Homeಮುಖಪುಟಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

ಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

- Advertisement -
- Advertisement -

ಭಾರತೀಯ ಇತಿಹಾಸದಲ್ಲಿ ಮೊದಲ ಬಾರಿಗೆ, ಇಬ್ಬರು ಮಹಿಳಾ ಅಧಿಕಾರಿಗಳು ಪ್ರಮುಖ ಮಿಲಿಟರಿ ಕಾರ್ಯಾಚರಣೆಯ ಕುರಿತು ಅಧಿಕೃತ ಪತ್ರಿಕಾಗೋಷ್ಠಿಯ ನೇತೃತ್ವ ವಹಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಮತ್ತು ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಜೊತೆಗೆ ಆಪರೇಷನ್ ಸಿಂಧೂರ ಬಗ್ಗೆಗಿನ ಮಾಹಿತಿ ನೀಡುವ ಪತ್ರಿಕಾಗೋಷ್ಠಿಯಲ್ಲಿ ಮಹತ್ವದ ಪಾತ್ರ ವಹಿಸಿದರು.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ತೀವ್ರವಾದ ಪ್ರತಿಕ್ರಿಯೆಯನ್ನು ನೀಡಿದೆ. ಮೇ 7 ರ ಮುಂಜಾನೆ, ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಕಾಶ್ಮೀರ(PoJK)ದ್ಯಂತ ಭಯೋತ್ಪಾದಕ ಶಿಬಿರಗಳ ಮೇಲೆ ಅನೇಕ ದಾಳಿಗಳನ್ನು ನಡೆಸಿದೆ. ಪಹಲ್ಗಾಮ್‌ನಲ್ಲಿ ಕೊಲ್ಲಲ್ಪಟ್ಟವರ ಪತ್ನಿಯರು ಮತ್ತು ಕುಟುಂಬಗಳ ಸ್ಮರಣಾರ್ಥ ಈ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ ಎಂದು ಹೆಸರಿಡಲಾಗಿದೆ ಎಂದು ವರದಿಯಾಗಿದೆ.

ಐತಿಹಾಸಿಕ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಬಗ್ಗೆಗಿನ ಪ್ರಮುಖ ಮಾಹಿತಿ ಇಲ್ಲಿವೆ:

ಕರ್ನಲ್ ಸೋಫಿಯಾ ಖುರೇಷಿ

ಕರ್ನಲ್ ಸೋಫಿಯಾ ಖುರೇಷಿ ಮೂಲತಃ ಗುಜರಾತ್‌ನ ವಡೋದರಾದವರು. ಸೇನಾ ಹಿನ್ನಲೆಯ ಕುಟುಂಬದಿಂದ ಬಂದಿರುವ ಖುರೇಷಿ ಅವರ ತಾತ ಭಾರತೀಯ ಸೇನೆಯಲ್ಲಿ ಸೈನಿಕರಾಗಿದ್ದರು. ಅವರ ತಂದರೆ ಕೂಡಾ ಸೈನ್ಯದಲ್ಲಿ ಧಾರ್ಮಿಕ ಶಿಕ್ಷಕರಾಗಿ ಕೆಲಸ ಮಾಡಿದ್ದರು.

ಜೈವಿಕ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಸೋಫಿಯಾ ಖುರೇಷಿ ಅವರು 1999ರಲ್ಲಿ ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯ ಮೂಲಕ ನಿಯೋಜಿತರಾಗಿ, ಭಾರತೀಯ ಸೇನೆಯ ಪ್ರಮುಖ ಶಾಖೆಯಾದ ಕಾರ್ಪ್ಸ್ ಆಫ್ ಸಿಗ್ನಲ್ಸ್‌ಗೆ ಸೇರಿದರು.

