Homeಮುಖಪುಟ8,000ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲು ಕೇಳಿಕೊಂಡ ಮೋದಿ ಸರ್ಕಾರ: ಎಕ್ಸ್ ಆರೋಪ

8,000ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲು ಕೇಳಿಕೊಂಡ ಮೋದಿ ಸರ್ಕಾರ: ಎಕ್ಸ್ ಆರೋಪ

ಬಿಜೆಪಿ ಸರ್ಕಾರದ ಈ ಕ್ರಮವನ್ನು "ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ವಿರುದ್ಧ" ಎಂದು ಎಕ್ಸ್‌ ಟೀಕಿಸಿದೆ

- Advertisement -
- Advertisement -

ಸಾಮಾಜಿಕ ಜಾಲತಾಣ ಎಕ್ಸ್‌ (ಹಿಂದಿನ ಟ್ವಿಟರ್) ಕೇಂದ್ರ ಸರ್ಕಾರದಿಂದ 8,000ಕ್ಕೂ ಹೆಚ್ಚು ಖಾತೆಗಳನ್ನು ಭಾರತದಲ್ಲಿ ಬ್ಲಾಕ್ ಮಾಡುವಂತೆ ಆದೇಶವನ್ನು ಪಡೆದಿದೆ ಎಂದು ಮೇ 08ರ ಗುರುವಾರ ಹೇಳಿದೆ. ಈ ಆದೇಶದಲ್ಲಿ, ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳು ಮತ್ತು ಪ್ರಮುಖ ಎಕ್ಸ್‌ ಬಳಕೆದಾರರ ಖಾತೆಗಳು ಒಳಗೊಂಡಿದೆ ಎಂದು ಎಕ್ಸ್‌ನ Global Government Affairs ತಂಡ ತಿಳಿಸಿದೆ.  8000ಕ್ಕೂ ಹೆಚ್ಚು

ಅದಾಗ್ಯೂ, ಬಿಜೆಪಿ ಸರ್ಕಾರದ ಈ ಕ್ರಮವನ್ನು “ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ವಿರುದ್ಧ” ಎಂದು ಎಕ್ಸ್‌ ಟೀಕಿಸಿದ್ದು, ಅದಾಗ್ಯೂ, ಸರ್ಕಾರದ ಈ ಆದೇಶವನ್ನು ಪಾಲಿಸುವ ಪ್ರಕ್ರಿಯೆಯನ್ನು ತಾನು ಆರಂಭಿಸಿರುವುದಾಗಿ ಎಂದು ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಎಕ್ಸ್‌ನ ಗ್ಲೋಬಲ್ ಗೌವರ್ನಮೆಂಟ್ ಅಫೈರ್ಸ್‌, “ಭಾರತ ಸರ್ಕಾರದ ಈ ಕಾರ್ಯನಿರ್ವಾಹಕ ಆದೇಶಗಳು ಭಾರಿ ದಂಡ ಮತ್ತು ಕಂಪನಿಯ ಸ್ಥಳೀಯ ಉದ್ಯೋಗಿಗಳಿಗೆ ಜೈಲು ಶಿಕ್ಷೆಯಂತಹ ಸಂಭಾವ್ಯ ದಂಡನೆಗಳನ್ನು ಒಳಗೊಂಡಿವೆ” ಎಂದು ಹೇಳಿದೆ.

ಅದಾಗ್ಯೂ, ಬ್ಲಾಕ್ ಮಾಡಲು ಹೇಳಲಾಗಿರುವ ಹೆಚ್ಚಿನ ಖಾತೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಯಾವ ಪೋಸ್ಟ್‌ಗಳು ಭಾರತದ ಸ್ಥಳೀಯ ಕಾನೂನುಗಳನ್ನು ಉಲ್ಲಂಘಿಸಿವೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಅಥವಾ ಪುರಾವೆಗಳನ್ನು ನೀಡಿಲ್ಲ ಎಂದು ಎಕ್ಸ್‌ ಆರೋಪಿಸಿದೆ. “ಗಣನೀಯ ಸಂಖ್ಯೆಯ ಖಾತೆಗಳಿಗೆ, ಬ್ಲಾಕ್ ಮಾಡಲು ಯಾವುದೇ ಸಾಕ್ಷ್ಯ ಅಥವಾ ಸಮರ್ಥನೆಯನ್ನು ನೀಡಲಾಗಿಲ್ಲ,” ಎಂದು ಎಕ್ಸ್‌ ಹೇಳಿದೆ.

