Homeಮುಖಪುಟಗಡಿಯಾಚೆಗಿನ ಭಯೋತ್ಪಾದಕರು, ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದ 'ಆಪರೇಷನ್ ಸಿಂಧೂರ' ಪತ್ರಿಕಾಗೋಷ್ಠಿ!

ಗಡಿಯಾಚೆಗಿನ ಭಯೋತ್ಪಾದಕರು, ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದ ‘ಆಪರೇಷನ್ ಸಿಂಧೂರ’ ಪತ್ರಿಕಾಗೋಷ್ಠಿ!

- Advertisement -
- Advertisement -

ಪಹಲ್ಗಾಮ್ ದಾಳಿಯ ವಿರುದ್ಧ ನಡೆದ ಆಪರೇಷನ್ ಸಿಂಧೂರ ಬಗ್ಗೆ ವಿವರಣೆ ನೀಡಲು ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಭಾಗವಹಿಸಿದ್ದರು. ಆಪರೇಷನ್ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಭಾರತೀಯ ಸೇನೆ ಗಡಿಯಾಚೆಗಿನ ಭಯೋತ್ಪಾದಕರಿಗೂ, ಗಡಿಯೊಳಗಿನ ಕೋಮುವಾದಿಗಳಿಗೂ ಸರಿಯಾಗಿ ಉತ್ತರಿಸಿದೆ. ಗಡಿಯಾಚೆಗಿನ ಭಯೋತ್ಪಾದಕರು

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮೂಲಕ ಭಯೋತ್ಪಾದಕರು ಜಮ್ಮು ಕಾಶ್ಮೀರದಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಕೋಮು ಸಾಮರಸ್ಯವನ್ನು ಭಂಗಗೊಳಲು ಬಯಸಿದ್ದರು ಎಂದು ಹೇಳಿದ್ದಾರೆ. ಅಂದರೆ, ಶಾಂತಿ, ಅಭಿವೃದ್ಧಿ ಜೊತೆಗೆ ಕೋಮು ಸಾಮರಸ್ಯವನ್ನು ಭಂಗಗೊಳಿಸಬೇಕು ಎಂಬುವುದು ಭಯೋತ್ಪಾದಕರ ಉದ್ದೇಶ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಒಂದು ಕ್ಷಣ ಆಲೋಚಿಸಿ, ಪಹಲ್ಗಾಮ್ ದಾಳಿಯ ನಂತರ ಈ ದೇಶದ ಕೋಮು ಸಾಮರಸ್ಯವನ್ನು ಹಾಳು ಮಾಡಲು ಪ್ರಯತ್ನಿಸಿ ಭಯೋತ್ಪಾದಕರ ಉದ್ದೇಶವನ್ನು ಈಡೇರಿಸಲು ಪ್ರಯತ್ನಿಸಿದವರು ಯಾರು? ಅಭಿವೃದ್ಧಿ ಹೊಂದುತ್ತಿರುವ ಕಾಶ್ಮೀರದ ಪ್ರವಾಸೋದ್ಯಮಕ್ಕೆ ಪೆಟ್ಟು ನೀಡಲು ಕರೆ ನೀಡದವರು ಯಾರು? ಅಲ್ಲಿಗೆ ಪ್ರವಾಸ ಹೋಗದಂತೆ ಕಾಶ್ಮೀರವನ್ನು ಬಹಿಷ್ಕರಿಸಲು ಕರೆ ನೀಡಿದವರು ಯಾರು? ದೇಶದ ಹಲವು ರಾಜ್ಯಗಳಲ್ಲಿರುವ ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದವರು ಯಾರು?

