Homeಮುಖಪುಟನಕ್ಸಲರು ನಡೆಸಿದ ನೆಲಬಾಂಬ್ ಸ್ಫೋಟಕ್ಕೆ 3 ಗ್ರೇಹೌಂಡ್ಸ್ ಕಮಾಂಡೋ ಪೊಲೀಸರ ಸಾವು

ನಕ್ಸಲರು ನಡೆಸಿದ ನೆಲಬಾಂಬ್ ಸ್ಫೋಟಕ್ಕೆ 3 ಗ್ರೇಹೌಂಡ್ಸ್ ಕಮಾಂಡೋ ಪೊಲೀಸರ ಸಾವು

- Advertisement -
- Advertisement -

ತೆಲಂಗಾಣ-ಛತ್ತೀಸ್‌ಗಢ ಗಡಿ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ನಕ್ಸಲರು ನಡೆಸಿದ ನೆಲಬಾಂಬ್ ಸ್ಫೋಟದಲ್ಲಿ ತೆಲಂಗಾಣದ ಮಾವೋವಾದಿ ವಿರೋಧಿ ಕಾರ್ಯಪಡೆಯಾದ ಗ್ರೇಹೌಂಡ್ಸ್‌ನ ಮೂವರು ಜೂನಿಯರ್ ಕಮಾಂಡೋಗಳು ಸಾವನ್ನಪ್ಪಿದ್ದಾರೆ. ಈ ಸ್ಫೋಟವನ್ನು ಮಾವೋವಾದಿಗಳು ನಡೆಸಿದ್ದಾರೆ ಎಂದು ತೆಲಂಗಾಣದ ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸ್ಫೋಟದಲ್ಲಿ ಒಬ್ಬ ರಿಸರ್ವ್ ಸಬ್-ಇನ್ಸ್‌ಪೆಕ್ಟರ್ ಕೂಡ ಗಾಯಗೊಂಡಿದ್ದಾರೆ. ಈ ವರ್ಷ ನಕ್ಸಲರಿಂದ (ಎಲ್‌ಡಬ್ಲ್ಯೂಇ) ಸಾವನ್ನಪ್ಪಿದ ತೆಲಂಗಾಣ ಪೊಲೀಸರ ಮೊದಲ ಮಾರಕ ಘಟನೆ ಇದಾಗಿದೆ.

ಮೃತರನ್ನು ವಿ.ಶ್ರೀಧರ್, ಎನ್.ಪವನ್ ಕಲ್ಯಾಣ್ ಮತ್ತು ಟಿ.ಸಂದೀಪ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಆರ್‌ಎಸ್‌ಐ ಸಿಎಚ್ ರಣಧೀರ್ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಮಾಂಡೋಗಳು ನಿಯಮಿತ ಪ್ರದೇಶದಲ್ಲಿ  ಕಾರ್ಯಾಚರಣೆ ನಡೆಸುತ್ತಿದ್ದಾಗ ನಕ್ಸಲರು ಈ ಸ್ಫೋಟ ನಡೆಸಿದರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. “ಮುಲುಗು ಜಿಲ್ಲೆಯ ವೆಂಕಟಪುರಂ, ವಜೀದು ಮತ್ತು ಪೆರೂರ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶಗಳಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ)ಯ ಶಸ್ತ್ರಸಜ್ಜಿತ ಕಾರ್ಯಕರ್ತರು ಐಇಡಿಗಳನ್ನು ಇರಿಸಿದ್ದರು. ಮಾವೋವಾದಿಗಳು ಇತ್ತೀಚೆಗೆ ಈ ಪ್ರದೇಶದಲ್ಲಿ ಬಾಂಬ್‌ಗಳನ್ನು ಇರಿಸಿರುವುದಾಗಿ ಹೇಳಿಕೆ ನೀಡಿದ್ದರು. ಆದಿವಾಸಿಗಳು ಮತ್ತು ಇತರರಿಗೆ ಈ ಪ್ರದೇಶದಲ್ಲಿ ಸ್ಥಳಾಂತರಗೊಳ್ಳದಂತೆ ಎಚ್ಚರಿಕೆ ನೀಡಿದ್ದರು. ಮಾವೋವಾದಿಗಳು ಇರಿಸಿದ್ದ ಐಇಡಿಗಳನ್ನು ಹೊರತೆಗೆಯಲು, ಮುಲುಗು ಪೊಲೀಸರು ಮತ್ತು ಗ್ರೇಹೌಂಡ್ಸ್ ಘಟಕಗಳನ್ನು ಒಳಗೊಂಡ ಗಸ್ತು ತಂಡವು ಮೇ 7ರ ರಾತ್ರಿ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಮತ್ತು ಮೇ 8ರ ಬೆಳಿಗ್ಗೆಯಿಂದ ಪ್ರದೇಶವನ್ನು ಪರಿಶೀಲಿಸಲು ಮತ್ತು ನೆಲಬಾಂಬ್‌ಗಳನ್ನು ಶೋಧಿಸಲು ಪ್ರಾರಂಭಿಸಿತು” ಎಂದು ತೆಲಂಗಾಣ ಡಿಜಿಪಿ ಡಾ.ಜಿತೇಂದರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪೊಲೀಸ್ ಮೂಲವೊಂದರ ಪ್ರಕಾರ, ಕಮಾಂಡೋಗಳು ನೆಲಬಾಂಬ್‌ಗಳನ್ನು ತೆರವುಗೊಳಿಸುತ್ತಿದ್ದಾಗ ಸ್ಫೋಟಿಸಲಾಯಿತು. “ಒಂದು ನೆಲಬಾಂಬ್ ಅನ್ನು ಮಾವೋವಾದಿಗಳಿಂದ ಸ್ಫೋಟಿಸಲ್ಪಟ್ಟಿದ್ದು, ಇದರ ಪರಿಣಾಮವಾಗಿ ಸಾವುನೋವು ಸಂಭವಿಸಿದೆ. ಬಾಂಬ್ ಸ್ಫೋಟಗೊಂಡ ನಂತರ ಮಾವೋವಾದಿಗಳು ಕಮಾಂಡೋಗಳ ಮೇಲೆಯೂ ಗುಂಡು ಹಾರಿಸಿದರು” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

