Homeಫ್ಯಾಕ್ಟ್‌ಚೆಕ್ಫಿಲಡೆಲ್ಫಿಯಾ ವಿಮಾನ ಅಪಘಾತದ ದೃಶ್ಯವನ್ನು ಐಎನ್‌ಎಸ್‌ ವಿಕ್ರಾಂತ್ ದಾಳಿ ಎಂದ ಎಬಿಪಿ ಆನಂದ

ಫಿಲಡೆಲ್ಫಿಯಾ ವಿಮಾನ ಅಪಘಾತದ ದೃಶ್ಯವನ್ನು ಐಎನ್‌ಎಸ್‌ ವಿಕ್ರಾಂತ್ ದಾಳಿ ಎಂದ ಎಬಿಪಿ ಆನಂದ

- Advertisement -
- Advertisement -

ಗುರುವಾರ (ಮೇ.8) ರಾತ್ರಿ ಭಾರತದ ಹಲವು ಪ್ರದೇಶಗಳ ಮೇಲೆ ವಿವಿಧ ರೀತಿಯಲ್ಲಿ ದಾಳಿ ನಡೆಸಲು ಪಾಕಿಸ್ತಾನ ಪ್ರಯತ್ನಿಸಿತ್ತು. ಅದನ್ನು ಭಾರತ ಯಶಸ್ವಿಯಾಗಿ ತಡೆದಿದೆ ಎಂದು ವರದಿಯಾಗಿದೆ.

ದೇಶದ ಬಹುತೇಕ ದೃಶ್ಯ ಮಾಧ್ಯಮಗಳು ಗುರುವಾರ ರಾತ್ರಿ ಪಾಕಿಸ್ತಾನ ದಾಳಿ ನಡೆಸಿದೆ ಎಂಬ ಸುದ್ದಿಯನ್ನು ನೇರ ಪ್ರಸಾರ ರೀತಿಯಲ್ಲಿ ಪ್ರಕಟಿಸಿತ್ತು. ಇದೇ ವೇಳೆ ಸಾಮಾಜಿಕ ಮಾಧ್ಯಮಗಳಲ್ಲೂ ಭಾರತ-ಪಾಕಿಸ್ತಾನ ಪರಸ್ಪರ ದಾಳಿ ಮಾಡಿಕೊಂಡಿವೆ ಎಂಬ ಹಲವು ಸುದ್ದಿ ಮತ್ತು ವಿಡಿಯೋಗಳು ಹರಿದಾಡಿತ್ತು. ಅಂತಹ ವಿಡಿಯೋಗಳನ್ನು ದೇಶದ ಮುಖ್ಯವಾಹಿನಿ ಮಾಧ್ಯಮಗಳೂ ಪ್ರಸಾರ ಮಾಡಿತ್ತು.

ವೈರಲ್ ವಿಡಿಯೋಗಳ ಪೈಕಿ 37 ಸೆಕೆಂಡ್‌ ವಿಡಿಯೋವೊಂದನ್ನು ಹೆಚ್ಚಿನ ಜನರು ಹಂಚಿಕೊಂಡಿದ್ದರು. ಅದರಲ್ಲಿ, ಯಾವುದೋ ಸ್ಪೋಟ ಸಂಭವಿಸಿದ ಬಳಿಕದ ಚಿತ್ರಣ ಇತ್ತು. ಸುತ್ತಲು ಕಾರುಗಳು ನಿಂತಿರುವುದು, ಬೆಂಕಿ ಹೊತ್ತಿ ಉರಿಯುತ್ತಿರುವುದು ಮತ್ತು ಒಬ್ಬರು ವ್ಯಕ್ತಿ ಹಿಂದಿ/ಉರ್ದು ಭಾಷೆಯಲ್ಲಿ “ನಿಮ್ಮ ಮಕ್ಕಳು ಮತ್ತು ವೃದ್ಧರನ್ನು ಕರೆದುಕೊಂಡು ಹೋಗಿ, ನಿಮ್ಮ ಮನೆಗೆ ಬೀಗ ಹಾಕಿ ಮತ್ತು ಮುಂದಿನ ರಸ್ತೆಯ ಕಡೆಗೆ ಹೋಗಿ…”ಇತ್ಯಾದಿ ಹೇಳುವುದು ಆ ವಿಡಿಯೋದಲ್ಲಿ ಇತ್ತು.

