Homeಅಂಕಣಗಳುಥೂತ್ತೇರಿ | ಯಾಹೂಬಲೆ ಹಾಕಿ ನರಿ ಹಿಡದಂಗೆ ಹಿಡಿತರೆ ಹುಶಾರು : ಯಾಹೂ

ಬಲೆ ಹಾಕಿ ನರಿ ಹಿಡದಂಗೆ ಹಿಡಿತರೆ ಹುಶಾರು : ಯಾಹೂ

- Advertisement -
- Advertisement -

ಭಾರತದ ಪಾರ್ಲಿಮೆಂಟಿಗೆ ಪರ್ಯಾಯವಾಗಿ, ಆಗಾಗ್ಗೆ ಉಡುಪಿಯಲ್ಲಿ ಸೇರುವ ಅಷ್ಟ ಮಠಾಧಿಪತಿಗಳ ಧರ್ಮ, ಸಂಸತ್ ಈಚೆಗೆ ಸಾರ್ವಜನಿಕರು ಕತ್ತೆ, ನಾಯಿ, ಹಂದಿ, ಮಾಂಸ ತಿನ್ನುವಂತೆ ಉಪದೇಶ ಮಾಡಿರುವ ಬಗ್ಗೆ. ವಯೋವೃದ್ಧರು, ಜ್ಞಾನವೃದ್ಧರು ಹಾಗೂ ಪ್ರಾಬ್ಲಂ ವೃದ್ಧರೂ ಆದ ಪೇಜಾವರ ಶ್ರೀಗಳನ್ನ ಮಾತನಾಡಿಸಿದರೆ ಹೇಗೆ ಎಂದು ಫೋನ್ ಮಾಡಲಾಗಿ ರಿಂಗಾಯ್ತು. ರಿಂಗ್ ಟೋನ್ ‘ಕೃಷ್ಣಾ… ನೀ ಬೇಗನೆ ಬಾರೋ, ಬೇಗನೆ ಬಂದು ಮುಖವನು ತೋರೊ.

“ಹಲೋ ಯಾರು”
“ಸ್ವಾಮೀಜಿ ನಾನು ನಿಮ್ಮ ಭಕ್ತ ಯಾಹೂ.”
“ಹಿಂದೆ ನೀವು ಫೋನ್ ಮಾಡಿದ್ದಿರಲ್ಲವೆ.”
“ಹೌದು ಸ್ವಾಮೀಜಿ, ತಮ್ಮ ದನಿ ಕೇಳಬೇಕು ಅನ್ನಿಸಿದಾಗೆಲ್ಲ ಮಾತನಾಡ್ತಿನಿ.”
“ಈಗ ಯಂತಕ್ಕೆ ಫೋನ್ ಮಾಡಿದ್ದು.”
“ಉಷಾರಾಗಿದೀರ ಸ್ವಾಮೀಜಿ.”
“ನನಗೆಂತ ಆಗಿಲ್ಲ.”
‘ಅಲ್ಲ ನಿಮ್ಮ ದನಿ ಹಾಳುಬಾವಿಯಿಂದ ಕೇಳಿದಂಗೆ ಕೇಳತಾಯಿತ್ತು. ಅದಕ್ಕೆ ಮೊನ್ನೆ ಬಂದಿದ್ರಲ್ಲಾ ಸ್ವಾಮಿ ಅವುರಿದ್ದಾರ?”
“ಆ ಇವುನು ಸ್ವಾಮಿ. ಪೊಲೀಸರಿಂದ ತಪ್ಪಿಸಿಗಳಕ್ಕೆ ಚೂಡಿದಾರ ಇಕ್ಕಂಡು ಪರಾರಿಯಾಗಿದ್ದರಲ್ಲ?”
‘ಅಂತವರಾರು ಇಲ್ಲಿ ಬಂದಿರಲಿಲ್ಲ.’
“ಆ ಇವುನು ಸ್ವಾಮೀಜಿ ಮೈದಾನದಲ್ಲಿ ಕೂತಗಂಡು ಮೈನ್ಯಲ್ಲ ಮುರುದು ಮಟ್ಟಿಕಟ್ಟತನೆ, ಸೊಟ್ಟಬಾಯಿ ಗೊತ್ತಾಗಬಾರ್ದು ಅಂತ ಗಡ್ಡಬಿಟ್ಟವನೆ.”
“ಅವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಾವು ಸಹಿಸುವುದಿಲ್ಲ.”
