Homeಮುಖಪುಟಜೋಧಪುರ: ಜಾತಿ ಆಧಾರಿತ ಹಲ್ಲೆ ಆರೋಪ; ದಲಿತ ನರ್ಸ್ ಆತ್ಮಹತ್ಯೆಗೆ ಶರಣು

ಜೋಧಪುರ: ಜಾತಿ ಆಧಾರಿತ ಹಲ್ಲೆ ಆರೋಪ; ದಲಿತ ನರ್ಸ್ ಆತ್ಮಹತ್ಯೆಗೆ ಶರಣು

- Advertisement -
- Advertisement -

ಜೋಧಪುರ: ರಾಜಸ್ಥಾನದ ಜೋಧಪುರ ಜಿಲ್ಲೆಯಲ್ಲಿ ಮೇಲ್ಜಾತಿಯ ನೆರೆಹೊರೆಯವರಿಂದ ಹಲ್ಲೆ ಮತ್ತು ಕಿರುಕುಳಕ್ಕೆ ಒಳಗಾದ 26 ವರ್ಷದ ದಲಿತ ನರ್ಸ್ ಮೇ 2ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ನ್ಯಾಯಕ್ಕಾಗಿ ಒತ್ತಾಯಿಸಿ ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ.

ಸಂತ್ರಸ್ತೆಯ ಕುಟುಂಬದ ಪ್ರಕಾರ, ಏಪ್ರಿಲ್ 30ರಂದು ಅವರ ಅಂಗಳ ಶುಚಿಗೊಳಿಸುವಾಗ ಕೆಲವು ಹನಿ ನೀರು ಪಕ್ಕದ ಕಾರಿನ ಮೇಲೆ ಬಿದ್ದ ನಂತರ ಗಲಾಟೆಗೆ ಕಾರಣವಾಗಿತ್ತು. ಈ ಸಣ್ಣ ವಿಷಯವು ಶಂಕರ್ ಲಾಲ್ ಬಿಷ್ಣೋಯ್, ಅವರ ಪತ್ನಿ ಮತ್ತು ಅವರ ಪುತ್ರರಾದ ರಾಜೇಂದ್ರ ಅಲಿಯಾಸ್ ರಾಜ್ ಮತ್ತು ವಿಕಾಸ್ ಅಲಿಯಾಸ್ ವಿಕ್ಕಿ ಅವರು ನರ್ಸ್ ಮತ್ತು ಅವರ ಮನೆಯವರಿಗೆ ಜಾತಿ ಹಿಡಿದು ಹೀಯಾಳಿಸುತ್ತಾ ಅವರ ಮೇಲೆ ಹಲ್ಲೆ ನಡೆಸಿದರು ಎಂದು ಆರೋಪಿಸಲಾಗಿದೆ. ದಾಳಿಯ ಸಮಯದಲ್ಲಿ ನರ್ಸ್ ಮತ್ತು ಆಕೆಯ ತಾಯಿ ಮತ್ತು ಕಿರಿಯ ಸಹೋದರನನ್ನು ಥಳಿಸಲಾಗಿದೆ ಎಂದು ವರದಿಯಾಗಿದೆ.

ದಾಳಿಕೋರರು ಸಂತ್ರಸ್ತೆಯ ಎದೆ ಮತ್ತು ಮುಖದ ಮೇಲೆ ಗೀಚಿ, ಅವಳನ್ನು ಅವಮಾನಿಸಿ, ಅವಳ ಜಾತಿ ಗುರುತನ್ನು ಗುರಿಯಾಗಿಸಿಕೊಂಡಿದ್ದರು ಎಂದು ಕುಟುಂಬ ಹೇಳಿಕೊಂಡಿದೆ.

ಆತ್ಮಹತ್ಯೆ ಸ್ಥಳದಲ್ಲಿ ದೊರೆತ ಡೆತ್ ನೋಟ್ ನಲ್ಲಿ ಅವರು ಆರೋಪಿಗಳನ್ನು ಸ್ಪಷ್ಟವಾಗಿ ಹೆಸರಿಸಿದ್ದಾರೆ ಮತ್ತು ಹಲ್ಲೆಯು ಜಾತಿ ಪ್ರೇರಿತವಾಗಿ ಎಂದು ವಿವರಿಸಿದ್ದಾರೆ. “ಅವರು ನನ್ನ ಎದೆಗೆ ಪರಚಿ, ನನ್ನ ಘನತೆಗೆ ಘಾಸಿಯನ್ನುಂಟು ಮಾಡಿದರು. ಜಾತಿ ತಾರತಮ್ಯ ಮತ್ತು  ಕೊಳಕು ಮನಸ್ಥಿತಿಯಿಂದ ತುಂಬಿದ ಈ ಜನರ ಮಧ್ಯೆ ನನ್ನ ಜೀವನವನ್ನು ಸಾಗಿಸಲು ಬಯಸುವುದಿಲ್ಲ” ಎಂದು ಟಿಪ್ಪಣಿಯಲ್ಲಿ ಬರೆಯಲಾಗಿದೆ.

