Homeಮುಖಪುಟಮಹಿಳೆಯ ಲೈಂಗಿಕ ಇತಿಹಾಸದ ಆಧಾರದ ಮೇಲೆ ಆಕೆಯ ಒಪ್ಪಿಗೆ ಊಹಿಸಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್

ಮಹಿಳೆಯ ಲೈಂಗಿಕ ಇತಿಹಾಸದ ಆಧಾರದ ಮೇಲೆ ಆಕೆಯ ಒಪ್ಪಿಗೆ ಊಹಿಸಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್

ಮೂವರ ಮೇಲಿನ ಸಾಮೂಹಿಕ ಅತ್ಯಾಚಾರ ಶಿಕ್ಷೆ ಎತ್ತಿಹಿಡಿದ ನ್ಯಾಯಾಲಯ

- Advertisement -
- Advertisement -

ತಮ್ಮ ಸ್ನೇಹಿತೆ ಮೇಲೆ ಅತ್ಯಾಚಾರ ಮಾಡಿದ್ದಕ್ಕಾಗಿ ಮೂವರು ಪುರುಷರಿಗೆ ವಿಧಿಸಿದ್ದ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿಹಿಡಿದಿದ್ದು, ಮಹಿಳೆ ಬೇಡ ಎಂದು ಹೇಳಿದಾಗ ಅದು ಬೇಡ’ ಎಂದರ್ಥ (ನೋ ಮೀನ್ಸ್‌ ನೋ), ಆಕೆಯ ಹಿಂದಿನ ಲೈಂಗಿಕ ಚಟುವಟಿಕೆಗಳ ಆಧಾರದ ಮೇಲೆ ಒಪ್ಪಿಗೆಯನ್ನು ಊಹಿಸುವಂತಿಲ್ಲ ಎಂದು ತೀರ್ಪು ನೀಡಿದೆ.

“ಬೇಡ ಎಂದರೆ ಬೇಡ” ಎಂದು ನ್ಯಾಯಮೂರ್ತಿಗಳಾದ ನಿತಿನ್ ಸೂರ್ಯವಂಶಿ ಮತ್ತು ಎಂ.ಡಬ್ಲ್ಯೂ. ಚಂದ್ವಾನಿ ಅವರ ಪೀಠವು ಮೇ 6 ರ ತೀರ್ಪಿನಲ್ಲಿ, ಸಂತ್ರಸ್ತೆಯ ನೈತಿಕತೆಯನ್ನು ಪ್ರಶ್ನಿಸಲು ಅಪರಾಧಿಗಳು ಮಾಡಿದ ಪ್ರಯತ್ನವನ್ನು ಸ್ವೀಕರಿಸಲು ನಿರಾಕರಿಸಿದೆ.

ಮಹಿಳೆಯ ಒಪ್ಪಿಗೆಯಿಲ್ಲದೆ ಲೈಂಗಿಕ ಸಂಭೋಗ ನಡೆಸಿದಾಗ ಅದು ಆಕೆಯ ದೇಹ, ಮನಸ್ಸು ಮತ್ತು ಗೌಪ್ಯತೆಯ ಮೇಲಿನ ಹಲ್ಲೆಯಾಗಿದೆ ಎಂದ ನ್ಯಾಯಾಲಯವು, ಅತ್ಯಾಚಾರವು ಸಮಾಜದಲ್ಲಿ ಖಂಡನೀಯ ಅಪರಾಧ ಎಂದು ಹೇಳಿದೆ.

“ಮಹಿಳೆ ಬೇಡ ಎಂದರೆ ಬೇಡವೇಬೇಡ ಎಂದರ್ಥ; ಇದರಲ್ಲಿ ಯಾವುದೇ ಅಸ್ಪಷ್ಟತೆ ಇಲ್ಲ. ಮುಖ್ಯವಾಗಿ, ಮಹಿಳೆಯ ಹಿಂದಿನ ಲೈಂಗಿಕ ಚಟುವಟಿಕೆಗಳ ಆಧಾರದ ಮೇಲೆ ಆಕೆಯ ಒಪ್ಪಿಗೆಯ ಊಹೆ ಇರುವಂತಿಲ್ಲ” ಎಂದು ಹೈಕೋರ್ಟ್ ಹೇಳಿದೆ.

ಈ ತೀರ್ಪಿನ ಮೂಲಕ, ಮೂವರು ವ್ಯಕ್ತಿಗಳ ಶಿಕ್ಷೆಯನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿತು. ಆದರೆ, ಅವರ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಿಂದ 20 ವರ್ಷಗಳ ಜೈಲು ಶಿಕ್ಷೆಗೆ ಇಳಿಸಿತು.

ತಮ್ಮ ಮೇಲ್ಮನವಿಯಲ್ಲಿ, ಮಹಿಳೆ ಆರಂಭದಲ್ಲಿ ತಮ್ಮಲ್ಲಿ ಒಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದರು. ಆದರೆ, ನಂತರ ಇನ್ನೊಬ್ಬ ಪುರುಷನೊಂದಿಗೆ ಲಿವ್-ಇನ್ ಸಂಬಂಧ ಹೊಂದಿದ್ದರು ಎಂದು ಮೂವರು ಹೇಳಿಕೊಂಡಿದ್ದರು.

ನವೆಂಬರ್ 2014 ರಲ್ಲಿ, ಮೂವರು ಸಂತ್ರಸ್ತೆ ಮನೆಗೆ ನುಗ್ಗಿ, ಆಕೆಯ ಲಿವ್-ಇನ್ ಸಂಗಾತಿಯ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ಹತ್ತಿರದ ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದರು.

