Homeಮುಖಪುಟ8,000ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲು ಕೇಳಿಕೊಂಡ ಮೋದಿ ಸರ್ಕಾರ: ಎಕ್ಸ್ ಆರೋಪ

8,000ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲು ಕೇಳಿಕೊಂಡ ಮೋದಿ ಸರ್ಕಾರ: ಎಕ್ಸ್ ಆರೋಪ

ಬಿಜೆಪಿ ಸರ್ಕಾರದ ಈ ಕ್ರಮವನ್ನು "ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ವಿರುದ್ಧ" ಎಂದು ಎಕ್ಸ್‌ ಟೀಕಿಸಿದೆ

- Advertisement -
- Advertisement -

ಸಾಮಾಜಿಕ ಜಾಲತಾಣ ಎಕ್ಸ್‌ (ಹಿಂದಿನ ಟ್ವಿಟರ್) ಕೇಂದ್ರ ಸರ್ಕಾರದಿಂದ 8,000ಕ್ಕೂ ಹೆಚ್ಚು ಖಾತೆಗಳನ್ನು ಭಾರತದಲ್ಲಿ ಬ್ಲಾಕ್ ಮಾಡುವಂತೆ ಆದೇಶವನ್ನು ಪಡೆದಿದೆ ಎಂದು ಮೇ 08ರ ಗುರುವಾರ ಹೇಳಿದೆ. ಈ ಆದೇಶದಲ್ಲಿ, ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳು ಮತ್ತು ಪ್ರಮುಖ ಎಕ್ಸ್‌ ಬಳಕೆದಾರರ ಖಾತೆಗಳು ಒಳಗೊಂಡಿದೆ ಎಂದು ಎಕ್ಸ್‌ನ Global Government Affairs ತಂಡ ತಿಳಿಸಿದೆ.  8000ಕ್ಕೂ ಹೆಚ್ಚು

ಅದಾಗ್ಯೂ, ಬಿಜೆಪಿ ಸರ್ಕಾರದ ಈ ಕ್ರಮವನ್ನು “ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ವಿರುದ್ಧ” ಎಂದು ಎಕ್ಸ್‌ ಟೀಕಿಸಿದ್ದು, ಅದಾಗ್ಯೂ, ಸರ್ಕಾರದ ಈ ಆದೇಶವನ್ನು ಪಾಲಿಸುವ ಪ್ರಕ್ರಿಯೆಯನ್ನು ತಾನು ಆರಂಭಿಸಿರುವುದಾಗಿ ಎಂದು ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಎಕ್ಸ್‌ನ ಗ್ಲೋಬಲ್ ಗೌವರ್ನಮೆಂಟ್ ಅಫೈರ್ಸ್‌, “ಭಾರತ ಸರ್ಕಾರದ ಈ ಕಾರ್ಯನಿರ್ವಾಹಕ ಆದೇಶಗಳು ಭಾರಿ ದಂಡ ಮತ್ತು ಕಂಪನಿಯ ಸ್ಥಳೀಯ ಉದ್ಯೋಗಿಗಳಿಗೆ ಜೈಲು ಶಿಕ್ಷೆಯಂತಹ ಸಂಭಾವ್ಯ ದಂಡನೆಗಳನ್ನು ಒಳಗೊಂಡಿವೆ” ಎಂದು ಹೇಳಿದೆ.

ಅದಾಗ್ಯೂ, ಬ್ಲಾಕ್ ಮಾಡಲು ಹೇಳಲಾಗಿರುವ ಹೆಚ್ಚಿನ ಖಾತೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಯಾವ ಪೋಸ್ಟ್‌ಗಳು ಭಾರತದ ಸ್ಥಳೀಯ ಕಾನೂನುಗಳನ್ನು ಉಲ್ಲಂಘಿಸಿವೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಅಥವಾ ಪುರಾವೆಗಳನ್ನು ನೀಡಿಲ್ಲ ಎಂದು ಎಕ್ಸ್‌ ಆರೋಪಿಸಿದೆ. “ಗಣನೀಯ ಸಂಖ್ಯೆಯ ಖಾತೆಗಳಿಗೆ, ಬ್ಲಾಕ್ ಮಾಡಲು ಯಾವುದೇ ಸಾಕ್ಷ್ಯ ಅಥವಾ ಸಮರ್ಥನೆಯನ್ನು ನೀಡಲಾಗಿಲ್ಲ,” ಎಂದು ಎಕ್ಸ್‌ ಹೇಳಿದೆ.

