Homeಮುಖಪುಟವಿಕಿಪೀಡಿಯಾ VS ಎಎನ್‌ಐ | ಪುಟ ತೆಗೆದು ಹಾಕುವ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಮಾನನಷ್ಟ...

ವಿಕಿಪೀಡಿಯಾ VS ಎಎನ್‌ಐ | ಪುಟ ತೆಗೆದು ಹಾಕುವ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಮಾನನಷ್ಟ ಮೊಕದ್ದಮೆಯ ಹೊಸ ವಿಚಾರಣೆ

- Advertisement -
- Advertisement -

ಎರಡು ಸಂಸ್ಥೆಗಳ (ವಿಕಿಮೀಡಿಯ-ಎಎನ್‌ಐ) ನಡುವಿನ ಕಾನೂನು ವಿವಾದದ ಬಗ್ಗೆ ವಿವರಗಳನ್ನು ಹೊಂದಿರುವ ‘ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ vs ವಿಕಿಮೀಡಿಯ ಫೌಂಡೇಶನ್’ ಎಂಬ ಶೀರ್ಷಿಕೆಯ ವಿಕಿಪೀಡಿಯಾ ಪುಟವನ್ನು ತೆಗೆದು ಹಾಕುವಂತೆ ವಿಕಿಮೀಡಿಯ ಫೌಂಡೇಶನ್‌ಗೆ ದೆಹಲಿ ಹೈಕೋರ್ಟ್ ನೀಡಿದ್ದ ನಿರ್ದೇಶನವನ್ನು ಸುಪ್ರೀಂ ಕೋರ್ಟ್ ಗುರುವಾರ (ಮೇ.8) ರದ್ದುಗೊಳಿಸಿದೆ ಎಂದು barandbench.com ವರದಿ ಮಾಡಿದೆ.

ದೆಹಲಿ ಹೈಕೋರ್ಟ್‌ನಲ್ಲಿ ವಿಕಿಪೀಡಿಯಾ ವಿರುದ್ಧ ಎಎನ್‌ಐ ಸುದ್ದಿ ಸಂಸ್ಥೆ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆ ಸೇರಿದಂತೆ ಇತರ ಮಾಹಿತಿಗಳನ್ನು ವಿವಾದಕ್ಕೀಡಾಗಿದ್ದ ವಿಕಿಪೀಡಿಯಾ ಪುಟ ಹೊಂದಿದೆ.

“ಕಳೆದ ವರ್ಷದ ಈ ಪುಟಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ್ದ ದೆಹಲಿ ಹೈಕೋರ್ಟ್, ನ್ಯಾಯಾಲಯದ ಅವಲೋಕನಗಳ ಕುರಿತ ಚರ್ಚೆಯು ನ್ಯಾಯಾಂಗ ನಿಂದನೆಗೆ ಕಾರಣವಾಗುತ್ತದೆ” ಎಂದು ಹೇಳಿತ್ತು.

ಹೈಕೋರ್ಟ್ ವಿಕಿಪೀಡಿಯ ಪುಟ ತೆಗೆದು ಹಾಕುವಂತೆ ಹೊರಡಿಸಿದ್ದ ಆದೇಶದ ವಿರುದ್ಧ ವಿಕಿಮೀಡಿಯಾ ಫೌಂಡೇಶನ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಅಭಯ್ ಎಸ್. ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ನ್ಯಾಯಪೀಠ ಗುರುವಾರ ಪುರಸ್ಕರಿಸಿದೆ.

“ಹೈಕೋರ್ಟ್ ಹೊರಡಿಸಿದ ನಿರ್ದೇಶನವನ್ನು ಹೊರಡಿಸಲು ಸಾಧ್ಯವಿಲ್ಲ ಎಂದು ಹೇಳಲು ನಮಗೆ ಯಾವುದೇ ಹಿಂಜರಿಕೆಯಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಮಾಧ್ಯಮಗಳಿಗೆ ವಿಷಯವನ್ನು ಅಳಿಸಲು ಅಥವಾ ತೆಗೆದುಹಾಕಲು ಹೇಳುವುದು ನ್ಯಾಯಾಂಗದ ಕೆಲಸವಲ್ಲ. ಅಂತಹ ಆದೇಶವನ್ನು ಸೂಕ್ತ ಕ್ರಮಗಳಲ್ಲಿ ಪ್ರಶ್ನಿಸಲು ಮಾಧ್ಯಮಗಳಿಗೆ ಮುಕ್ತ ಅವಕಾಶವಿದೆ” ಎಂದಿದೆ.

