Homeಮುಖಪುಟತೆಲಂಗಾಣ | ಪೊಲೀಸರ ಮುಂದೆ ಶರಣಾದ 14 ನಕ್ಸಲರು

ತೆಲಂಗಾಣ | ಪೊಲೀಸರ ಮುಂದೆ ಶರಣಾದ 14 ನಕ್ಸಲರು

- Advertisement -
- Advertisement -

ಮೇ 6, ಮಂಗಳವಾರದಂದು ಸಿಪಿಐ (ಮಾವೋವಾದಿ)ನ ವಿವಿಧ ಕೇಡರ್‌ಗಳ ಹದಿನಾಲ್ಕು ಸದಸ್ಯರು ತೆಲಂಗಾಣದ ಭದ್ರಾದ್ರಿ-ಕೊಥಗುಡೆಮ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಗಳ ಮುಂದೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಶರಣಾದವರಲ್ಲಿ ಹನ್ನೊಂದು ಮಂದಿ ಪುರುಷರು ಮತ್ತು ಉಳಿದವರು ಮಹಿಳೆಯರು. ಅವರಲ್ಲಿ ಹದಿಮೂರು ಮಂದಿ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯವರು ಮತ್ತು ಒಬ್ಬರು ತೆಲಂಗಾಣದ ಭದ್ರಾದ್ರಿ-ಕೊಥಗುಡೆಮ್ ಜಿಲ್ಲೆಯ ಚರ್ಲಾ ಮಂಡಲದವರು ಎಂದು ಭದ್ರಾದ್ರಿ-ಕೊಥಗುಡೆಮ್ ಪೊಲೀಸ್ ವರಿಷ್ಠಾಧಿಕಾರಿ ಬಿ. ರೋಹಿತ್ ರಾಜು ತಿಳಿಸಿದ್ದಾರೆ.

ಶರಣಾದ ಮಾವೋವಾದಿಗಳಲ್ಲಿ ಇಬ್ಬರು ಪ್ರದೇಶ ಸಮಿತಿ ಸದಸ್ಯರು (ಎಸಿಎಂಗಳು), ನಾಲ್ವರು ಪಕ್ಷದ ಸದಸ್ಯರು ಮತ್ತು ಗ್ರಾಮ ಸಮಿತಿ ಸದಸ್ಯರು (ವಿಸಿಎಂಗಳು), ಮೂವರು ಕ್ರಾಂತಿಕಾರಿ ಪೀಪಲ್ಸ್ ಕಮಿಟಿ (ಆರ್‌ಪಿಸಿ) ಸದಸ್ಯರು ಮತ್ತು ಕ್ರಾಂತಿಕಾರಿ ಆದಿವಾಸಿ ಮಹಿಳಾ ಸಂಘಟನೆಯ (ಕೆಎಎಂಎಸ್‌) ಒಬ್ಬರು ಸದಸ್ಯ ಸೇರಿದ್ದಾರೆ ಎಂದು ವರದಿಗಳು ಹೇಳಿವೆ.

ನಕ್ಸಲಿಸಂನ ಹಾದಿಯನ್ನು ತೊರೆದು ಶರಣಾದರು ತಮ್ಮ ಕುಟುಂಬಗಳೊಂದಿಗೆ ಶಾಂತಿಯುತ ಜೀವನ ನಡೆಸುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ಶರಣಾದ ಮಾವೋವಾದಿಗಳಿಗೆ ‘ಆಪರೇಷನ್ ಚೆಯುತ’ ಅಡಿಯಲ್ಲಿ ಪುನರ್ವಸತಿ ಕಲ್ಪಿಸಲಾಗುವುದು ಎಂದಿದ್ದಾರೆ.

ಶರಣಾದ ಮಾವೋವಾದಿಗಳಿಗೆ ಪೊಲೀಸ್ ವರಿಷ್ಠಾಧಿಕಾರಿ ಪ್ರೋತ್ಸಾಹ ಧನ ವಿತರಿಸಿದ್ದಾರೆ. ಪುನರ್ವಸತಿ ಕಾರ್ಯಕ್ರಮದಡಿಯಲ್ಲಿ ಜೀವನೋಪಾಯಕ್ಕಾಗಿ ಸರ್ಕಾರಿ ಸೌಲಭ್ಯಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಹತ್ತಿರದ ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಶರಣಾಗುವಂತೆ ಮಾವೋವಾದಿಗಳಿಗೆ ಮನವಿ ಮಾಡಿದ್ದಾರೆ.

ಏಪ್ರಿಲ್ ಆರಂಭದಲ್ಲಿ, ಸಿಪಿಐ (ಮಾವೋವಾದಿ)ನ 86 ಸದಸ್ಯರು ಭದ್ರಾದ್ರಿ ಕೊಥಗುಡೆಮ್ ಜಿಲ್ಲಾ ಪೊಲೀಸರ ಮುಂದೆ ಶರಣಾಗಿದ್ದರು. ಅವರಲ್ಲಿ 82 ಮಂದಿ ಭದ್ರಾದ್ರಿ-ಕೊಥಗುಡೆಮ್ ಜಿಲ್ಲೆಯವರಾಗಿದ್ದರೆ, ನಾಲ್ವರು ಮುಲುಗು ಜಿಲ್ಲೆಯವರು.

ಪಹಲ್ಗಾಮ್ ದಾಳಿ ಕುರಿತು ಪೋಸ್ಟ್: ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧದ ದೂರು ವಜಾಗೊಳಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...