“ಸಹಿಸಿಕೋಬೇಕಾಗುತ್ತೆ ಸ್ವಾಮಿ.’
“ಯಂತಕ್ಕೆ.”
“ಮಾಂಸಾಹಾರಿಗಳಿಗೆ ಆತ, ಕತ್ತೆ ನಾಯಿ ಹಂದಿ ತಿನ್ನಿ ಅಂದವುನೆ.”
“ಗೋಮಾಂಸದ ಬದಲು ತಿನ್ನಿ ಅಂತ ಹೇಳಿದ್ದು.”
“ಅದವುರ ಅನುಭವದ ಮಾತ ಸಾಮೀಜಿ?”
“ಅನುಭವ ಆಗಲೇಬೇಕು ಅಂತ ಇಲ.”
“ಶಂಕರಾಚಾರ್ಯರು ಅನುಭವ ಪಡದು ಉಪದೇಶ ಮಾಡಿದ್ರಂತೆ.”
“ಅದು ಬೇರೆ ಇದು ಬೇರೆ.”
“ಎರಡೂ ಒಂದೆ ಬಾಬಾ ರಾಮದೇವ ಆಯುರ್ವೇದ ಪಂಡಿತರು ಯೋಗಪಟು ದೇಹದ ಅಂಗಾಂಗವೃದ್ಧಿಗೆ ಕೆಲವು ಪದಾರ್ಥನೂ ಮಾರ್ತರೆ. ಆ ಮಹಾಮಹಿಮರು ಕತ್ತೆ, ನಾಯಿ ಹಂದಿ, ತಿನ್ನಿ ಅನ್ನಬೇಕಾದ್ರೆ ಸುಮ್ಮಸುಮ್ಮನೆ ಹೇಳಿಲ್ಲ ಸ್ವಾಮಿ”
‘ಗೋವನ್ನು ಉಳಿಸಬೇಕಾದರೆ ಹಾಗೆ ಮಾಡಿ ಅಂತ ಹೇಳಿದ್ದು ‘ಅದರಿಂದ ಜಾಗತಿಕ ತಾಪಮಾನ ಕಡಮೆಯಾಗುತ್ತ?”
“ಹೌದು ಅವರು ಹಾಗೆ ಹೇಳಿದ್ದು.”
“ನಮ್ಮ ಜನ ಈಗಾಗ್ಲೆ ಕತ್ತೆ ನಾಯಿ ಹಂದಿ ತಿಂತಾಯಿದಾರೆ ಸ್ವಾಮಿ.”
“ಕತ್ತೆ ತಿನ್ನುವುದುಂಟ!?”
“ಮಲೆನಾಡು ಭಾಗದಲ್ಲಿ ಒಬ್ಬ ಹೋಟ್ಳು ಮಾಡಿಕೊಂಡು ಕಡವೆ ಮಾಂಸ ಅಂತ ಹೇಳಿ ಕತ್ತೆ ಮಾಂಸ ತಿನ್ನುಸ್ತಿದ್ದ. ಕತ್ತೆ ಖಾಲಿಯಾದ ಮೇಲೆ ಸಿಕ್ಕಿದ ಸ್ವಾಮಿ.”
“ಹಾಗಾದರೆ ಅವನು ಕೆಟ್ಟವನು.“
“ಮತ್ತೆ ರಾಮದೇವ ಕತ್ತೆ ತಿನ್ನಿ ಅಂದರೆ ನೀವು ಕೆಟ್ಟವನು ಅಂತಿರಿ?”
“ಪ್ರಾಣಿಗಳಿಗೆ ನಿಮ್ಮಷ್ಟೇ ಬದುಕುವ ಹಕ್ಕುಂಟು.”
“ಇದ್ಯಾವ ಸೀಮೆ ಮಾತು ಸ್ವಾಮಿ, ತಿನ್ನಿ ಅನ್ನಾರು ನೀವೆಯ, ಪ್ರಾಣಿಗಳು ನಿಮ್ಮಂಗೆ ಬದುಕಬೇಕು ಅನ್ನೋರು ನೀವೆಯ, ನಾಯಿ ತಿನ್ನಿ ಅಂತ ರಾಮದೇವ ಹೇಳಬೇಕಾದ್ರೆ ಅವುರು ತಿಂದಿದ್ದರೆ ಸ್ವಾಮಿ.”
“ಮಾತಿಗೆ ಹೇಳಿದ್ದನ್ನ ನೀವು ನಿಜ ಅಂತ ಹೇಳುವುದೆ?”