“ಉದಾರವಾದಿ ಪ್ರಜಾಪ್ರಭುತ್ವದಲ್ಲಿ ನ್ಯಾಯಾಂಗ ಮತ್ತು ಮಾಧ್ಯಮಗಳು ಪರಸ್ಪರ ಬೆಂಬಲಿಸಬೇಕು” ಎಂದು ನ್ಯಾಯಾಲಯವು ಒತ್ತಿ ಹೇಳಿದೆ.

ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಖಿಲ್ ಸಿಬಲ್, ಟ್ರೈಲೀಗಲ್‌ನ ವಕೀಲರಾದ ನಿಖಿಲ್ ನರೇಂದ್ರನ್ ಮತ್ತು ಟೈನ್ ಅಬ್ರಹಾಂ ಜೊತೆಗೆ ಎಝೆಡ್‌ಬಿ & ಪಾರ್ಟ್‌ನರ್ಸ್‌ನ ವಕೀಲರಾದ ವಿಜಯೇಂದ್ರ ಪ್ರತಾಪ್ ಸಿಂಗ್ ಮತ್ತು ಅಭಿಜ್ಞಾನ್ ಝಾ ವಿಕಿಪೀಡಿಯಾ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ವಕೀಲ ಸಾಹಿಲ್ ತಗೋತ್ರ ಅವರೊಂದಿಗೆ ವಕೀಲ ಸಿದ್ಧಾಂತ್ ಕುಮಾರ್ ಅವರು ಎನ್‌ಎನ್‌ಐ ಪರವಾಗಿ ವಾದ ಮಂಡಿಸಿದ್ದರು.

ವಿಕಿಪೀಡಿಯಾ ಪುಟವನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಈ ಹಿಂದೆ ಟೀಕಿಸಿದ್ದ ಸುಪ್ರೀಂ ಕೋರ್ಟ್, “ನ್ಯಾಯಾಧೀಶರು ಇಷ್ಟಪಡುವುದಿಲ್ಲ ಎಂಬ ಕಾರಣಕ್ಕೆ ಹೈಕೋರ್ಟ್‌ ಪ್ರಕ್ರಿಯೆಗಳ ಕುರಿತಾದ ಮಾಹಿತಿಯನ್ನು ತೆಗೆದುಹಾಕುವಂತೆ ಆದೇಶಿಸಲು ಸಾಧ್ಯವಿಲ್ಲ” ಎಂದಿತ್ತು.

ಎಎನ್‌ಐ ಕುರಿತಾದ ವಿಕಿಪೀಡಿಯಾ ಪುಟದಲ್ಲಿ, ‘ಅದು (ಎಎನ್‌ಐ) ಪ್ರಸ್ತುತ ಕೇಂದ್ರ ಸರ್ಕಾರದ ಪ್ರಚಾರ ಸಾಧನ’ ಎಂದು ಮಾಹಿತಿ ಎಡಿಟ್ ಮಾಡಲು ವಿಕಿಮೀಡಿಯಾ ಫೌಂಡೇಶನ್ ಅನುಮತಿಸಿದೆ ಎಂದು ಆರೋಪಿಸಿ ಎಎನ್‌ಐ ಮಾನನಷ್ಟ ಮೊಕದ್ದಮೆ ಹೂಡಿರುವುದು ಈ ಪ್ರಕರಣದ ಮೂಲ.

