Homeಕರ್ನಾಟಕಕೋಮು ದ್ವೇಷ ಭಾಷಣದ ಆರೋಪ: ಪ್ರಕರಣ ರದ್ದು ಕೋರಿ ಶಾಸಕ ಹರೀಶ್‌ ಪೂಂಜ ಅರ್ಜಿ

ಕೋಮು ದ್ವೇಷ ಭಾಷಣದ ಆರೋಪ: ಪ್ರಕರಣ ರದ್ದು ಕೋರಿ ಶಾಸಕ ಹರೀಶ್‌ ಪೂಂಜ ಅರ್ಜಿ

- Advertisement -
- Advertisement -

ಬೆಂಗಳೂರು: ತನ್ನ ವಿರುದ್ಧ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ‘ಕೋಮು ದ್ವೇಷ ಹರಡಿದ ಆರೋಪದಡಿ  ದಾಖಲಾಗಿರುವ ಎಫ್‌ಐಆರ್‌ ಮತ್ತು ಈ ಸಂಬಂಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್‌ ಪೂಂಜ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಕುರಿತ ರಿಟ್‌ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವಂತೆ ಹರೀಶ್‌ ‍ಪೂಂಜ ಪರ ಹೈಕೋರ್ಟ್‌ ವಕೀಲ ಪ್ರಸನ್ನ ದೇಶಪಾಂಡೆ ಅವರು, ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಇದು ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣವಾಗಿದ್ದು, ಈ ಅರ್ಜಿ ವಿಚಾರಣೆ, ಈ ನ್ಯಾಯಪೀಠದ ವ್ಯಾಪ್ತಿಗೆ ಒಳಪಡುವುದಿಲ್ಲ’ ಎಂಬುದನ್ನು ಮೌಖಿಕವಾಗಿ ವ್ಯಕ್ತಪಡಿಸಿದ್ದಲ್ಲದೆ, ಮುಖ್ಯ ನ್ಯಾಯಮೂರ್ತಿಗಳ ಆದೇಶಕ್ಕೆ ಒಳಪಟ್ಟು ಅರ್ಜಿಯನ್ನು ಇದೇ 8ಕ್ಕೆ ವಿಚಾರಣೆಗೆ ಪಟ್ಟಿ ಮಾಡುವಂತೆ ರಿಜಿಸ್ಟ್ರಿಗೆ ಆದೇಶಿಸಿತು.

ಪ್ರಕರಣದ ಹಿನ್ನೆಲೆ

ಮೇ 3ರಂದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ನೂತನ ದೇವಸ್ಥಾನದ ಬ್ರಹ್ಮಕಲಶ (ಉದ್ಘಾಟನೆ) ಕಾರ್ಯಕ್ರಮದಲ್ಲಿ  ಸ್ಥಳೀಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಮುಸ್ಲಿಮರ ವಿರುದ್ದ ಕೋಮುದ್ವೇಷದ ಭಾಷಣ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಸಂವಿಧಾನದ ಅಡಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಜನಪ್ರತಿನಿಧಿಯೇ ಶಾಂತಿ, ಸಾಮರಸ್ಯದ ಊರಿನಲ್ಲಿ  ಮತೀಯದ್ವೇಷ ಕಾರಿರುವುದಕ್ಕೆ ಗ್ರಾಮದ ಜನರು ಬೇಸರ ವ್ಯಕ್ತಪಡಿಸಿದ್ದರು.

ತೆಕ್ಕಾರು ಗ್ರಾಮದ ಭಟ್ರಬೈಲಿನ ದೇವರಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿದ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮವನ್ನು 2025 ಏಪ್ರಿಲ್ 25ರಿಂದ ಮೇ 3ರವರೆಗೆ ಆಯೋಜಿಸಲಾಗಿತ್ತು. ಕೊನೆಯ ದಿನವಾದ ಶನಿವಾರ (ಮೇ.3) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಹರೀಶ್ ಪೂಂಜಾ, ಬ್ಯಾರಿ ಸಮುದಾಯದವರ (ಸ್ಥಳೀಯ ಮುಸ್ಲಿಮರು) ವಿರುದ್ಧ ದ್ವೇಷ ಭಾಷಣ ಮಾಡಿದ್ದರು.

“ಬ್ಯಾರಿಗಳ (ಮುಸ್ಲಿಮರ) ಆಕ್ರಮಣದಿಂದ ಅಯೋಧ್ಯೆಯ ರಾಮ ಮಂದಿರ ಮಸೀದಿಯಾದ ಬಳಿಕ ನಾವು 500 ವರ್ಷ ಕಾದೆವು. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು.. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು ಎಂದಾಗ ಅರ್ಥ ಮಾಡಿಕೊಳ್ಳಲಿಲ್ಲ. ನಾವು 500 ವರ್ಷ ಕಾದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದೆವು.” ಎಂದು ಪೂಂಜಾ ಹೇಳಿದ್ದರು.