“ಸ್ವಾಮೀಜಿ. ನಮ್ಮ ಜನ ಆಗ್ಗೆ ನಾಯಿ ತಿಂತಾ ಅವುರೆ. ಬೆಂಗಳೂರಲ್ಲಿ ತಿಂತರೆ. ತಮುಳು ನಾಡಲ್ಲಯ ನಾಯಿ ಮಾಂಸ ರಪ್ತು ಮಾಡುವಾಗ್ಲೆ ಸಿಕ್ಕಿ ಬಿದ್ರು”
“ಜನಗಳು ಇಷ್ಟೊಂದು ಕೆಟ್ಟುಹೋಗಿದ್ದಾರೆ ಒಹ್ ದೇವರೇ”
“ಹೌದು ಸ್ವಾಮಿ ಜಾಸ್ತಿ ಮಾತಾಡಿದ್ರೇ, ಸ್ವಾಮಿಗಳನೂ ಬಲೆಹಾಕಿ ನರಿ ಹಿಡದಂಗೆ ಹಿಡಿದು ಕುಯ್ಕೊಂಡು ತಿಂತಾರೆ. ಹುಶಾರು ಒಬ್ಬೊಬ್ಬರೆ ತಿರುಗಾಡುಬೇಡಿ.”
“ನೀವು ಮಾಂಸಾಹಾರಿಗಳ?’
“ಹೌದು, ನನಗೆ ಹಂದಿ ತುಂಬ ಪ್ರಿಯವಾದ ಪ್ರಾಣಿ. ಅದನುಕಂಡ್ರೆ ನಡೆದಾಡೋ ಕೇಕ್ ತರ ಕಾಣುತ್ತೆ ಸ್ವಾಮಿ.”
“ಅಸಹ್ಯವಾಗಿ ಮಾತನಾಡಬೇಡಿ.”
“ಕೃಷ್ಣನ ವರಾಹವತಾರಕ್ಕೆ ನೀವು ಗೌರವಕೊಡ್ತಿರಿ ತಾನೆ?”
“ಹೌದು, ಪರಮಾತ್ಮನ ಆ ಅವತಾರದಿಂದಲೇ ಈ ಭೂಮಿ ಉಳಿದದ್ದು.”
“ಪರಮಾತ್ಮ ವರಾಹ ಅವತಾರ ಎತ್ತಿದ ಕಾರಣಕ್ಕೆ ವರಾಹದ ಮಾಂಸಕ್ಕೆ ಅಷ್ಟೊಂದು ರುಚಿ ಬಂದಿದ್ದು. ನನಗನ್ನಿಸಿದಂಗೆ ಈ ಜಗತ್ತಿನಲ್ಲಿ ಯಾವ ಪ್ರಾಣಿ ಮಾಂಸನೂ ಹಂದಿ ಮಾಂಸದಷ್ಟು ರುಚಿಯಾಗಿಲ್ಲ, ಯಾಕೆ ಅಂದ್ರೆ ಅದು ಕೃಷ್ಣಪರಮಾತ್ಮನ ಅವತಾರ.”
“ಅವತಾರವನ್ನು ಗೌರವಿಸಿ ಪೂಜೆ ಮಾಡಬೇಕು, ಅದನ್ನು ತಿನ್ನಲಿಕ್ಕೆ ಹೋಗಬಾರ್ದು”
“ಸ್ವಾಮೀಜಿ, ಕೃಷ್ಣ ಪರಮಾತ್ಮ ವರಾಹ ಅವತಾರ ತಾಳಿದ್ದ ಕಾರಣಕ್ಕೆ ಹಂದಿ ಮಾಂಸದಲ್ಲಿ ಯಾವುದೇ ಪ್ರಾಣಿ ಮಾಂಸದಲ್ಲಿ ಇರದೆ ಇರುವ ಥೈಮನ್ ಅಂತ ಒಂದಂಶ ಇದೆ. ಇದಕ್ಕೆ ಔಷಧಿ ಗುಣ ಇದೆ. ಮಲೆನಾಡು ಜನ ಕಡ್ಡಾಯವಾಗಿ ತಿಂತರೆ. ಬಯಲುಸೀಮೆ ಜನ ಗೊತ್ತಿಲ್ದೆ ತಿಂತಾರೆ. ಒಂದು ಕೆ.ಜಿ ತಿಂದ್ರೂ ಏನೂ ಆಗಲ್ಲ. ಈಚೆಗೆ ನಾನು ಎರಡು ಕೆ.ಜಿ ತಿಂದಿದ್ದೆ, ಆದ್ರೂ ಆರಾಮಾಗಿದ್ದೆ. ನಿದ್ರೆ ವಿಷಯದಲ್ಲಿ ಸ್ವಲ್ಪ ಹಂದಿ ನಡವಳಿಕೆ ಇರುತ್ತೆ ಅಷ್ಟೇ, ನೀವು ಗೋವುಗಳನ್ನ ಮಾಂಸಾಹಾರಿಗಳಿಂದ ಕಾಪಾಡಬೇಕಾದ್ರೆ, ವರಾಹ ಫಾರಂ ಮಾಡಿ, ಇಲ್ಲಿಂದ್ಲೆ ವಿತರಿಸಿದರೆ ಗೋ ಸಂತತಿ ವೃದ್ಧಿಯಾಗುತ್ತೆ.”