ಅದಾಗ್ಯೂ, ಕೇಂದ್ರ ಸರ್ಕಾರದ ಈ ಆದೇಶಗಳನ್ನು ತಾನು ಒಪ್ಪುವುದಿಲ್ಲ ಎಂದು ಎಕ್ಸ್‌ ಸ್ಪಷ್ಟಪಡಿಸಿದೆ. ಸಂಪೂರ್ಣ ಖಾತೆಗಳನ್ನು ಬ್ಲಾಕ್ ಮಾಡುವುದು “ಅನಗತ್ಯ”ವಾಗಿದ್ದು, ಅದು “ಸೆನ್ಸಾರ್‌ಶಿಪ್‌ಗೆ ಸಮಾನ”ವಾಗಿರುವತ್ತದೆ, ಇದು ಈಗಿರುವ ಮತ್ತು ಭವಿಷ್ಯದ ವಿಷಯಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಎಕ್ಸ್‌ ಆತಂಕ ವ್ಯಕ್ತಪಡಿಸಿದೆ.

ಸರ್ಕಾರದ ಈ ಆದೇಶವು ಇದು ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ಧಕ್ಕೆ ತರುತ್ತದೆ ಎಂದು ಹೇಳಿರುವ ಎಕ್ಸ್‌, ಆದಾಗ್ಯೂ, ಭಾರತದಲ್ಲಿ ಪ್ಲಾಟ್‌ಫಾರ್ಮ್ ಅನ್ನು ಲಭ್ಯವಾಗಿಡುವುದು ಭಾರತೀಯರಿಗೆ ಮಾಹಿತಿಯನ್ನು ಪಡೆಯಲು ಅತ್ಯಂತ ಮುಖ್ಯ ಎಂದು ಪರಿಗಣಿಸಿ, ಆದೇಶವನ್ನು ಪಾಲಿಸುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ.

ಎಕ್ಸ್‌ ಈ ಕಾರ್ಯನಿರ್ವಾಹಕ ಆದೇಶಗಳನ್ನು ಸಾರ್ವಜನಿಕಗೊಳಿಸುವುದು ಪಾರದರ್ಶಕತೆಗೆ ಅತ್ಯಗತ್ಯ ಎಂದು ಪರಿಗಣಿಸಿರುವುದಾಗಿ ಹೇಳಿದ್ದು, ಅದನ್ನು ಪ್ರಕಟಿಸದೆ ಇರುವುದು ಜವಾಬ್ದಾರಿಯನ್ನು ಕಡಿಮೆ ಮಾಡುತ್ತದೆ ಮತ್ತು ಅನಿಯಂತ್ರಿತ ನಿರ್ಧಾರ ತೆಗೆದುಕೊಳ್ಳುವಿಕೆಗೆ ಕಾರಣವಾಗಬಹುದು ಎಂದು ಎಕ್ಸ್‌ ಹೇಳಿದೆ. ಆದರೆ, ಕಾನೂನು ನಿರ್ಬಂಧಗಳಿಂದಾಗಿ ಈ ಆದೇಶಗಳನ್ನು ಪ್ರಕಟಿಸಲು ಸಾಧ್ಯವಾಗಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಅದಾಗ್ಯೂ, ಈ ಆದೇಶಗಳ ವಿರುದ್ಧ ತನ್ನ ಕಾನೂನು ಆಯ್ಕೆಗಳನ್ನು ತಾನು ಪರಿಶೀಲಿಸುತ್ತಿರುವುದಾಗಿ ಎಕ್ಸ್‌ ಹೇಳಿದ್ದು, ಭಾರತದ ಕಾನೂನುಗಳ ಪ್ರಕಾರ ಎಕ್ಸ್‌ಗೆ ಈ ಆದೇಶಗಳ ವಿರುದ್ಧ ನೇರವಾಗಿ ಕಾನೂನು ಸವಾಲು ಹಾಕುವ ಸಾಮರ್ಥ್ಯ ಸೀಮಿತವಾಗಿದೆ ಎಂದು ಅದು ಹೇಳಿದೆ. ಆದರೆ, ಈ ಆದೇಶದಿಂದ ತೊಂದರೆಗೆ ಒಳಗಾದ ಬಳಕೆದಾರರು ನ್ಯಾಯಾಲಯದ ಮೂಲಕ ಸೂಕ್ತ ಪರಿಹಾರವನ್ನು ಕೋರಲು ಅದು ಕೇಳಿಕೊಂಡಿದೆ. ಈ ಸಂಬಂಧ ಕೆಲವು ಕಾನೂನು ಸಹಾಯ ಸಂಸ್ಥೆಗಳಾದ iProbono India, National Legal Services Authority, Karnataka Legal Services Authority, ಮತ್ತು Supreme Court Legal Services ಗಳ ಸಂಪರ್ಕ ವಿವರಗಳನ್ನು ಎಕ್ಸ್‌ ಒದಗಿಸಿದೆ.