“ತೆಕ್ಕಾರಿನಲ್ಲಿ ಒಬ್ಬನೇ ಒಬ್ಬ ಬ್ಯಾರಿ (ಮುಸ್ಲಿಂ) ಇಲ್ಲದಿದ್ದಾಗಲೂ ನಮ್ಮ ಹಿರಿಯರು ಗೋಪಾಲಕೃಷ್ಣ ದೇವರನ್ನು ನಂಬಿಕೊಂಡು ಬಂದಿದ್ದರು. ಬಳಿಕ ಬ್ಯಾರಿಗಳ ಅಥವಾ ಟಿಪ್ಪುವಿನ ಆಕ್ರಮಣದಿಂದ ಗೋಪಾಲಕೃಷ್ಣ ದೇವಸ್ಥಾನ ಧ್ವಂಸಗೊಂಡು ನೆಲದಡಿಗೆ ಹೋದರೂ, ನಾವು ಹಿಂದೂ ಸಮಾಜ ನಿದ್ದೆಯಲ್ಲಿದ್ದೆವು, ನಾವು ಎದ್ದಿರಲಿಲ್ಲ. ಕಾಲಚಕ್ರ ಉರುಳಿ, ಉರುಳಿ ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠೆ ಆದ ಮರುವರ್ಷ, ಅಂದರೆ 2025ರಲ್ಲಿ ತೆಕ್ಕಾರಿನಲ್ಲಿ ಇರುವ ಅತ್ಯಲ್ಪ ಹಿಂದೂ ಸಮಾಜ ಒಂದಾಗಿ ಗೋಪಾಲಕೃಷ್ಣ ದೇವರನ್ನು ಪ್ರತಿಷ್ಠೆ ಮಾಡುವ ಸಂಕಲ್ಪ ಬಂತಲ್ವ ಅದಕ್ಕೆ ಗೋಪಾಲಕೃಷ್ಣ ದೇವರ ಪ್ರೇರಣೆ ಇದೆ” ಎಂದು ಅವರು ತಿಳಿಸಿದ್ದರು.

“ಇತಿಹಾಸವನ್ನು ಮತ್ತೊಮ್ಮೆ ನೀವು ಮರೆತ್ತದ್ದೇ ಆದರೆ, ನಿಮ್ಮ ಊರಿನಲ್ಲಿರುವುದು 150 ಹಿಂದೂಗಳ ಮನೆಗಳು, ಒಂದು ಸಾವಿರಕ್ಕಿಂತಲೂ ಅಧಿಕ ಇರುವುದು ಬ್ಯಾರಿಗಳು. ಇನ್ನು 10 ವರ್ಷ ಕಳೆದರೆ 1,200 ಇರುವ ಬ್ಯಾರಿಗಳ ಸಂಖ್ಯೆ 600ಕ್ಕೆ ಇಳಿಯುವುದಿಲ್ಲ. ಇನ್ನು 10 ವರ್ಷ ಕಳೆದರೆ ತೆಕ್ಕಾರಿನ ಬ್ಯಾರಿಗಳ ಸಂಖ್ಯೆ 5 ಸಾವಿರ ಆಗುತ್ತದೆ. 5 ಸಾವಿರದಿಂದ 10 ಸಾವಿರ ಆದರೂ, ಇಲ್ಲಿರುವ ಹಿಂದೂ ಸಮಾಜ ಸನಾತನವಾಗಿ ಸಾವಿರ ವರ್ಷ ಗೋಪಾಲಕೃಷ್ಣ ದೇವರನ್ನು ಆರಾಧನೆ ಮಾಡುತ್ತೇವೆ ಎನ್ನುವ ಸಂಕಲ್ಪ ಮಾಡುವ ದಿನ, ಇಂದಿನ ಬ್ರಹ್ಮಕಲಶೋತ್ಸವದ ದಿನ” ಎಂದಿದ್ದರು.