ಬಂಗಾಳಿ ಸುದ್ದಿ ವಾಹಿನಿ ಎಬಿಪಿ ಆನಂದ ತನ್ನ ನೇರ ಪ್ರಸಾರದ ಸಮಯದಲ್ಲಿ ಮೇಲೆ ತಿಳಿಸಿದ ವಿಡಿಯೋವನ್ನು ಪ್ಲೇ ಮಾಡಿತ್ತು. ವಾಹಿನಿಯ ನಿರೂಪಕರಲ್ಲಿ ಒಬ್ಬರು “ಇದೀಗ ನೀವು ಕರಾಚಿಯ ದೃಶ್ಯಗಳನ್ನು ನೋಡುತ್ತಿದ್ದೀರಿ, ಅಲ್ಲಿ ಎಲ್ಲವೂ ನಾಶವಾಗಿದೆ” ಎಂದಿದ್ದರು. ಮತ್ತೊಬ್ಬ ನಿರೂಪಕ “ಇದು ಐಎನ್ಎಸ್ ವಿಕ್ರಾಂತ್ ನಡೆಸಿದ ದಾಳಿ ದೃಶ್ಯವಾಗಿದೆ” ಎಂದಿದ್ದರು.

ಎಬಿಪಿ ಆನಂದ ಈಗ ನೇರ ಪ್ರಸಾರ ವಿಡಿಯೋವನ್ನು ಡಿಲಿಟ್ ಮಾಡಿದೆ. ಅದರೆ, ಅದರ ಸಂಗ್ರಹ ತುಣುಕು ಮತ್ತು ಆರ್ಕೈವ್ ಲಿಂಕ್ ಕೆಳಗಿದೆ. ವಿಡಿಯೋದಲ್ಲಿ 5 ನಿಮಿಷ 8 ಸೆಕೆಂಡ್‌ ಅವಧಿಯಲ್ಲಿ ನಾವು ಮೇಲ್ಗಡೆ ವಿವರಿಸಿದ ದೃಶ್ಯವಿದೆ.

ಆರ್ಕೈವ್ ಲಿಂಕ್

VC : youtube.com/@abpanandatv Via altnews.in

ಎಬಿಪಿ ಆನಂದ ತನ್ನ ವೆಬ್‌ಸೈಟ್‌ನಲ್ಲಿ ‘ಆಪರೇಷನ್ ಸಿಂಧೂರ್’ ಎಂಬ ಹೆಸರಿನಲ್ಲಿ ಲೈವ್ ಅಪ್ಡೇಟ್ ನೀಡಲು ಮತ್ತು ಭಾರತ-ಪಾಕಿಸ್ತಾನ ಉದ್ವಿಗ್ನತೆ ಕುರಿತು ವರದಿ ಪ್ರಕಟಿಸಲೂ ಅದೇ ವೈರಲ್ ವಿಡಿಯೋದ ಸ್ಕ್ರೀನ್ ಶಾಟ್ ಇಮೇಜ್ ಬಳಸಿಕೊಂಡಿತ್ತು. ಅದರ ಆರ್ಕೈವ್ ಲಿಂಕ್ ಇಲ್ಲಿ, ಇಲ್ಲಿ ನೋಡಬಹುದು.

ಎರಡೂ ಪುಟಗಳ ಸ್ಕ್ರೀನ್ ಶಾಟ್‌ಗಳು ಕೆಳಗಿವೆ

ವೈರಲ್ ಕ್ಲಿಪ್‌ನ ಸ್ಕ್ರೀನ್‌ಶಾಟ್ ಅನ್ನು ಎಬಿಪಿ ಆನಂದ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ “ಬಿಗ್ ಬ್ರೇಕಿಂಗ್: ಐಎನ್‌ಎಸ್ ವಿಕ್ರಾಂತ್‌ನ ಪ್ರಮುಖ ಕಾರ್ಯಾಚರಣೆ, ಬೃಹತ್ ಸ್ಫೋಟ, ಕರಾಚಿ ಧ್ವಂಸ, ಭಾರತದಿಂದ ಸತತ ದಾಳಿಗಳು” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿತ್ತು. ನಂತರ ಪೋಸ್ಟ್ ಎಡಿಟ್ ಮಾಡಿ ವೈರಲ್ ಕ್ಲಿಪ್‌ನ ಸ್ಕ್ರೀನ್‌ಶಾಟ್ ಜಾಗಕ್ಕೆ ಪಾಕಿಸ್ತಾನದ ರಾಷ್ಟ್ರ ಧ್ವಜದ ಚಿತ್ರವನ್ನು ಬದಲಿಸಿದೆ (ಆರ್ಕೈವ್)

Credit: altnews.in

ಅದೇ ವೈರಲ್ ವಿಡಿಯೋವನ್ನು ಹಲವಾರು ಎಕ್ಸ್‌ ಹ್ಯಾಂಡಲ್‌ಗಳು ಹಂಚಿಕೊಂಡಿತ್ತು.

