Homeಮುಖಪುಟಆಪರೇಷನ್ ಸಿಂಧೂರ | 430 ವಿಮಾನಗಳು ರದ್ದು, 27 ವಿಮಾನ ನಿಲ್ದಾಣಗಳು ಬಂದ್‌

ಆಪರೇಷನ್ ಸಿಂಧೂರ | 430 ವಿಮಾನಗಳು ರದ್ದು, 27 ವಿಮಾನ ನಿಲ್ದಾಣಗಳು ಬಂದ್‌

- Advertisement -
- Advertisement -

ಪಾಕ್‌ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿನ ಭಯೋತ್ಪಾದಕ ಕೇಂದ್ರಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ ದಾಳಿಯ ಗಂಟೆಗಳ ನಂತರ, ಬುಧವಾರ ದೆಹಲಿ ವಿಮಾನ ನಿಲ್ದಾಣಕ್ಕೆ ಮತ್ತು ಅಲ್ಲಿಂದ ಬರುವ ಕನಿಷ್ಠ 430 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ವರದಿಗಳು ಉಲ್ಲೇಖಿಸಿವೆ.

ದಾಳಿ ಮುಗಿದ ಹತ್ತು ನಿಮಿಷಗಳ ನಂತರ, ವಿಮಾನ ಹಾರಾಟವನ್ನು ಟ್ರ್ಯಾಕ್‌ ಮಾಡುವ ಫ್ಲೈಟ್‌ರಾಡರ್ 24, ಪಾಕಿಸ್ತಾನದ ವಾಯುಪ್ರದೇಶದಿಂದ ಹೆಚ್ಚಿನ ವಿಮಾನಗಳು ಬೇರೆಡೆಗೆ ತಿರುಗುತ್ತಿರುವುದನ್ನು ತೋರಿಸುವ ಚಿತ್ರಗಳನ್ನು ಬಿಡುಗಡೆ ಮಾಡಿದೆ.

ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ರಾಜಸ್ಥಾನ, ಗುಜರಾತ್ ಮತ್ತು ಪಂಜಾಬ್ ಈ ಐದು ರಾಜ್ಯಗಳಲ್ಲಿ ಹರಡಿರುವ ಭಾರತದ 27 ವಿಮಾನ ನಿಲ್ದಾಣಗಳನ್ನು ನಾಗರಿಕ ಕಾರ್ಯಾಚರಣೆಗಳಿಗೆ ಮುಚ್ಚಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲವೊಂದು ತಿಳಿಸಿದೆ ಎಂದು TNIE ವರದಿ ಮಾಡಿದೆ.

“ಈಗ, ನಿಲ್ದಾಣಗಳ ಮುಚ್ಚುವಿಕೆಯು ಅನಿರ್ದಿಷ್ಟಾವಧಿಗೆ ತಲುಪಿದೆ ಮತ್ತು ಮುಂದಿನ ಪ್ರಾರಂಭದ ದಿನಾಂಕಗಳನ್ನು ನಂತರ ತಿಳಿಸಲಾಗುವುದು” ಎಂದು ಮೂಲಗಳು ತಿಳಿಸಿವೆ.

ಅಮೃತಸರ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರ್ಮಿಂಗ್ಹ್ಯಾಮ್‌ನಿಂದ ಮತ್ತು ಗ್ಯಾಟ್ವಿಕ್‌ನ ಆಗಮಿಸುತ್ತಿದ್ದ ಎರಡು ಅಂತರರಾಷ್ಟ್ರೀಯ ವಿಮಾನಗಳನ್ನು ದೆಹಲಿಗೆ ತಿರುಗಿಸಲಾಗುತ್ತಿದೆ ಎಂದು ಏರ್ ಇಂಡಿಯಾ ನಂತರ ಘೋಷಿಸಿತು.

ಮೇ 10 ರವರೆಗೆ ಜಮ್ಮು, ಶ್ರೀನಗರ, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗೆ ಹೋಗುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದೆ ಎಂದು ಏರ್ ಇಂಡಿಯಾ ಹೇಳಿದೆ.

“ವಾಯುಪ್ರದೇಶ ನಿರ್ಬಂಧಗಳ ಕುರಿತ ಸರ್ಕಾರದ ಅಧಿಸೂಚನೆಯಿಂದಾಗಿ, ಹಲವು ವಿಮಾನ ನಿಲ್ದಾಣಗಳಿಂದ (ಅಮೃತಸರ, ಬಿಕಾನೇರ್, ಚಂಡೀಗಢ, ಧರ್ಮಶಾಲಾ, ಗ್ವಾಲಿಯರ್, ಜಮ್ಮು, ಜೋಧ್‌ಪುರ, ಕಿಶನ್‌ಗಢ, ಲೇಹ್, ರಾಜ್‌ಕೋಟ್ ಮತ್ತು ಶ್ರೀನಗರ) 165ಕ್ಕೂ ಹೆಚ್ಚು ಇಂಡಿಗೋ ವಿಮಾನಗಳನ್ನು ಮೇ 10, 2025 ರಂದು ಬೆಳಿಗ್ಗೆ 5.29 ರವರೆಗೆ ರದ್ದುಗೊಳಿಸಲಾಗಿದೆ” ಎಂದು ಇಂಡಿಗೊ ಹೇಳಿದೆ.

ಲೇಹ್, ಶ್ರೀನಗರ, ಜಮ್ಮು, ಧರ್ಮಶಾಲಾ, ಕಾಂಡ್ಲಾ ಮತ್ತು ಅಮೃತಸರಕ್ಕೆ ಹೋಗುವ ಮತ್ತು ಅಲ್ಲಿಂದ ಹೊರಡುವ ತನ್ನ ವಿಮಾನಗಳನ್ನು ರದ್ದುಗೊಳಿಸುವುದಾಗಿ ಎಂದು ಸ್ಪೈಸ್‌ಜೆಟ್ ಘೋಷಿಸಿದೆ. ಅದೇ ವೇಳೆ ಆಕಾಶ ಏರ್, ಶ್ರೀನಗರಕ್ಕೆ ಹೋಗುವ ಮತ್ತು ಅಲ್ಲಿಂದ ಹೊರಡುವ ತನ್ನ ವಿಮಾನಗಳನ್ನು ರದ್ದುಗೊಳಿಸಿದೆ.

ಆಪರೇಷನ್ ಸಿಂಧೂರ ಹಿನ್ನಲೆ ಫ್ರಾಂಕ್‌ಫರ್ಟ್‌ನಿಂದ ಬ್ಯಾಂಕಾಕ್‌ಗೆ ಹೋಗುವ ಥಾಯ್ ಏರ್‌ವೇಸ್ ವಿಮಾನವನ್ನು (TG-921) ದುಬೈಗೆ ತಿರುಗಿಸಲಾಗಿದೆ ಎಂದು ವರದಿಯಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಯುಪಿ| ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತ ಸೇರಿದಂತೆ ಇಬ್ಬರ ಬಂಧನ

ಯುಪಿ| ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತ ಸೇರಿದಂತೆ ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...