Homeಮುಖಪುಟಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

ಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

- Advertisement -
- Advertisement -

ಭಾರತೀಯ ಇತಿಹಾಸದಲ್ಲಿ ಮೊದಲ ಬಾರಿಗೆ, ಇಬ್ಬರು ಮಹಿಳಾ ಅಧಿಕಾರಿಗಳು ಪ್ರಮುಖ ಮಿಲಿಟರಿ ಕಾರ್ಯಾಚರಣೆಯ ಕುರಿತು ಅಧಿಕೃತ ಪತ್ರಿಕಾಗೋಷ್ಠಿಯ ನೇತೃತ್ವ ವಹಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಮತ್ತು ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಜೊತೆಗೆ ಆಪರೇಷನ್ ಸಿಂಧೂರ ಬಗ್ಗೆಗಿನ ಮಾಹಿತಿ ನೀಡುವ ಪತ್ರಿಕಾಗೋಷ್ಠಿಯಲ್ಲಿ ಮಹತ್ವದ ಪಾತ್ರ ವಹಿಸಿದರು.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ತೀವ್ರವಾದ ಪ್ರತಿಕ್ರಿಯೆಯನ್ನು ನೀಡಿದೆ. ಮೇ 7 ರ ಮುಂಜಾನೆ, ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಕಾಶ್ಮೀರ(PoJK)ದ್ಯಂತ ಭಯೋತ್ಪಾದಕ ಶಿಬಿರಗಳ ಮೇಲೆ ಅನೇಕ ದಾಳಿಗಳನ್ನು ನಡೆಸಿದೆ. ಪಹಲ್ಗಾಮ್‌ನಲ್ಲಿ ಕೊಲ್ಲಲ್ಪಟ್ಟವರ ಪತ್ನಿಯರು ಮತ್ತು ಕುಟುಂಬಗಳ ಸ್ಮರಣಾರ್ಥ ಈ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ ಎಂದು ಹೆಸರಿಡಲಾಗಿದೆ ಎಂದು ವರದಿಯಾಗಿದೆ.

ಐತಿಹಾಸಿಕ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಬಗ್ಗೆಗಿನ ಪ್ರಮುಖ ಮಾಹಿತಿ ಇಲ್ಲಿವೆ:

ಕರ್ನಲ್ ಸೋಫಿಯಾ ಖುರೇಷಿ

ಕರ್ನಲ್ ಸೋಫಿಯಾ ಖುರೇಷಿ ಮೂಲತಃ ಗುಜರಾತ್‌ನ ವಡೋದರಾದವರು. ಸೇನಾ ಹಿನ್ನಲೆಯ ಕುಟುಂಬದಿಂದ ಬಂದಿರುವ ಖುರೇಷಿ ಅವರ ತಾತ ಭಾರತೀಯ ಸೇನೆಯಲ್ಲಿ ಸೈನಿಕರಾಗಿದ್ದರು. ಅವರ ತಂದರೆ ಕೂಡಾ ಸೈನ್ಯದಲ್ಲಿ ಧಾರ್ಮಿಕ ಶಿಕ್ಷಕರಾಗಿ ಕೆಲಸ ಮಾಡಿದ್ದರು.

ಜೈವಿಕ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಸೋಫಿಯಾ ಖುರೇಷಿ ಅವರು 1999ರಲ್ಲಿ ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯ ಮೂಲಕ ನಿಯೋಜಿತರಾಗಿ, ಭಾರತೀಯ ಸೇನೆಯ ಪ್ರಮುಖ ಶಾಖೆಯಾದ ಕಾರ್ಪ್ಸ್ ಆಫ್ ಸಿಗ್ನಲ್ಸ್‌ಗೆ ಸೇರಿದರು.

