Homeಕರ್ನಾಟಕಜನಾರ್ದನ ರೆಡ್ಡಿ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿ: ವಿ.ಎಸ್.ಉಗ್ರಪ್ಪ

ಜನಾರ್ದನ ರೆಡ್ಡಿ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿ: ವಿ.ಎಸ್.ಉಗ್ರಪ್ಪ

- Advertisement -
- Advertisement -

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನ್ಯಾಯಾಲಯ ದೋಷಿಗಳು ಎಂದು ಘೋಷಿಸಿರುವ ಶಾಸಕ ಜನಾರ್ದನ ರೆಡ್ಡಿ ಮತ್ತು ಇತರರ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಆಗ್ರಹಿಸಿದರು.

ಬುಧವಾರ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಅರಿಯರ್ಸ್ ಆಫ್ ಲ್ಯಾಂಡ್ ರೆವಿನ್ಯೂ ಎಂದು ಜನಾರ್ದನ ರೆಡ್ಡಿ ಅವರ ಅಕ್ರಮ ಗಣಿಗಾರಿಕೆ ಲೂಟಿಯನ್ನು ಪರಿಗಣಿಸಿ, ಇದರ ಹಿಂದೆ ಇರುವ ಎಲ್ಲರ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಇದರಿಂದ ಲಾಭ ಪಡೆದ ಅಂದಿನ ರಾಜ್ಯ ಸರ್ಕಾರ ಮುನ್ನಡೆಸುತ್ತಿದ್ದವರು, ಅಧಿಕಾರಿಗಳ ವಿರುದ್ದವೂ ಕ್ರಮ ತೆಗೆದುಕೊಳ್ಳಬೇಕು” ಎಂದರು.

“ನ್ಯಾಯಾಲದ ತೀರ್ಪಿನಿಂದ ಯಾರೆಲ್ಲ ಭ್ರಷ್ಟ, ದುರಂಹಕಾರಿ ರಾಜಕಾರಣಿಗಳು ಇದ್ದಾರೆ, ಅವರು ಒಂದಲ್ಲ ಒಂದು ದಿನ ಕಾನೂನಿನ ಚೌಕಟ್ಟಿನಲ್ಲಿ ಶಿಕ್ಷೆಗೆ ಗುರಿಯಾಗುತ್ತಾರೆ ಎಂಬ ಸಂದೇಶ ಇಡೀ ದೇಶಕ್ಕೆ ಹೋಗಿದೆ” ಎಂದು ಹೇಳಿದರು.

29 ಲಕ್ಷ ಮೆಟ್ರಿಕ್ ಟನ್ ಅದಿರನ್ನು ಜನಾರ್ದನ ರೆಡ್ಡಿ ಮತ್ತು ತಂಡ ಅಕ್ರಮವಾಗಿ ವಿದೇಶಕ್ಕೆ ರಫ್ತು ಮಾಡಿತ್ತು. ಇದರ ಮೌಲ್ಯ 884 ಕೋಟಿ ರೂಪಾಯಿ ಎಂದು ನ್ಯಾಯಾಧೀಶರೇ ಹೇಳಿದ್ದಾರೆ. ಈಗ ಅವರಿಗೆ ಶಿಕ್ಷೆಯಾಗಿದೆ. ಇವರ ಜೊತೆಯಿದ್ದ ಬಿಜೆಪಿ ನಾಯಕರು, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಬೇಕು ಎಂದು ಉಗ್ರಪ್ಪ ಒತ್ತಾಯಿಸಿದರು.

2000 ದಿಂದ 2006ರ ನಡುವೆ ಅಕ್ರಮ ಗಣಿಗಾರಿಕೆ ನಡೆದಾಗ ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿತ್ತು. ಅಂದು ಅರಣ್ಯ ಸಚಿವರಾಗಿದ್ದ ಚೆನ್ನಿಗಪ್ಪ ಅವರು ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಆ ಪತ್ರವನ್ನು ಇಟ್ಟುಕೊಂಡು ನಾನು ಸದನದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ದ ಸಿಬಿಐ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದೆ ಎಂದು ನೆನೆದರು.