ಮೇಲಿನ ನನ್ನ ”ಯಾರು” ಎಂಬ ಪ್ರಶ್ನೆಗೆ ಉತ್ತರ ”ಯಾರು” ಎಂಬುವುದು ಇಡೀ ದೇಶಕ್ಕೆ ಗೊತ್ತಿದೆ. ಈ ಬಗ್ಗೆ ಹೆಚ್ಚೇನೂ ಹೇಳಬೇಕಾಗಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ವ್ಯಕ್ತಿಗಳ ವಾರಗಳ ಹಿಂದಿನ ಪೋಸ್ಟ್‌ಗಳನ್ನು ಕೆದಕಿದರೆ, ಭಯೋತ್ಪಾದಕರ ಉದ್ದೇಶವನ್ನು ಸಫಲಗೊಳಿಸಲು ಪ್ರಯತ್ನಿಸಿದವರ ದುಷ್ಕರ್ಮಗಳು ನಮ್ಮ ಕಣ್ಣ ಮುಂದೆಯೆ ಬರುತ್ತದೆ.

ಪಹಲ್ಗಾಮ್ ದಾಳಿ ನಡೆದಾಗ ದೇಶ ಒಗ್ಗಟ್ಟಾಗಿರಬೇಕು ಎಂದು, ಅದು ಭಯೋತ್ಪಾದಕರ ಉದ್ದೇಶ ಇಲ್ಲಿನ ಸೌಹಾರ್ದ ಹಾಳು ಮಾಡುವುದೆ ಆಗಿದೆ ಎಂದು ಸಾರಿ ಸಾರಿ ಹೇಳಿದವರ ಮೇಲೆ ದಾಳಿ ಮಾಡಲಾಯಿತು. ಸ್ವತಃ ಸಂತ್ರಸ್ತ ಸೈನಿಕರೊಬ್ಬರ ಪತ್ನಿಯ ಮೇಲೆ ಕೂಡಾ ಅಶ್ಲೀಲವಾಗಿ ದಾಳಿ ಮಾಡಲಾಯಿತು. ನಮ್ಮ ಸರ್ಕಾರ ಅದರ ಬಗ್ಗೆ ಇನ್ನೂ ಚಕಾರ ಎತ್ತದೆ ಮೌನಪಾಲಿಸಿದೆ.

ಆದರೆ, ಇಂದು ಆಪರೇಷನ್ ಸಿಂಧೂರದ ಬಗ್ಗೆ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಸೇನೆ ಈ ಎಲ್ಲಾ ದುಷ್ಕರ್ಮಿಗಳಿಗೆ ಸರಿಯಾಗಿ ಉತ್ತರಿಸಿದೆ.

ಯಾವುದೇ ಮಿಲಿಟರಿ ಕಾರ್ಯಾಚರಣೆಗಳು ನಡೆದರೆ ಅವುಗಳ ಸುದ್ದಿಗಳನ್ನು ಸಾಂಪ್ರದಾಯಿಕವಾಗಿ ನೀಡುತ್ತಾ ಬಂದಿರುವುದು ಭಾರತ ಸರ್ಕಾರದ ರಕ್ಷಣಾ ಇಲಾಖೆ (MoD) ಮತ್ತು ಸೇನೆಯ ವಕ್ತಾರರು. ಆದರೆ, ಭಾರತೀಯ ಸೇನೆ ಈ ಬಾರಿ, ಬದಲಾವಣೆ ಮಾಡಿ, ಗಡಿಯಾಚೆಗಿನ ಭಯೋತ್ಪಾದಕರಿಗೆ ಮತ್ತು ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದೆ.

