Homeಮುಖಪುಟಜೋಧಪುರ: ಜಾತಿ ಆಧಾರಿತ ಹಲ್ಲೆ ಆರೋಪ; ದಲಿತ ನರ್ಸ್ ಆತ್ಮಹತ್ಯೆಗೆ ಶರಣು

ಜೋಧಪುರ: ಜಾತಿ ಆಧಾರಿತ ಹಲ್ಲೆ ಆರೋಪ; ದಲಿತ ನರ್ಸ್ ಆತ್ಮಹತ್ಯೆಗೆ ಶರಣು

- Advertisement -
- Advertisement -

ಜೋಧಪುರ: ರಾಜಸ್ಥಾನದ ಜೋಧಪುರ ಜಿಲ್ಲೆಯಲ್ಲಿ ಮೇಲ್ಜಾತಿಯ ನೆರೆಹೊರೆಯವರಿಂದ ಹಲ್ಲೆ ಮತ್ತು ಕಿರುಕುಳಕ್ಕೆ ಒಳಗಾದ 26 ವರ್ಷದ ದಲಿತ ನರ್ಸ್ ಮೇ 2ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ನ್ಯಾಯಕ್ಕಾಗಿ ಒತ್ತಾಯಿಸಿ ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ.

ಸಂತ್ರಸ್ತೆಯ ಕುಟುಂಬದ ಪ್ರಕಾರ, ಏಪ್ರಿಲ್ 30ರಂದು ಅವರ ಅಂಗಳ ಶುಚಿಗೊಳಿಸುವಾಗ ಕೆಲವು ಹನಿ ನೀರು ಪಕ್ಕದ ಕಾರಿನ ಮೇಲೆ ಬಿದ್ದ ನಂತರ ಗಲಾಟೆಗೆ ಕಾರಣವಾಗಿತ್ತು. ಈ ಸಣ್ಣ ವಿಷಯವು ಶಂಕರ್ ಲಾಲ್ ಬಿಷ್ಣೋಯ್, ಅವರ ಪತ್ನಿ ಮತ್ತು ಅವರ ಪುತ್ರರಾದ ರಾಜೇಂದ್ರ ಅಲಿಯಾಸ್ ರಾಜ್ ಮತ್ತು ವಿಕಾಸ್ ಅಲಿಯಾಸ್ ವಿಕ್ಕಿ ಅವರು ನರ್ಸ್ ಮತ್ತು ಅವರ ಮನೆಯವರಿಗೆ ಜಾತಿ ಹಿಡಿದು ಹೀಯಾಳಿಸುತ್ತಾ ಅವರ ಮೇಲೆ ಹಲ್ಲೆ ನಡೆಸಿದರು ಎಂದು ಆರೋಪಿಸಲಾಗಿದೆ. ದಾಳಿಯ ಸಮಯದಲ್ಲಿ ನರ್ಸ್ ಮತ್ತು ಆಕೆಯ ತಾಯಿ ಮತ್ತು ಕಿರಿಯ ಸಹೋದರನನ್ನು ಥಳಿಸಲಾಗಿದೆ ಎಂದು ವರದಿಯಾಗಿದೆ.

ದಾಳಿಕೋರರು ಸಂತ್ರಸ್ತೆಯ ಎದೆ ಮತ್ತು ಮುಖದ ಮೇಲೆ ಗೀಚಿ, ಅವಳನ್ನು ಅವಮಾನಿಸಿ, ಅವಳ ಜಾತಿ ಗುರುತನ್ನು ಗುರಿಯಾಗಿಸಿಕೊಂಡಿದ್ದರು ಎಂದು ಕುಟುಂಬ ಹೇಳಿಕೊಂಡಿದೆ.

ಆತ್ಮಹತ್ಯೆ ಸ್ಥಳದಲ್ಲಿ ದೊರೆತ ಡೆತ್ ನೋಟ್ ನಲ್ಲಿ ಅವರು ಆರೋಪಿಗಳನ್ನು ಸ್ಪಷ್ಟವಾಗಿ ಹೆಸರಿಸಿದ್ದಾರೆ ಮತ್ತು ಹಲ್ಲೆಯು ಜಾತಿ ಪ್ರೇರಿತವಾಗಿ ಎಂದು ವಿವರಿಸಿದ್ದಾರೆ. “ಅವರು ನನ್ನ ಎದೆಗೆ ಪರಚಿ, ನನ್ನ ಘನತೆಗೆ ಘಾಸಿಯನ್ನುಂಟು ಮಾಡಿದರು. ಜಾತಿ ತಾರತಮ್ಯ ಮತ್ತು  ಕೊಳಕು ಮನಸ್ಥಿತಿಯಿಂದ ತುಂಬಿದ ಈ ಜನರ ಮಧ್ಯೆ ನನ್ನ ಜೀವನವನ್ನು ಸಾಗಿಸಲು ಬಯಸುವುದಿಲ್ಲ” ಎಂದು ಟಿಪ್ಪಣಿಯಲ್ಲಿ ಬರೆಯಲಾಗಿದೆ.

