Homeಮುಖಪುಟಮಹಿಳೆಯ ಲೈಂಗಿಕ ಇತಿಹಾಸದ ಆಧಾರದ ಮೇಲೆ ಆಕೆಯ ಒಪ್ಪಿಗೆ ಊಹಿಸಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್

ಮಹಿಳೆಯ ಲೈಂಗಿಕ ಇತಿಹಾಸದ ಆಧಾರದ ಮೇಲೆ ಆಕೆಯ ಒಪ್ಪಿಗೆ ಊಹಿಸಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್

ಮೂವರ ಮೇಲಿನ ಸಾಮೂಹಿಕ ಅತ್ಯಾಚಾರ ಶಿಕ್ಷೆ ಎತ್ತಿಹಿಡಿದ ನ್ಯಾಯಾಲಯ

- Advertisement -
- Advertisement -

ತಮ್ಮ ಸ್ನೇಹಿತೆ ಮೇಲೆ ಅತ್ಯಾಚಾರ ಮಾಡಿದ್ದಕ್ಕಾಗಿ ಮೂವರು ಪುರುಷರಿಗೆ ವಿಧಿಸಿದ್ದ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿಹಿಡಿದಿದ್ದು, ಮಹಿಳೆ ಬೇಡ ಎಂದು ಹೇಳಿದಾಗ ಅದು ಬೇಡ’ ಎಂದರ್ಥ (ನೋ ಮೀನ್ಸ್‌ ನೋ), ಆಕೆಯ ಹಿಂದಿನ ಲೈಂಗಿಕ ಚಟುವಟಿಕೆಗಳ ಆಧಾರದ ಮೇಲೆ ಒಪ್ಪಿಗೆಯನ್ನು ಊಹಿಸುವಂತಿಲ್ಲ ಎಂದು ತೀರ್ಪು ನೀಡಿದೆ.

“ಬೇಡ ಎಂದರೆ ಬೇಡ” ಎಂದು ನ್ಯಾಯಮೂರ್ತಿಗಳಾದ ನಿತಿನ್ ಸೂರ್ಯವಂಶಿ ಮತ್ತು ಎಂ.ಡಬ್ಲ್ಯೂ. ಚಂದ್ವಾನಿ ಅವರ ಪೀಠವು ಮೇ 6 ರ ತೀರ್ಪಿನಲ್ಲಿ, ಸಂತ್ರಸ್ತೆಯ ನೈತಿಕತೆಯನ್ನು ಪ್ರಶ್ನಿಸಲು ಅಪರಾಧಿಗಳು ಮಾಡಿದ ಪ್ರಯತ್ನವನ್ನು ಸ್ವೀಕರಿಸಲು ನಿರಾಕರಿಸಿದೆ.

ಮಹಿಳೆಯ ಒಪ್ಪಿಗೆಯಿಲ್ಲದೆ ಲೈಂಗಿಕ ಸಂಭೋಗ ನಡೆಸಿದಾಗ ಅದು ಆಕೆಯ ದೇಹ, ಮನಸ್ಸು ಮತ್ತು ಗೌಪ್ಯತೆಯ ಮೇಲಿನ ಹಲ್ಲೆಯಾಗಿದೆ ಎಂದ ನ್ಯಾಯಾಲಯವು, ಅತ್ಯಾಚಾರವು ಸಮಾಜದಲ್ಲಿ ಖಂಡನೀಯ ಅಪರಾಧ ಎಂದು ಹೇಳಿದೆ.

“ಮಹಿಳೆ ಬೇಡ ಎಂದರೆ ಬೇಡವೇಬೇಡ ಎಂದರ್ಥ; ಇದರಲ್ಲಿ ಯಾವುದೇ ಅಸ್ಪಷ್ಟತೆ ಇಲ್ಲ. ಮುಖ್ಯವಾಗಿ, ಮಹಿಳೆಯ ಹಿಂದಿನ ಲೈಂಗಿಕ ಚಟುವಟಿಕೆಗಳ ಆಧಾರದ ಮೇಲೆ ಆಕೆಯ ಒಪ್ಪಿಗೆಯ ಊಹೆ ಇರುವಂತಿಲ್ಲ” ಎಂದು ಹೈಕೋರ್ಟ್ ಹೇಳಿದೆ.

ಈ ತೀರ್ಪಿನ ಮೂಲಕ, ಮೂವರು ವ್ಯಕ್ತಿಗಳ ಶಿಕ್ಷೆಯನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿತು. ಆದರೆ, ಅವರ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಿಂದ 20 ವರ್ಷಗಳ ಜೈಲು ಶಿಕ್ಷೆಗೆ ಇಳಿಸಿತು.

ತಮ್ಮ ಮೇಲ್ಮನವಿಯಲ್ಲಿ, ಮಹಿಳೆ ಆರಂಭದಲ್ಲಿ ತಮ್ಮಲ್ಲಿ ಒಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದರು. ಆದರೆ, ನಂತರ ಇನ್ನೊಬ್ಬ ಪುರುಷನೊಂದಿಗೆ ಲಿವ್-ಇನ್ ಸಂಬಂಧ ಹೊಂದಿದ್ದರು ಎಂದು ಮೂವರು ಹೇಳಿಕೊಂಡಿದ್ದರು.

ನವೆಂಬರ್ 2014 ರಲ್ಲಿ, ಮೂವರು ಸಂತ್ರಸ್ತೆ ಮನೆಗೆ ನುಗ್ಗಿ, ಆಕೆಯ ಲಿವ್-ಇನ್ ಸಂಗಾತಿಯ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ಹತ್ತಿರದ ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದರು.

