Homeಮುಖಪುಟಯುದ್ಧ ಪರಿಹಾರವಲ್ಲ, ಭಾರತ-ಪಾಕಿಸ್ತಾನ ನಡುವೆ ಮಾತುಕತೆಗೆ ಕರೆ ನೀಡಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು...

ಯುದ್ಧ ಪರಿಹಾರವಲ್ಲ, ಭಾರತ-ಪಾಕಿಸ್ತಾನ ನಡುವೆ ಮಾತುಕತೆಗೆ ಕರೆ ನೀಡಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

- Advertisement -
- Advertisement -

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡೆಯುತ್ತಿರುವ ಸಂಘರ್ಷವನ್ನು ಮಾತುಕತೆಯ ಮೂಲಕ ಪರಿಹರಿಸಬೇಕೆಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB) ಒತ್ತಾಯಿಸಿತು ಮತ್ತು ಎರಡು ಪರಮಾಣು ಶಕ್ತಿಗಳು “ಯುದ್ಧವನ್ನು ನಡೆಸಬಾರದು” ಎಂದು ಹೇಳಿದೆ.

ಭಾರತವು ಆಪರೇಷನ್ ಸಿಂಧೂರ್ ಘೋಷಣೆ ಮಾಡಿದ ನಂತರ ಗುರುವಾರ ನಡೆದ ತನ್ನ ಪದಾಧಿಕಾರಿಗಳ ವಿಶೇಷ ಆನ್‌ಲೈನ್ ಸಭೆಯಲ್ಲಿ ಭಾರತ-ಪಾಕಿಸ್ತಾನ ಗಡಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ “ಒಂದು ಗಂಭೀರ ಕಳವಳ” ವ್ಯಕ್ತಪಡಿಸುವ ನಿರ್ಣಯವನ್ನು AIMPLB ಅಂಗೀಕರಿಸಿತು.

ರಾಷ್ಟ್ರ ಮತ್ತು ಅದರ ಜನರ ರಕ್ಷಣೆಗಾಗಿ ತೆಗೆದುಕೊಳ್ಳಲಾದ ಪ್ರತಿಯೊಂದು ಅಗತ್ಯ ಕ್ರಮವನ್ನು ಬೆಂಬಲಿಸುವುದಾಗಿ ಸಂಸ್ಥೆ ಹೇಳಿದೆ ಮತ್ತು “ಸಾರ್ವಜನಿಕರು, ರಾಜಕೀಯ ಪಕ್ಷಗಳು, ಸಶಸ್ತ್ರ ಪಡೆಗಳು ಮತ್ತು ಸರ್ಕಾರ” ಈ ಕ್ಷಣದಲ್ಲಿ ಒಟ್ಟಾಗಿ ನಿಲ್ಲಬೇಕು ಎಂದು ಹೇಳಿದೆ.

ಪಹಲ್ಗಾಮ್ ನಲ್ಲಿ ಭಯೋತ್ಪಾದನೆಯಿಂದ ಮುಗ್ಧ ನಾಗರಿಕರ ಹತ್ಯೆಯು ಗಂಭೀರ ಕಳವಳವಾಗಿದೆ. ಇಸ್ಲಾಮಿಕ್ ಬೋಧನೆಗಳು, ಜಾಗತಿಕವಾಗಿ ಗುರುತಿಸಲ್ಪಟ್ಟ ತತ್ವಗಳು ಮತ್ತು ಮಾನವೀಯ ಮೌಲ್ಯಗಳಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ. ಆದ್ದರಿಂದ ಈ ಎರಡು ದೇಶಗಳು ದ್ವಿಪಕ್ಷೀಯ ಮಾತುಕತೆಗಳು ಮತ್ತು ಚರ್ಚೆಗಳ ಮೂಲಕ ತಮ್ಮ ವಿಷಯಗಳನ್ನು ಪರಿಹರಿಸಿಕೊಳ್ಳಬೇಕು. ಯುದ್ಧವು ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ವಿಶೇಷವಾಗಿ ಪರಮಾಣು ಶಸ್ತ್ರಾಸ್ತ್ರಗಳೊಂದಿಗೆ ಭಾರತ ಮತ್ತು ಪಾಕಿಸ್ತಾನ ಯುದ್ಧವನ್ನು ನಡೆಸಲು ಸಾಧ್ಯವಿಲ್ಲ ಎಂದು ಸಂಸ್ಥೆಯ ನಿರ್ಣಯವು ಹೇಳಿದೆ.

ಎರಡು ದೇಶಗಳ ನಡುವಿನ ಸಂಘರ್ಷವು ಎರಡೂ ರಾಷ್ಟ್ರಗಳ ಜನರನ್ನು ಭಾರೀ ಇಕ್ಕಟ್ಟಿಗೆ ಮತ್ತು ಸಂಕಟಗಳಿಗೆ ತಳ್ಳಬಹುದು ಎಂದು AIMPLB ಮಂಡಳಿ ಹೇಳಿದೆ.

ಮಂಡಳಿಯು ವಕ್ಫ್ ಕಾಯ್ದೆಯ ವಿರುದ್ಧದ ತನ್ನ ಅಭಿಯಾನವನ್ನು ಮುಂದುವರಿಸುವುದಾಗಿ ಹೇಳಿದ್ದರೂ, ಮೇ 16ರವರೆಗೆ ತನ್ನ ಎಲ್ಲಾ ಸಭೆಗಳು ಮತ್ತು ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿರುವುದಾಗಿ AIMPLB ತಿಳಿಸಿದೆ.

ಒಳಾಂಗಣ ಕಾರ್ಯಕ್ರಮಗಳು, ದುಂಡುಮೇಜಿನ ಸಭೆಗಳು, ಮಸೀದಿ ಪ್ರವಚನಗಳು ಮತ್ತು ಪತ್ರಿಕಾಗೋಷ್ಠಿಗಳು ನಿಗದಿಯಂತೆ ಮುಂದುವರಿಯುತ್ತವೆ. ವಕ್ಫ್ ಕಾಯ್ದೆಯನ್ನು AIMPLB ಯು ಪ್ರಬಲವಾಗಿ ವಿರೋಧಿಸುವಲ್ಲಿ ಒಂದಾಗಿದೆ ಮತ್ತು ದೇಶಾದ್ಯಂತ “ವಕ್ಫ್ ಉಳಿಸಿ” ಅಭಿಯಾನವನ್ನು ಕೈಗೊಳ್ಳುತ್ತಿದೆ. ಅಭಿಯಾನದ ಮೊದಲ ಹಂತವು ಜುಲೈ 13ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಮಂಡಳಿ ಹೇಳಿದೆ.

ಫಿಲಡೆಲ್ಫಿಯಾ ವಿಮಾನ ಅಪಘಾತದ ದೃಶ್ಯವನ್ನು ಐಎನ್‌ಎಸ್‌ ವಿಕ್ರಾಂತ್ ದಾಳಿ ಎಂದ ಎಬಿಪಿ ಆನಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...