ಅದಾಗ್ಯೂ, ಕೇಂದ್ರ ಸರ್ಕಾರದ ಈ ಆದೇಶಗಳನ್ನು ತಾನು ಒಪ್ಪುವುದಿಲ್ಲ ಎಂದು ಎಕ್ಸ್‌ ಸ್ಪಷ್ಟಪಡಿಸಿದೆ. ಸಂಪೂರ್ಣ ಖಾತೆಗಳನ್ನು ಬ್ಲಾಕ್ ಮಾಡುವುದು “ಅನಗತ್ಯ”ವಾಗಿದ್ದು, ಅದು “ಸೆನ್ಸಾರ್‌ಶಿಪ್‌ಗೆ ಸಮಾನ”ವಾಗಿರುವತ್ತದೆ, ಇದು ಈಗಿರುವ ಮತ್ತು ಭವಿಷ್ಯದ ವಿಷಯಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಎಕ್ಸ್‌ ಆತಂಕ ವ್ಯಕ್ತಪಡಿಸಿದೆ.

ಸರ್ಕಾರದ ಈ ಆದೇಶವು ಇದು ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ಧಕ್ಕೆ ತರುತ್ತದೆ ಎಂದು ಹೇಳಿರುವ ಎಕ್ಸ್‌, ಆದಾಗ್ಯೂ, ಭಾರತದಲ್ಲಿ ಪ್ಲಾಟ್‌ಫಾರ್ಮ್ ಅನ್ನು ಲಭ್ಯವಾಗಿಡುವುದು ಭಾರತೀಯರಿಗೆ ಮಾಹಿತಿಯನ್ನು ಪಡೆಯಲು ಅತ್ಯಂತ ಮುಖ್ಯ ಎಂದು ಪರಿಗಣಿಸಿ, ಆದೇಶವನ್ನು ಪಾಲಿಸುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ.

ಎಕ್ಸ್‌ ಈ ಕಾರ್ಯನಿರ್ವಾಹಕ ಆದೇಶಗಳನ್ನು ಸಾರ್ವಜನಿಕಗೊಳಿಸುವುದು ಪಾರದರ್ಶಕತೆಗೆ ಅತ್ಯಗತ್ಯ ಎಂದು ಪರಿಗಣಿಸಿರುವುದಾಗಿ ಹೇಳಿದ್ದು, ಅದನ್ನು ಪ್ರಕಟಿಸದೆ ಇರುವುದು ಜವಾಬ್ದಾರಿಯನ್ನು ಕಡಿಮೆ ಮಾಡುತ್ತದೆ ಮತ್ತು ಅನಿಯಂತ್ರಿತ ನಿರ್ಧಾರ ತೆಗೆದುಕೊಳ್ಳುವಿಕೆಗೆ ಕಾರಣವಾಗಬಹುದು ಎಂದು ಎಕ್ಸ್‌ ಹೇಳಿದೆ. ಆದರೆ, ಕಾನೂನು ನಿರ್ಬಂಧಗಳಿಂದಾಗಿ ಈ ಆದೇಶಗಳನ್ನು ಪ್ರಕಟಿಸಲು ಸಾಧ್ಯವಾಗಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಅದಾಗ್ಯೂ, ಈ ಆದೇಶಗಳ ವಿರುದ್ಧ ತನ್ನ ಕಾನೂನು ಆಯ್ಕೆಗಳನ್ನು ತಾನು ಪರಿಶೀಲಿಸುತ್ತಿರುವುದಾಗಿ ಎಕ್ಸ್‌ ಹೇಳಿದ್ದು, ಭಾರತದ ಕಾನೂನುಗಳ ಪ್ರಕಾರ ಎಕ್ಸ್‌ಗೆ ಈ ಆದೇಶಗಳ ವಿರುದ್ಧ ನೇರವಾಗಿ ಕಾನೂನು ಸವಾಲು ಹಾಕುವ ಸಾಮರ್ಥ್ಯ ಸೀಮಿತವಾಗಿದೆ ಎಂದು ಅದು ಹೇಳಿದೆ. ಆದರೆ, ಈ ಆದೇಶದಿಂದ ತೊಂದರೆಗೆ ಒಳಗಾದ ಬಳಕೆದಾರರು ನ್ಯಾಯಾಲಯದ ಮೂಲಕ ಸೂಕ್ತ ಪರಿಹಾರವನ್ನು ಕೋರಲು ಅದು ಕೇಳಿಕೊಂಡಿದೆ. ಈ ಸಂಬಂಧ ಕೆಲವು ಕಾನೂನು ಸಹಾಯ ಸಂಸ್ಥೆಗಳಾದ iProbono India, National Legal Services Authority, Karnataka Legal Services Authority, ಮತ್ತು Supreme Court Legal Services ಗಳ ಸಂಪರ್ಕ ವಿವರಗಳನ್ನು ಎಕ್ಸ್‌ ಒದಗಿಸಿದೆ.

