Homeಕರ್ನಾಟಕಜನಾರ್ದನ ರೆಡ್ಡಿ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿ: ವಿ.ಎಸ್.ಉಗ್ರಪ್ಪ

ಜನಾರ್ದನ ರೆಡ್ಡಿ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿ: ವಿ.ಎಸ್.ಉಗ್ರಪ್ಪ

- Advertisement -
- Advertisement -

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನ್ಯಾಯಾಲಯ ದೋಷಿಗಳು ಎಂದು ಘೋಷಿಸಿರುವ ಶಾಸಕ ಜನಾರ್ದನ ರೆಡ್ಡಿ ಮತ್ತು ಇತರರ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಆಗ್ರಹಿಸಿದರು.

ಬುಧವಾರ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಅರಿಯರ್ಸ್ ಆಫ್ ಲ್ಯಾಂಡ್ ರೆವಿನ್ಯೂ ಎಂದು ಜನಾರ್ದನ ರೆಡ್ಡಿ ಅವರ ಅಕ್ರಮ ಗಣಿಗಾರಿಕೆ ಲೂಟಿಯನ್ನು ಪರಿಗಣಿಸಿ, ಇದರ ಹಿಂದೆ ಇರುವ ಎಲ್ಲರ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಇದರಿಂದ ಲಾಭ ಪಡೆದ ಅಂದಿನ ರಾಜ್ಯ ಸರ್ಕಾರ ಮುನ್ನಡೆಸುತ್ತಿದ್ದವರು, ಅಧಿಕಾರಿಗಳ ವಿರುದ್ದವೂ ಕ್ರಮ ತೆಗೆದುಕೊಳ್ಳಬೇಕು” ಎಂದರು.

“ನ್ಯಾಯಾಲದ ತೀರ್ಪಿನಿಂದ ಯಾರೆಲ್ಲ ಭ್ರಷ್ಟ, ದುರಂಹಕಾರಿ ರಾಜಕಾರಣಿಗಳು ಇದ್ದಾರೆ, ಅವರು ಒಂದಲ್ಲ ಒಂದು ದಿನ ಕಾನೂನಿನ ಚೌಕಟ್ಟಿನಲ್ಲಿ ಶಿಕ್ಷೆಗೆ ಗುರಿಯಾಗುತ್ತಾರೆ ಎಂಬ ಸಂದೇಶ ಇಡೀ ದೇಶಕ್ಕೆ ಹೋಗಿದೆ” ಎಂದು ಹೇಳಿದರು.

29 ಲಕ್ಷ ಮೆಟ್ರಿಕ್ ಟನ್ ಅದಿರನ್ನು ಜನಾರ್ದನ ರೆಡ್ಡಿ ಮತ್ತು ತಂಡ ಅಕ್ರಮವಾಗಿ ವಿದೇಶಕ್ಕೆ ರಫ್ತು ಮಾಡಿತ್ತು. ಇದರ ಮೌಲ್ಯ 884 ಕೋಟಿ ರೂಪಾಯಿ ಎಂದು ನ್ಯಾಯಾಧೀಶರೇ ಹೇಳಿದ್ದಾರೆ. ಈಗ ಅವರಿಗೆ ಶಿಕ್ಷೆಯಾಗಿದೆ. ಇವರ ಜೊತೆಯಿದ್ದ ಬಿಜೆಪಿ ನಾಯಕರು, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಬೇಕು ಎಂದು ಉಗ್ರಪ್ಪ ಒತ್ತಾಯಿಸಿದರು.

2000 ದಿಂದ 2006ರ ನಡುವೆ ಅಕ್ರಮ ಗಣಿಗಾರಿಕೆ ನಡೆದಾಗ ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿತ್ತು. ಅಂದು ಅರಣ್ಯ ಸಚಿವರಾಗಿದ್ದ ಚೆನ್ನಿಗಪ್ಪ ಅವರು ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಆ ಪತ್ರವನ್ನು ಇಟ್ಟುಕೊಂಡು ನಾನು ಸದನದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ದ ಸಿಬಿಐ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದೆ ಎಂದು ನೆನೆದರು.