“ಯಂತ ಹೇಳುವುದು ನೀವು, ನಾವು ಹಂದಿ ಸಾಕುವುದ?”
“ಕೃಷ್ಣನ್ನೆ ಸಾಕ್ತಾಯಿದ್ದಿರಿ. ಅವನ ಅವತಾರ ಸಾಕಕ್ಕಾಗಲ್ಲವೆ. ಇದು ಕೂಡ ಗೋರಕ್ಷಣೆಯ ಒಂದು ಚಳವಳಿ. ವರಾಹ ಚಳವಳಿ.”
“ಗೋ ರಕ್ಷಣೆಗೆ, ಯಂತ ಚಳವಳಿ ಮಾಡಬೇಕು ಅಂತ ನಮಗೆ ಗೊತ್ತುಂಟು. ನೀವು ಹೇಯವಾದ ಸಲಹೆಗಳನ್ನು ಕೊಡುವುದು ಬೇಡ.”
“ಸ್ವಾಮೀಜಿ ಇನ್ನೊಂದು ವಿಷಯ. ನಿಮ್ಮ ಶಿಷ್ಯನಂತಿರೊ ಮೋದಿ ಈಗಾಗ್ಲೆ ಎರಡನೇ ಅವಧಿಗೆ ಪ್ರಧಾನಿಯಾಗವುರೆ. ಅವುರಿಂದ್ಲೆ ಗೋಹತ್ಯೆ ನಿಷೇಧ ಸಾಧ್ಯವಾಗಿಲ್ಲ. ಯಾಕಂದ್ರೆ ಗೋಮಾಂಸ ರಪ್ತಿನ ವರ್ತಕರೆಲ್ಲಾ ಬಿ.ಜೆ.ಪಿಗಳಂತೆ.”
“ಅದು ನಮಗೆ ಬೇಡ. ಗೋಹತ್ಯೆ ನಿಲ್ಲಬೇಕಷ್ಟೆ.”
“ಆಮೇಲೆ, ಗಂಗೆ ಶುದ್ಧೀಕರಣದ ಮಾತಾಡ್ತಿರಿ. ಮೋದಿ ಮೊದಲ ಬಾರಿಗೆ ಬಂದಾಗ್ಲಿಂದ ಇಲ್ಲಿವರಿಗೂ ಶುದ್ಧಿ ಮಾಡಕ್ಕಾಗಿಲ್ಲ. ಆಗದೆಯಿರೊ ಕೆಲಸ ಹೇಳ್ತಿರಿ. ಆಮೇಲೆ ಇನ್ನೊಂದು ವಿಷಯ ನಿಮ್ಮ ಧರ್ಮನೂ ಮುಸ್ಲಿಮ್ ಧರ್ಮನೂ ಒಂದೇ ಮಾಡಕ್ಕೊಂಟಿದ್ದಿರಂತಲ್ಲಾ?”
“ಯಾರು ಹೇಳಿದ್ದು?”
“ನೀವೇ ಹೇಳಿದ್ದಿರಿ. ಮಸೀದಿಗೆ ಹೇಗೆ ಮಹಿಳೆ ಪ್ರವೇಶ ಇಲ್ಲವೊ ಹಾಗೆ ಅಯ್ಯಪ್ಪನ ದೇವಸ್ಥಾನಕ್ಕೆ ಮಹಿಳೆ ಹೋಗುವುದು ಬೇಡ ಅಂತೆ. ಅಂತೂ ಮುಸ್ಲಿಂ ಧರ್ಮ ನಿಮಗೆ ಆದರ್ಶ ಆಯ್ತು. ಯಾ ಹಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...