ಪತ್ರದಲ್ಲಿ ಪೊಲೀಸರ ನಿರ್ಲಕ್ಷ್ಯವನ್ನು ಸಹ ತೋರಿಸಿದೆ. ಮಾತಾ ಕಾ ಥಾನ್ ಪೊಲೀಸ್ ಠಾಣೆಯಲ್ಲಿ ಒಂಬತ್ತು ಗಂಟೆಗಳಿಗೂ ಹೆಚ್ಚು ಕಾಲ ಕಾದಿದ್ದೆವು ಎಂದು ಕುಟುಂಬ ಹೇಳಿದೆ. ಆದರೆ ಆರೋಪಿಗಳ ವಿರುದ್ಧ ಸಣ್ಣಪುಟ್ಟ ಆರೋಪಗಳನ್ನು ಮಾತ್ರ ದಾಖಲಿಸಲಾಗಿದೆ, ನಂತರ ಅವರನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಯಿತು. ಇದರಲ್ಲಿ ಸ್ಟೇಷನ್ ಹೌಸ್ ಆಫೀಸರ್ (SHO) ಭನ್ವರ್ ಸಿಂಗ್ ಜಖಡ್ ಮತ್ತು ಸ್ಥಳೀಯ ಕೌನ್ಸಿಲರ್ ಜಾನಿ ದೇವಿ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. “ಅವರಿಗೆ ಏನೂ ಆಗುವುದಿಲ್ಲ” ಎಂದು SHO ಹೇಳಿದ್ದರು ಎಂದು ನರ್ಸ್ ಆರೋಪಿಸಿದ್ದಾರೆ ಮತ್ತು ಕೌನ್ಸಿಲರ್ ಅವರು ಆರೋಪಿಗಳು “ಉನ್ನತ ಮಟ್ಟದ ಸಂಪರ್ಕಗಳನ್ನು ಹೊಂದಿದ್ದಾರೆ” ಎಂದು ಹೇಳಿದ್ದರು ಎಂದು ಪತ್ರದಲ್ಲಿ ವಿವರಿಸಲಾಗಿದೆ.

“ಯಾರೂ ನನ್ನ ಪರವಾಗಿ ನಿಲ್ಲಲ್ಲಿ. ಪೊಲೀಸರು ನಮ್ಮವರಲ್ಲ. ವ್ಯವಸ್ಥೆಯು ನಮ್ಮದಲ್ಲ. ಇಲ್ಲಿ ನನ್ನದೇನೂ ಅಲ್ಲ” ಎಂದು ಡೆತ್ ನೋಟಿನಲ್ಲಿ ಇವು ಕೊನೆ ಮಾತುಗಳು ಎಂದು ನರ್ಸ್ ಬರೆದಿದ್ದಾರೆ

ಈ ಘಟನೆಯು ಪ್ರದೇಶದಲ್ಲಿ ಆಕ್ರೋಶದ ಪ್ರತಿಭಟನೆಗಳಿಗೆ ಕಾರಣವಾಗಿದೆ. ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನಾಕಾರರು ಜಮಾಯಿಸಿ ಭದ್ವಾಸಿಯಾ ರಸ್ತೆಯನ್ನು ತಡೆದು, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಮತ್ತು SHO ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದರು. ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಸಂತ್ರಸ್ತ ನರ್ಸ್ ನ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡಲು ನಿರಾಕರಿಸಿದ್ದಾರೆ.
ಪ್ರತಿಭಟನೆಗಳು ಮತ್ತು ಸಾರ್ವಜನಿಕರ ಆಕ್ರೋಶದ ನಂತರ, ಪೊಲೀಸರು ಈಗ ನಾಲ್ವರು ಆರೋಪಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆಯ ಪ್ರಕರಣವನ್ನು ದಾಖಲಿಸಿದ್ದಾರೆ.

ಯುಪಿ| ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತ ಸೇರಿದಂತೆ ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...