ಆನಂತರ, ಅಂದಿನ ಸರ್ಕಾರ ಜಸ್ಟೀಸ್ ಯು.ಎಲ್.ಭಟ್ ನೇತೃತ್ವದ ತನಿಖಾ ಆಯೋಗ ನೇಮಕ ಮಾಡಿತು. ಈ ಆಯೋಗವು ಸಿಬಿಐ ತನಿಖೆಗೆ ನೀಡಬೇಕು ಎಂದು ಶಿಫಾರಸ್ಸು ಮಾಡಿತು. ನಾವು ತನಿಖೆಗೆ ಒತ್ತಾಯ ಮಾಡಿದಾಗ ಲೋಕಾಯುಕ್ತ ತನಿಖೆಗೆ ನೀಡಲಾಯಿತು. ಈ ಹೋರಾಟದ ಹಿಂದೆ ಇರುವುದು ಕಾಂಗ್ರೆಸ್ ಪಕ್ಷ, ಕೆ.ಸಿ.ಕೊಂಡಯ್ಯ, ನಾನು ಈ ಹೋರಾಟದ ಹಿಂದೆ ಇದ್ದೆವು. ಆಂದ್ರ ಪ್ರದೇಶದ ಮಲ್ಪನಗುಡಿ, ಕರ್ನಾಟಕದ ತುಮಟಿ, ವಿಠಲಾಪುರ ಮಧ್ಯದ ಸುಮಾರು 32 ಕಿಮೀ ಭೂಭಾಗದಲ್ಲಿರುವ ಉತೃಷ್ಟವಾದ 29 ಲಕ್ಷ ಮೆಟ್ರಿಕ್ ಟನ್ ಅದಿರನ್ನು ಜನಾರ್ದನ ರೆಡ್ಡಿ ಮತ್ತು ತಂಡ ಅಕ್ರಮವಾಗಿ ವಿದೇಶಕ್ಕೆ ರಫ್ತು ಮಾಡಿತ್ತು ಎಂದು ಉಲ್ಲೇಖಿಸಿದರು.

ಅಕ್ರಮ ಗಣಿಗಾರಿಕೆ ಬಗ್ಗೆ ಅತ್ಯಂತ ನಿಖರವಾದ ವರದಿಯನ್ನು ಮಾಡಿದ್ದು ಕಾಂಗ್ರೆಸ್ ಪಕ್ಷ. ನನ್ನ ನೇತೃತ್ವದ ಸತ್ಯಶೋದನಾ ಸಮಿತಿ 2008ರಲ್ಲಿ ಇದನ್ನು ಬಿಡುಗಡೆಗೊಳಿಸಿತ್ತು. ಲೋಕಾಯುಕ್ತದವರು ನನ್ನ ವರದಿಯನ್ನು ಇಟ್ಟುಕೊಂಡು ಪ್ರಾಥಮಿಕ ವರದಿ ನೀಡಿದರು. ಕಾಂಗ್ರೆಸ್ ಪಕ್ಷ ರಿಪಬ್ಲಿಕ್ ಬಳ್ಳಾರಿಯ ವಿರುದ್ದ ಪಾದಯಾತ್ರೆ ನಡೆಸಿ ದೊಡ್ಡ ಹೋರಾಟ ಮಾಡಿತ್ತು. ಯಡಿಯೂರಪ್ಪ ಅವರು ಅಕ್ರಮ ಗಣಿಗಾರಿಕೆ ವಿಚಾರವಾಗಿ ಮಾತನಾಡುವಾಗ ಅಕ್ರಮ ನಡೆದಿಲ್ಲ ಎಂದು ಹೇಳುತ್ತಿದ್ದರು ಎಂದರು.

ಈ ಅಕ್ರಮ ಗಣಿಗಾರಿಕೆ ಹಿಂದೆ ಇದ್ದಿದ್ದೆ ಅಂದಿನ ರಾಜ್ಯ ಸರ್ಕಾರ. ಅಂದು ಶ್ರೀರಾಮುಲು ಅವರು ಅರಣ್ಯ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದ ಬಗ್ಗೆ ದೂರು ದಾಖಲಾಗಿತ್ತು. ಅಂದು ಅಧಿಕಾರದಲ್ಲಿ ಇದ್ದುಕೊಂಡೆ ಅನ್ಯಾಯ ಎಸಗಿದವರಿಗೆ ಇಂದು ತಕ್ಕ ಶಿಕ್ಷೆಯಾಗಿದೆ. ನಾನು ತಯಾರು ಮಾಡಿದ ಸತ್ಯಶೋಧನಾ ವರದಿಯಲ್ಲಿ ಜರ್ನಾರ್ದನ ರೆಡ್ಡಿ ಮತ್ತು ತಂಡದ ಸಂಪೂರ್ಣ ಅಕ್ರಮ, ಅನ್ಯಾಯಗಳನ್ನು ಎಳೆ, ಎಳೆಯಾಗಿ ಬಿಚ್ಚಿಟ್ಟಿದ್ದೇನೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಪ್ರಕಾಶ್ ರಾಥೋಡ್ ಸೇರಿದಂತೆ ಪ್ರಮುಖರು ಇದ್ದರು.

ಕೊಪ್ಪಳ| ಹೇರ್‌ಕಟ್ ಮಾಡುವಂತೆ ದಲಿತರು ಕೇಳಿದ್ದಕ್ಕೆ ಅಂಗಡಿ ಮುಚ್ಚಿದ ಕ್ಷೌರಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...