2016 ರಲ್ಲಿ, ಕರ್ನಲ್ ಖುರೇಷಿ ಅವರು ‘ಎಕ್ಸರ್ಸೈಸ್ ಫೋರ್ಸ್ 18’ ಎಂಬ ಬಹುರಾಷ್ಟ್ರೀಯ ಮಿಲಿಟರಿ ಸಮರಾಭ್ಯಾಸದಲ್ಲಿ ಭಾರತೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಲಿಕೆಗೆ ಪಾತ್ರರಾದರು. ಮಾರ್ಚ್ 2 ರಿಂದ ಮಾರ್ಚ್ 8, 2016 ರವರೆಗೆ ಪುಣೆಯಲ್ಲಿ ನಡೆದ ಈ ಸಮರಾಭ್ಯಾಸದಲ್ಲಿ ಚೀನಾ, ಅಮೆರಿಕ, ರಷ್ಯಾ, ಜಪಾನ್ ಮತ್ತು ದಕ್ಷಿಣ ಕೊರಿಯಾದಂತಹ ಪ್ರಮುಖ ದೇಶಗಳು ಸೇರಿದಂತೆ 18 ಆಸಿಯಾನ್ ದೇಶಗಳು ಭಾಗವಹಿಸಿದ್ದವು.

ಅವರು ಶಾಂತಿಪಾಲನಾ ಕಾರ್ಯಾಚರಣೆಗಳು (ಪಿಕೆಒಗಳು) ಮತ್ತು ಮಾನವೀಯ ಗಣಿ ಕ್ರಿಯೆ (ಎಚ್‌ಎಂಎ)ಯಲ್ಲಿ ತರಬೇತಿಯ ಮೇಲೆ ಕೇಂದ್ರೀಕರಿಸಿದ 40 ಸದಸ್ಯರ ಭಾರತೀಯ ತುಕಡಿಯನ್ನು ಮುನ್ನಡೆಸಿದರು. ಆ ಸಮಯದಲ್ಲಿ ಅವರು 35 ವರ್ಷ ವಯಸ್ಸಿನವರಾಗಿದ್ದು, ಭಾಗವಹಿಸುವ ಎಲ್ಲಾ ರಾಷ್ಟ್ರಗಳ ಪೈಕಿ ಏಕೈಕ ಮಹಿಳಾ ಕಮಾಂಡರ್ ಆಗಿದ್ದರು.

ಕರ್ನಲ್ ಖುರೇಷಿ ವಿಶೇಷವಾಗಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿ ಕೂಡಾ ಮಹತ್ವದ ಪಾತ್ರ ವಹಿಸಿದ್ದಾರೆ. 2006 ರಲ್ಲಿ ಅವರು ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯಕ್ಕೆ (DRC) ಮಿಲಿಟರಿ ವೀಕ್ಷಕರಾಗಿ ಹಾರ್ಡ್ ಫೀಲ್ಡ್ ಪೋಸ್ಟಿಂಗ್‌ಗಾಗಿ ಸೇರ್ಪಡೆಗೊಂಡ ಎರಡನೇ ಬ್ಯಾಚ್ ಮಹಿಳಾ ಅಧಿಕಾರಿಗಳ ಭಾಗವಾಗಿದ್ದರು. DRC ಯಲ್ಲಿ 2006 ರ ಅಧ್ಯಕ್ಷೀಯ ಚುನಾವಣೆಯ ಸಮಯದಲ್ಲಿ ಅವರು ಚುನಾವಣೆ ಮತ್ತು ಜೆಂಡರ್‌ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಸ್ಥಳಾಂತರಗೊಂಡ ಮಕ್ಕಳನ್ನು ಮತ್ತೆ ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

2010 ರಿಂದ, ಅವರು ನವದೆಹಲಿಯಲ್ಲಿರುವ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳ ಕೇಂದ್ರದೊಂದಿಗೆ ಕೆಲಸ ಮಾಡುತ್ತಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ನಾಗರಿಕ ಮಿಲಿಟರಿ ಸಮನ್ವಯದ ಕುರಿತು ಮಹಿಳೆಯರಿಗೆ ತರಬೇತಿ ನೀಡಿದ್ದಕ್ಕಾಗಿ ಶಾಂತಿಪಾಲನಾ ಕಾರ್ಯಾಚರಣೆಗಳ ಇಲಾಖೆಯಿಂದ ಅವರನ್ನು ಮೊದಲ ಮಹಿಳಾ ಬೋಧಕರಾಗಿ ನಾಮನಿರ್ದೇಶನ ಮಾಡಲಾಯಿತು.

