Homeಮುಖಪುಟಆಪರೇಷನ್ ಸಿಂಧೂರ| ಐದು ದೇಶಗಳಿಗೆ ಮಾಹಿತಿ ನೀಡಿದ ಭಾರತ; ನಾಗರಿಕರು, ಆರ್ಥಿಕ, ಮಿಲಿಟರಿ ನೆಲೆ ಗುರಿ...

ಆಪರೇಷನ್ ಸಿಂಧೂರ| ಐದು ದೇಶಗಳಿಗೆ ಮಾಹಿತಿ ನೀಡಿದ ಭಾರತ; ನಾಗರಿಕರು, ಆರ್ಥಿಕ, ಮಿಲಿಟರಿ ನೆಲೆ ಗುರಿ ಮಾಡಿಲ್ಲ ಎಂದು ವಿವರಣೆ

- Advertisement -
- Advertisement -

ಬುಧವಾರ (ಮೇ 7, 2025) ಬೆಳಗಿನ ಜಾವ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ವಿವಿಧ ಪ್ರದೇಶಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ನಂತರ, ಭಾರತವು ಅಮೆರಿಕ, ಯುಕೆ, ಸೌದಿ ಅರೇಬಿಯಾ, ಯುಎಇ ಮತ್ತು ರಷ್ಯಾಗೆ ದಾಳಿ ಬಗ್ಗೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ.

ನಿಖರವಾಗಿ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ಭಾರತೀಯ ವಿದೇಶಾಂಗ ಇಲಾಖೆ ತಿಳಿಸಿದೆ. ಮಾಹಿತಿ ಪಡೆದ ಎಲ್ಲಾ ಐದು ದೇಶಗಳ ನಾಯಕರು ಕಳೆದ ಎರಡು ವಾರಗಳಿಂದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ವರದಿಗಳು ಹೇಳಿವೆ.

ಭಾರತದ ಆಪರೇಷನ್ ಸಿಂಧೂರ ಹಿನ್ನೆಲೆ, ಇಂದಿಗೆ (ಬುಧವಾರ) ನಿಗದಿಯಾಗಿದ್ದ ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರ ಭಾರತ ಭೇಟಿ ಕೊಂಚ ತಡವಾಗಬಹುದು. ಆದರೆ, ಅವರು ಪ್ರವಾಸ ರದ್ದುಗೊಳಿಸಿಲ್ಲ ಎಂದು ಇಂದು ಬೆಳಿಗ್ಗೆ ಮಾಧ್ಯಮಗಳು ವರದಿ ಮಾಡಿತ್ತು. ಆದರೆ, ಅವರು ಭಾರತಕ್ಕೆ ಆಗಮಿಸಿದ ಬಗ್ಗೆ ಮಾಹಿತಿ ದೊರೆತಿಲ್ಲ.

ಕೇಂದ್ರೀಕೃತ, ನಿಖರ ದಾಳಿ

“ನಮ್ಮ ಕ್ರಮ ನಿರ್ದಿಷ್ಟ, ನಿಖರ, ವಿವೇಚನಾಭರಿತ ಮತ್ತು ಉದ್ವಿಗ್ನತೆ ಹೆಚ್ಚಿಸುವ ಉದ್ದೇಶವಲ್ಲದ್ದು. ಯಾವುದೇ ಪಾಕಿಸ್ತಾನಿ ನಾಗರಿಕ, ಅವರ ಆರ್ಥಿಕ ಅಥವಾ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ದಾಳಿ ಮಾಡಿಲ್ಲ. ನಿಖರವಾಗಿ ಗೊತ್ತಿದ್ದ ಭಯೋತ್ಪಾದಕ ನೆಲೆಗಳನ್ನು ಮಾತ್ರ ಗುರಿಯಾಗಿಸಲಾಗಿದೆ” ಎಂದು ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಆಪರೇಷನ್ ಸಿಂಧೂರ ಕುರಿತು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

“ಭಯೋತ್ಪಾದಕರು ಮತ್ತು ಅವರನ್ನು ಬೆಂಬಲಿಸುವವರ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಪಾಕಿಸ್ತಾನ ಕಳೆದ 15 ದಿನಗಳಿಂದ ಆರೋಪಗಳನ್ನು ನಿರಾಕರಿಸುತ್ತಲೇ ಬಂದಿದೆ. ಭಾರತದ ವಿರುದ್ಧ ಸುಳ್ಳು ಕಾರ್ಯಾಚರಣೆಯ ಆರೋಪಗಳನ್ನು ಮಾಡಿದೆ” ಎಂದಿದೆ.