ಈ ನಡುವೆ, ಮಾನವ ಹಕ್ಕುಗಳು ಮತ್ತು ಅಲ್ಪಸಂಖ್ಯಾತರ ವಿಷಯಗಳ ಮೇಲೆ ಕೇಂದ್ರೀಕರಿಸುವ ಸುದ್ದಿ ಸಂಸ್ಥೆ Maktoob Media, ಇಂಡಿಯನ್ ಎಕ್ಸ್‌ಪ್ರೆಸ್‌ನ ಉಪ ಸಂಪಾದಕ, ಹಿರಿಯ ಪತ್ರಕರ್ತ ಮುಝಮಿಲ್ ಜಲೀಲ್, ಸುದ್ದಿ ವೆಬ್‌ಸೈಟ್ ಕಾಶ್ಮೀರಿಯತ್, ಅರ್ಪಿತ್ ಶರ್ಮಾ, ರಕ್ಷಣಾ ವಿಷಯಗಳ ಮ್ಯಾಗಝೀನ್ ಫೋರ್ಸ್, ಜಾಕ್ಸನ್ ಹಿನ್‌ಕಲ್, ಮಾರಿಯೋ ನೌಫಲ್‌ರಂತಹ ಪ್ರಮುಖ ಬಳಕೆದಾರರ ಖಾತೆಗಳು ಸಹ ಬ್ಲಾಕ್ ಆಗಿವೆ ಎಂದು ವರದಿಯಾಗಿದೆ.

ಕೇಂದ್ರ ಸರ್ಕಾರದ ಈ ಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು ಈ ಖಾತೆಗಳು ತಪ್ಪು ಮಾಹಿತಿ ಹರಡುತ್ತವೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿದರೆ, ಇತರರು ಇದನ್ನು ಮುಕ್ತ ಅಭಿವ್ಯಕ್ತಿ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಟೀಕಿಸಿದ್ದಾರೆ.

2024ರಲ್ಲಿ ತನ್ನ ವಿರುದ್ಧ ನಡೆದ ಬೃಹತ್ ರೈತ ಪ್ರತಿಭಟನೆಯ ಸಂದರ್ಭದಲ್ಲಿ ಕೂಡಾ ಕೇಂದ್ರ ಸರ್ಕಾರ ಎಕ್ಸ್‌ನ ಹಲವು ಖಾತೆಗಳನ್ನು ಬ್ಲಾಕ್ ಮಾಡುವಂತೆ ಆದೇಶಿಸಿತ್ತು. ಈ ವೇಳೆ ಕೂಡಾ ಎಕ್ಸ್‌ ಈ ಆದೇಶವನ್ನು ಮುಕ್ತ ಅಭಿವ್ಯಕ್ತಿಗೆ ಧಕ್ಕೆ ಎಂದು ಟೀಕಿಸಿತ್ತು. 8000ಕ್ಕೂ ಹೆಚ್ಚು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಕ್ಸಲರು ನಡೆಸಿದ ನೆಲಬಾಂಬ್ ಸ್ಫೋಟಕ್ಕೆ 3 ಗ್ರೇಹೌಂಡ್ಸ್ ಕಮಾಂಡೋ ಪೊಲೀಸರ ಸಾವು

ನಕ್ಸಲರು ನಡೆಸಿದ ನೆಲಬಾಂಬ್ ಸ್ಫೋಟಕ್ಕೆ 3 ಗ್ರೇಹೌಂಡ್ಸ್ ಕಮಾಂಡೋ ಪೊಲೀಸರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...