ಅಲ್ಲದೆ, ಅವರು ವಿಶ್ವಸಂಸ್ಥೆಯ ತರಬೇತಿ ತಂಡದೊಂದಿಗೆ ಮೊದಲ ಮಹಿಳಾ ಬೋಧಕರಾಗಿ ಸೇವೆ ಸಲ್ಲಿಸಿದದಾರೆ. ಕಾಂಬೋಡಿಯನ್ ಸೈನ್ಯ ಮತ್ತು ಪೊಲೀಸರಿಗೆ ವಿಶ್ವಸಂಸ್ಥೆಗಳ ಅಂಶಗಳ ಕುರಿತು ತರಬೇತಿ ನೀಡಿದ್ದ ಅವರಿಗೆ ಕಾಂಬೋಡಿಯನ್ ಸೈನ್ಯ ಎಕ್ಸಲೆನ್ಸ್‌ ಪ್ರಮಾಣಪತ್ರ ನೀಡಿದೆ.

ಕರ್ನಲ್ ಖುರೇಷಿ ಭಾರತದೊಳಗೆ ಕೂಡಾ ಹಲವಾರು ಮಹತ್ವದ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದರು. ಪಂಜಾಬ್ ಗಡಿಯಲ್ಲಿ ನಡೆದ ಆಪರೇಷನ್ ಪರಾಕ್ರಮ್‌ನಲ್ಲಿ ಅವರು ಭಾಗವಹಿಸಿದ್ದರು. ಇದಕ್ಕಾಗಿ ಅವರು ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ (GOC-in-C) ಅವರಿಂದ ಪ್ರಶಂಸಾ ಪತ್ರವನ್ನು ಪಡೆದಿದ್ದರು.

ಈಶಾನ್ಯ ಭಾರತದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗಳ ಸಮಯದಲ್ಲಿ, ಸಂವಹನ ಕ್ಷೇತ್ರದಲ್ಲಿನ ಅವರ ಶ್ಲಾಘನೀಯ ಕೆಲಸಕ್ಕಾಗಿ ಅವರಿಗೆ SO-in-C (ಸಿಗ್ನಲ್ ಆಫೀಸರ್-ಇನ್-ಚೀಫ್) ಪ್ರಶಂಸಾ ಪತ್ರ ಗಳಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ನಡೆದ ಆಪರೇಷನ್ ಸದ್ಭಾವನಾದ ಭಾಗವಾಗಿದ್ದರು. ಸೈನ್ಯವು ಆಯೋಜಿಸಿದ್ದ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಉಪನ್ಯಾಸಗಳನ್ನು ನೀಡಿರುವ ಅವರು, ಸಮುದಾಯಿಕ ತೊಡಗಿಸಿಕೊಳ್ಳುವಿಕೆ ಮತ್ತು ಜಾಗೃತಿಗೂ ಕೊಡುಗೆ ನೀಡಿದ್ದಾರೆ.

ಕರ್ನಲ್ ಖುರೇಷಿ ಅವರು ಮೆಕನೈಸ್ಡ್ ಇನ್‌ಫೆಂಟ್ರಿಯ ಅಧಿಕಾರಿ ಮೇಜರ್ ತಾಜುದ್ದೀನ್ ಖುರೇಷಿ ಅವರನ್ನು ವಿವಾಹವಾಗಿದ್ದು, ಅವರಿಗೆ ಒಬ್ಬ ಮಗ ಇದ್ದಾರೆ.

ಮೇ 7, 2025 ರಂದು ಕರ್ನಲ್ ಖುರೇಷಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರೊಂದಿಗೆ ‘ಆಪರೇಷನ್ ಸಿಂಧೂರ’ನ ಅಧಿಕೃತ ಪತ್ರಿಕಾಗೋಷ್ಠಿ ತಂಡದ ಭಾಗವಾಗಿದ್ದರು.

ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

ಐಎಎಫ್‌ನ ಹೆಲಿಕಾಪ್ಟರ್ ಪೈಲಟ್ ಆಗಿರುವ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರಿಗೆ ಚಿಕ್ಕ ವಯಸ್ಸಿನಿಂದಲೂ ಹಾರಾಟ ನಡೆಸುವ ಕನಸಿದ್ದ ಅಧಿಕಾರಿಯಾಗಿದ್ದಾರೆ. “ವ್ಯೋಮಿಕಾ” ಎಂಬ ಹೆಸರಿನ ಅರ್ಥವೇ “ಆಕಾಶದ ಮಗಳು” ಎಂಬ ಅರ್ಥವು ಹಾರಾಟದ ಕಲೆಯ ಬಗ್ಗೆ ಅವರಲ್ಲಿ ಸಹಜ ಉತ್ಸಾಹವನ್ನು ಹುಟ್ಟುಹಾಕಿತ್ತು.

ತನ್ನ ಕನಸನ್ನು ಈಡೇರಿಸಲು ಅವರು ತಮ್ಮ ಶಾಲಾ ಜೀವನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಗೆ ಸೇರಿದ್ದರು. ನಂತರ ಎಂಜಿನಿಯರಿಂಗ್ ಪದವಿಯನ್ನು ಪಡೆದರು. ಅವರ ಕುಟುಂಬದಲ್ಲಿ ಮೊದಲಿಗರಾಗಿ ಸಶಸ್ತ್ರ ಪಡೆಯನ್ನು ಸೇರಿದರು. ಡಿಸೆಂಬರ್ 18, 2019 ರಂದು ಭಾರತೀಯ ವಾಯು ಪಡೆಯಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ ನಿಯೋಜಿಸಲಾಯಿತು.

ಅವರು ಈಗ ಅನುಭವಿ ಹೆಲಿಕಾಪ್ಟರ್ ಪೈಲಟ್ ಆಗಿದ್ದು, ಜಮ್ಮು ಕಾಶ್ಮೀರ ಮತ್ತು ಈಶಾನ್ಯ ಸೇರಿದಂತೆ ಕೆಲವು ಕಠಿಣ ಭೂಪ್ರದೇಶಗಳಲ್ಲಿ ಅವರು 2,500 ಗಂಟೆಗಳ ಹಾರಾಟವನ್ನು ಮಾಡಿದ್ದಾರೆ. ಅವರು ಬಹು ರಕ್ಷಣಾ ಕಾರ್ಯಾಚರಣೆಗಳಲ್ಲಿ ಕೂಡಾ ಪ್ರಮುಖ ಪಾತ್ರ ವಹಿಸಿದ್ದಾರೆ.

2020 ರ ನವೆಂಬರ್‌ನಲ್ಲಿ ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭಾರೀ ಮಳೆ ಮತ್ತು ಪ್ರವಾಹದ ಪರಿಹಾರ ಕಾರ್ಯಾಚರಣೆ ಅವರ ಭಾಗವಹಿಸುವಿಕೆಯಲ್ಲಿ ನಡೆಯಿತು. ಈ ಕಾರ್ಯಾಚರಣೆಗಳನ್ನು ಎತ್ತರದ ಪ್ರದೇಶಗಳಲ್ಲಿ, ಕಠಿಣ ಹವಾಮಾನದಲ್ಲಿ ಮತ್ತು ಜೀವಗಳನ್ನು ಉಳಿಸಲು ವಾಯು ಬೆಂಬಲ ನಿರ್ಣಾಯಕವಾಗಿರುವ ದೂರದ ಸ್ಥಳಗಳಲ್ಲಿ ನಡೆಸಲಾಗಿತ್ತು.

ಮೇ 7, 2025 ರಂದು ಕರ್ನಲ್ ಖುರೇಷಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರೊಂದಿಗೆ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಆಪರೇಷನ್ ಸಿಂಧೂರ’ನ ಅಧಿಕೃತ ಪತ್ರಿಕಾಗೋಷ್ಠಿ ತಂಡದ ಭಾಗವಾಗಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...