“ಒಬ್ಬ ಮಹಿಳೆ ಗಂಡನಿಂದ ಬೇರ್ಪಟ್ಟ ಹೆಂಡತಿಯಾಗಿದ್ದರೂ, ಆಕೆ ತನ್ನ ಪತಿಯಿಂದ ವಿಚ್ಛೇದನ ಪಡೆಯದೆ ಇನ್ನೊಬ್ಬ ಪುರುಷನೊಂದಿಗೆ ವಾಸಿಸುತ್ತಿದ್ದರೂ ಸಹ, ವ್ಯಕ್ತಿಯೊಬ್ಬ ಮಹಿಳೆಯ ಒಪ್ಪಿಗೆಯಿಲ್ಲದೆ ಸಂಭೋಗ ನಡೆಸಲು ಒತ್ತಾಯಿಸಲು ಸಾಧ್ಯವಿಲ್ಲ” ಎಂದು ಪೀಠವು ತನ್ನ ತೀರ್ಪಿನಲ್ಲಿ ಹೇಳಿದೆ.

ಸಂತ್ರಸ್ತೆ ಮತ್ತು ಅಪರಾಧಿಗಳಲ್ಲಿ ಓರ್ವ ಹಿಂದೆ ಸಂಬಂಧದಲ್ಲಿದ್ದರೂ, ಆಕೆಯ ಒಪ್ಪಿಗೆಯಿಲ್ಲದೆ ಯಾವುದೇ ಲೈಂಗಿಕ ಕ್ರಿಯೆಯು ಆಕೆ ಅವನೊಂದಿಗೆ ಹಾಗೂ ಇತರ ಆರೋಪಿಯೊಂದಿಗೆ ಸಂಭೋಗ ಹೊಂದಲು ಸಿದ್ಧರಿಲ್ಲದಿದ್ದರೆ ಅದು ಅತ್ಯಾಚಾರಕ್ಕೆ ಸಮನಾಗಿರುತ್ತದೆ ಎಂದು ಪೀಠ ಹೇಳಿದೆ.

“ಒಂದು ನಿರ್ದಿಷ್ಟ ಸಂದರ್ಭದಲ್ಲಿ ಪುರುಷನೊಂದಿಗೆ ಲೈಂಗಿಕ ಚಟುವಟಿಕೆಗಳಿಗೆ ಸಮ್ಮತಿಸುವ ಮಹಿಳೆಯು ಇತರ ಎಲ್ಲ ಸಂದರ್ಭಗಳಲ್ಲಿ ಅದೇ ಪುರುಷನೊಂದಿಗೆ ಲೈಂಗಿಕ ಚಟುವಟಿಕೆಗೆ ಸಮ್ಮತಿ ನೀಡುವುದಿಲ್ಲ (ವಾಸ್ತವವಾಗಿಯೇ). ಮಹಿಳೆಯ ಪಾತ್ರ ಅಥವಾ ಆಕೆಯ ನೈತಿಕತೆಯು ಹಿಂದೆ ಹೊಂದಿದ್ದ ಲೈಂಗಿಕ ಪಾಲುದಾರರ ಸಂಖ್ಯೆಗೆ ಸಂಬಂಧಿಸಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಲೈಂಗಿಕ ದೌರ್ಜನ್ಯವು ಕಾನೂನನ್ನು ಕುಗ್ಗಿಸುತ್ತದೆ, ಕಾನೂನುಬಾಹಿರವಾಗಿ ಮಹಿಳೆಯ ಗೌಪ್ಯತೆಯನ್ನು ಅತಿಕ್ರಮಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

“ಅತ್ಯಾಚಾರವನ್ನು ಲೈಂಗಿಕ ಅಪರಾಧವೆಂದು ಮಾತ್ರ ಪರಿಗಣಿಸಲಾಗುವುದಿಲ್ಲ. ಆದರೆ, ಅದನ್ನು ಆಕ್ರಮಣಶೀಲತೆಯನ್ನು ಒಳಗೊಂಡಿರುವ ಅಪರಾಧವೆಂದು ನೋಡಬೇಕು. ಇದು ಅವಳ ಗೌಪ್ಯತೆಯ ಹಕ್ಕಿನ ಉಲ್ಲಂಘನೆಯಾಗಿದೆ. ಅತ್ಯಾಚಾರವು ಸಮಾಜದಲ್ಲಿ ಅತ್ಯಂತ ನೈತಿಕವಾಗಿ ಮತ್ತು ದೈಹಿಕವಾಗಿ ಖಂಡನೀಯ ಅಪರಾಧವಾಗಿದೆ. ಏಕೆಂದರೆ, ಇದು ಸಂತ್ರಸ್ತೆ ದೇಹ, ಮನಸ್ಸು ಮತ್ತು ಗೌಪ್ಯತೆಯ ಮೇಲಿನ ಆಕ್ರಮಣವಾಗಿದೆ” ಎಂದು ಹೈಕೋರ್ಟ್ ಹೇಳಿದೆ.

ಕಳ್ಳತನ ದೂರು ನೀಡಲು ಠಾಣೆಗೆ ತೆರಳಿದ್ದ ಮಹಿಳೆಗೆ ಲೈಂಗಿಕ ಕಿರುಕುಳ: ಪೊಲೀಸರ ವಿರುದ್ಧ ಗಂಭೀರ ಆರೋಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...