“ಒಬ್ಬ ಮಹಿಳೆ ಗಂಡನಿಂದ ಬೇರ್ಪಟ್ಟ ಹೆಂಡತಿಯಾಗಿದ್ದರೂ, ಆಕೆ ತನ್ನ ಪತಿಯಿಂದ ವಿಚ್ಛೇದನ ಪಡೆಯದೆ ಇನ್ನೊಬ್ಬ ಪುರುಷನೊಂದಿಗೆ ವಾಸಿಸುತ್ತಿದ್ದರೂ ಸಹ, ವ್ಯಕ್ತಿಯೊಬ್ಬ ಮಹಿಳೆಯ ಒಪ್ಪಿಗೆಯಿಲ್ಲದೆ ಸಂಭೋಗ ನಡೆಸಲು ಒತ್ತಾಯಿಸಲು ಸಾಧ್ಯವಿಲ್ಲ” ಎಂದು ಪೀಠವು ತನ್ನ ತೀರ್ಪಿನಲ್ಲಿ ಹೇಳಿದೆ.

ಸಂತ್ರಸ್ತೆ ಮತ್ತು ಅಪರಾಧಿಗಳಲ್ಲಿ ಓರ್ವ ಹಿಂದೆ ಸಂಬಂಧದಲ್ಲಿದ್ದರೂ, ಆಕೆಯ ಒಪ್ಪಿಗೆಯಿಲ್ಲದೆ ಯಾವುದೇ ಲೈಂಗಿಕ ಕ್ರಿಯೆಯು ಆಕೆ ಅವನೊಂದಿಗೆ ಹಾಗೂ ಇತರ ಆರೋಪಿಯೊಂದಿಗೆ ಸಂಭೋಗ ಹೊಂದಲು ಸಿದ್ಧರಿಲ್ಲದಿದ್ದರೆ ಅದು ಅತ್ಯಾಚಾರಕ್ಕೆ ಸಮನಾಗಿರುತ್ತದೆ ಎಂದು ಪೀಠ ಹೇಳಿದೆ.

“ಒಂದು ನಿರ್ದಿಷ್ಟ ಸಂದರ್ಭದಲ್ಲಿ ಪುರುಷನೊಂದಿಗೆ ಲೈಂಗಿಕ ಚಟುವಟಿಕೆಗಳಿಗೆ ಸಮ್ಮತಿಸುವ ಮಹಿಳೆಯು ಇತರ ಎಲ್ಲ ಸಂದರ್ಭಗಳಲ್ಲಿ ಅದೇ ಪುರುಷನೊಂದಿಗೆ ಲೈಂಗಿಕ ಚಟುವಟಿಕೆಗೆ ಸಮ್ಮತಿ ನೀಡುವುದಿಲ್ಲ (ವಾಸ್ತವವಾಗಿಯೇ). ಮಹಿಳೆಯ ಪಾತ್ರ ಅಥವಾ ಆಕೆಯ ನೈತಿಕತೆಯು ಹಿಂದೆ ಹೊಂದಿದ್ದ ಲೈಂಗಿಕ ಪಾಲುದಾರರ ಸಂಖ್ಯೆಗೆ ಸಂಬಂಧಿಸಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಲೈಂಗಿಕ ದೌರ್ಜನ್ಯವು ಕಾನೂನನ್ನು ಕುಗ್ಗಿಸುತ್ತದೆ, ಕಾನೂನುಬಾಹಿರವಾಗಿ ಮಹಿಳೆಯ ಗೌಪ್ಯತೆಯನ್ನು ಅತಿಕ್ರಮಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

“ಅತ್ಯಾಚಾರವನ್ನು ಲೈಂಗಿಕ ಅಪರಾಧವೆಂದು ಮಾತ್ರ ಪರಿಗಣಿಸಲಾಗುವುದಿಲ್ಲ. ಆದರೆ, ಅದನ್ನು ಆಕ್ರಮಣಶೀಲತೆಯನ್ನು ಒಳಗೊಂಡಿರುವ ಅಪರಾಧವೆಂದು ನೋಡಬೇಕು. ಇದು ಅವಳ ಗೌಪ್ಯತೆಯ ಹಕ್ಕಿನ ಉಲ್ಲಂಘನೆಯಾಗಿದೆ. ಅತ್ಯಾಚಾರವು ಸಮಾಜದಲ್ಲಿ ಅತ್ಯಂತ ನೈತಿಕವಾಗಿ ಮತ್ತು ದೈಹಿಕವಾಗಿ ಖಂಡನೀಯ ಅಪರಾಧವಾಗಿದೆ. ಏಕೆಂದರೆ, ಇದು ಸಂತ್ರಸ್ತೆ ದೇಹ, ಮನಸ್ಸು ಮತ್ತು ಗೌಪ್ಯತೆಯ ಮೇಲಿನ ಆಕ್ರಮಣವಾಗಿದೆ” ಎಂದು ಹೈಕೋರ್ಟ್ ಹೇಳಿದೆ.

ಕಳ್ಳತನ ದೂರು ನೀಡಲು ಠಾಣೆಗೆ ತೆರಳಿದ್ದ ಮಹಿಳೆಗೆ ಲೈಂಗಿಕ ಕಿರುಕುಳ: ಪೊಲೀಸರ ವಿರುದ್ಧ ಗಂಭೀರ ಆರೋಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...