Homeಮುಖಪುಟಬಿಹಾರ ಚುನಾವಣೆ | 12-15 ಸ್ಥಾನಗಳಲ್ಲಿ ಸ್ಪರ್ಧಿಸಲು ಜೆಎಂಎಂ ಸಿದ್ಧತೆ

ಬಿಹಾರ ಚುನಾವಣೆ | 12-15 ಸ್ಥಾನಗಳಲ್ಲಿ ಸ್ಪರ್ಧಿಸಲು ಜೆಎಂಎಂ ಸಿದ್ಧತೆ

- Advertisement -
- Advertisement -

ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) 12–15 ಸ್ಥಾನಗಳಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ವಿನೋದ್ ಕುಮಾರ್ ಪಾಂಡೆ ಗುರುವಾರ ತಿಳಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಬಿಹಾರ ಚುನಾವಣೆ

ಆದಾಗ್ಯೂ, ಪಕ್ಷವು ತನ್ನ ಇಂಡಿಯಾ ಮೈತ್ರಿಯ ಪಕ್ಷಗಳೊಂದಿಗೆ ಚರ್ಚಿಸಿದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಜೆಎಂಎಂ ನಾಯಕ ಹೇಳಿದ್ದಾರೆ ಎಂದು ವರದಿ ಹೇಳಿದೆ.

“ಮುಂಬರುವ ಬಿಹಾರ ಚುನಾವಣೆಯಲ್ಲಿ ಸ್ಪರ್ಧಿಸಲು ನಾವು ನಿರ್ಧರಿಸಿದ್ದೇವೆ ಮತ್ತು 12 ರಿಂದ 15 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸುತ್ತಿದ್ದೇವೆ. ನಮ್ಮ ಇಂಡಿಯಾ ಮೈತ್ರಿಯ ಪಾಲುದಾರರೊಂದಿಗೆ ಸಮಾಲೋಚನೆಯ ನಂತರ ಸ್ಥಾನಗಳ ಸಂಖ್ಯೆಯ ಕುರಿತು ಅಂತಿಮ ನಿರ್ಧಾರವನ್ನು ಘೋಷಿಸಲಾಗುವುದು” ಎಂದು ವಿನೋದ್ ಕುಮಾರ್ ಪಾಂಡೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರೆ.

ಚುನಾವಣೆಗೆ ತಯಾರಿ ನಡೆಸಲು ಬಿಹಾರದಲ್ಲಿ ಪಕ್ಷದ ಘಟಕಗಳು ಸಕ್ರಿಯವಾಗಿ ತೊಡಗಿಸಿಕೊಂಡಿವೆ ಮತ್ತು ಅವರೊಂದಿಗೆ ಚರ್ಚೆಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ. ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯುವ ನಿರೀಕ್ಷೆಯಿದೆ.

ಈ ಮಧ್ಯೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜಾರ್ಖಂಡ್‌ನಾದ್ಯಂತ ಶುಕ್ರವಾರ ನಿಗದಿಯಾಗಿದ್ದ ಪ್ರತ್ಯೇಕ ಸರ್ನಾ ಧಾರ್ಮಿಕ ಸಂಹಿತೆಗಾಗಿ ಜೆಎಂಎಂ ಆಯೋಜಿಸಿದ್ದ ಆಂದೋಲನ ಕಾರ್ಯಕ್ರಮವನ್ನು ಮುಂದೂಡಿದೆ.

“ದೇಶದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ. ದೇಶ ನಮ್ಮ ಪ್ರಮುಖ ಆದ್ಯತೆಯಾಗಿದೆ. ಆದ್ದರಿಂದ, ನಾವು ಇದೀಗ ಕಾರ್ಯಕ್ರಮವನ್ನು ಮುಂದೂಡಲು ಮತ್ತು ನಮ್ಮ ಸಶಸ್ತ್ರ ಪಡೆಗಳೊಂದಿಗೆ ದೃಢವಾಗಿ ನಿಲ್ಲಲು ನಿರ್ಧರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ. ಬಿಹಾರ ಚುನಾವಣೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಿಎಂಎಲ್‌ಎ ಆರೋಪಿಯು ಪ್ರಾಸಿಕ್ಯೂಷನ್ ಅವಲಂಬಿಸದ ದಾಖಲೆಗಳ ನಕಲು ಪ್ರತಿ ಪಡೆಯುವ ಹಕ್ಕು ಹೊಂದಿದ್ದಾರೆ: ಸುಪ್ರೀಂ ಕೋರ್ಟ್

ಪಿಎಂಎಲ್‌ಎ ಆರೋಪಿಯು ಪ್ರಾಸಿಕ್ಯೂಷನ್ ಅವಲಂಬಿಸದ ದಾಖಲೆಗಳ ನಕಲು ಪ್ರತಿ ಪಡೆಯುವ ಹಕ್ಕು ಹೊಂದಿದ್ದಾರೆ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...