ಎಎನ್‌ಐ ಹೂಡಿರುವ ಮೊಕದ್ದಮೆ ಸಂಬಂಧ ಜುಲೈ 9, 2024 ರಂದು ವಿಕಿಪೀಡಿಯಾದ ಮಾತೃ ಸಂಸ್ಥೆ ವಿಕಿಮೀಡಿಯಾ ಫೌಂಡೇಶನ್‌ಗೆ ಸಮನ್ಸ್ ಜಾರಿ ಮಾಡಿದ್ದ ದೆಹಲಿ ಹೈಕೋರ್ಟ್, ಎಎನ್‌ಐನ ವಿಕಿಪೀಡಿಯಾ ಪುಟದಲ್ಲಿ ವಿಷಯಗಳನ್ನು ಎಡಿಟ್ ಮಾಡಿದ ಮೂವರ ಮಾಹಿತಿ ಬಹಿರಂಗಪಡಿಸುವಂತೆ ಆದೇಶಿಸಿತ್ತು.

ನಂತರ, ಹೈಕೋರ್ಟ್ ಆದೇಶವನ್ನು ವಿಕಿಮೀಡಿಯಾ ಪಾಲಿಸಿಲ್ಲ ಎಂದು ಆರೋಪಿಸಿದ್ದ ಎಎನ್‌ಐ, ಹೈಕೋರ್ಟ್‌ನ ಏಕ ಸದಸ್ಯ ಪೀಠದ ಮುಂದೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.

ಸೆಪ್ಟೆಂಬರ್ 5, 2024ರಂದು ಏಕ ಸದಸ್ಯ ಪೀಠದ ನ್ಯಾಯಮೂರ್ತಿ ನವೀನ್ ಚಾವ್ಲಾ ಅವರು ವಿಕಿಮೀಡಿಯಾದ ನಡವಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಅಕ್ಟೋಬರ್ 25ರಂದು ವಿಕಿಮೀಡಿಯಾದ ಅಧಿಕೃತ ಪ್ರತಿನಿಧಿಯೊಬ್ಬರು ನ್ಯಾಯಾಲಯದಲ್ಲಿ ವೈಯಕ್ತಿಕವಾಗಿ ಹಾಜರಿರಬೇಕು ಎಂದು ಆದೇಶಿಸಿದ್ದರು. ನಂತರ ವಿಕಿಮೀಡಿಯಾ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು.

ಈ ವಿಷಯ ವಿಭಾಗೀಯ ಪೀಠದ ಮುಂದೆ ಬಂದಾಗ, ಪ್ರಕರಣದ ಬಗ್ಗೆಯೇ ಒಂದು ಪುಟವನ್ನು ರಚಿಸಲಾಗಿದೆ ಎಂದು ಪೀಠ ಗಮನಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪುಟವನ್ನು ಪ್ರಕಟಿಸಲು ಅನುಮತಿಸಿದ್ದಕ್ಕೆ ಹೈಕೋರ್ಟ್ ವಿಕಿಪೀಡಿಯಾ ವಿರುದ್ದ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ಮುಖ್ಯ ನ್ಯಾಯಮೂರ್ತಿ ಮನಮೋಹನ್ (ಈಗ ಸುಪ್ರೀಂ ಕೋರ್ಟ್‌ಗೆ ಬಡ್ತಿ ಪಡೆದಿದ್ದಾರೆ) ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರ ಪೀಠವು ‘ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ vs ವಿಕಿಮೀಡಿಯ ಫೌಂಡೇಶನ್’ ಎಂಬ ಶೀರ್ಷಿಕೆಯ ಪುಟವನ್ನು ತೆಗೆದು ಹಾಕುವಂತೆ ವಿಕಿಪೀಡಿಯಾಗೆ ಆದೇಶಿಸಿತ್ತು.

ವಿಕಿಪೀಡಿಯಾ ಆದೇಶವನ್ನು ಪಾಲಿಸಿದರೂ, ಅದು ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಈ ನಡುವೆ, ಎಎನ್‌ಐ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಎಎನ್‌ಐನ ವಿಕಿಪೀಡಿಯಾ ಪುಟದಲ್ಲಿ ಸೇರಿಸಲಾದ ಮಾನನಷ್ಟಕರ ಮಾಹಿತಿಗಳನ್ನು ತೆಗೆದು ಹಾಕುವಂತೆ ವಿಕಿಪೀಡಿಯಾಗೆ ಏಪ್ರಿಲ್ 2ರಂದು ಮಧ್ಯಂತರ ಆದೇಶ ಆದೇಶ ನೀಡಿತ್ತು.