ಈ ನಡುವೆ, ಮಾನವ ಹಕ್ಕುಗಳು ಮತ್ತು ಅಲ್ಪಸಂಖ್ಯಾತರ ವಿಷಯಗಳ ಮೇಲೆ ಕೇಂದ್ರೀಕರಿಸುವ ಸುದ್ದಿ ಸಂಸ್ಥೆ Maktoob Media, ಇಂಡಿಯನ್ ಎಕ್ಸ್‌ಪ್ರೆಸ್‌ನ ಉಪ ಸಂಪಾದಕ, ಹಿರಿಯ ಪತ್ರಕರ್ತ ಮುಝಮಿಲ್ ಜಲೀಲ್, ಸುದ್ದಿ ವೆಬ್‌ಸೈಟ್ ಕಾಶ್ಮೀರಿಯತ್, ಅರ್ಪಿತ್ ಶರ್ಮಾ, ರಕ್ಷಣಾ ವಿಷಯಗಳ ಮ್ಯಾಗಝೀನ್ ಫೋರ್ಸ್, ಜಾಕ್ಸನ್ ಹಿನ್‌ಕಲ್, ಮಾರಿಯೋ ನೌಫಲ್‌ರಂತಹ ಪ್ರಮುಖ ಬಳಕೆದಾರರ ಖಾತೆಗಳು ಸಹ ಬ್ಲಾಕ್ ಆಗಿವೆ ಎಂದು ವರದಿಯಾಗಿದೆ.

ಕೇಂದ್ರ ಸರ್ಕಾರದ ಈ ಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು ಈ ಖಾತೆಗಳು ತಪ್ಪು ಮಾಹಿತಿ ಹರಡುತ್ತವೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿದರೆ, ಇತರರು ಇದನ್ನು ಮುಕ್ತ ಅಭಿವ್ಯಕ್ತಿ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಟೀಕಿಸಿದ್ದಾರೆ.

2024ರಲ್ಲಿ ತನ್ನ ವಿರುದ್ಧ ನಡೆದ ಬೃಹತ್ ರೈತ ಪ್ರತಿಭಟನೆಯ ಸಂದರ್ಭದಲ್ಲಿ ಕೂಡಾ ಕೇಂದ್ರ ಸರ್ಕಾರ ಎಕ್ಸ್‌ನ ಹಲವು ಖಾತೆಗಳನ್ನು ಬ್ಲಾಕ್ ಮಾಡುವಂತೆ ಆದೇಶಿಸಿತ್ತು. ಈ ವೇಳೆ ಕೂಡಾ ಎಕ್ಸ್‌ ಈ ಆದೇಶವನ್ನು ಮುಕ್ತ ಅಭಿವ್ಯಕ್ತಿಗೆ ಧಕ್ಕೆ ಎಂದು ಟೀಕಿಸಿತ್ತು. 8000ಕ್ಕೂ ಹೆಚ್ಚು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಕ್ಸಲರು ನಡೆಸಿದ ನೆಲಬಾಂಬ್ ಸ್ಫೋಟಕ್ಕೆ 3 ಗ್ರೇಹೌಂಡ್ಸ್ ಕಮಾಂಡೋ ಪೊಲೀಸರ ಸಾವು

ನಕ್ಸಲರು ನಡೆಸಿದ ನೆಲಬಾಂಬ್ ಸ್ಫೋಟಕ್ಕೆ 3 ಗ್ರೇಹೌಂಡ್ಸ್ ಕಮಾಂಡೋ ಪೊಲೀಸರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...