ಎಕ್ಸ್‌ ಬಳಕೆದಾರರಾದ ನೈನಾ ಯಾದವ್ (@NAINAYADAV_06) (ತಮ್ಮ ಎಕ್ಸ್‌ ಬಯೋದಲ್ಲಿ ಪತ್ರಕರ್ತೆ ಎಂದು ಹೇಳಿಕೊಂಡಿದ್ದಾರೆ) ಅವರು ಮೇ 8 ರಂದು ವೈರಲ್ ಕ್ಲಿಪ್ ಅನ್ನು ಹಂಚಿಕೊಂಡಿದ್ದರು. ಅದರ ಜೊತೆಗೆ “ಲಾಹೋರ್‌ನ ಜಿನ್ನಾ ಮಾರುಕಟ್ಟೆ ರಸ್ತೆ ಸಂಪೂರ್ಣವಾಗಿ ನಾಶವಾಯಿತು” #IndiaPakistanWar ಎಂದು ಬರೆದುಕೊಂಡಿದ್ದರು. (ಆರ್ಕೈವ್)

 

 

 

 

 

 

 

 

 

 

 

 

 

 

@IndiaTales7, @JaipurDialogues, @mkr4411, @wokeflix_, @iSinghApurva, @SonOfBharat7, @KreatelyMedia, @madhur_panktiya ಮುಂತಾದ ಎಕ್ಸ್‌ ಬಳೆದಾರರು ವೈರಲ್ ಕ್ಲಿಪ್ ಅನ್ನು ಹಂಚಿಕೊಂಡಿದ್ದರು. ಅವುಗಳು ಕೆಲವು ಲಕ್ಷಾಂತರ ವೀಕ್ಷಣೆಗಳನ್ನು ಪಡೆದಿವೆ.

ನಾವು ಇಲ್ಲಿ ಉಲ್ಲೇಖಿಸಿದ ಬಹುತೇಕ ಎಕ್ಸ್ ಬಳಕೆದಾರರು ಈ ಹಿಂದೆ ಹಲವು ಸುಳ್ಳು ಸುದ್ದಿಗಳನ್ನು ಹಂಚಿಕೊಂಡವರಾಗಿದ್ದಾರೆ.

ಫ್ಯಾಕ್ಟ್‌ಚೆಕ್ 

ವೈರಲ್ ಕ್ಲಿಪ್‌ನ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್‌ ಶಾಟ್‌ ಬಳಸಿ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದೇವೆ ಮತ್ತು ವಿವಿಧ ಕೀ ವರ್ಡ್‌ಗಳನ್ನು ಬಳಸಿ ವಿಡಿಯೋ ಕುರಿತು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಸಾಮಾಜಿಕ ಜಾಲತಾಣ ಥ್ರೆಡ್‌ನಲ್ಲಿ ವೈರಲ್ ಕ್ಲಿಪ್‌ಗೆ ಹೋಲಿಕೆಯಾಗುವ ಫೋಟೋವೊಂದು ನಮಗೆ ದೊರೆತಿದೆ.

ಫೆಬ್ರವರಿ 1, 2025ರಂದು joe.kendra ಎಂಬವರು ಫೋಟೋ ಪೋಸ್ಟ್ ಮಾಡಿದ್ದು, “ಮತ್ತೊಂದು ಅಪಘಾತ ಅಮೆರಿಕದ ಪೆನ್ಸಿಲ್ವೇನಿಯಾದ ಫಿಲಡೆಲ್ಫಿಯಾದ ಜನನಿಬಿಡ ಪ್ರದೇಶದಲ್ಲಿ ವೈದ್ಯಕೀಯ ಸಾರಿಗೆ ಲಿಯರ್‌ಜೆಟ್ ಅವಳಿ ಎಂಜಿನ್ ಜೆಟ್ ವಿಮಾನ ಅಪಘಾತಕ್ಕೀಡಾಗಿದೆ ಎಂದು ವರದಿಗಳು ಹೇಳಿವೆ. ಈ ಪ್ರದೇಶದಲ್ಲಿ ಮೂರು ಕಟ್ಟಡಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ” ಎಂದು ಬರೆದುಕೊಂಡಿದ್ದರು.