ಪತ್ರದಲ್ಲಿ ಪೊಲೀಸರ ನಿರ್ಲಕ್ಷ್ಯವನ್ನು ಸಹ ತೋರಿಸಿದೆ. ಮಾತಾ ಕಾ ಥಾನ್ ಪೊಲೀಸ್ ಠಾಣೆಯಲ್ಲಿ ಒಂಬತ್ತು ಗಂಟೆಗಳಿಗೂ ಹೆಚ್ಚು ಕಾಲ ಕಾದಿದ್ದೆವು ಎಂದು ಕುಟುಂಬ ಹೇಳಿದೆ. ಆದರೆ ಆರೋಪಿಗಳ ವಿರುದ್ಧ ಸಣ್ಣಪುಟ್ಟ ಆರೋಪಗಳನ್ನು ಮಾತ್ರ ದಾಖಲಿಸಲಾಗಿದೆ, ನಂತರ ಅವರನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಯಿತು. ಇದರಲ್ಲಿ ಸ್ಟೇಷನ್ ಹೌಸ್ ಆಫೀಸರ್ (SHO) ಭನ್ವರ್ ಸಿಂಗ್ ಜಖಡ್ ಮತ್ತು ಸ್ಥಳೀಯ ಕೌನ್ಸಿಲರ್ ಜಾನಿ ದೇವಿ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. “ಅವರಿಗೆ ಏನೂ ಆಗುವುದಿಲ್ಲ” ಎಂದು SHO ಹೇಳಿದ್ದರು ಎಂದು ನರ್ಸ್ ಆರೋಪಿಸಿದ್ದಾರೆ ಮತ್ತು ಕೌನ್ಸಿಲರ್ ಅವರು ಆರೋಪಿಗಳು “ಉನ್ನತ ಮಟ್ಟದ ಸಂಪರ್ಕಗಳನ್ನು ಹೊಂದಿದ್ದಾರೆ” ಎಂದು ಹೇಳಿದ್ದರು ಎಂದು ಪತ್ರದಲ್ಲಿ ವಿವರಿಸಲಾಗಿದೆ.

“ಯಾರೂ ನನ್ನ ಪರವಾಗಿ ನಿಲ್ಲಲ್ಲಿ. ಪೊಲೀಸರು ನಮ್ಮವರಲ್ಲ. ವ್ಯವಸ್ಥೆಯು ನಮ್ಮದಲ್ಲ. ಇಲ್ಲಿ ನನ್ನದೇನೂ ಅಲ್ಲ” ಎಂದು ಡೆತ್ ನೋಟಿನಲ್ಲಿ ಇವು ಕೊನೆ ಮಾತುಗಳು ಎಂದು ನರ್ಸ್ ಬರೆದಿದ್ದಾರೆ

ಈ ಘಟನೆಯು ಪ್ರದೇಶದಲ್ಲಿ ಆಕ್ರೋಶದ ಪ್ರತಿಭಟನೆಗಳಿಗೆ ಕಾರಣವಾಗಿದೆ. ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನಾಕಾರರು ಜಮಾಯಿಸಿ ಭದ್ವಾಸಿಯಾ ರಸ್ತೆಯನ್ನು ತಡೆದು, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಮತ್ತು SHO ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದರು. ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಸಂತ್ರಸ್ತ ನರ್ಸ್ ನ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡಲು ನಿರಾಕರಿಸಿದ್ದಾರೆ.
ಪ್ರತಿಭಟನೆಗಳು ಮತ್ತು ಸಾರ್ವಜನಿಕರ ಆಕ್ರೋಶದ ನಂತರ, ಪೊಲೀಸರು ಈಗ ನಾಲ್ವರು ಆರೋಪಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆಯ ಪ್ರಕರಣವನ್ನು ದಾಖಲಿಸಿದ್ದಾರೆ.

ಯುಪಿ| ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತ ಸೇರಿದಂತೆ ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...