ಪಹಲ್ಗಾಮ್ ದಾಳಿಯ ನಂತರ ಅದರ ಪಾಪವನ್ನು ಭಾರತ ಸರ್ವ ಮುಸ್ಲಿಮರು ಹೊರಬೇಕು ಎಂಬಂತೆ ಪ್ರಚಾರ ಮಾಡಿದ ಕೋಮುವಾದಿಗಳಿಗೆ ಉತ್ತರವಾಗಿ ಸೇನೆ ಒಬ್ಬ ಮುಸ್ಲಿಂ ಮಹಿಳಾ ಸೇನಾಧಿಕಾರಿಯ ಕೈಯಲ್ಲೆ ಘಟನೆಯ ಬಗ್ಗೆ ವಿವರಗಳನ್ನು ನೀಡುವಂತೆ ಮಾಡಿತು. ಇದೀಗ ಇಡೀ ದೇಶ ಈ ಮಹಿಳೆ ಯಾರು, ಅವರು ಏನಾಗಿದ್ದರು ಎಂದು ಹುಡುಕುತ್ತಾ, ಅವರ ಸಾಧನೆ, ಧೈರ್ಯ ಮತ್ತು ಅವರ ದೇಶಪ್ರೇಮವನ್ನು ಕೊಂಡಾಡುವಂತೆ ಭಾರತೀಯ ಸೇನೆ ಮಾಡಿದೆ. ಗಡಿಯೊಳಗಿನ ಕೋಮುವಾದಿಗಳಿಗೆ ಇದಕ್ಕಿಂತ ಹೆಚ್ಚಿನ ಉತ್ತರ ಏನು ಬೇಕು ಹೇಳಿ.

ಅಷ್ಟೆ ಅಲ್ಲದೆ, ನಮ್ಮ ಗಡಿ ಪ್ರವೇಶಿಸಿ, ತಮ್ಮ ಕುಟುಂಬದೊಂದಿಗೆ ವಿಹರಿಸುತ್ತಿದ್ದ ಪ್ರವಾಸಿಗರನ್ನು, ಮಹಿಳೆಯರ ಕಣ್ಣು ಮುಂದೆಯೆ ಅವರ ಪತಿಯರನ್ನು ಕೊಂದ ಭಯೋತ್ಪಾದರ ಕೇಂದ್ರಗಳನ್ನು ನಾಶ ಮಾಡಿ, ಆ ಸಾಧನೆಯನ್ನು ಇಬ್ಬರು ಮಹಿಳೆಯರು ವಿವರಿಸುವಂತೆ ಮಾಡಿ, ಭಾರತೀಯ ಸೇನೆ ಭಯೋತ್ಪಾದರಿಗೆ ನಾವು ಹೆದರಿಲ್ಲ, ನಾವು ಗಟ್ಟಿಯಾಗಿದ್ದೇವೆ ಎಂಬ ಸಂದೇಶ ರವಾನಿಸಿದೆ.

ಅಷ್ಟಾಗಿಯೂ, ಪಹಲ್ಗಾಮ್ ದಾಳಿ ನಡೆಯಲು ಕಾರಣವಾದ ಭದ್ರತಾ ಲೋಪಕ್ಕೆ ಯಾರು ಕಾರಣ? ಅದಕ್ಕೆ ಹೊಣೆ ಯಾರು? ಸೇನೆಯಲ್ಲಿ ನೇಮಕಾತಿ ಯಾಕೆ ಆಗುತ್ತಿಲ್ಲ? ಎಂಬ ಪ್ರಶ್ನೆಯನ್ನು ನಾವು ಕೇಳುತ್ತಲೆ ಇರಬೇಕು. ಜೊತೆಗೆ ಈ ದೇಶದ ಬ್ರಾತೃತ್ವದ ಪರಂಪರೆಯನ್ನು ಒಡೆಯಲು ಬರುವವರ ಹುನ್ನಾರವನ್ನು ನಾವು ಒಡೆಯುತ್ತಲೆ ಇರಬೇಕು. ಯಾಕೆಂದರೆ ಈ ದೇಶ ಎಲ್ಲರದೂ. ಅಲ್ಲವೆ? ಗಡಿಯಾಚೆಗಿನ ಭಯೋತ್ಪಾದಕರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆಪರೇಷನ್ ಸಿಂಧೂರ | ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಭಾರತದ ಎಡಪಕ್ಷಗಳ ಒತ್ತಾಯ

ಆಪರೇಷನ್ ಸಿಂಧೂರ | ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಭಾರತದ ಎಡಪಕ್ಷಗಳ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...