2016 ರಲ್ಲಿ, ಕರ್ನಲ್ ಖುರೇಷಿ ಅವರು ‘ಎಕ್ಸರ್ಸೈಸ್ ಫೋರ್ಸ್ 18’ ಎಂಬ ಬಹುರಾಷ್ಟ್ರೀಯ ಮಿಲಿಟರಿ ಸಮರಾಭ್ಯಾಸದಲ್ಲಿ ಭಾರತೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಲಿಕೆಗೆ ಪಾತ್ರರಾದರು. ಮಾರ್ಚ್ 2 ರಿಂದ ಮಾರ್ಚ್ 8, 2016 ರವರೆಗೆ ಪುಣೆಯಲ್ಲಿ ನಡೆದ ಈ ಸಮರಾಭ್ಯಾಸದಲ್ಲಿ ಚೀನಾ, ಅಮೆರಿಕ, ರಷ್ಯಾ, ಜಪಾನ್ ಮತ್ತು ದಕ್ಷಿಣ ಕೊರಿಯಾದಂತಹ ಪ್ರಮುಖ ದೇಶಗಳು ಸೇರಿದಂತೆ 18 ಆಸಿಯಾನ್ ದೇಶಗಳು ಭಾಗವಹಿಸಿದ್ದವು.

ಅವರು ಶಾಂತಿಪಾಲನಾ ಕಾರ್ಯಾಚರಣೆಗಳು (ಪಿಕೆಒಗಳು) ಮತ್ತು ಮಾನವೀಯ ಗಣಿ ಕ್ರಿಯೆ (ಎಚ್‌ಎಂಎ)ಯಲ್ಲಿ ತರಬೇತಿಯ ಮೇಲೆ ಕೇಂದ್ರೀಕರಿಸಿದ 40 ಸದಸ್ಯರ ಭಾರತೀಯ ತುಕಡಿಯನ್ನು ಮುನ್ನಡೆಸಿದರು. ಆ ಸಮಯದಲ್ಲಿ ಅವರು 35 ವರ್ಷ ವಯಸ್ಸಿನವರಾಗಿದ್ದು, ಭಾಗವಹಿಸುವ ಎಲ್ಲಾ ರಾಷ್ಟ್ರಗಳ ಪೈಕಿ ಏಕೈಕ ಮಹಿಳಾ ಕಮಾಂಡರ್ ಆಗಿದ್ದರು.

ಕರ್ನಲ್ ಖುರೇಷಿ ವಿಶೇಷವಾಗಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿ ಕೂಡಾ ಮಹತ್ವದ ಪಾತ್ರ ವಹಿಸಿದ್ದಾರೆ. 2006 ರಲ್ಲಿ ಅವರು ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯಕ್ಕೆ (DRC) ಮಿಲಿಟರಿ ವೀಕ್ಷಕರಾಗಿ ಹಾರ್ಡ್ ಫೀಲ್ಡ್ ಪೋಸ್ಟಿಂಗ್‌ಗಾಗಿ ಸೇರ್ಪಡೆಗೊಂಡ ಎರಡನೇ ಬ್ಯಾಚ್ ಮಹಿಳಾ ಅಧಿಕಾರಿಗಳ ಭಾಗವಾಗಿದ್ದರು. DRC ಯಲ್ಲಿ 2006 ರ ಅಧ್ಯಕ್ಷೀಯ ಚುನಾವಣೆಯ ಸಮಯದಲ್ಲಿ ಅವರು ಚುನಾವಣೆ ಮತ್ತು ಜೆಂಡರ್‌ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಸ್ಥಳಾಂತರಗೊಂಡ ಮಕ್ಕಳನ್ನು ಮತ್ತೆ ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

2010 ರಿಂದ, ಅವರು ನವದೆಹಲಿಯಲ್ಲಿರುವ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳ ಕೇಂದ್ರದೊಂದಿಗೆ ಕೆಲಸ ಮಾಡುತ್ತಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ನಾಗರಿಕ ಮಿಲಿಟರಿ ಸಮನ್ವಯದ ಕುರಿತು ಮಹಿಳೆಯರಿಗೆ ತರಬೇತಿ ನೀಡಿದ್ದಕ್ಕಾಗಿ ಶಾಂತಿಪಾಲನಾ ಕಾರ್ಯಾಚರಣೆಗಳ ಇಲಾಖೆಯಿಂದ ಅವರನ್ನು ಮೊದಲ ಮಹಿಳಾ ಬೋಧಕರಾಗಿ ನಾಮನಿರ್ದೇಶನ ಮಾಡಲಾಯಿತು.

