Homeಮುಖಪುಟಯುದ್ಧ ಪರಿಹಾರವಲ್ಲ, ಭಾರತ-ಪಾಕಿಸ್ತಾನ ನಡುವೆ ಮಾತುಕತೆಗೆ ಕರೆ ನೀಡಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು...

ಯುದ್ಧ ಪರಿಹಾರವಲ್ಲ, ಭಾರತ-ಪಾಕಿಸ್ತಾನ ನಡುವೆ ಮಾತುಕತೆಗೆ ಕರೆ ನೀಡಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

- Advertisement -
- Advertisement -

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡೆಯುತ್ತಿರುವ ಸಂಘರ್ಷವನ್ನು ಮಾತುಕತೆಯ ಮೂಲಕ ಪರಿಹರಿಸಬೇಕೆಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB) ಒತ್ತಾಯಿಸಿತು ಮತ್ತು ಎರಡು ಪರಮಾಣು ಶಕ್ತಿಗಳು “ಯುದ್ಧವನ್ನು ನಡೆಸಬಾರದು” ಎಂದು ಹೇಳಿದೆ.

ಭಾರತವು ಆಪರೇಷನ್ ಸಿಂಧೂರ್ ಘೋಷಣೆ ಮಾಡಿದ ನಂತರ ಗುರುವಾರ ನಡೆದ ತನ್ನ ಪದಾಧಿಕಾರಿಗಳ ವಿಶೇಷ ಆನ್‌ಲೈನ್ ಸಭೆಯಲ್ಲಿ ಭಾರತ-ಪಾಕಿಸ್ತಾನ ಗಡಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ “ಒಂದು ಗಂಭೀರ ಕಳವಳ” ವ್ಯಕ್ತಪಡಿಸುವ ನಿರ್ಣಯವನ್ನು AIMPLB ಅಂಗೀಕರಿಸಿತು.

ರಾಷ್ಟ್ರ ಮತ್ತು ಅದರ ಜನರ ರಕ್ಷಣೆಗಾಗಿ ತೆಗೆದುಕೊಳ್ಳಲಾದ ಪ್ರತಿಯೊಂದು ಅಗತ್ಯ ಕ್ರಮವನ್ನು ಬೆಂಬಲಿಸುವುದಾಗಿ ಸಂಸ್ಥೆ ಹೇಳಿದೆ ಮತ್ತು “ಸಾರ್ವಜನಿಕರು, ರಾಜಕೀಯ ಪಕ್ಷಗಳು, ಸಶಸ್ತ್ರ ಪಡೆಗಳು ಮತ್ತು ಸರ್ಕಾರ” ಈ ಕ್ಷಣದಲ್ಲಿ ಒಟ್ಟಾಗಿ ನಿಲ್ಲಬೇಕು ಎಂದು ಹೇಳಿದೆ.

ಪಹಲ್ಗಾಮ್ ನಲ್ಲಿ ಭಯೋತ್ಪಾದನೆಯಿಂದ ಮುಗ್ಧ ನಾಗರಿಕರ ಹತ್ಯೆಯು ಗಂಭೀರ ಕಳವಳವಾಗಿದೆ. ಇಸ್ಲಾಮಿಕ್ ಬೋಧನೆಗಳು, ಜಾಗತಿಕವಾಗಿ ಗುರುತಿಸಲ್ಪಟ್ಟ ತತ್ವಗಳು ಮತ್ತು ಮಾನವೀಯ ಮೌಲ್ಯಗಳಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ. ಆದ್ದರಿಂದ ಈ ಎರಡು ದೇಶಗಳು ದ್ವಿಪಕ್ಷೀಯ ಮಾತುಕತೆಗಳು ಮತ್ತು ಚರ್ಚೆಗಳ ಮೂಲಕ ತಮ್ಮ ವಿಷಯಗಳನ್ನು ಪರಿಹರಿಸಿಕೊಳ್ಳಬೇಕು. ಯುದ್ಧವು ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ವಿಶೇಷವಾಗಿ ಪರಮಾಣು ಶಸ್ತ್ರಾಸ್ತ್ರಗಳೊಂದಿಗೆ ಭಾರತ ಮತ್ತು ಪಾಕಿಸ್ತಾನ ಯುದ್ಧವನ್ನು ನಡೆಸಲು ಸಾಧ್ಯವಿಲ್ಲ ಎಂದು ಸಂಸ್ಥೆಯ ನಿರ್ಣಯವು ಹೇಳಿದೆ.

ಎರಡು ದೇಶಗಳ ನಡುವಿನ ಸಂಘರ್ಷವು ಎರಡೂ ರಾಷ್ಟ್ರಗಳ ಜನರನ್ನು ಭಾರೀ ಇಕ್ಕಟ್ಟಿಗೆ ಮತ್ತು ಸಂಕಟಗಳಿಗೆ ತಳ್ಳಬಹುದು ಎಂದು AIMPLB ಮಂಡಳಿ ಹೇಳಿದೆ.

ಮಂಡಳಿಯು ವಕ್ಫ್ ಕಾಯ್ದೆಯ ವಿರುದ್ಧದ ತನ್ನ ಅಭಿಯಾನವನ್ನು ಮುಂದುವರಿಸುವುದಾಗಿ ಹೇಳಿದ್ದರೂ, ಮೇ 16ರವರೆಗೆ ತನ್ನ ಎಲ್ಲಾ ಸಭೆಗಳು ಮತ್ತು ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿರುವುದಾಗಿ AIMPLB ತಿಳಿಸಿದೆ.

ಒಳಾಂಗಣ ಕಾರ್ಯಕ್ರಮಗಳು, ದುಂಡುಮೇಜಿನ ಸಭೆಗಳು, ಮಸೀದಿ ಪ್ರವಚನಗಳು ಮತ್ತು ಪತ್ರಿಕಾಗೋಷ್ಠಿಗಳು ನಿಗದಿಯಂತೆ ಮುಂದುವರಿಯುತ್ತವೆ. ವಕ್ಫ್ ಕಾಯ್ದೆಯನ್ನು AIMPLB ಯು ಪ್ರಬಲವಾಗಿ ವಿರೋಧಿಸುವಲ್ಲಿ ಒಂದಾಗಿದೆ ಮತ್ತು ದೇಶಾದ್ಯಂತ “ವಕ್ಫ್ ಉಳಿಸಿ” ಅಭಿಯಾನವನ್ನು ಕೈಗೊಳ್ಳುತ್ತಿದೆ. ಅಭಿಯಾನದ ಮೊದಲ ಹಂತವು ಜುಲೈ 13ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಮಂಡಳಿ ಹೇಳಿದೆ.

ಫಿಲಡೆಲ್ಫಿಯಾ ವಿಮಾನ ಅಪಘಾತದ ದೃಶ್ಯವನ್ನು ಐಎನ್‌ಎಸ್‌ ವಿಕ್ರಾಂತ್ ದಾಳಿ ಎಂದ ಎಬಿಪಿ ಆನಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...