“ಬ್ಯಾರಿಗಳಲ್ಲಿ ಎಷ್ಟು ಜಾತಿ ಇದೆ ಎಂದು ಕೇಳಿದರೆ ಅಂಕಿ ಅಂಶ ಹೇಳುತ್ತದೆ, ಮೊನ್ನೆ ಸಿದ್ದರಾಮಯ್ಯ ಜನಗಣತಿ ಮಾಡಿದರು, ಅದರಲ್ಲಿ ಬ್ಯಾರಿಗಳಲ್ಲಿ ಜಾತಿ ಇದೆಯಾ ಕೇಳಿದರೆ, ಜಾತಿ ಇಲ್ಲ ಎಂದಿದ್ದಾರೆ. ಬ್ಯಾರಿಗಳಲ್ಲಿ ಕನಿಷ್ಠ 70-74 ಜಾತಿಗಳಿವೆ. ಆದರೆ, ನಮಗೆ ಯಾವ ಜಾತಿ ಎಂದು ಯಾರಿಗೂ ಗೊತ್ತಿಲ್ಲ. ನಮಗೆ ಗೊತ್ತಿರುವುದು ಏನು ಎಂದರೆ, ಉಸ್ಮಾನಾಕ, ಅಬ್ದುಲ್ಲಾಕ, ಇಬ್ರಾಹಿಂ ಎಲ್ಲಾ ಬ್ಯಾರಿ ಎಂದೇ ಗೊತ್ತಿರುವುದು. ಆದರೆ, ಹಿಂದೂ ಸಮಾಜದಲ್ಲಿ ನಾವು ಆ ರೀತಿಯಲ್ಲ. ಅವನು ಯಾರು..ಅವನು ಬ್ರಾಹ್ಮಣ, ಇವನು ಯಾರು..ಅವನು ಶೆಟ್ಟಿ, ಅವನು ಯಾರು.. ಅವನು ಬಿಲ್ಲವ, ಇವನು ಯಾರು..ಅವನು ಗೌಡ, ಇವನು ಯಾರು..ಅವನು ಕುಲಾಲ, ಈ ರೀತಿಯ ಜಾತಿ-ಜಾತಿ ನಮಗೆ ಮಾತ್ರ ಗೊತ್ತಿರುವುದಲ್ಲ, ಬ್ಯಾರಿಗಳಿಗೂ ಗೊತ್ತಿದೆ” ಎಂದು ಅವರು ತಿಳಿಸಿದ್ದರು.

“ಒಂದು ಸರ್ಕಾರಿ ಜಾಗವಿದೆ, ಅದನ್ನು ಒಬ್ಬ ಬ್ಯಾರಿ ಅತಿಕ್ರಮಣ ಮಾಡಿ ಅಡಿಕೆ ಗಿಡ ನೆಟ್ಟಿದ್ದಾನೆ. ನೀವು ಏನಾದರು ಮಾಡಿ ಸಹಕಾರ ಮಾಡಿದರೆ ನಮಗೆ ದೇವಸ್ಥಾನ ಮಾಡಬಹುದು ಎಂದು ತೆಕ್ಕಾರಿನವರು ಹೇಳಿದ್ದರು. ಎಲ್ಲಾ ಯುವಕರು ಒಂದು ನೆನಪು ಇಟ್ಟುಕೊಳ್ಳಿ ಆವತ್ತು ಇದ್ದಿದ್ದು ಬಿಜೆಪಿ ಸರ್ಕಾರ. ಆವತ್ತು ನಾನು ತಹಶೀಲ್ದಾರ್‌ಗೆ ಕರೆ ಮಾಡಿ ಮರುದಿನ ಹೋಗಿ ಸ್ಥಳ ಮಹಜರು ಮಾಡಿ ವರದಿ ಕೊಡಿ ಎಂದು ಹೇಳಿದ್ದೆ. ನಾನು ಹೇಳಿದ ಮರುದಿನ ತಹಶೀಲ್ದಾರ್ ಬಂದು ಸ್ಥಳ ತನಿಖೆ ಮಾಡಿ ವರದಿ ಕೊಟ್ಟರು. ವರದಿ ಕೊಟ್ಟ ಬಳಿಕ ಡಿಸಿಯಾದ ರವಿ ಅವರಿಗೆ ಆ ಜಾಗದಲ್ಲಿ ಗೋಪಾಲಕೃಷ್ಣ ದೇವಸ್ಥಾನ ಇದೆ ಎಂದು ನಾನು ಹೇಳಿದ್ದೆ. ತಕ್ಷಣ ಆ ಜಾಗದ ಆರ್‌ಟಿಸಿಯನ್ನು ಗೋಪಾಲಕೃಷ್ಣ ದೇವರ ಹೆಸರಿಗೆ ಮಾಡಿ ಕೊಡಿ ಎಂದಿದ್ದೆ. 25 ಸೆಂಟ್ಸ್ ಜಾಗ ಗೋಪಾಲಕೃಷ್ಣ ದೇವರ ಹೆಸರಿಗೆ ಆಯ್ತು. ಇದು ನಾನು, ಡಿಸಿ ಸೇರಿದಂತೆ ಯಾರ ಸಾಧನೆಯೂ ಅಲ್ಲ, ಇತಿಹಾಸದಲ್ಲಿ ಈ ಮೊದಲು ಈ ರೀತಿ ಅಗಿಲ್ಲ, ಮುಂದೆಯೂ ಆಗಲ್ಲ” ಎಂದು ಪೂಂಜಾ ಹೇಳಿದ್ದರು.

