಾಣಿಸಿದ್ದಾರೆ. ಪಾಕಿಸ್ತಾನ ಸೇನಾ ಅಧಿಕಾರಿಗಳು ನೆರೆಯ ದೇಶದಲ್ಲಿ ಅವರೊಂದಿಗೆ ಇದ್ದರು ಎಂದು ಹೇಳಿದ್ದಾರೆ.

“ಅವರು ಪಾಕಿಸ್ತಾನದಲ್ಲಿ ಕೆಲಸ ಮಾಡಿದರು, ನಂತರ ಸರ್ಕಾರೇತರ ಸಂಸ್ಥೆಯಲ್ಲಿ ಕೆಲಸ ಮಾಡಲು ದೆಹಲಿಗೆ ಬಂದರು. ಆದರೆ, ಪಾಕಿಸ್ತಾನದಿಂದ ತಮ್ಮ ಸಂಬಳವನ್ನು ಪಡೆಯುತ್ತಲೇ ಇದ್ದರು” ಎಂದು ಸಿಎಂ ಆರೋಪಿಸಿದ್ದಾರೆ.

ಗೊಗೊಯ್ ಕೂಡ ‘ವೈಯಕ್ತಿಕ ಮತ್ತು ಅಧಿಕೃತ ಸಾಮರ್ಥ್ಯದಲ್ಲಿ ಅಲ್ಲ’ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. 15 ದಿನಗಳ ಕಾಲ ಅಲ್ಲಿಯೇ ಇದ್ದರು ಎಂದು ಶರ್ಮಾ ಹೇಳಿದ್ದಾರೆ.

“ಗೋಗೊಯ್ ಪತ್ನಿ ಅವರೊಂದಿಗೆ ಇದ್ದರು; ಆದರೆ ಅವರು ಏಳು ದಿನಗಳ ನಂತರ ಹಿಂತಿರುಗಿದರು. ಆದರೆ, ಗೊಗೊಯ್ ಇನ್ನೂ ಏಳು ದಿನಗಳ ಕಾಲ ಇದ್ದರು. ಅವರು 15 ದಿನಗಳ ಕಾಲ ಪಾಕಿಸ್ತಾನದಲ್ಲಿ ಏನು ಮಾಡಿದರು ಎಂಬುದನ್ನು ವಿವರಿಸಬೇಕು” ಎಂದು ಸಿಎಂ ಪ್ರಶ್ನಿಸಿದರು.

“ಅವರು ಪಾಕಿಸ್ತಾನದಲ್ಲಿ ಏನು ಮಾಡಿದರು, ಅವರು ಪಾಕ್‌ ಸೈನ್ಯಕ್ಕೆ ನೇರವಾಗಿ ಅಥವಾ ಪರೋಕ್ಷವಾಗಿ ಸಹಾಯ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಶರ್ಮಾ ಹೇಳಿದರು.

“ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಹೋಗುವುದರ ಬಗ್ಗೆ ಪ್ರಶ್ನೆ ಎತ್ತಲಾಗುತ್ತಿದೆ. ಆದರೆ, ಅವರು ಅಧಿಕೃತ ಸಾಮರ್ಥ್ಯದಲ್ಲಿ ಅಲ್ಲಿಗೆ ಹೋಗಿದ್ದರು. ಗೊಗೊಯ್ ಅಧಿಕೃತ ನಿಯೋಗದ ಭಾಗವಾಗಿ ಅಲ್ಲಿಗೆ ಹೋಗಿದ್ದರೆ, ನಾವು ಪ್ರಶ್ನೆಗಳನ್ನು ಎತ್ತುತ್ತಿರಲಿಲ್ಲ. ಆದರೆ, ಅವರು ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ ಅಲ್ಲಿಗೆ ಹೋಗಿದ್ದರು. ಆ ದೇಶದಲ್ಲಿ ಅವರನ್ನು ಯಾರು ಸ್ವಾಗತಿಸಿದರು ಎಂದು ನಾವು ತಿಳಿದುಕೊಳ್ಳಲು ಬಯಸುತ್ತೇವೆ” ಎಂದು ಅವರು ಹೇಳಿದರು.

ಪಾಕಿಸ್ತಾನ ಪ್ರಜೆ ಅಲಿ ತೌಕೀರ್ ಶೇಖ್ ಮತ್ತು ಭಾರತದಲ್ಲಿನ ಅವರ ಪಾಲುದಾರರ ನಡುವಿನ ಸಂಪರ್ಕದ ಬಗ್ಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಯನ್ನು ಪೂರ್ಣಗೊಳಿಸಿದೆ. ಅವರು (ಗೊಗೊಯ್) ವಾಘಾ-ಅಟ್ಟಾರಿ ಗಡಿಯ ಮೂಲಕ ಹೋಗಿದ್ದಾರೆ ಎಂಬುದಕ್ಕೆ ನಮ್ಮ ಬಳಿ ಪುರಾವೆಗಳಿವೆ” ಎಂದು ಮುಖ್ಯಮಂತ್ರಿ ಹೇಳಿಕೊಂಡರು.

“ಆದರೂ, ಡೇಟಾವನ್ನು ದೃಢೀಕರಿಸಲು ನಾವು ಶಾಸನಬದ್ಧ ನಿಬಂಧನೆಗಳನ್ನು ಪೂರ್ಣಗೊಳಿಸಬೇಕಾಗಿದೆ. ಇದಕ್ಕೆ ಸಮಯ ಬೇಕಾಗುತ್ತದೆ. ನಾವು ಈಗಾಗಲೇ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಸೆಪ್ಟೆಂಬರ್ 10 ರೊಳಗೆ ನಾವು ಅದನ್ನು ಪೂರ್ಣಗೊಳಿಸುತ್ತೇವೆ” ಎಂದು ಅವರು ಹೇಳಿದರು.

“ಅಗತ್ಯ ಸ್ಥಳಗಳಿಗೆ ಎಸ್‌ಐಟಿ ಹೋಗಿದೆ… ಆದರೆ ಸಾಕ್ಷ್ಯಗಳನ್ನು ಸಂಗ್ರಹಿಸಲು ಒಂದು ವಿಧಾನವಿದೆ” ಎಂದು ಶರ್ಮಾ ಹೇಳಿದ್ದಾರೆ.

ಇಸ್ರೇಲ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದರು ತಮ್ಮ ಪಾಸ್‌ಪೋರ್ಟ್ ಕಳೆದುಕೊಂಡಿದ್ದಾರೆ. ಇದು ಮೌಲ್ಯಯುತ ದತ್ತಾಂಶ ನಷ್ಟಕ್ಕೆ ಕಾರಣವಾಗಿದೆ” ಎಂದು ಶರ್ಮಾ ಹೇಳಿದ್ದಾರೆ.

‘ಮಹಿಳಾ ಅಭ್ಯರ್ಥಿಗಳಿಗೆ ಮೀಸಲು ಕಾರ್ಯದರ್ಶಿ ಹುದ್ದೆ’: ಚುನಾವಣೆ ನಡೆಸುವಂತೆ ‘ಎಸ್‌ಸಿಬಿಎ’ಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...