ಅಲ್ಲದೆ, ಅವರು ವಿಶ್ವಸಂಸ್ಥೆಯ ತರಬೇತಿ ತಂಡದೊಂದಿಗೆ ಮೊದಲ ಮಹಿಳಾ ಬೋಧಕರಾಗಿ ಸೇವೆ ಸಲ್ಲಿಸಿದದಾರೆ. ಕಾಂಬೋಡಿಯನ್ ಸೈನ್ಯ ಮತ್ತು ಪೊಲೀಸರಿಗೆ ವಿಶ್ವಸಂಸ್ಥೆಗಳ ಅಂಶಗಳ ಕುರಿತು ತರಬೇತಿ ನೀಡಿದ್ದ ಅವರಿಗೆ ಕಾಂಬೋಡಿಯನ್ ಸೈನ್ಯ ಎಕ್ಸಲೆನ್ಸ್‌ ಪ್ರಮಾಣಪತ್ರ ನೀಡಿದೆ.

ಕರ್ನಲ್ ಖುರೇಷಿ ಭಾರತದೊಳಗೆ ಕೂಡಾ ಹಲವಾರು ಮಹತ್ವದ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದರು. ಪಂಜಾಬ್ ಗಡಿಯಲ್ಲಿ ನಡೆದ ಆಪರೇಷನ್ ಪರಾಕ್ರಮ್‌ನಲ್ಲಿ ಅವರು ಭಾಗವಹಿಸಿದ್ದರು. ಇದಕ್ಕಾಗಿ ಅವರು ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ (GOC-in-C) ಅವರಿಂದ ಪ್ರಶಂಸಾ ಪತ್ರವನ್ನು ಪಡೆದಿದ್ದರು.

ಈಶಾನ್ಯ ಭಾರತದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗಳ ಸಮಯದಲ್ಲಿ, ಸಂವಹನ ಕ್ಷೇತ್ರದಲ್ಲಿನ ಅವರ ಶ್ಲಾಘನೀಯ ಕೆಲಸಕ್ಕಾಗಿ ಅವರಿಗೆ SO-in-C (ಸಿಗ್ನಲ್ ಆಫೀಸರ್-ಇನ್-ಚೀಫ್) ಪ್ರಶಂಸಾ ಪತ್ರ ಗಳಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ನಡೆದ ಆಪರೇಷನ್ ಸದ್ಭಾವನಾದ ಭಾಗವಾಗಿದ್ದರು. ಸೈನ್ಯವು ಆಯೋಜಿಸಿದ್ದ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಉಪನ್ಯಾಸಗಳನ್ನು ನೀಡಿರುವ ಅವರು, ಸಮುದಾಯಿಕ ತೊಡಗಿಸಿಕೊಳ್ಳುವಿಕೆ ಮತ್ತು ಜಾಗೃತಿಗೂ ಕೊಡುಗೆ ನೀಡಿದ್ದಾರೆ.

ಕರ್ನಲ್ ಖುರೇಷಿ ಅವರು ಮೆಕನೈಸ್ಡ್ ಇನ್‌ಫೆಂಟ್ರಿಯ ಅಧಿಕಾರಿ ಮೇಜರ್ ತಾಜುದ್ದೀನ್ ಖುರೇಷಿ ಅವರನ್ನು ವಿವಾಹವಾಗಿದ್ದು, ಅವರಿಗೆ ಒಬ್ಬ ಮಗ ಇದ್ದಾರೆ.

ಮೇ 7, 2025 ರಂದು ಕರ್ನಲ್ ಖುರೇಷಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರೊಂದಿಗೆ ‘ಆಪರೇಷನ್ ಸಿಂಧೂರ’ನ ಅಧಿಕೃತ ಪತ್ರಿಕಾಗೋಷ್ಠಿ ತಂಡದ ಭಾಗವಾಗಿದ್ದರು.

ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

ಐಎಎಫ್‌ನ ಹೆಲಿಕಾಪ್ಟರ್ ಪೈಲಟ್ ಆಗಿರುವ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರಿಗೆ ಚಿಕ್ಕ ವಯಸ್ಸಿನಿಂದಲೂ ಹಾರಾಟ ನಡೆಸುವ ಕನಸಿದ್ದ ಅಧಿಕಾರಿಯಾಗಿದ್ದಾರೆ. “ವ್ಯೋಮಿಕಾ” ಎಂಬ ಹೆಸರಿನ ಅರ್ಥವೇ “ಆಕಾಶದ ಮಗಳು” ಎಂಬ ಅರ್ಥವು ಹಾರಾಟದ ಕಲೆಯ ಬಗ್ಗೆ ಅವರಲ್ಲಿ ಸಹಜ ಉತ್ಸಾಹವನ್ನು ಹುಟ್ಟುಹಾಕಿತ್ತು.

ತನ್ನ ಕನಸನ್ನು ಈಡೇರಿಸಲು ಅವರು ತಮ್ಮ ಶಾಲಾ ಜೀವನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಗೆ ಸೇರಿದ್ದರು. ನಂತರ ಎಂಜಿನಿಯರಿಂಗ್ ಪದವಿಯನ್ನು ಪಡೆದರು. ಅವರ ಕುಟುಂಬದಲ್ಲಿ ಮೊದಲಿಗರಾಗಿ ಸಶಸ್ತ್ರ ಪಡೆಯನ್ನು ಸೇರಿದರು. ಡಿಸೆಂಬರ್ 18, 2019 ರಂದು ಭಾರತೀಯ ವಾಯು ಪಡೆಯಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ ನಿಯೋಜಿಸಲಾಯಿತು.

ಅವರು ಈಗ ಅನುಭವಿ ಹೆಲಿಕಾಪ್ಟರ್ ಪೈಲಟ್ ಆಗಿದ್ದು, ಜಮ್ಮು ಕಾಶ್ಮೀರ ಮತ್ತು ಈಶಾನ್ಯ ಸೇರಿದಂತೆ ಕೆಲವು ಕಠಿಣ ಭೂಪ್ರದೇಶಗಳಲ್ಲಿ ಅವರು 2,500 ಗಂಟೆಗಳ ಹಾರಾಟವನ್ನು ಮಾಡಿದ್ದಾರೆ. ಅವರು ಬಹು ರಕ್ಷಣಾ ಕಾರ್ಯಾಚರಣೆಗಳಲ್ಲಿ ಕೂಡಾ ಪ್ರಮುಖ ಪಾತ್ರ ವಹಿಸಿದ್ದಾರೆ.

2020 ರ ನವೆಂಬರ್‌ನಲ್ಲಿ ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭಾರೀ ಮಳೆ ಮತ್ತು ಪ್ರವಾಹದ ಪರಿಹಾರ ಕಾರ್ಯಾಚರಣೆ ಅವರ ಭಾಗವಹಿಸುವಿಕೆಯಲ್ಲಿ ನಡೆಯಿತು. ಈ ಕಾರ್ಯಾಚರಣೆಗಳನ್ನು ಎತ್ತರದ ಪ್ರದೇಶಗಳಲ್ಲಿ, ಕಠಿಣ ಹವಾಮಾನದಲ್ಲಿ ಮತ್ತು ಜೀವಗಳನ್ನು ಉಳಿಸಲು ವಾಯು ಬೆಂಬಲ ನಿರ್ಣಾಯಕವಾಗಿರುವ ದೂರದ ಸ್ಥಳಗಳಲ್ಲಿ ನಡೆಸಲಾಗಿತ್ತು.

ಮೇ 7, 2025 ರಂದು ಕರ್ನಲ್ ಖುರೇಷಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರೊಂದಿಗೆ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಆಪರೇಷನ್ ಸಿಂಧೂರ’ನ ಅಧಿಕೃತ ಪತ್ರಿಕಾಗೋಷ್ಠಿ ತಂಡದ ಭಾಗವಾಗಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...