“ಇಲ್ಲಿನ ಕಂತ್ರಿ (ದುಷ್ಟ) ಬ್ಯಾರಿಗಳು ಟ್ಯೂಬ್‌ಲೈಟ್ ಪುಡಿಗೈದಾಗ, ಸಂಖ್ಯೆ ಕಡಿಮೆ ಇದ್ದರೂ ಜನ ಸಾಗರ ಇರುವ ಗ್ರಾಮದ ರೀತಿ ತೆಕ್ಕಾರಿನವರು ಯಾರೂ ಎದೆಗುಂದಲಿಲ್ಲ. ಅಣ್ಣ ದಿನ ಬೆಳಗಾದರೆ ತೆಕ್ಕಾರಿನ ಕಂತ್ರಿ ಬ್ಯಾರಿಗಳು ಬಂದು ಟ್ಯೂಬ್ ಲೈಟ್‌ ಪುಡಿ ಮಾಡುತ್ತಿದ್ದಾರೆ, ಡೀಸೆಲ್ ಕದಿಯುತ್ತಿದ್ದಾರೆ ಎಂದು ನಮ್ಮ ಯುವಕರು ಹೇಳಿದ್ದಾರೆ. ನಾನು ಹೇಳಿದೆ ನೀವು ಏನೂ ತಲೆಬಿಸಿ ಮಾಡಿಕೊಳ್ಳಬೇಡಿ. ಬ್ರಹ್ಮಕಲಶ ಆಗಿ ನಾಡಿದ್ದು ದೊಡ್ಡ ಕಲಶ ಆಗುವ ಮುನ್ನ ಟ್ಯೂಬ್‌ಲೈಟ್ ಪುಡಿ ಮಾಡಿದವರಲ್ಲಿ ಯಾರಿಗಾದರು ಗೊತ್ತಾಗುತ್ತದೆ. ಗೋಪಾಲಕೃಷ್ಣ ದೇವರು ಎಲ್ಲಾದರು ತೋರಿಸುತ್ತಾರೆ, ನೀವು ಗಡಿಬಿಡಿ ಮಾಡಲು ಹೋಗಬೇಡಿ ಎಂದು ಹೇಳಿದೆ” ಎಂದಿದ್ದರು.

“ನಿಮಗಿದು ಗೊತ್ತಿರಲಿ, ನಮ್ಮ ದೇವಸ್ಥಾನದ ನಮ್ಮ ದೊಡ್ಡ ತಪ್ಪು ಯಾವುದೆಂದರೆ, ನಾವು ಎಲ್ಲರನ್ನು ಸೌಹಾರ್ದತೆಯಿಂದ ಕೊಂಡೊಯ್ಯಲು ನೋಡುವುದು. ನಾವು ಮಸೀದಿಗೆ ಏಕೆ ಆಹ್ವಾನ ಪತ್ರಿಕೆ ಕೊಡಬೇಕಿತ್ತು? ಮಸೀದಿಗೆ ಹೋಗಿ ಆಹ್ವಾನ ಪತ್ರಿಕೆ ಕೊಟ್ಟಿದ್ದಕ್ಕಲ್ವ ಟ್ಯೂಬ್ ಲೈಟ್ ಪುಡಿಯಾಗಿದ್ದು? ಆಹ್ವಾನ ಪತ್ರಿಕೆ ಕೊಟ್ಟಿಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. ನಮಗೂ ಅವರಿಗೂ (ಮುಸ್ಲಿಮರು) ಸಂಬಂಧ ಇಲ್ಲ. ನಾವು ಯಾವುದನ್ನೂ ಸರಿದೂಗಿಸಿಕೊಂಡು ಹೋಗುವ ಅಗತ್ಯ ಇಲ್ಲ. ನಾವು ಹಿಂದೂಗಳು ಹಿಂದೂಗಳೇ, ಅದರಲ್ಲಿ ಎರಡು ಮಾತಿಲ್ಲ. ಟ್ಯೂಬ್‌ಲೈಟ್‌ ಪುಡಿ ಮಾಡಿದ್ದು ನಾನೇ ಎಂದು, ಕಂತ್ರಿ ಬ್ಯಾರಿಯನ್ನು ತೆಕ್ಕಾರಿನ ಜನತೆಯ ಮುಂದೆ ಗೋಪಾಲಕೃಷ್ಣ ದೇವರು ತೋರಿಸಲಿ” ಎಂದು ಪೂಂಜಾ ತಿಳಿಸಿದ್ದರು.

ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಆರೋಪ:  ಶಾಸಕ‌ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...