Homeಕರ್ನಾಟಕ'ಆಪರೇಷನ್ ಸಿಂಧೂರ' ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆ: ಸಿಎಂ ಸಿದ್ದರಾಮಯ್ಯ

‘ಆಪರೇಷನ್ ಸಿಂಧೂರ’ ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕರ ತಾಣಗಳ ಮೇಲೆ ದಾಳಿ ನಡೆಸಿದ ಹಿನ್ನೆಲೆ, ಬುಧವಾರ ಕಾವೇರಿ ನಿವಾಸದಲ್ಲಿ ಸಿಎಂ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದೆ. ರಾಜ್ಯದ ಪರವಾಗಿ ಸೇನೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ ಹೇಳಿದರು.

‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಸುಮಾರು 9 ಭಯೋತ್ಪಾದಕ ನೆಲೆಗಳನ್ನು ಸೇನೆ ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ ಎಂದರು.

ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಅಮಾಯಕ ಜನರ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ. ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

ಉಗ್ರರ ಮೇಲಿನ ದಾಳಿ ಹಿನ್ನೆಲೆ ಸಂವಿಧಾನ ಉಳಿಸಿ ಅಡಿಯಲ್ಲಿ ರಾಯಚೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿದೆ ಎಂದು ಸಿಎಂ ಇದೇ ವೇಳೆ ಹೇಳಿದರು.

ಪಹಲ್ಗಾಮ್‌ನಲ್ಲಿ ಹತ್ಯಾಕಾಂಡ ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ, ಪಾಕಿಸ್ತಾನ ಅದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ ಕಾರಣದಿಂದಾಗಿ ಭಾರತಕ್ಕೆ ಬೇರೆ ಆಯ್ಕೆಗಳಿರಲಿಲ್ಲ ಎಂದು ಸಿಎಂ ಹೇಳಿದರು.

ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ. ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ, ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲಾ ದೇಶಗಳಿಗೆ ಕೂಡಾ ಎಚ್ಚರಿಕೆಯ ಗಂಟೆಯಾಗಿದೆ ಎಂದರು.

ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ. ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ. ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

‘ಭಯೋತ್ಪಾದನಾ ಕೇಂದ್ರಗಳ ನಾಶದ ಹಕ್ಕು ಬಳಸಿದ್ದೇವೆ’ | ಆಪರೇಷನ್ ಸಿಂಧೂರ್ ಸಮರ್ಥಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...