 

 

 

 

 

 

 

 

 

ಈ ಪೋಸ್ಟ್‌ನ ಸುಳಿವು ಹಿಡಿದುಕೊಂಡ ನಾವು ಕೀ ವರ್ಡ್‌ ಬಳಸಿ ವಿಡಿಯೋಗಾಗಿ ಹುಡುಕಾಟ ನಡೆಸಿದ್ದೇವೆ. ಈ ವೇಳೆ ಫೆಬ್ರವರಿ 1, 2025ರಂದು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋವೊಂದು ನಮಗೆ ಲಭ್ಯವಾಗಿದೆ. Hakan Tuluhan ಎಂಬ ಹೆಸರಿನ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ 1 ನಿಮಿಷ 4 ಸೆಕೆಂಡ್‌ನ ವಿಡಿಯೋದಲ್ಲಿ, 25 ಸೆಕಂಡ್‌ನಿಂದ ಎಬಿಪಿ ಆನಂದ ಸುದ್ದಿ ವಾಹಿನಿ ಮತ್ತು ಇತರ ಎಕ್ಸ್ ಬಳಕೆದಾರರು ಹಂಚಿಕೊಂಡಿರುವ ವಿಡಿಯೋ ತುಣುಕನ್ನು ನೋಡಬಹುದು.

ವಿಡಿಯೋದ ಡಿಸ್ಕ್ರಿಪ್ಶನ್‌ನಲ್ಲಿ “ಇದು ಪೆನ್ಸಿಲ್ವೇನಿಯಾದ ಫಿಲಡೆಲ್ಫಿಯಾದಲ್ಲಿ ಸಂಭವಿಸಿದ ವಿಮಾನ ಅಪಘಾತದ್ದು” ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ವಿಡಿಯೋದಲ್ಲಿ ಅದನ್ನು ರೆಕಾರ್ಡ್ ಮಾಡಿದ ವ್ಯಕ್ತಿಯು ಡಂಕಿನ್ ಡೋನಟ್ಸ್ ಔಟ್‌ಲೆಟ್‌ಗೆ ಪ್ರವೇಶಿಸುತ್ತಿರುವಂತೆ ಕಾಣುತ್ತಿದೆ. ದೃಶ್ಯಗಳು ಸ್ವಲ್ಪ ಅಸ್ಪಷ್ಟವಾಗಿದ್ದರೂ, ಡಂಕಿನ್ ಡೋನಟ್ಸ್ ಸೈನ್‌ಬೋರ್ಡ್ ಸ್ಪಷ್ಟವಾಗಿ ಗೋಚರಿಸುತ್ತದೆ. ಔಟ್‌ಲೆಟ್ ಇರುವಿಕೆ ಮತ್ತು ಸೈನ್‌ನೇಜ್‌ನ ಆಕಾರ ಮತ್ತು ಬಣ್ಣವನ್ನು ಆಧರಿಸಿ, ಅದನ್ನು ಗುರುತಿಸಬಹುದು.

Credi: altnews.in

ಔಟ್‌ಲೆಟ್‌ ಇರುವಿಕೆಯನ್ನು ಗೂಗಲ್ ಮ್ಯಾಪ್‌ ಮೂಲಕ ನೋಡಬಹುದು..ಲಿಂಕ್ ಇಲ್ಲಿದೆ 

Credit : altnews.in

ಆದ್ದರಿಂದ, ಐಎನ್ಎಸ್ ವಿಕ್ರಾಂತ್‌ನ ಮಿಲಿಟರಿ ಕಾರ್ಯಾಚರಣೆಯಿಂದಾಗಿ ಪಾಕಿಸ್ತಾನದಲ್ಲಿ ನಾಶ ಸಂಭವಿಸಿದೆ ಎಂದು ಎಬಿಪಿ ಆನಂದ ಮತ್ತು ಎಕ್ಸ್ ಬಳಕೆದಾರರು ಹಂಚಿಕೊಂಡಿದ್ದ ವೈರಲ್ ಕ್ಲಿಪ್ ವಾಸ್ತವವಾಗಿ ಮೂರು ತಿಂಗಳ ಹಳೆಯದು ಮತ್ತು ಫಿಲಡೆಲ್ಫಿಯಾದ್ದಾಗಿದೆ.

ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...