“… ಮಾರಕ ಆಯುಧಗಳನ್ನು ಹಿಡಿದು ಹೊಂಚು ಹಾಕಿಕೊಂಡು ಕಾಯುತ್ತಿದ್ದ ಮಹಿಳೆಯರು ಸೇರಿದಂತೆ 35-40 ನಿಷೇಧಿತ ಸಿಪಿಐ (ಮಾವೋವಾದಿ)ನ ತಂಡವು ದೂರದಿಂದ ನೆಲಬಾಂಬ್‌ಗಳನ್ನು ಎಸೆದು, ನಂತರ ಗಸ್ತು ಮತ್ತು ಶೋಧ ತಂಡವನ್ನು ಗುರಿಯಾಗಿಸಿಕೊಂಡು ಭಾರೀ ಗುಂಡು ಹಾರಿಸಿತು. ಪೊಲೀಸರನ್ನು ಕೊಲ್ಲುವ ಉದ್ದೇಶದಿಂದ ಶಸ್ತ್ರಸಜ್ಜಿತ ಮಾವೋವಾದಿಗಳು ಮನಬಂದಂತೆ ಗುಂಡು ಹಾರಿಸುವುದನ್ನು ಮುಂದುವರೆಸಿದರು. ಪೊಲೀಸರು ಆತ್ಮರಕ್ಷಣೆಗಾಗಿ ಪ್ರತಿಯಾಗಿ ಗುಂಡು ಹಾರಿಸಿದಾಗ ಮಾವೋವಾದಿಗಳು ಗುಂಡು ಹಾರಿಸುವುದನ್ನು ನಿಲ್ಲಿಸಿ, ಪರಾರಿಯಾದರು” ಎಂದು ಡಿಜಿಪಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಯಾವುದೇ ಉದ್ದೇಶಿತ ಆಕ್ರಮಣಕಾರಿ ಕಾರ್ಯಾಚರಣೆಯ ಸಮಯದಲ್ಲಿ ಸಾವು ಸಂಭವಿಸಿಲ್ಲ ಎಂದು ರಾಜ್ಯ ಪೊಲೀಸ್ ಅಧಿಕಾರಿಗಳು ಹೇಳಿದ್ದರೂ, ಛತ್ತೀಸ್‌ಗಢ ಪೊಲೀಸರು ಕಳೆದ ಮೂರು ವಾರಗಳಿಂದ ರಾಜ್ಯ ಗಡಿಯಲ್ಲಿರುವ ಕರ್ರೆಗುಟ್ಟಾ ಬೆಟ್ಟದಲ್ಲಿ ಮಾವೋವಾದಿಗಳನ್ನು ಬೇಟೆಯಾಡುತ್ತಿದ್ದಾರೆ. ಛತ್ತೀಸ್‌ಗಢ ಕಾರ್ಯಾಚರಣೆಯೊಂದಿಗೆ ರಾಜ್ಯವು ಕೈಜೋಡಿಸಿಲ್ಲ ಎಂದು ತೆಲಂಗಾಣ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ, ಇದು ಅನೇಕ ಮಾವೋವಾದಿಗಳ ಸಾವುನೋವುಗಳಿಗೆ ಕಾರಣವಾಗಿದೆ.