ಈ ಆದೇಶವನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 17 ರಂದು ರದ್ದುಗೊಳಿಸಿದೆ. ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್‌ನ ಏಕ ಸದಸ್ಯ ನ್ಯಾಯಾಧೀಶರು ಹೊಸದಾಗಿ ವಿಚಾರಣೆ ನಡೆಸಲಿದ್ದಾರೆ.

ಹೊಸ ವಿಚಾರಣೆ ಆರಂಭ

ಎಎನ್‌ಐ ಮತ್ತು ವಿಕಿಮೀಡಿಯಾ ನಡುವಿನ ಮಾನನಷ್ಟ ಪ್ರಕರಣದ ಹೊಸ ವಿಚಾರಣೆ ಗುರುವಾರ ದೆಹಲಿ ಹೈಕೋರ್ಟ್‌ನ ಏಕ ಸದಸ್ಯ ನ್ಯಾಯಾಧೀಶರ ಪೀಠ ಆರಂಭಿಸಿದೆ.

ವಿಕಿಪೀಡಿಯಾದಲ್ಲಿ ತನ್ನ ಬಗ್ಗೆ ಇರುವ ಮಾನನಷ್ಟಕರ ಮಾಹಿತಿಗೆ ಎಎನ್‌ಐ ಮಧ್ಯಂತರ ತಡೆಯಾಜ್ಞೆ ಕೋರಿದೆ. ಈ ಹಿನ್ನೆಲೆ, ವಿಕಿಪೀಡಿಯಾದ ಮಾತೃ ಸಂಸ್ಥೆ ವಿಕಿಮೀಡಿಯಾ ಫೌಂಡೇಶನ್‌ಗೆ ಶುಕ್ರವಾರ (ಮೇ.8) ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಜ್ಯೋತಿ ಸಿಂಗ್ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದ್ದು, ಜುಲೈ 7ಕ್ಕೆ ಮುಂದಿನ ವಿಚಾರಣೆ ನಿಗದಿ ಮಾಡಿದ್ದಾರೆ.

ವಿಕಿಮೀಡಿಯಾದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಖಿಲ್ ಸಿಬಲ್, ನೋಟಿಸ್‌ಗೆ ಉತ್ತರಿಸಲು ಹೆಚ್ಚಿನ ಕಾಲವಕಾಶ ಕೋರಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸಿಂಗ್ ಅವರು, ಎಎನ್‌ಐ ಆರೋಪ ನಿಜವೆಂದು ಕಂಡುಬಂದರೆ ಅದರ ಪರಿಣಾಮವನ್ನು ಯಾರು ಎದುರಿಸಬೇಕು? ಎಂದು ಪ್ರಶ್ನಿಸಿದ್ದಾರೆ.

ಎಎನ್‌ಐ ಪರ ವಕೀಲ ಸಿದ್ಧಾಂತ್ ಕುಮಾರ್ ಅವರು ವಾದ ಮಂಡಿಸಿ, ವಿಕಿಪೀಡಿಯಾ ಮಧ್ಯವರ್ತಿಯಾಗಿರುವುದರಿಂದ (ಮಾಹಿತಿ ಎಡಿಟ್ ಮಾಡಿದವರು ಪಕ್ಷಕಾರರು ಎಂದರ್ಥ) ಅರ್ಹತೆಯ ಆಧಾರದ ಮೇಲೆ ಈ ವಿಷಯವನ್ನು ಪ್ರಶ್ನಿಸಲು ಯಾವುದೇ ಅರ್ಹತೆ ಇಲ್ಲ ಎಂದಿದ್ದಾರೆ.

ಭಾರತ – ಪಾಕ್ ಸಂಘರ್ಷ ಹಿನ್ನಲೆ | ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಗುತ್ತಿರುವ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...