ಭಾರತದ ಕ್ರಮಗಳ ಬಗ್ಗೆ ಎನ್‌ಎಸ್‌ಎ ಅಜಿತ್ ದೋವಲ್ ಅವರು ಅಮೆರಿಕದ ಪ್ರಭಾರ ಎನ್‌ಎಸ್‌ಎ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರೊಂದಿಗೆ ಮಾತನಾಡಿದ್ದಾರೆ ಎಂದು ವಿದೇಶಾಂಗ ಇಲಾಖೆ ಹೇಳಿದೆ.

ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಮಾರ್ಕೊ ರೂಬಿಯೊ, “ಭಾರತ ಮತ್ತು ಪಾಕಿಸ್ತಾನದ ನಡುವಿನ ಪರಿಸ್ಥಿತಿಯನ್ನು ನಾನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಸಂಘರ್ಷ ಶೀಘ್ರ ಕೊನೆಗೊಳ್ಳಲಿ ಎಂದು ಆಶಿಸುತ್ತೇವೆ. ಭಾರತ-ಪಾಕಿಸ್ತಾನದ ನಾಯಕರು ಮಾತುಕತೆ ಮೂಲಕ ಇದಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳಲಿದ್ದಾರೆ” ಎಂದಿದ್ದಾರೆ.

“ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ಇಂದು ನಿನ್ನೆಯದ್ದಲ್ಲ. ಆಗಾಗ ಅವರ ನಡುವೆ ಸಂಘರ್ಷ ಉಂಟಾಗುತ್ತದೆ ಮತ್ತು ಅವರು ಅದನ್ನು ಬಗೆಹರಿಸಿಕೊಂಡು ಮುಂದುವರಿಯುತ್ತಾರೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆಲ ದಿನಗಳ ಹಿಂದೆ ಹೇಳಿದ್ದರು. ಅದೇ ನಮ್ಮ ನಿಲುವು ಎಂದು ಮಾರ್ಕೊ ರೂಬಿಯೊ ಹೇಳಿದ್ದಾರೆ.

ಆಪರೇಷನ್ ಸಿಂಧೂರ ಬಗ್ಗೆ ಭಾರತ ಪಕ್ಕದ ಚೀನಾಗೆ ವಿವರಣೆ ನೀಡಿಲ್ಲ. ಭಾರತದ ದಾಳಿಯನ್ನು ಚೀನಾ ‘ವಿಷಾದನೀಯ’ ಎಂದಿದೆ.

“ಈಗ ನಡೆಯುತ್ತಿರುವ ಬೆಳವಣಿಗೆಯ ಬಗ್ಗೆ ನಮಗೆ ಕಳವಳವಿದೆ. ಚೀನಾ ಭಾರತ ಮತ್ತು ಪಾಕಿಸ್ತಾನ ಎರಡಕ್ಕೂ ನೆರೆಯ ರಾಷ್ಟ್ರವಾಗಿದೆ. ಚೀನಾ ಎಲ್ಲಾ ರೀತಿಯ ಭಯೋತ್ಪಾದನೆಯನ್ನು ವಿರೋಧಿಸುತ್ತದೆ. ಎರಡೂ ಕಡೆಯವರು ಸಂಯಮವನ್ನು ಕಾಪಾಡಿಕೊಳ್ಳಬೇಕು. ಪರಿಸ್ಥಿತಿಯನ್ನು ಇನ್ನಷ್ಟು ಜಟಿಲಗೊಳಿಸುವ ಕ್ರಮಗಳನ್ನು ತೆಗೆದುಕೊಳ್ಳಬಾರದು” ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರರು ಬುಧವಾರ ಬೆಳಿಗ್ಗೆ ಹೇಳಿದ್ದಾರೆ.

ಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...