“ಜಂಟಿ ಕಾರ್ಯಾಚರಣೆ ಇಲ್ಲ. ನಿಯಮಿತ ಕಾರ್ಯಾಚರಣೆಯ ಸಮಯದಲ್ಲಿ ಸಾವುನೋವುಗಳು ಸಂಭವಿಸಿವೆ” ಎಂದು ತೆಲಂಗಾಣ ಪೊಲೀಸರ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾವೋವಾದಿಗಳು ಶರಣಾಗುವಂತೆ ಪ್ರೋತ್ಸಾಹಿಸುವುದು ತೆಲಂಗಾಣದ ರಾಜ್ಯ ನೀತಿಯಾಗಿದೆ. ಇಲ್ಲಿಯವರೆಗೆ ಮುಲುಗು ಜಿಲ್ಲೆಯಿಂದ ಮಾತ್ರ ಇತ್ತೀಚಿನ ದಿನಗಳಲ್ಲಿ ಸುಮಾರು 300 ನಕ್ಸಲರ ಶರಣಾಗತಿಗಳು ದಾಖಲಾಗಿವೆ, ಏಕೆಂದರೆ ಜಿಲ್ಲೆ ಛತ್ತೀಸ್‌ಗಢದ ಗಡಿಯಾಗಿದೆ. “ಆರೋಪಿ ಮಾವೋವಾದಿ ಕೇಡರ್ ಗಳನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ” ಎಂದು ಡಿಜಿಪಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ತೆಲಂಗಾಣದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಕೇಂದ್ರವು ಮಾವೋವಾದಿಗಳೊಂದಿಗೆ “ಶಾಂತಿ ಮಾತುಕತೆ” ನಡೆಸಬೇಕೆಂದು ಒತ್ತಾಯಿಸುತ್ತಿರುವ ಸಮಯದಲ್ಲಿ ಈ ಸಾವುಗಳು ಸಂಭವಿಸಿವೆ. ನಾಗರಿಕ ಸಮಾಜ ಸಂಘಟನೆಗಳು ಮತ್ತು ವ್ಯಕ್ತಿಗಳ ತಂಡವು ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಿದಾಗ “ಆಪರೇಷನ್ ಕಾಗರ್ ನಿಲ್ಲಿಸುವಂತೆ ಕೇಂದ್ರಕ್ಕೆ ವಿನಂತಿಸಿದ್ದೇನೆ” ಎಂದು ರೆಡ್ಡಿ ಹೇಳಿದ್ದರು. ಈ ವಿನಂತಿಯನ್ನು ಕಾಂಗ್ರೆಸ್ ರಾಷ್ಟ್ರೀಯ ನಾಯಕತ್ವದ ಗಮನಕ್ಕೆ ತರುವುದಾಗಿ ರೆಡ್ಡಿ ಭರವಸೆ ನೀಡಿದ್ದರು. “ಕಾಂಗ್ರೆಸ್ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ರೆಡ್ಡಿ ಹೇಳಿದ್ದರು.

1989ರಲ್ಲಿ  ಐಪಿಎಸ್ ಅಧಿಕಾರಿ ಕೆ.ಎಸ್.ವ್ಯಾಸ್ ಅವರು ಅವಿಭಜಿತ ಆಂಧ್ರಪ್ರದೇಶದಲ್ಲಿ ಮಾವೋವಾದಿಗಳಿಂದ ಹೆಚ್ಚುತ್ತಿರುವ ಬೆದರಿಕೆಯನ್ನು ಎದುರಿಸಲು ಸ್ಥಾಪಿಸಿದ ಗಣ್ಯ ನಕ್ಸಲ್ ವಿರೋಧಿ ಪಡೆಯೇ ಗ್ರೇಹೌಂಡ್ಸ್ ಆಗಿದೆ. ಇದು ರಚನೆಯಾದಾಗಿನಿಂದ ಮಾವೋವಾದಿಗಳ ಹಲವಾರು ಕಾರ್ಯಾಚರಣೆಗಳನ್ನು ಇದು ತಟಸ್ಥಗೊಳಿಸಿದೆ ಎಂದು ತಿಳಿದುಬಂದಿದೆ. ಗ್ರೇಹೌಂಡ್ಸ್ ವಿರುದ್ಧದ ಅತಿದೊಡ್ಡ ಮಾವೋವಾದಿ ದಾಳಿ 2008ರಲ್ಲಿ ಆಂಧ್ರಪ್ರದೇಶ-ಒಡಿಶಾ ಗಡಿಯಲ್ಲಿರುವ ಬಲಿಮೇಲಾ ಜಲಾಶಯದಲ್ಲಿ ನಡೆದಿತ್ತು. ಈ ದಾಳಿಯಿಂದ ಗ್ರೇಹೌಂಡ್ಸ್ ನ 37 ಸಿಬ್ಬಂದಿ ಕೊಲ್ಲಲ್ಪಟ್ಟಿದ್ದರು.

ಪಾಕಿಸ್ತಾನ ಮೂಲದ ಕಂಟೆಂಟ್ ಪ್ರಸಾರ ಮಾಡದಂತೆ ಒಟಿಟಿ ವೇದಿಕೆಗಳಿಗೆ ಸರ್ಕಾರ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...