ಆನಂತರ, ಅಂದಿನ ಸರ್ಕಾರ ಜಸ್ಟೀಸ್ ಯು.ಎಲ್.ಭಟ್ ನೇತೃತ್ವದ ತನಿಖಾ ಆಯೋಗ ನೇಮಕ ಮಾಡಿತು. ಈ ಆಯೋಗವು ಸಿಬಿಐ ತನಿಖೆಗೆ ನೀಡಬೇಕು ಎಂದು ಶಿಫಾರಸ್ಸು ಮಾಡಿತು. ನಾವು ತನಿಖೆಗೆ ಒತ್ತಾಯ ಮಾಡಿದಾಗ ಲೋಕಾಯುಕ್ತ ತನಿಖೆಗೆ ನೀಡಲಾಯಿತು. ಈ ಹೋರಾಟದ ಹಿಂದೆ ಇರುವುದು ಕಾಂಗ್ರೆಸ್ ಪಕ್ಷ, ಕೆ.ಸಿ.ಕೊಂಡಯ್ಯ, ನಾನು ಈ ಹೋರಾಟದ ಹಿಂದೆ ಇದ್ದೆವು. ಆಂದ್ರ ಪ್ರದೇಶದ ಮಲ್ಪನಗುಡಿ, ಕರ್ನಾಟಕದ ತುಮಟಿ, ವಿಠಲಾಪುರ ಮಧ್ಯದ ಸುಮಾರು 32 ಕಿಮೀ ಭೂಭಾಗದಲ್ಲಿರುವ ಉತೃಷ್ಟವಾದ 29 ಲಕ್ಷ ಮೆಟ್ರಿಕ್ ಟನ್ ಅದಿರನ್ನು ಜನಾರ್ದನ ರೆಡ್ಡಿ ಮತ್ತು ತಂಡ ಅಕ್ರಮವಾಗಿ ವಿದೇಶಕ್ಕೆ ರಫ್ತು ಮಾಡಿತ್ತು ಎಂದು ಉಲ್ಲೇಖಿಸಿದರು.

ಅಕ್ರಮ ಗಣಿಗಾರಿಕೆ ಬಗ್ಗೆ ಅತ್ಯಂತ ನಿಖರವಾದ ವರದಿಯನ್ನು ಮಾಡಿದ್ದು ಕಾಂಗ್ರೆಸ್ ಪಕ್ಷ. ನನ್ನ ನೇತೃತ್ವದ ಸತ್ಯಶೋದನಾ ಸಮಿತಿ 2008ರಲ್ಲಿ ಇದನ್ನು ಬಿಡುಗಡೆಗೊಳಿಸಿತ್ತು. ಲೋಕಾಯುಕ್ತದವರು ನನ್ನ ವರದಿಯನ್ನು ಇಟ್ಟುಕೊಂಡು ಪ್ರಾಥಮಿಕ ವರದಿ ನೀಡಿದರು. ಕಾಂಗ್ರೆಸ್ ಪಕ್ಷ ರಿಪಬ್ಲಿಕ್ ಬಳ್ಳಾರಿಯ ವಿರುದ್ದ ಪಾದಯಾತ್ರೆ ನಡೆಸಿ ದೊಡ್ಡ ಹೋರಾಟ ಮಾಡಿತ್ತು. ಯಡಿಯೂರಪ್ಪ ಅವರು ಅಕ್ರಮ ಗಣಿಗಾರಿಕೆ ವಿಚಾರವಾಗಿ ಮಾತನಾಡುವಾಗ ಅಕ್ರಮ ನಡೆದಿಲ್ಲ ಎಂದು ಹೇಳುತ್ತಿದ್ದರು ಎಂದರು.

ಈ ಅಕ್ರಮ ಗಣಿಗಾರಿಕೆ ಹಿಂದೆ ಇದ್ದಿದ್ದೆ ಅಂದಿನ ರಾಜ್ಯ ಸರ್ಕಾರ. ಅಂದು ಶ್ರೀರಾಮುಲು ಅವರು ಅರಣ್ಯ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದ ಬಗ್ಗೆ ದೂರು ದಾಖಲಾಗಿತ್ತು. ಅಂದು ಅಧಿಕಾರದಲ್ಲಿ ಇದ್ದುಕೊಂಡೆ ಅನ್ಯಾಯ ಎಸಗಿದವರಿಗೆ ಇಂದು ತಕ್ಕ ಶಿಕ್ಷೆಯಾಗಿದೆ. ನಾನು ತಯಾರು ಮಾಡಿದ ಸತ್ಯಶೋಧನಾ ವರದಿಯಲ್ಲಿ ಜರ್ನಾರ್ದನ ರೆಡ್ಡಿ ಮತ್ತು ತಂಡದ ಸಂಪೂರ್ಣ ಅಕ್ರಮ, ಅನ್ಯಾಯಗಳನ್ನು ಎಳೆ, ಎಳೆಯಾಗಿ ಬಿಚ್ಚಿಟ್ಟಿದ್ದೇನೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಪ್ರಕಾಶ್ ರಾಥೋಡ್ ಸೇರಿದಂತೆ ಪ್ರಮುಖರು ಇದ್ದರು.

ಕೊಪ್ಪಳ| ಹೇರ್‌ಕಟ್ ಮಾಡುವಂತೆ ದಲಿತರು ಕೇಳಿದ್ದಕ್ಕೆ ಅಂಗಡಿ ಮುಚ್ಚಿದ ಕ್ಷೌರಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...